Homeದಲಿತ್ ಫೈಲ್ಸ್ಮಧ್ಯಪ್ರದೇಶ: ದಲಿತ ಯುವತಿಯ ಕೊಲೆ, ರಸ್ತೆಯಲ್ಲಿ ಶವವಿಟ್ಟು ಬೃಹತ್ ಪ್ರತಿಭಟನೆ

ಮಧ್ಯಪ್ರದೇಶ: ದಲಿತ ಯುವತಿಯ ಕೊಲೆ, ರಸ್ತೆಯಲ್ಲಿ ಶವವಿಟ್ಟು ಬೃಹತ್ ಪ್ರತಿಭಟನೆ

- Advertisement -
- Advertisement -

ದಲಿತ ಯುವತಿಯ ಕೊಲೆ ಪ್ರಕರಣದಲ್ಲಿ ಆರೋಪಿಗಳನ್ನು ತಕ್ಷಣವೇ ಬಂಧಿಸುವಂತೆ ನ್ಯಾಯಕ್ಕಾಗಿ ಆಗ್ರಹಿಸಿ, ರಸ್ತೆಯಲ್ಲಿ ಮೃತದೇಹವಿಟ್ಟು ಬೃಹತ್‌ ಪ್ರತಿಭಟನೆ ನಡೆಸಿರುವ ಘಟನೆ ಭಾನುವಾರ ಮಧ್ಯಪ್ರದೇಶದ ಶಾಜಾಪುರದ ಮಕ್ಸಿ ಪೊಲೀಸ್ ಠಾಣೆಯ ರೋಜ್ವಾಸ್ ಸರ್ಕಲ್‌ನಲ್ಲಿ ನಡೆದಿದೆ.

ಯುವತಿಯ ಮೃತದೇಹವನ್ನು ಆಗ್ರಾ-ಮುಂಬೈ ರಾಷ್ಟ್ರೀಯ ಹೆದ್ದಾರಿಯ ರೋಜ್ವಾಸ್ ಟೋಲ್ ಪ್ಲಾಜಾ ಬಳಿ ಇಟ್ಟು, ಇಡೀ ರಸ್ತೆಯನ್ನು ವಶಕ್ಕೆ ಪಡೆದಿದ್ದ ಸಾವಿರಾರು ಸಂಖ್ಯೆಯ ಗ್ರಾಮಸ್ಥರು ರಸ್ತೆಯ ಮೇಲೆ ಕುಳಿತು ಕೊಲೆ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದರು. ಇದರಿಂದ ಟೋಲ್ ಪ್ಲಾಜಾದಲ್ಲಿ ಕಿಲೋ ಮೀಟರ್‌ಗಟ್ಟಲೆ ಉದ್ದದ ಟ್ರಾಫಿಕ್ ಜಾಮ್ ಉಂಟಾಗಿ, ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.

ಮಾಹಿತಿ ತಿಳಿದ ತಕ್ಷಣ ಶಾಜಾಪುರ ಹೆಚ್ಚುವರಿ ಎಸ್ಪಿ ಟಿ.ಎಸ್.ಬಘೇಲ್, ಎಸ್‌ಡಿಒಪಿ ದೀಪಾ ದೊಡ್ವೆ, ತರಾನಾ ಎಸ್‌ಡಿಎಂ ಏಕ್ತಾ ಜೈಸ್ವಾಲ್ ಸ್ಥಳಕ್ಕೆ ಆಗಮಿಸಿ ಗ್ರಾಮಸ್ಥರಿಗೆ ನ್ಯಾಯ ನೀಡುವ ಭರವಸೆ ನೀಡಿದ್ದರು. ಏಳು ದಿನಗಳಲ್ಲಿ ಪ್ರಕರಣವನ್ನು ಸಂಪೂರ್ಣವಾಗಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವ ಭರವಸೆ ನೀಡಿದ ನಂತರವೇ ಪ್ರತಿಭಟನಾಕಾರರು ಒಪ್ಪಿದ್ದಾರೆ. ಆದರೂ ಕೂಡ ಸಂಜೆ 5ರ ನಂತರವೂ ಟ್ರಾಫಿಕ್‌ ಜಾಮ್ ಮುಂದುವರಿದಿತ್ತು. ಇದರಿಂದಾಗಿ ಹೆದ್ದಾರಿಯಲ್ಲಿ ವಾಹನಗಳ ಉದ್ದನೆಯ ಸರತಿ ಸಾಲು ನಿರ್ಮಾಣವಾಗಿತ್ತು ಎಂದು ದೈನಿಕ್ ಭಾಸ್ಕರ್‌ ವರದಿ ಮಾಡಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಹತ್ರಾಸ್ ಅತ್ಯಾಚಾರ ಪ್ರಕರಣ ಚುನಾವಣೆಯನ್ನು ಪ್ರಭಾವಿಸುವುದೇ?

