Homeದಲಿತ್ ಫೈಲ್ಸ್ಮಧ್ಯಪ್ರದೇಶ: ದಲಿತ ಯುವತಿಯ ಕೊಲೆ, ರಸ್ತೆಯಲ್ಲಿ ಶವವಿಟ್ಟು ಬೃಹತ್ ಪ್ರತಿಭಟನೆ

ಮಧ್ಯಪ್ರದೇಶ: ದಲಿತ ಯುವತಿಯ ಕೊಲೆ, ರಸ್ತೆಯಲ್ಲಿ ಶವವಿಟ್ಟು ಬೃಹತ್ ಪ್ರತಿಭಟನೆ

- Advertisement -
- Advertisement -

ದಲಿತ ಯುವತಿಯ ಕೊಲೆ ಪ್ರಕರಣದಲ್ಲಿ ಆರೋಪಿಗಳನ್ನು ತಕ್ಷಣವೇ ಬಂಧಿಸುವಂತೆ ನ್ಯಾಯಕ್ಕಾಗಿ ಆಗ್ರಹಿಸಿ, ರಸ್ತೆಯಲ್ಲಿ ಮೃತದೇಹವಿಟ್ಟು ಬೃಹತ್‌ ಪ್ರತಿಭಟನೆ ನಡೆಸಿರುವ ಘಟನೆ ಭಾನುವಾರ ಮಧ್ಯಪ್ರದೇಶದ ಶಾಜಾಪುರದ ಮಕ್ಸಿ ಪೊಲೀಸ್ ಠಾಣೆಯ ರೋಜ್ವಾಸ್ ಸರ್ಕಲ್‌ನಲ್ಲಿ ನಡೆದಿದೆ.

ಯುವತಿಯ ಮೃತದೇಹವನ್ನು ಆಗ್ರಾ-ಮುಂಬೈ ರಾಷ್ಟ್ರೀಯ ಹೆದ್ದಾರಿಯ ರೋಜ್ವಾಸ್ ಟೋಲ್ ಪ್ಲಾಜಾ ಬಳಿ ಇಟ್ಟು, ಇಡೀ ರಸ್ತೆಯನ್ನು ವಶಕ್ಕೆ ಪಡೆದಿದ್ದ ಸಾವಿರಾರು ಸಂಖ್ಯೆಯ ಗ್ರಾಮಸ್ಥರು ರಸ್ತೆಯ ಮೇಲೆ ಕುಳಿತು ಕೊಲೆ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದರು. ಇದರಿಂದ ಟೋಲ್ ಪ್ಲಾಜಾದಲ್ಲಿ ಕಿಲೋ ಮೀಟರ್‌ಗಟ್ಟಲೆ ಉದ್ದದ ಟ್ರಾಫಿಕ್ ಜಾಮ್ ಉಂಟಾಗಿ, ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.

ಮಾಹಿತಿ ತಿಳಿದ ತಕ್ಷಣ ಶಾಜಾಪುರ ಹೆಚ್ಚುವರಿ ಎಸ್ಪಿ ಟಿ.ಎಸ್.ಬಘೇಲ್, ಎಸ್‌ಡಿಒಪಿ ದೀಪಾ ದೊಡ್ವೆ, ತರಾನಾ ಎಸ್‌ಡಿಎಂ ಏಕ್ತಾ ಜೈಸ್ವಾಲ್ ಸ್ಥಳಕ್ಕೆ ಆಗಮಿಸಿ ಗ್ರಾಮಸ್ಥರಿಗೆ ನ್ಯಾಯ ನೀಡುವ ಭರವಸೆ ನೀಡಿದ್ದರು. ಏಳು ದಿನಗಳಲ್ಲಿ ಪ್ರಕರಣವನ್ನು ಸಂಪೂರ್ಣವಾಗಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವ ಭರವಸೆ ನೀಡಿದ ನಂತರವೇ ಪ್ರತಿಭಟನಾಕಾರರು ಒಪ್ಪಿದ್ದಾರೆ. ಆದರೂ ಕೂಡ ಸಂಜೆ 5ರ ನಂತರವೂ ಟ್ರಾಫಿಕ್‌ ಜಾಮ್ ಮುಂದುವರಿದಿತ್ತು. ಇದರಿಂದಾಗಿ ಹೆದ್ದಾರಿಯಲ್ಲಿ ವಾಹನಗಳ ಉದ್ದನೆಯ ಸರತಿ ಸಾಲು ನಿರ್ಮಾಣವಾಗಿತ್ತು ಎಂದು ದೈನಿಕ್ ಭಾಸ್ಕರ್‌ ವರದಿ ಮಾಡಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಹತ್ರಾಸ್ ಅತ್ಯಾಚಾರ ಪ್ರಕರಣ ಚುನಾವಣೆಯನ್ನು ಪ್ರಭಾವಿಸುವುದೇ?

