Homeಚಳವಳಿನನಗಾಗಿ ಜೋರಾಗಿ ಚಪ್ಪಾಳೆ ಹೊಡೆಯಿರಿ ಎಂದು ಕೇಳಿಕೊಂಡ ಬಿಜೆಪಿ ಎಂಪಿ, ನಿರಾಕರಿಸಿದ ರೈತರು: ವಿಡಿಯೋ ವೈರಲ್

ನನಗಾಗಿ ಜೋರಾಗಿ ಚಪ್ಪಾಳೆ ಹೊಡೆಯಿರಿ ಎಂದು ಕೇಳಿಕೊಂಡ ಬಿಜೆಪಿ ಎಂಪಿ, ನಿರಾಕರಿಸಿದ ರೈತರು: ವಿಡಿಯೋ ವೈರಲ್

- Advertisement -
- Advertisement -

ರೈತ ಪ್ರತಿಭಟನೆ ಸ್ಥಳಕ್ಕೆ ಬಂದ ಬಿಜೆಪಿ ಸಂಸದರೊಬ್ಬರು ರೈತರ ಸಮಸ್ಯೆ ಬಗೆಹರಿಸುವುದಾಗಿ ಹೇಳಿ ನನಗೆ ಚಪ್ಪಾಳೆ ಹೊಡೆಯಿರಿ ಎಂದು ಕೇಳಿ, ರೈತರಿಂದ ಇಲ್ಲ ಎನಿಸಿಕೊಂಡಿರುವ ಮುಜುಗರದ ಘಟನೆ ಮಧ್ಯಪ್ರದೇಶದ ಬೇತುಲ್‌ ಜಿಲ್ಲೆಯಲ್ಲಿ ನಡೆದಿದೆ.

ಬೇತುಲ್‌ನ ಬಿಜೆಪಿ ಸಂಸದ ದುರ್ಗಾದಾಸ್ ಉಯ್ಕೆ ಹೀಗೆ ಮುಜುಗರಕ್ಕೆ ಒಳಗಾಗಿರುವ ಸಂಸದ. ರೈತರು ಪ್ರತಿಭಟನೆ ನಡೆಸುತ್ತಿದ್ದ ಬೆತುಲ್‌ನ ದಾಮ್‌ಜಿಪುರಕ್ಕೆ ಬಂದಿದ್ದ ಇವರು, ರೈತರ ಸಮಸ್ಯೆ ಬಗೆಹರಿಸುವ ಮಾತನಾಡಿ, ಬಾಲಿವುಡ್ ನಟ ನಾನಾ ಪಾಟೇಕರ್ ಅವರ ‘ಬಜಾವೋ ತಾಲಿ’ (ಚಪ್ಪಾಳೆ ಹೊಡೆಯಿರಿ) ಡೈಲಾಗ್ ಹೊಡೆದಿದ್ದಾರೆ. ಆದರೆ, ರೈತರು ಚಪ್ಪಾಳೆ ಹೊಡೆಯಲು ನಿರಾಕರಿಸಿದ್ದಾರೆ.

ಬೆತುಲ್‌ನ ದಾಮ್‌ಜಿಪುರದಲ್ಲಿ ಸುಮಾರು 40 ರಿಂದ 45 ಗ್ರಾಮಗಳ ರೈತರು ವಿದ್ಯುತ್‌ ಸಮಸ್ಯೆ ಬಗೆ ಹರಿಸುವಂತೆ ಪ್ರತಿಭಟನೆ ನಡೆಸುತ್ತಿದರು. ವಿದ್ಯುಚ್ಛಕ್ತಿ ಇಲಾಖೆಯ ಅಧಿಕಾರಿಗಳಲ್ಲದೆ, ಬಿಜೆಪಿ ಸಂಸದ ದುರ್ಗಾದಾಸ್ ಉಯ್ಕೆ , ಕಾಂಗ್ರೆಸ್ ಮುಖಂಡ ರಾಮು ಟೇಕಂ ಸಹ ರೈತರ ಬಳಿ ಚಳವಳಿಯನ್ನು ಬಿಡುವಂತೆ ಮಾತನಾಡಲು ಬಂದಿದ್ದರು.

