Homeಮುಖಪುಟಮಧ್ಯಪ್ರದೇಶ: ದೇವಸ್ಥಾನಕ್ಕೆ ಸಂಪೂರ್ಣ ಭೂಮಿ ನೀಡಿದ ಕುಟುಂಬಕ್ಕೆ ಬಹಿಷ್ಕಾರ

ಮಧ್ಯಪ್ರದೇಶ: ದೇವಸ್ಥಾನಕ್ಕೆ ಸಂಪೂರ್ಣ ಭೂಮಿ ನೀಡಿದ ಕುಟುಂಬಕ್ಕೆ ಬಹಿಷ್ಕಾರ

ಪ್ರಾಯಶ್ಚಿತ್ತಕ್ಕಾಗಿ ಗೋಮೂತ್ರ ಕುಡಿಯಲೇಬೇಕು, ಚಪ್ಪಲಿಯನ್ನು ತಲೆ ಮೇಲಿ ಇಟ್ಟುಕೊಳ್ಳಬೇಕು ಎಂದು ಪಂಚಾಯಿತಿ ಷರತ್ತು ವಿಧಿಸಿದೆ.

- Advertisement -
- Advertisement -

ದೇವಸ್ಥಾನಕ್ಕೆ ತಮ್ಮ ಸಂಪೂರ್ಣ ಭೂಮಿಯನ್ನು ನೀಡಲು ನಿರಾಕರಿಸಿದ ಕಾರಣ ಕುಟುಂಬವೊಂದನ್ನು ಸಮುದಾಯದಿಂದ ಬಹಿಷ್ಕರಿಸಿರುವ ಘಟನೆ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ನಡೆದಿದೆ. ಯಾವುದೇ ಮದುವೆ ಮತ್ತು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳದಂತೆ ಅವರನ್ನು ನಿಷೇಧಿಸಲಾಗಿದೆ.

ಗುನಾದ ಶಿವಾಜಿ ನಗರದಲ್ಲಿ ವಾಸಿಸುತ್ತಿರುವ ಈ ಕುಟುಂಬ ಮತ್ತೆ ಸಮುದಾಯಕ್ಕೆ ಮರಳಲು ಪ್ರಾಯಶ್ಚಿತ್ತ ಮಾಡಿಕೊಳ್ಳಬೇಕು. ಅದಕ್ಕಾಗಿ ಗೋಮೂತ್ರ ಕುಡಿಯಲೇಬೇಕು, ತಮ್ಮ ಪೇಟವನ್ನು ಕಾಲಿನ ಬಳಿ ಇಡಬೇಕು, ಗಂಡಸರು ಗಡ್ಡವನ್ನು ಬೋಳಿಸಿಕೊಳ್ಳಬೇಕು ಮತ್ತು ತಲೆ ಮೇಲೆ ಶೂ ಹೊತ್ತುಕೊಳ್ಳಬೇಕು ಎಂದು ಷರತ್ತು ಹಾಕಲಾಗಿದೆ.

ಶಿವಾಜಿ ನಗರ ಪ್ರದೇಶದ ನಿವಾಸಿ ಹೀರಾಲಾಲ್ ಘೋಸಿ ಈ ಬಗ್ಗೆ ಮಂಗಳವಾರ(ನ.16) ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ. ಬಳಿಕ ಈ ಘಟನೆ ಬೆಳಕಿಗೆ ಬಂದಿದೆ. ದೂರಿನಲ್ಲಿ ಸ್ಥಳೀಯ ಪಂಚಾಯತಿಯು ತನ್ನ ತಲೆಯ ಮೇಲೆ ಬೂಟುಗಳನ್ನು ಹೊತ್ತುಕೊಳ್ಳಬೇಕು, ಗಡ್ಡವನ್ನು ಬೋಳಿಸಿಕೊಳ್ಳಬೇಕು ಮತ್ತು ಕುಟುಂಬ ಸದಸ್ಯರಿಗೆ ಗೋಮೂತ್ರವನ್ನು ಕುಡಿಯಲು ಹೇಳುತ್ತಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಬಾಗಲೂರು ಗ್ರಾಪಂ: ದಲಿತ ಅಧ್ಯಕ್ಷೆ ಕುಳಿತ ಕುರ್ಚಿ ಗೋಮೂತ್ರದಿಂದ ಶುದ್ಧೀಕರಣ: ಬಿಜೆಪಿ ದೂರು

