Homeದಲಿತ್ ಫೈಲ್ಸ್ಮಧ್ಯಪ್ರದೇಶ: ದಲಿತ ಯುವತಿಯ ಕೊಲೆ, ರಸ್ತೆಯಲ್ಲಿ ಶವವಿಟ್ಟು ಬೃಹತ್ ಪ್ರತಿಭಟನೆ

ಮಧ್ಯಪ್ರದೇಶ: ದಲಿತ ಯುವತಿಯ ಕೊಲೆ, ರಸ್ತೆಯಲ್ಲಿ ಶವವಿಟ್ಟು ಬೃಹತ್ ಪ್ರತಿಭಟನೆ

- Advertisement -
- Advertisement -

ದಲಿತ ಯುವತಿಯ ಕೊಲೆ ಪ್ರಕರಣದಲ್ಲಿ ಆರೋಪಿಗಳನ್ನು ತಕ್ಷಣವೇ ಬಂಧಿಸುವಂತೆ ನ್ಯಾಯಕ್ಕಾಗಿ ಆಗ್ರಹಿಸಿ, ರಸ್ತೆಯಲ್ಲಿ ಮೃತದೇಹವಿಟ್ಟು ಬೃಹತ್‌ ಪ್ರತಿಭಟನೆ ನಡೆಸಿರುವ ಘಟನೆ ಭಾನುವಾರ ಮಧ್ಯಪ್ರದೇಶದ ಶಾಜಾಪುರದ ಮಕ್ಸಿ ಪೊಲೀಸ್ ಠಾಣೆಯ ರೋಜ್ವಾಸ್ ಸರ್ಕಲ್‌ನಲ್ಲಿ ನಡೆದಿದೆ.

ಯುವತಿಯ ಮೃತದೇಹವನ್ನು ಆಗ್ರಾ-ಮುಂಬೈ ರಾಷ್ಟ್ರೀಯ ಹೆದ್ದಾರಿಯ ರೋಜ್ವಾಸ್ ಟೋಲ್ ಪ್ಲಾಜಾ ಬಳಿ ಇಟ್ಟು, ಇಡೀ ರಸ್ತೆಯನ್ನು ವಶಕ್ಕೆ ಪಡೆದಿದ್ದ ಸಾವಿರಾರು ಸಂಖ್ಯೆಯ ಗ್ರಾಮಸ್ಥರು ರಸ್ತೆಯ ಮೇಲೆ ಕುಳಿತು ಕೊಲೆ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದರು. ಇದರಿಂದ ಟೋಲ್ ಪ್ಲಾಜಾದಲ್ಲಿ ಕಿಲೋ ಮೀಟರ್‌ಗಟ್ಟಲೆ ಉದ್ದದ ಟ್ರಾಫಿಕ್ ಜಾಮ್ ಉಂಟಾಗಿ, ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.

ಮಾಹಿತಿ ತಿಳಿದ ತಕ್ಷಣ ಶಾಜಾಪುರ ಹೆಚ್ಚುವರಿ ಎಸ್ಪಿ ಟಿ.ಎಸ್.ಬಘೇಲ್, ಎಸ್‌ಡಿಒಪಿ ದೀಪಾ ದೊಡ್ವೆ, ತರಾನಾ ಎಸ್‌ಡಿಎಂ ಏಕ್ತಾ ಜೈಸ್ವಾಲ್ ಸ್ಥಳಕ್ಕೆ ಆಗಮಿಸಿ ಗ್ರಾಮಸ್ಥರಿಗೆ ನ್ಯಾಯ ನೀಡುವ ಭರವಸೆ ನೀಡಿದ್ದರು. ಏಳು ದಿನಗಳಲ್ಲಿ ಪ್ರಕರಣವನ್ನು ಸಂಪೂರ್ಣವಾಗಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವ ಭರವಸೆ ನೀಡಿದ ನಂತರವೇ ಪ್ರತಿಭಟನಾಕಾರರು ಒಪ್ಪಿದ್ದಾರೆ. ಆದರೂ ಕೂಡ ಸಂಜೆ 5ರ ನಂತರವೂ ಟ್ರಾಫಿಕ್‌ ಜಾಮ್ ಮುಂದುವರಿದಿತ್ತು. ಇದರಿಂದಾಗಿ ಹೆದ್ದಾರಿಯಲ್ಲಿ ವಾಹನಗಳ ಉದ್ದನೆಯ ಸರತಿ ಸಾಲು ನಿರ್ಮಾಣವಾಗಿತ್ತು ಎಂದು ದೈನಿಕ್ ಭಾಸ್ಕರ್‌ ವರದಿ ಮಾಡಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಹತ್ರಾಸ್ ಅತ್ಯಾಚಾರ ಪ್ರಕರಣ ಚುನಾವಣೆಯನ್ನು ಪ್ರಭಾವಿಸುವುದೇ?