ಇದನ್ನೂ ಓದಿ: ಬುಡಕಟ್ಟು ಹಕ್ಕುಗಳ ಹೋರಾಟಗಾರ್ತಿ ಹಿಡ್ಮೆ ಮಾರ್ಖಂ ಬಿಡುಗಡೆಗೆ ಪೋಸ್ಟ್‌ಕಾರ್ಡ್ ಅಭಿಯಾನ

ರೈತರನ್ನುದ್ದೇಶಿಸಿ ಮಾತನಾಡಿದ ಸಂಸದ ದುರ್ಗಾದಾಸ್, “ಅಧಿಕಾರಿಗಳೊಂದಿಗೆ ಮಾತನಾಡಿ ಶೀಘ್ರ ಸಮಸ್ಯೆ ಬಗೆಹರಿಸುವ ಕುರಿತು ಮಾತನಾಡಿದರು. ಶೀಘ್ರದಲ್ಲೇ ನಿಮ್ಮ ಬೇಡಿಕೆ ಈಡೇರಿಸಲಾಗುವುದು. 12 ಗಂಟೆಗಳ ಕಾಲ ವಿದ್ಯುತ್ ವ್ಯವಸ್ಥೆ ಮಾಡಲಾಗುವುದು. 8 ದಿನಗಳಲ್ಲಿ ಈ ಸಮಸ್ಯೆ ಬಗೆಹರಿಸಲಾಗುವುದು” ಎಂದು ಹೇಳಿದ್ದಾರೆ.

ಬಳಿಕ ಈಗ ಚಪ್ಪಾಳೆ ತಟ್ಟಿ ಎಂದು ಕೇಳಿದ್ದಾರೆ. ಆದರೆ, ಬೇಡಿಕೆ ಈಡೇರುವವರೆಗೂ ನಾವು ಚಪ್ಪಾಳೆ ತಟ್ಟುವುದಿಲ್ಲ ಎಂದು ರೈತರು ಹೇಳಿದ್ದು, ರೈತರ ಮಾತಿನಿಂದ ಸಂಸದ ಮುಜಗರಕ್ಕೆ ಈಡಾಗಿದ್ದಾರೆ. ಇಷ್ಟೇ ಅಲ್ಲದೆ ರೈತರು ಕಿಸಾನ್ ಏಕ್ತಾ ಜಿಂದಾಬದ್ ಎಂದು ಘೋಷಣೆ ಕೂಗಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಆದರೆ, ಘಟನೆಯನ್ನು ಸಮರ್ಥಿಸಿಕೊಂಡಿರುವ ಸಂಸದ ’ನಾನು ಮನವೊಲಿಸಿದ ನಂತರ ರೈತರು ತಕ್ಷಣವೇ ಧರಣಿಯನ್ನು ಕೈಬಿಟ್ಟರು’ ಎಂದಿದ್ದಾರೆ.

’ದಾಮಜೀಪುರ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ರೈತರು ಧರಣಿ ನಡೆಸುತ್ತಿದ್ದ ಸ್ಥಳಕ್ಕೆ ವಿದ್ಯುತ್ ಇಲಾಖೆ ಉನ್ನತಾಧಿಕಾರಿಗಳನ್ನು ಕರೆಸಿ 8 ದಿನದೊಳಗೆ ರೈತರ ವಿದ್ಯುತ್ ಸಮಸ್ಯೆ ಬಗೆಹರಿಸುವಂತೆ ಆದೇಶಿಸಲಾಗಿದೆ.
ಭರವಸೆ ನೀಡಿದ ನಂತರ ರೈತರು ಧರಣಿಯನ್ನು ಅಂತ್ಯಗೊಳಿಸಿದ್ದಾರೆ’ ಎಂದು ಸಂಸದ ಟ್ವೀಟ್ ಮಾಡಿದ್ದಾರೆ.

ಡಿಸೆಂಬರ್‌ನಲ್ಲೂ ರೈತರು ವಿದ್ಯುತ್‌ ಕಂಪನಿ ನೀಡುತ್ತಿರುವ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದ್ದರು. ಇದಾದ ಬಳಿಕ 15 ದಿನದಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿಲಾಗಿತ್ತು. ಆದರೆ ಸಮಸ್ಯೆ ಬಗೆಹರಿಯದ ಕಾರಣ ಹೊಲಗಳಲ್ಲಿ ಬೆಳೆ ಒಣಗಲಾರಂಭಿಸಿತ್ತು. ಆದ್ದರಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದರು.


ಇದನ್ನೂ ಓದಿ: ‘ಕೊರಗಜ್ಜನಿಗೆ ಅವಮಾನ ಮಾಡಲಾಗಿದೆ ಎನ್ನುವ ಸಂಘ ಪರಿವಾರ ಕೊರಗರ ಮೇಲೆ ಲಾಠಿ ಚಾರ್ಜ್ ಆದಾಗ ಎಲ್ಲಿತ್ತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...