Homeಕರ್ನಾಟಕಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

ಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

- Advertisement -
- Advertisement -

ಮಾ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಶೇ.6 ಒಳಮೀಸಲಾತಿಯನ್ನು ಹಂಚಿಕೆ ಮಾಡದಿದ್ದರೆ ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ದ ಮತ ಚಲಾಯಿಸಲು ಸಮುದಾಯ ನಿರ್ಣಯ ಕೈಗೊಂಡಿದೆ.

ಮಂಡ್ಯನಗರದ ಗಾಂಧಿಭವನದಲ್ಲಿ ಬುಧವಾರ ನಡೆದ ‘ಒಳಮೀಸಲಾತಿಯ ಮುಂದಿನ ಹೆಜ್ಜೆಗಳು’ ಕುರಿತ ರಾಜ್ಯ ಮಟ್ಟದ ವಿಚಾರ ಸಂಕಿರಣ ಹಾಗೂ ಒಳಮೀಸಲಾತಿ ಹೋರಾಟಗಾರರ ಸಮಾಲೋಚನಾ ಸಭೆಯಲ್ಲಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಸಂಪುಟ ಸಭೆಯಲ್ಲಿ ಮಾದಿಗರಿಗೆ ಪಾಲು ನೀಡಿದರೆ ಮಾದಿಗ ಸಮುದಾಯ ಕಾಂಗ್ರೆಸ್ ಜತೆಗೂಡಲಿದೆ. ಒಂದು ವೇಳೆ ವ್ಯತಿರಿಕ್ತವಾದ ತೀರ್ಮಾನ ಕೈಗೊಂಡರೆ, ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಷ್ಟೇ ನಡೆಯಲಿದೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾಂಗ್ರೆಸ್ ನಾಯಕರು ಪಕ್ಷವನ್ನು ಸೋಲಿಸಲು ಸಮುದಾಯ ಮುಂದಾಗಬೇಕೆಂದು ಕರೆ ನೀಡಿದರು.

ರಾಜ್ಯಸಭಾ ಮಾಜಿ ಸದಸ್ಯ ಡಾ.ಎಲ್.ಹನುಮಂತಯ್ಯ ಮಾತನಾಡಿ, “ಕಳೆದ 35 ವರ್ಷಗಳಿಂದ ಮಾದಿಗ ಸಮುದಾಯ ಒಳಮೀಸಲಾತಿಗಾಗಿ ಹೋರಾಟ ಮಾಡಿಕೊಂಡಿದೆ. ಆದರೆ ಸುಪ್ರೀಂ ಕೋರ್ಟಿನ ತೀರ್ಪಿನ ನಂತರವು ರಾಜ್ಯ ಸರ್ಕಾರ ಒಳಮೀಸಲಾತಿ ಪರವಾದ ಗಟ್ಟಿ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದೆ ಬೆಳವಣಿಗೆಯಲ್ಲ” ಎಂದು ಹೇಳಿದರು.

“ಒಳಮೀಸಲಾತಿ ಎಂಬುದು ಸಾಮಾಜಿಕ ನ್ಯಾಯದ ಧ್ವನಿಯಾಗಿದೆ, ಎಲ್ಲ ಸಮುದಾಯಗಳು ಹಂಚಿಕೊಂಡು ತಿನ್ನುವವು. ಯಾರಿಗೂ ಅನ್ಯಾಯವಾಗದಂತೆ ತೀರ್ಮಾನ ಕೈಗೊಂಡು ಒಳಮೀಸಲಾತಿಯನ್ನು ಜಾರಿಮಾಡಕು” ಎಂದರು.

ಒಳಮೀಸಲಾತಿ ಹೋರಾಟಗಾರರಾದ ಬಸವರಾಜ್ ಕೌತಾಳ್ ಮಾತನಾಡಿ, “ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಒಳಮೀಸಲಾತಿ ಘೋಷಿಸಿ ಭರವಸೆ ನೀಡಿತ್ತು. ಆದರೆ, 2 ವರ್ಷ ಕಳೆದರೂ ಇನ್ನಿಲ್ಲದ ನೆಪ ಹೇಳಿ ಸಮುದಾಯವನ್ನು ಕಾಡಿಸುತ್ತಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಮಹದೇವಪ್ಪ ಮಾದಿಗ ಸಮಾಜದ ಶತ್ರುಗಳಾಗಿದ್ದರೆ, ಇನ್ನಾದರೂ ನೆಪ ಹೇಳದೆ ಒಳಮೀಸಲಾತಿ ಜಾರಿಗೊಳಿಸಬೇಕು. ಇಲ್ಲವಾದಾಗ ಉಗ್ರ ಹೋರಾಟಕ್ಕೆ ಮುಂದಾಗಿದೆ” ಎಂದು ಎಚ್ಚರಿಕೆ ನೀಡಲಾಗಿದೆ.

ಹಿರಿಯ ಒಳಮೀಸಲಾತಿ ಹೋರಾಟಗಾರರಾದ ಎಸ್.ಮಾರಪ್ಪ, ಹೆಚ್.ಹನುಮಂತಪ್ಪ, ಅಂಬಣ್ಣ ಆರೋಲಿಕರ್, ಮಾಜಿ ಶಾಸಕ ವೀರಭದ್ರಪ್ಪ ಹಾಲರವಿ, ಪ್ರಸನ್ನ ಚಕ್ರವರ್ತಿ, ಎನ್.ಆರ್.ಚಂದ್ರಶೇಖರ್, ಸಿ.ಕೆ.ಪಾಪಯ್ಯ ಹಾಗೂ ಕೃಷ್ಣ ಸೇರಿದಂತೆ ಹಲವರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...