Homeದಲಿತ್ ಫೈಲ್ಸ್ಮಧ್ಯಪ್ರದೇಶ: ದಲಿತ ಯುವತಿಯ ಕೊಲೆ, ರಸ್ತೆಯಲ್ಲಿ ಶವವಿಟ್ಟು ಬೃಹತ್ ಪ್ರತಿಭಟನೆ

ಮಧ್ಯಪ್ರದೇಶ: ದಲಿತ ಯುವತಿಯ ಕೊಲೆ, ರಸ್ತೆಯಲ್ಲಿ ಶವವಿಟ್ಟು ಬೃಹತ್ ಪ್ರತಿಭಟನೆ

- Advertisement -
- Advertisement -

ದಲಿತ ಯುವತಿಯ ಕೊಲೆ ಪ್ರಕರಣದಲ್ಲಿ ಆರೋಪಿಗಳನ್ನು ತಕ್ಷಣವೇ ಬಂಧಿಸುವಂತೆ ನ್ಯಾಯಕ್ಕಾಗಿ ಆಗ್ರಹಿಸಿ, ರಸ್ತೆಯಲ್ಲಿ ಮೃತದೇಹವಿಟ್ಟು ಬೃಹತ್‌ ಪ್ರತಿಭಟನೆ ನಡೆಸಿರುವ ಘಟನೆ ಭಾನುವಾರ ಮಧ್ಯಪ್ರದೇಶದ ಶಾಜಾಪುರದ ಮಕ್ಸಿ ಪೊಲೀಸ್ ಠಾಣೆಯ ರೋಜ್ವಾಸ್ ಸರ್ಕಲ್‌ನಲ್ಲಿ ನಡೆದಿದೆ.

ಯುವತಿಯ ಮೃತದೇಹವನ್ನು ಆಗ್ರಾ-ಮುಂಬೈ ರಾಷ್ಟ್ರೀಯ ಹೆದ್ದಾರಿಯ ರೋಜ್ವಾಸ್ ಟೋಲ್ ಪ್ಲಾಜಾ ಬಳಿ ಇಟ್ಟು, ಇಡೀ ರಸ್ತೆಯನ್ನು ವಶಕ್ಕೆ ಪಡೆದಿದ್ದ ಸಾವಿರಾರು ಸಂಖ್ಯೆಯ ಗ್ರಾಮಸ್ಥರು ರಸ್ತೆಯ ಮೇಲೆ ಕುಳಿತು ಕೊಲೆ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದರು. ಇದರಿಂದ ಟೋಲ್ ಪ್ಲಾಜಾದಲ್ಲಿ ಕಿಲೋ ಮೀಟರ್‌ಗಟ್ಟಲೆ ಉದ್ದದ ಟ್ರಾಫಿಕ್ ಜಾಮ್ ಉಂಟಾಗಿ, ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.

ಮಾಹಿತಿ ತಿಳಿದ ತಕ್ಷಣ ಶಾಜಾಪುರ ಹೆಚ್ಚುವರಿ ಎಸ್ಪಿ ಟಿ.ಎಸ್.ಬಘೇಲ್, ಎಸ್‌ಡಿಒಪಿ ದೀಪಾ ದೊಡ್ವೆ, ತರಾನಾ ಎಸ್‌ಡಿಎಂ ಏಕ್ತಾ ಜೈಸ್ವಾಲ್ ಸ್ಥಳಕ್ಕೆ ಆಗಮಿಸಿ ಗ್ರಾಮಸ್ಥರಿಗೆ ನ್ಯಾಯ ನೀಡುವ ಭರವಸೆ ನೀಡಿದ್ದರು. ಏಳು ದಿನಗಳಲ್ಲಿ ಪ್ರಕರಣವನ್ನು ಸಂಪೂರ್ಣವಾಗಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವ ಭರವಸೆ ನೀಡಿದ ನಂತರವೇ ಪ್ರತಿಭಟನಾಕಾರರು ಒಪ್ಪಿದ್ದಾರೆ. ಆದರೂ ಕೂಡ ಸಂಜೆ 5ರ ನಂತರವೂ ಟ್ರಾಫಿಕ್‌ ಜಾಮ್ ಮುಂದುವರಿದಿತ್ತು. ಇದರಿಂದಾಗಿ ಹೆದ್ದಾರಿಯಲ್ಲಿ ವಾಹನಗಳ ಉದ್ದನೆಯ ಸರತಿ ಸಾಲು ನಿರ್ಮಾಣವಾಗಿತ್ತು ಎಂದು ದೈನಿಕ್ ಭಾಸ್ಕರ್‌ ವರದಿ ಮಾಡಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಹತ್ರಾಸ್ ಅತ್ಯಾಚಾರ ಪ್ರಕರಣ ಚುನಾವಣೆಯನ್ನು ಪ್ರಭಾವಿಸುವುದೇ?

