Homeಕರ್ನಾಟಕಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

ಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

- Advertisement -
- Advertisement -

ಮಾ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಶೇ.6 ಒಳಮೀಸಲಾತಿಯನ್ನು ಹಂಚಿಕೆ ಮಾಡದಿದ್ದರೆ ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ದ ಮತ ಚಲಾಯಿಸಲು ಸಮುದಾಯ ನಿರ್ಣಯ ಕೈಗೊಂಡಿದೆ.

ಮಂಡ್ಯನಗರದ ಗಾಂಧಿಭವನದಲ್ಲಿ ಬುಧವಾರ ನಡೆದ ‘ಒಳಮೀಸಲಾತಿಯ ಮುಂದಿನ ಹೆಜ್ಜೆಗಳು’ ಕುರಿತ ರಾಜ್ಯ ಮಟ್ಟದ ವಿಚಾರ ಸಂಕಿರಣ ಹಾಗೂ ಒಳಮೀಸಲಾತಿ ಹೋರಾಟಗಾರರ ಸಮಾಲೋಚನಾ ಸಭೆಯಲ್ಲಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಸಂಪುಟ ಸಭೆಯಲ್ಲಿ ಮಾದಿಗರಿಗೆ ಪಾಲು ನೀಡಿದರೆ ಮಾದಿಗ ಸಮುದಾಯ ಕಾಂಗ್ರೆಸ್ ಜತೆಗೂಡಲಿದೆ. ಒಂದು ವೇಳೆ ವ್ಯತಿರಿಕ್ತವಾದ ತೀರ್ಮಾನ ಕೈಗೊಂಡರೆ, ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಷ್ಟೇ ನಡೆಯಲಿದೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾಂಗ್ರೆಸ್ ನಾಯಕರು ಪಕ್ಷವನ್ನು ಸೋಲಿಸಲು ಸಮುದಾಯ ಮುಂದಾಗಬೇಕೆಂದು ಕರೆ ನೀಡಿದರು.

ರಾಜ್ಯಸಭಾ ಮಾಜಿ ಸದಸ್ಯ ಡಾ.ಎಲ್.ಹನುಮಂತಯ್ಯ ಮಾತನಾಡಿ, “ಕಳೆದ 35 ವರ್ಷಗಳಿಂದ ಮಾದಿಗ ಸಮುದಾಯ ಒಳಮೀಸಲಾತಿಗಾಗಿ ಹೋರಾಟ ಮಾಡಿಕೊಂಡಿದೆ. ಆದರೆ ಸುಪ್ರೀಂ ಕೋರ್ಟಿನ ತೀರ್ಪಿನ ನಂತರವು ರಾಜ್ಯ ಸರ್ಕಾರ ಒಳಮೀಸಲಾತಿ ಪರವಾದ ಗಟ್ಟಿ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದೆ ಬೆಳವಣಿಗೆಯಲ್ಲ” ಎಂದು ಹೇಳಿದರು.

“ಒಳಮೀಸಲಾತಿ ಎಂಬುದು ಸಾಮಾಜಿಕ ನ್ಯಾಯದ ಧ್ವನಿಯಾಗಿದೆ, ಎಲ್ಲ ಸಮುದಾಯಗಳು ಹಂಚಿಕೊಂಡು ತಿನ್ನುವವು. ಯಾರಿಗೂ ಅನ್ಯಾಯವಾಗದಂತೆ ತೀರ್ಮಾನ ಕೈಗೊಂಡು ಒಳಮೀಸಲಾತಿಯನ್ನು ಜಾರಿಮಾಡಕು” ಎಂದರು.

ಒಳಮೀಸಲಾತಿ ಹೋರಾಟಗಾರರಾದ ಬಸವರಾಜ್ ಕೌತಾಳ್ ಮಾತನಾಡಿ, “ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಒಳಮೀಸಲಾತಿ ಘೋಷಿಸಿ ಭರವಸೆ ನೀಡಿತ್ತು. ಆದರೆ, 2 ವರ್ಷ ಕಳೆದರೂ ಇನ್ನಿಲ್ಲದ ನೆಪ ಹೇಳಿ ಸಮುದಾಯವನ್ನು ಕಾಡಿಸುತ್ತಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಮಹದೇವಪ್ಪ ಮಾದಿಗ ಸಮಾಜದ ಶತ್ರುಗಳಾಗಿದ್ದರೆ, ಇನ್ನಾದರೂ ನೆಪ ಹೇಳದೆ ಒಳಮೀಸಲಾತಿ ಜಾರಿಗೊಳಿಸಬೇಕು. ಇಲ್ಲವಾದಾಗ ಉಗ್ರ ಹೋರಾಟಕ್ಕೆ ಮುಂದಾಗಿದೆ” ಎಂದು ಎಚ್ಚರಿಕೆ ನೀಡಲಾಗಿದೆ.

ಹಿರಿಯ ಒಳಮೀಸಲಾತಿ ಹೋರಾಟಗಾರರಾದ ಎಸ್.ಮಾರಪ್ಪ, ಹೆಚ್.ಹನುಮಂತಪ್ಪ, ಅಂಬಣ್ಣ ಆರೋಲಿಕರ್, ಮಾಜಿ ಶಾಸಕ ವೀರಭದ್ರಪ್ಪ ಹಾಲರವಿ, ಪ್ರಸನ್ನ ಚಕ್ರವರ್ತಿ, ಎನ್.ಆರ್.ಚಂದ್ರಶೇಖರ್, ಸಿ.ಕೆ.ಪಾಪಯ್ಯ ಹಾಗೂ ಕೃಷ್ಣ ಸೇರಿದಂತೆ ಹಲವರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...