Homeಕರೋನಾ ತಲ್ಲಣಮಧ್ಯಪ್ರದೇಶ: ಕೊರೊನಾದಿಂದ ಗುಣಮುಖರಾದ ವ್ಯಕ್ತಿಯಲ್ಲಿ ಗ್ರೀನ್​ ಫಂಗಸ್​ ಪತ್ತೆ

ಮಧ್ಯಪ್ರದೇಶ: ಕೊರೊನಾದಿಂದ ಗುಣಮುಖರಾದ ವ್ಯಕ್ತಿಯಲ್ಲಿ ಗ್ರೀನ್​ ಫಂಗಸ್​ ಪತ್ತೆ

- Advertisement -
- Advertisement -

ಮಧ್ಯಪ್ರದೇಶದ ಇಂದೋರ್‌ನಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾದ 34 ವರ್ಷದ ವ್ಯಕ್ತಿಯಲ್ಲಿ ಗ್ರೀನ್ ​ ಫಂಗಸ್​ (ಹಸಿರು ಶೀಲಿಂಧ್ರ) ಕಂಡು ಬಂದಿದೆ. ಕಪ್ಪು ಫಂಗಸ್, ಬಿಳಿ ಫಂಗಸ್ ಮತ್ತು ಹಳದಿ ಫಂಗಸ್‌ ಜೊತೆಗೆ ಈಗ ಹಸಿರು ಫಂಗಸ್ ಸೇರಿಕೊಂಡಿದೆ.

ಗ್ರೀನ್ ಫಂಗಸ್ ಪತ್ತೆಯಾದ ಕೂಡಲೇ ಆ ವ್ಯಕ್ತಿಯನ್ನು ಏರ್​ ಆ್ಯಂಬುಲೆನ್ಸ್​ ಮೂಲಕ ಮುಂಬೈನ ಹಿಂದೂಜಾ  ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದೆ ಎಂದು ಇಂದೋರ್‌ನ ಹಿರಿಯ ವೈದ್ಯರೊಬ್ಬರು ಹೇಳಿದ್ದಾರೆ.

ಕೊರೊನಾ ಸೋಂಕಿನಿಂದ ಗುಣಮುಖರಾದವರಲ್ಲಿ ಮೊದಲಿಗೆ ಬ್ಲಾಕ್​ ಫಂಗಸ್ ಕಾಣಿಸಿಕೊಂಡಿತು. ಬಳಿಕ ವೈಟ್ ಫಂಗಸ್, ನಂತರ ಯೆಲ್ಲೋ ಫಂಗಸ್ ಪತ್ತೆಯಾಗಿತ್ತು. ಈಗ ಹೊಸದಾಗಿ ಗ್ರೀನ್ ಫಂಗಸ್ ಕಾಣಿಸಿಕೊಳ್ಳಲು ಶುರುವಾಗಿದೆ. ವರದಿಗಳ ಪ್ರಕಾರ ಮಧ್ಯಪ್ರದೇಶದಲ್ಲಿ ಮೊದಲ ಪ್ರಕರಣ ಇದಾಗಿದೆ.

ಇದನ್ನೂ ಓದಿ: ದೇಹದ ವಾಸನೆ ಗ್ರಹಿಸಿ ಕೊರೋನಾ ಸೋಂಕು ಪತ್ತೆಹಚ್ಚುವ ಉಪಕರಣಗಳನ್ನು ಕಂಡು ಹಿಡಿದ ಬ್ರಿಟನ್‌

ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದ ವ್ಯಕ್ತಿಗೆ ಬ್ಲ್ಯಾಕ್​ ಫಂಗಸ್ ಲಕ್ಷಣಗಳು ಕಂಡು ಬಂದಿದ್ದವು. ಅದೇ ಅನುಮಾನದ ಮೇರೆಗೆ ತಪಾಸಣೆಗೆ ಒಳಪಡಿಸಲಾಗಿತ್ತು. ಆದರೆ ಆತನ ಶ್ವಾಸಕೋಸಗಳು ಹಾಗೂ ರಕ್ತದಲ್ಲಿ ಹಸಿರು ಶಿಲೀಂಧ್ರ ಪತ್ತೆಯಾಗಿದೆ ಎಂದು ಶ್ರೀ ಅರಬಿಂದೋ ಇನ್​​ಸ್ಟಿಟ್ಯೂಟ್​ ಆಫ್​ ಮೆಡಿಕಲ್​ ಸೈನ್ಸಸ್​(SAIMS​​) ವಿಭಾಗದ ಮುಖ್ಯಸ್ಥ ಡಾ.ರವಿ ದೋಸಿ ಹೇಳಿದ್ದಾರೆ.

’ರೋಗಿಯು ಚಿಕಿತ್ಸೆಗೆ ಸರಿಯಾಗಿ ಸ್ಪಂದಿಸುತ್ತಿರಲಿಲ್ಲ. ಅವರ ಶ್ವಾಸಕೋಶಕ್ಕೆ 90% ಸೋಂಕು ಇರುವುದರಿಂದ ಅವರನ್ನು ಮುಂಬೈನ ಹಿಂದೂಜಾ ಆಸ್ಪತ್ರೆಗೆ ಸಾಗಿಸಲಾಗಿದೆ. ದೇಶದಲ್ಲಿ ಇಂತಹ ಪ್ರಕರಣಗಳ ಬಗ್ಗೆ ನನಗೆ ತಿಳಿದಿಲ್ಲ. ಮಧ್ಯಪ್ರದೇಶದಲ್ಲಿ ಹಸಿರು ಶಿಲೀಂಧ್ರದ ಮೊದಲ ಪ್ರಕರಣ ಇದಾಗಿದೆ” ಎಂದಿದ್ದಾರೆ.

ದೇಶದ ವಿವಿಧ ಭಾಗಗಳಲ್ಲಿ ಇದುವರೆಗೆ ಕಪ್ಪು, ಬಿಳಿ ಮತ್ತು ಹಳದಿ ಶಿಲೀಂಧ್ರಗಳ ಪ್ರಕರಣಗಳು ಮಾತ್ರ ವರದಿಯಾಗಿವೆ ಎಂದು ವರದಿಗಳು ಸೂಚಿಸಿವೆ. ಕೋವಿಡ್‌ನಿಂದ ಗುಣಮುಖರಾದ ಜನರಲ್ಲಿ ಹಸಿರು ಶಿಲೀಂಧ್ರ ಸೋಂಕಿನ ಸ್ವರೂಪವು ಇತರೆ ರೋಗಿಗಳಿಗಿಂತ ಭಿನ್ನವಾಗಿದೆಯೇ ಎಂಬ ಬಗ್ಗೆ ಹೆಚ್ಚಿನ ಸಂಶೋಧನೆ ಅಗತ್ಯವಿದೆ ಎಂದು ಡಾ.ರವಿ ದೋಸಿ ತಿಳಿಸಿದ್ದಾರೆ.


ಇದನ್ನೂ ಓದಿ: ಉದ್ದ ಕೂದಲು ಬಿಟ್ಟ ಕಾರಣಕ್ಕೆ ಪಾಕಿಸ್ತಾನದ ಕಲಾವಿದನನ್ನು ಬಂಧಿಸಿದ ಪೊಲೀಸರು! ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...