ಯುವತಿ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದು, ಹತ್ಯೆಯನ್ನು ವಿರೋಧಿಸಿ ಭೀಮ್ ಆರ್ಮಿ ಕಾರ್ಯಕರ್ತರು, ಗ್ರಾಮಸ್ಥರು ಮತ್ತು ಆಕೆಯ ಸಂಬಂಧಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಹೆದ್ದಾರಿ ತಡೆದು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೂ ಪಾಲ್ಗೊಂಡಿದ್ದರು. ಅದೇ ಸಮಯದಲ್ಲಿ, ಮಕ್ಸಿ ಪೊಲೀಸರು ಹೆದ್ದಾರಿ ತಡೆ ನಡೆಸಿದಕ್ಕಾಗಿ 150 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಘಟನೆಯ ಹಿನ್ನೆಲೆ:

ಉಜ್ಜಯಿನಿ ಜಿಲ್ಲೆಯ ಕನಾರ್ಡಿ ಗ್ರಾಮದಲ್ಲಿ ಕಳೆದ ರಾತ್ರಿ 22 ವರ್ಷದ ಭಗವತಿ ಬಾಯಿ ತನ್ನ ಮನೆಯಿಂದ ನಾಪತ್ತೆಯಾಗಿದ್ದರು. ಪತಿ ಹಮ್ಮಾಲಿ ಕೆಲಸ ಮುಗಿಸಿ ರಾತ್ರಿ ಮನೆಗೆ ಬಂದಾಗ ಪತ್ನಿ ಮನೆಯಲ್ಲಿ ಇಲ್ಲದಿರುವುದು ತಿಳಿದು ಬಂದಿದೆ. ಅಕ್ಕಪಕ್ಕದಲ್ಲಿಯೇ ಕಾರ್ಯಕ್ರಮ ನಡೆಯುತ್ತಿದ್ದು, ಆಕೆ ಅಲ್ಲಿಗೆ ಹೋಗಿರಬೇಕು ಎಂದುಕೊಂಡಿದ್ದಾರೆ. ರಾತ್ರಿ ಬಹಳ ಹೊತ್ತಾದರೂ ಪತ್ನಿ ಹಿಂತಿರುಗದಿದ್ದಾಗ ಸಂಬಂಧಿಕರು ಹುಡುಕಾಟ ಆರಂಭಿಸಿದ್ದಾರೆ. ಹುಡುಕಾಟದಲ್ಲಿ ಯುವತಿಯ ಮೃತದೇಹ ಮನೆ ಸಮೀಪದ ಹೊಲದಲ್ಲಿ ಪತ್ತೆಯಾಗಿದೆ. ಆಕೆಯ ತಲೆಯನ್ನು ಕಲ್ಲುಗಳಿಂದ ಜಜ್ಜಿ ಗುರುತು ಸಿಗದಂತೆ ಮಾಡಲಾಗಿತ್ತು. ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆಗಾಗಿ ಹಿಂತಿರುಗಿಸಿದ್ದರು. ಆದರೆ,ಅಂತ್ಯಕ್ರಿಯೆಗೆ ಒಪ್ಪದ ಕುಟುಂಬಸ್ತರು ಶವವಿಟ್ಟು ಪ್ರತಿಭಟನೆ ನಡೆಸಿದ್ದರು.

ಈ ಸಂಪೂರ್ಣ ಪ್ರಕರಣದಲ್ಲಿ ತರಾನಾ ಪೊಲೀಸರು ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಈತ ರಾತ್ರಿ ಹತ್ತು ಗಂಟೆಗೆ ಯುವತಿಯೊಂದಿಗೆ ಮಾತನಾಡಿದ್ದು, ಪೊಲೀಸರು ಕರೆತಂದಿದ್ದ ಶ್ವಾನದಳ ಸೀದಾ ಈ ವ್ಯಕ್ತಿಯ ನಿರ್ಮಾಣ ಹಂತದ ಮನೆಗೆ ನುಗ್ಗಿದೆ. ಇದರ ಆಧಾರದ ಮೇಲೆ ಕುಟುಂಬ ಸದಸ್ಯರು ಯುವತಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಮೂವರು ಯುವಕರು ಸೇರಿ ಕೊಲೆ ಮಾಡಿದ್ದಾರೆ ಎಂದಿದ್ದಾರೆ.

ಈ ಪ್ರಕರಣದಲ್ಲಿ ತರಾನಾ ಎಸ್‌ಡಿಎಂ ಏಕ್ತಾ ಜೈಸ್ವಾಲ್ ಮಾತನಾಡಿ, ಪೊಲೀಸರು ಸಂಪೂರ್ಣ ತನಿಖೆ ನಡೆಸುತ್ತಿದ್ದಾರೆ, ತನಿಖೆಯ ನಂತರ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದಿದ್ದಾರೆ.

 


ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪರಾಧಿಗೆ ಮರಣದಂಡನೆ ಜಾರಿಗೆ ಸುಪ್ರೀಂ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...