ಯುವತಿ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದು, ಹತ್ಯೆಯನ್ನು ವಿರೋಧಿಸಿ ಭೀಮ್ ಆರ್ಮಿ ಕಾರ್ಯಕರ್ತರು, ಗ್ರಾಮಸ್ಥರು ಮತ್ತು ಆಕೆಯ ಸಂಬಂಧಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಹೆದ್ದಾರಿ ತಡೆದು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೂ ಪಾಲ್ಗೊಂಡಿದ್ದರು. ಅದೇ ಸಮಯದಲ್ಲಿ, ಮಕ್ಸಿ ಪೊಲೀಸರು ಹೆದ್ದಾರಿ ತಡೆ ನಡೆಸಿದಕ್ಕಾಗಿ 150 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಘಟನೆಯ ಹಿನ್ನೆಲೆ:

ಉಜ್ಜಯಿನಿ ಜಿಲ್ಲೆಯ ಕನಾರ್ಡಿ ಗ್ರಾಮದಲ್ಲಿ ಕಳೆದ ರಾತ್ರಿ 22 ವರ್ಷದ ಭಗವತಿ ಬಾಯಿ ತನ್ನ ಮನೆಯಿಂದ ನಾಪತ್ತೆಯಾಗಿದ್ದರು. ಪತಿ ಹಮ್ಮಾಲಿ ಕೆಲಸ ಮುಗಿಸಿ ರಾತ್ರಿ ಮನೆಗೆ ಬಂದಾಗ ಪತ್ನಿ ಮನೆಯಲ್ಲಿ ಇಲ್ಲದಿರುವುದು ತಿಳಿದು ಬಂದಿದೆ. ಅಕ್ಕಪಕ್ಕದಲ್ಲಿಯೇ ಕಾರ್ಯಕ್ರಮ ನಡೆಯುತ್ತಿದ್ದು, ಆಕೆ ಅಲ್ಲಿಗೆ ಹೋಗಿರಬೇಕು ಎಂದುಕೊಂಡಿದ್ದಾರೆ. ರಾತ್ರಿ ಬಹಳ ಹೊತ್ತಾದರೂ ಪತ್ನಿ ಹಿಂತಿರುಗದಿದ್ದಾಗ ಸಂಬಂಧಿಕರು ಹುಡುಕಾಟ ಆರಂಭಿಸಿದ್ದಾರೆ. ಹುಡುಕಾಟದಲ್ಲಿ ಯುವತಿಯ ಮೃತದೇಹ ಮನೆ ಸಮೀಪದ ಹೊಲದಲ್ಲಿ ಪತ್ತೆಯಾಗಿದೆ. ಆಕೆಯ ತಲೆಯನ್ನು ಕಲ್ಲುಗಳಿಂದ ಜಜ್ಜಿ ಗುರುತು ಸಿಗದಂತೆ ಮಾಡಲಾಗಿತ್ತು. ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆಗಾಗಿ ಹಿಂತಿರುಗಿಸಿದ್ದರು. ಆದರೆ,ಅಂತ್ಯಕ್ರಿಯೆಗೆ ಒಪ್ಪದ ಕುಟುಂಬಸ್ತರು ಶವವಿಟ್ಟು ಪ್ರತಿಭಟನೆ ನಡೆಸಿದ್ದರು.

ಈ ಸಂಪೂರ್ಣ ಪ್ರಕರಣದಲ್ಲಿ ತರಾನಾ ಪೊಲೀಸರು ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಈತ ರಾತ್ರಿ ಹತ್ತು ಗಂಟೆಗೆ ಯುವತಿಯೊಂದಿಗೆ ಮಾತನಾಡಿದ್ದು, ಪೊಲೀಸರು ಕರೆತಂದಿದ್ದ ಶ್ವಾನದಳ ಸೀದಾ ಈ ವ್ಯಕ್ತಿಯ ನಿರ್ಮಾಣ ಹಂತದ ಮನೆಗೆ ನುಗ್ಗಿದೆ. ಇದರ ಆಧಾರದ ಮೇಲೆ ಕುಟುಂಬ ಸದಸ್ಯರು ಯುವತಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಮೂವರು ಯುವಕರು ಸೇರಿ ಕೊಲೆ ಮಾಡಿದ್ದಾರೆ ಎಂದಿದ್ದಾರೆ.

ಈ ಪ್ರಕರಣದಲ್ಲಿ ತರಾನಾ ಎಸ್‌ಡಿಎಂ ಏಕ್ತಾ ಜೈಸ್ವಾಲ್ ಮಾತನಾಡಿ, ಪೊಲೀಸರು ಸಂಪೂರ್ಣ ತನಿಖೆ ನಡೆಸುತ್ತಿದ್ದಾರೆ, ತನಿಖೆಯ ನಂತರ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದಿದ್ದಾರೆ.

 


ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪರಾಧಿಗೆ ಮರಣದಂಡನೆ ಜಾರಿಗೆ ಸುಪ್ರೀಂ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...