ಯುವತಿ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದು, ಹತ್ಯೆಯನ್ನು ವಿರೋಧಿಸಿ ಭೀಮ್ ಆರ್ಮಿ ಕಾರ್ಯಕರ್ತರು, ಗ್ರಾಮಸ್ಥರು ಮತ್ತು ಆಕೆಯ ಸಂಬಂಧಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಹೆದ್ದಾರಿ ತಡೆದು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೂ ಪಾಲ್ಗೊಂಡಿದ್ದರು. ಅದೇ ಸಮಯದಲ್ಲಿ, ಮಕ್ಸಿ ಪೊಲೀಸರು ಹೆದ್ದಾರಿ ತಡೆ ನಡೆಸಿದಕ್ಕಾಗಿ 150 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಘಟನೆಯ ಹಿನ್ನೆಲೆ:

ಉಜ್ಜಯಿನಿ ಜಿಲ್ಲೆಯ ಕನಾರ್ಡಿ ಗ್ರಾಮದಲ್ಲಿ ಕಳೆದ ರಾತ್ರಿ 22 ವರ್ಷದ ಭಗವತಿ ಬಾಯಿ ತನ್ನ ಮನೆಯಿಂದ ನಾಪತ್ತೆಯಾಗಿದ್ದರು. ಪತಿ ಹಮ್ಮಾಲಿ ಕೆಲಸ ಮುಗಿಸಿ ರಾತ್ರಿ ಮನೆಗೆ ಬಂದಾಗ ಪತ್ನಿ ಮನೆಯಲ್ಲಿ ಇಲ್ಲದಿರುವುದು ತಿಳಿದು ಬಂದಿದೆ. ಅಕ್ಕಪಕ್ಕದಲ್ಲಿಯೇ ಕಾರ್ಯಕ್ರಮ ನಡೆಯುತ್ತಿದ್ದು, ಆಕೆ ಅಲ್ಲಿಗೆ ಹೋಗಿರಬೇಕು ಎಂದುಕೊಂಡಿದ್ದಾರೆ. ರಾತ್ರಿ ಬಹಳ ಹೊತ್ತಾದರೂ ಪತ್ನಿ ಹಿಂತಿರುಗದಿದ್ದಾಗ ಸಂಬಂಧಿಕರು ಹುಡುಕಾಟ ಆರಂಭಿಸಿದ್ದಾರೆ. ಹುಡುಕಾಟದಲ್ಲಿ ಯುವತಿಯ ಮೃತದೇಹ ಮನೆ ಸಮೀಪದ ಹೊಲದಲ್ಲಿ ಪತ್ತೆಯಾಗಿದೆ. ಆಕೆಯ ತಲೆಯನ್ನು ಕಲ್ಲುಗಳಿಂದ ಜಜ್ಜಿ ಗುರುತು ಸಿಗದಂತೆ ಮಾಡಲಾಗಿತ್ತು. ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆಗಾಗಿ ಹಿಂತಿರುಗಿಸಿದ್ದರು. ಆದರೆ,ಅಂತ್ಯಕ್ರಿಯೆಗೆ ಒಪ್ಪದ ಕುಟುಂಬಸ್ತರು ಶವವಿಟ್ಟು ಪ್ರತಿಭಟನೆ ನಡೆಸಿದ್ದರು.

ಈ ಸಂಪೂರ್ಣ ಪ್ರಕರಣದಲ್ಲಿ ತರಾನಾ ಪೊಲೀಸರು ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಈತ ರಾತ್ರಿ ಹತ್ತು ಗಂಟೆಗೆ ಯುವತಿಯೊಂದಿಗೆ ಮಾತನಾಡಿದ್ದು, ಪೊಲೀಸರು ಕರೆತಂದಿದ್ದ ಶ್ವಾನದಳ ಸೀದಾ ಈ ವ್ಯಕ್ತಿಯ ನಿರ್ಮಾಣ ಹಂತದ ಮನೆಗೆ ನುಗ್ಗಿದೆ. ಇದರ ಆಧಾರದ ಮೇಲೆ ಕುಟುಂಬ ಸದಸ್ಯರು ಯುವತಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಮೂವರು ಯುವಕರು ಸೇರಿ ಕೊಲೆ ಮಾಡಿದ್ದಾರೆ ಎಂದಿದ್ದಾರೆ.

ಈ ಪ್ರಕರಣದಲ್ಲಿ ತರಾನಾ ಎಸ್‌ಡಿಎಂ ಏಕ್ತಾ ಜೈಸ್ವಾಲ್ ಮಾತನಾಡಿ, ಪೊಲೀಸರು ಸಂಪೂರ್ಣ ತನಿಖೆ ನಡೆಸುತ್ತಿದ್ದಾರೆ, ತನಿಖೆಯ ನಂತರ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದಿದ್ದಾರೆ.

 


ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪರಾಧಿಗೆ ಮರಣದಂಡನೆ ಜಾರಿಗೆ ಸುಪ್ರೀಂ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...