Homeದಲಿತ್ ಫೈಲ್ಸ್ಮಧ್ಯಪ್ರದೇಶ: ದಲಿತ ಯುವತಿಯ ಕೊಲೆ, ರಸ್ತೆಯಲ್ಲಿ ಶವವಿಟ್ಟು ಬೃಹತ್ ಪ್ರತಿಭಟನೆ

ಮಧ್ಯಪ್ರದೇಶ: ದಲಿತ ಯುವತಿಯ ಕೊಲೆ, ರಸ್ತೆಯಲ್ಲಿ ಶವವಿಟ್ಟು ಬೃಹತ್ ಪ್ರತಿಭಟನೆ

- Advertisement -
- Advertisement -

ದಲಿತ ಯುವತಿಯ ಕೊಲೆ ಪ್ರಕರಣದಲ್ಲಿ ಆರೋಪಿಗಳನ್ನು ತಕ್ಷಣವೇ ಬಂಧಿಸುವಂತೆ ನ್ಯಾಯಕ್ಕಾಗಿ ಆಗ್ರಹಿಸಿ, ರಸ್ತೆಯಲ್ಲಿ ಮೃತದೇಹವಿಟ್ಟು ಬೃಹತ್‌ ಪ್ರತಿಭಟನೆ ನಡೆಸಿರುವ ಘಟನೆ ಭಾನುವಾರ ಮಧ್ಯಪ್ರದೇಶದ ಶಾಜಾಪುರದ ಮಕ್ಸಿ ಪೊಲೀಸ್ ಠಾಣೆಯ ರೋಜ್ವಾಸ್ ಸರ್ಕಲ್‌ನಲ್ಲಿ ನಡೆದಿದೆ.

ಯುವತಿಯ ಮೃತದೇಹವನ್ನು ಆಗ್ರಾ-ಮುಂಬೈ ರಾಷ್ಟ್ರೀಯ ಹೆದ್ದಾರಿಯ ರೋಜ್ವಾಸ್ ಟೋಲ್ ಪ್ಲಾಜಾ ಬಳಿ ಇಟ್ಟು, ಇಡೀ ರಸ್ತೆಯನ್ನು ವಶಕ್ಕೆ ಪಡೆದಿದ್ದ ಸಾವಿರಾರು ಸಂಖ್ಯೆಯ ಗ್ರಾಮಸ್ಥರು ರಸ್ತೆಯ ಮೇಲೆ ಕುಳಿತು ಕೊಲೆ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದರು. ಇದರಿಂದ ಟೋಲ್ ಪ್ಲಾಜಾದಲ್ಲಿ ಕಿಲೋ ಮೀಟರ್‌ಗಟ್ಟಲೆ ಉದ್ದದ ಟ್ರಾಫಿಕ್ ಜಾಮ್ ಉಂಟಾಗಿ, ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.

ಮಾಹಿತಿ ತಿಳಿದ ತಕ್ಷಣ ಶಾಜಾಪುರ ಹೆಚ್ಚುವರಿ ಎಸ್ಪಿ ಟಿ.ಎಸ್.ಬಘೇಲ್, ಎಸ್‌ಡಿಒಪಿ ದೀಪಾ ದೊಡ್ವೆ, ತರಾನಾ ಎಸ್‌ಡಿಎಂ ಏಕ್ತಾ ಜೈಸ್ವಾಲ್ ಸ್ಥಳಕ್ಕೆ ಆಗಮಿಸಿ ಗ್ರಾಮಸ್ಥರಿಗೆ ನ್ಯಾಯ ನೀಡುವ ಭರವಸೆ ನೀಡಿದ್ದರು. ಏಳು ದಿನಗಳಲ್ಲಿ ಪ್ರಕರಣವನ್ನು ಸಂಪೂರ್ಣವಾಗಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವ ಭರವಸೆ ನೀಡಿದ ನಂತರವೇ ಪ್ರತಿಭಟನಾಕಾರರು ಒಪ್ಪಿದ್ದಾರೆ. ಆದರೂ ಕೂಡ ಸಂಜೆ 5ರ ನಂತರವೂ ಟ್ರಾಫಿಕ್‌ ಜಾಮ್ ಮುಂದುವರಿದಿತ್ತು. ಇದರಿಂದಾಗಿ ಹೆದ್ದಾರಿಯಲ್ಲಿ ವಾಹನಗಳ ಉದ್ದನೆಯ ಸರತಿ ಸಾಲು ನಿರ್ಮಾಣವಾಗಿತ್ತು ಎಂದು ದೈನಿಕ್ ಭಾಸ್ಕರ್‌ ವರದಿ ಮಾಡಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಹತ್ರಾಸ್ ಅತ್ಯಾಚಾರ ಪ್ರಕರಣ ಚುನಾವಣೆಯನ್ನು ಪ್ರಭಾವಿಸುವುದೇ?