ಯುವತಿ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದು, ಹತ್ಯೆಯನ್ನು ವಿರೋಧಿಸಿ ಭೀಮ್ ಆರ್ಮಿ ಕಾರ್ಯಕರ್ತರು, ಗ್ರಾಮಸ್ಥರು ಮತ್ತು ಆಕೆಯ ಸಂಬಂಧಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಹೆದ್ದಾರಿ ತಡೆದು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೂ ಪಾಲ್ಗೊಂಡಿದ್ದರು. ಅದೇ ಸಮಯದಲ್ಲಿ, ಮಕ್ಸಿ ಪೊಲೀಸರು ಹೆದ್ದಾರಿ ತಡೆ ನಡೆಸಿದಕ್ಕಾಗಿ 150 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಘಟನೆಯ ಹಿನ್ನೆಲೆ:

ಉಜ್ಜಯಿನಿ ಜಿಲ್ಲೆಯ ಕನಾರ್ಡಿ ಗ್ರಾಮದಲ್ಲಿ ಕಳೆದ ರಾತ್ರಿ 22 ವರ್ಷದ ಭಗವತಿ ಬಾಯಿ ತನ್ನ ಮನೆಯಿಂದ ನಾಪತ್ತೆಯಾಗಿದ್ದರು. ಪತಿ ಹಮ್ಮಾಲಿ ಕೆಲಸ ಮುಗಿಸಿ ರಾತ್ರಿ ಮನೆಗೆ ಬಂದಾಗ ಪತ್ನಿ ಮನೆಯಲ್ಲಿ ಇಲ್ಲದಿರುವುದು ತಿಳಿದು ಬಂದಿದೆ. ಅಕ್ಕಪಕ್ಕದಲ್ಲಿಯೇ ಕಾರ್ಯಕ್ರಮ ನಡೆಯುತ್ತಿದ್ದು, ಆಕೆ ಅಲ್ಲಿಗೆ ಹೋಗಿರಬೇಕು ಎಂದುಕೊಂಡಿದ್ದಾರೆ. ರಾತ್ರಿ ಬಹಳ ಹೊತ್ತಾದರೂ ಪತ್ನಿ ಹಿಂತಿರುಗದಿದ್ದಾಗ ಸಂಬಂಧಿಕರು ಹುಡುಕಾಟ ಆರಂಭಿಸಿದ್ದಾರೆ. ಹುಡುಕಾಟದಲ್ಲಿ ಯುವತಿಯ ಮೃತದೇಹ ಮನೆ ಸಮೀಪದ ಹೊಲದಲ್ಲಿ ಪತ್ತೆಯಾಗಿದೆ. ಆಕೆಯ ತಲೆಯನ್ನು ಕಲ್ಲುಗಳಿಂದ ಜಜ್ಜಿ ಗುರುತು ಸಿಗದಂತೆ ಮಾಡಲಾಗಿತ್ತು. ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆಗಾಗಿ ಹಿಂತಿರುಗಿಸಿದ್ದರು. ಆದರೆ,ಅಂತ್ಯಕ್ರಿಯೆಗೆ ಒಪ್ಪದ ಕುಟುಂಬಸ್ತರು ಶವವಿಟ್ಟು ಪ್ರತಿಭಟನೆ ನಡೆಸಿದ್ದರು.

ಈ ಸಂಪೂರ್ಣ ಪ್ರಕರಣದಲ್ಲಿ ತರಾನಾ ಪೊಲೀಸರು ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಈತ ರಾತ್ರಿ ಹತ್ತು ಗಂಟೆಗೆ ಯುವತಿಯೊಂದಿಗೆ ಮಾತನಾಡಿದ್ದು, ಪೊಲೀಸರು ಕರೆತಂದಿದ್ದ ಶ್ವಾನದಳ ಸೀದಾ ಈ ವ್ಯಕ್ತಿಯ ನಿರ್ಮಾಣ ಹಂತದ ಮನೆಗೆ ನುಗ್ಗಿದೆ. ಇದರ ಆಧಾರದ ಮೇಲೆ ಕುಟುಂಬ ಸದಸ್ಯರು ಯುವತಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಮೂವರು ಯುವಕರು ಸೇರಿ ಕೊಲೆ ಮಾಡಿದ್ದಾರೆ ಎಂದಿದ್ದಾರೆ.

ಈ ಪ್ರಕರಣದಲ್ಲಿ ತರಾನಾ ಎಸ್‌ಡಿಎಂ ಏಕ್ತಾ ಜೈಸ್ವಾಲ್ ಮಾತನಾಡಿ, ಪೊಲೀಸರು ಸಂಪೂರ್ಣ ತನಿಖೆ ನಡೆಸುತ್ತಿದ್ದಾರೆ, ತನಿಖೆಯ ನಂತರ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದಿದ್ದಾರೆ.

 


ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪರಾಧಿಗೆ ಮರಣದಂಡನೆ ಜಾರಿಗೆ ಸುಪ್ರೀಂ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...