ಗ್ರಾಮದಲ್ಲಿ ದೇವಸ್ಥಾನ ನಿರ್ಮಾಣಕ್ಕೆ ತನ್ನ ಕುಟುಂಬದ ಒಡೆತನದಲ್ಲಿರುವ ಸಂಪೂರ್ಣ ಜಮೀನನ್ನು ದಾನ ಮಾಡುವಂತೆ ಆರಂಭದಿಂದಲೂ ಒತ್ತಾಯಿಸಲಾಗುತ್ತಿದೆ ಎಂದು ಹೀರಾಲಾಲ್ ಘೋಸಿ ಜಿಲ್ಲಾಧಿಕಾರಿಗೆ ತಿಳಿಸಿದ್ದಾರೆ.

‘ನಮ್ಮ ಕುಟುಂಬವು ದೇವಾಲಯದ ನಿರ್ಮಾಣಕ್ಕಾಗಿ ನಮ್ಮ ಭೂಮಿಯ ಒಂದು ಭಾಗವನ್ನು ದಾನ ಮಾಡಿದೆ. ಆದರೆ ಪಂಚಾಯತ್ ಸದಸ್ಯರು ಸಂಪೂರ್ಣ ಭೂಮಿ ಬೇಕು ಎಂದು ಹೇಳುತ್ತಿದ್ದಾರೆ. ಅದು ನಮನ್ನು ಭೂರಹಿತರನ್ನಾಗಿ ಮಾಡುತ್ತದೆ. ಹೀಗಾಗಿ ನಾವು ಸಂಪೂರ್ಣ ಭೂಮಿ ನೀಡಲು ನಿರಾಕರಿಸಿದ್ದೇವೆ. ಅದಕ್ಕಾಗಿ, ನಮ್ಮ ಕುಟುಂಬವನ್ನು ಸಮುದಾಯದಿಂದ ಬಹಿಷ್ಕರಿದ್ದಾರೆ. ನಮ್ಮ ಮನೆಗೆ ಯಾರೂ ಬರುವುದಿಲ್ಲ. ಸಮುದಾಯದ ಯಾರನ್ನೂ ನಮ್ಮ ಕುಟುಂಬದವರು ಮದುವೆಯಾಗಂತೆ ತಡೆಯಲಾಗುತ್ತಿದೆ ’ ಎಂದು ಹೀರಾಲಾಲ್ ತಿಳಿಸಿದ್ದಾರೆ.

ಸಂತ್ರಸ್ತ ಹೀರಾಲಾಲ್ ಘೋಸಿ ಅವರ ದೂರನ್ನು ಅಧರಿಸಿ ತನಿಖೆಗೆ ಆದೇಶಿಸಲಾಗಿದೆ. ಪ್ರಕರಣ ಸಾಬೀತಾದಲ್ಲಿ, ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಗುನಾ ಜಿಲ್ಲಾಧಿಕಾರಿ ಫ್ರಾಂಕ್ ನೊಬೆಲ್ ತಿಳಿಸಿದ್ದಾರೆ.


ಇದನ್ನೂ ಓದಿ: ದಿಂಡಗನೂರು: ದೇವಾಲಯ ಪ್ರವೇಶದ ಬಳಿಕ ದಲಿತರಿಗೆ ಅಘೋಷಿತ ಸಾಮಾಜಿಕ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....