ಯುವತಿ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದು, ಹತ್ಯೆಯನ್ನು ವಿರೋಧಿಸಿ ಭೀಮ್ ಆರ್ಮಿ ಕಾರ್ಯಕರ್ತರು, ಗ್ರಾಮಸ್ಥರು ಮತ್ತು ಆಕೆಯ ಸಂಬಂಧಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಹೆದ್ದಾರಿ ತಡೆದು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೂ ಪಾಲ್ಗೊಂಡಿದ್ದರು. ಅದೇ ಸಮಯದಲ್ಲಿ, ಮಕ್ಸಿ ಪೊಲೀಸರು ಹೆದ್ದಾರಿ ತಡೆ ನಡೆಸಿದಕ್ಕಾಗಿ 150 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಘಟನೆಯ ಹಿನ್ನೆಲೆ:

ಉಜ್ಜಯಿನಿ ಜಿಲ್ಲೆಯ ಕನಾರ್ಡಿ ಗ್ರಾಮದಲ್ಲಿ ಕಳೆದ ರಾತ್ರಿ 22 ವರ್ಷದ ಭಗವತಿ ಬಾಯಿ ತನ್ನ ಮನೆಯಿಂದ ನಾಪತ್ತೆಯಾಗಿದ್ದರು. ಪತಿ ಹಮ್ಮಾಲಿ ಕೆಲಸ ಮುಗಿಸಿ ರಾತ್ರಿ ಮನೆಗೆ ಬಂದಾಗ ಪತ್ನಿ ಮನೆಯಲ್ಲಿ ಇಲ್ಲದಿರುವುದು ತಿಳಿದು ಬಂದಿದೆ. ಅಕ್ಕಪಕ್ಕದಲ್ಲಿಯೇ ಕಾರ್ಯಕ್ರಮ ನಡೆಯುತ್ತಿದ್ದು, ಆಕೆ ಅಲ್ಲಿಗೆ ಹೋಗಿರಬೇಕು ಎಂದುಕೊಂಡಿದ್ದಾರೆ. ರಾತ್ರಿ ಬಹಳ ಹೊತ್ತಾದರೂ ಪತ್ನಿ ಹಿಂತಿರುಗದಿದ್ದಾಗ ಸಂಬಂಧಿಕರು ಹುಡುಕಾಟ ಆರಂಭಿಸಿದ್ದಾರೆ. ಹುಡುಕಾಟದಲ್ಲಿ ಯುವತಿಯ ಮೃತದೇಹ ಮನೆ ಸಮೀಪದ ಹೊಲದಲ್ಲಿ ಪತ್ತೆಯಾಗಿದೆ. ಆಕೆಯ ತಲೆಯನ್ನು ಕಲ್ಲುಗಳಿಂದ ಜಜ್ಜಿ ಗುರುತು ಸಿಗದಂತೆ ಮಾಡಲಾಗಿತ್ತು. ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆಗಾಗಿ ಹಿಂತಿರುಗಿಸಿದ್ದರು. ಆದರೆ,ಅಂತ್ಯಕ್ರಿಯೆಗೆ ಒಪ್ಪದ ಕುಟುಂಬಸ್ತರು ಶವವಿಟ್ಟು ಪ್ರತಿಭಟನೆ ನಡೆಸಿದ್ದರು.

ಈ ಸಂಪೂರ್ಣ ಪ್ರಕರಣದಲ್ಲಿ ತರಾನಾ ಪೊಲೀಸರು ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಈತ ರಾತ್ರಿ ಹತ್ತು ಗಂಟೆಗೆ ಯುವತಿಯೊಂದಿಗೆ ಮಾತನಾಡಿದ್ದು, ಪೊಲೀಸರು ಕರೆತಂದಿದ್ದ ಶ್ವಾನದಳ ಸೀದಾ ಈ ವ್ಯಕ್ತಿಯ ನಿರ್ಮಾಣ ಹಂತದ ಮನೆಗೆ ನುಗ್ಗಿದೆ. ಇದರ ಆಧಾರದ ಮೇಲೆ ಕುಟುಂಬ ಸದಸ್ಯರು ಯುವತಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಮೂವರು ಯುವಕರು ಸೇರಿ ಕೊಲೆ ಮಾಡಿದ್ದಾರೆ ಎಂದಿದ್ದಾರೆ.

ಈ ಪ್ರಕರಣದಲ್ಲಿ ತರಾನಾ ಎಸ್‌ಡಿಎಂ ಏಕ್ತಾ ಜೈಸ್ವಾಲ್ ಮಾತನಾಡಿ, ಪೊಲೀಸರು ಸಂಪೂರ್ಣ ತನಿಖೆ ನಡೆಸುತ್ತಿದ್ದಾರೆ, ತನಿಖೆಯ ನಂತರ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದಿದ್ದಾರೆ.

 


ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪರಾಧಿಗೆ ಮರಣದಂಡನೆ ಜಾರಿಗೆ ಸುಪ್ರೀಂ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...