Homeಕರ್ನಾಟಕಶ್ರೀನಿವಾಸಪುರದಲ್ಲಿ ಮಾದಿಗ ಸಮುದಾಯದ ವಿದ್ಯಾರ್ಥಿ ಕೊಲೆ: ಇಬ್ಬರ ಬಂಧನ

ಶ್ರೀನಿವಾಸಪುರದಲ್ಲಿ ಮಾದಿಗ ಸಮುದಾಯದ ವಿದ್ಯಾರ್ಥಿ ಕೊಲೆ: ಇಬ್ಬರ ಬಂಧನ

- Advertisement -
- Advertisement -

ಮಾದಿಗ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಯನ್ನು ಹೊಲೆಯ ಸಮುದಾಯಕ್ಕೆ ಸೇರಿದವರು ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದಿದೆ.

ಚಲ್ದಿಗಾನಹಳ್ಳಿ ಗ್ರಾಮದ ರಾಕೇಶ್ ಕೊಲೆಯಾದ ಯುವಕ. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲೆಯಾದ ವಿದ್ಯಾರ್ಥಿಯ ತಂದೆ ಚಿಕ್ಕನರಸಿಂಹಪ್ಪ ಅವರು ನೀಡಿದ ದೂರನ್ನು ಆಧರಿಸಿ ಶ್ರೀನಿವಾರಪುರದ ಜಗಜೀವನಪಾಳ್ಯದ ಸೋಮಶೇಖರ, ನವೀನ, ನಾಗೇಶ್, ದಾಸಪ್ಪ ಎಂಬವರ ವಿರುದ್ಧ ಐಪಿಸಿ ಸೆಕ್ಷನ್ 302, 201, 363, 342, 34 ಅಡಿಯಲ್ಲಿ ಎಫ್ಐಆರ್ ಆಗಿದೆ.

ರಾಕೇಶ್ ತಂದೆ ನೀಡಿರುವ ದೂರಿನಲ್ಲಿ ಏನಿದೆ?

“ನನ್ನ ಮಗನಾದ ರಾಕೇಶ್ ದಿನಾಂಕ 17-07-2023ರಂದು ಬೆಳಿಗ್ಗೆ 7.30 ಗಂಟೆ ಸಮಯದಲ್ಲಿ ಮನೆಯಿಂದ ಹೊರಟು ಕಾಲೇಜಿಗೆ ಹೋಗಿದ್ದನು. ರಾತ್ರಿಯಾದರೂ ಮನೆಗೆ ಬಾರಲಿಲ್ಲ. ಈ ಸಲುವಾಗಿ ಊರಿನಲ್ಲಿ, ಸಂಬಂಧಿಕರ ಮನೆಗಳಲ್ಲಿ ಹುಡುಕಾಡಿದೆವು. 17ನೇ ತಾರೀಖಿನಂದು ಬೆಳಿಗ್ಗೆ ತನ್ನ ಕ್ಲಾಸ್ ಮೇಟ್ ವೇದಾಂತ್ ಎನ್ನುವವನ ಜೊತೆಯಲ್ಲಿ ಶ್ರೀನಿವಾಸಪುರದ ಸಾಗರ್ ಚಾಟ್ಸ್ ನಲ್ಲಿ ನನ್ನ ಮಗ ಕುಳಿತ್ತಿದ್ದನು. ಆಗ ಶ್ರೀನಿವಾಸಪುರದ ಜಗಜೀವನಪಾಳ್ಯದ ನಿವಾಸಿಗಳಾದ ಸೋಮಶೇಖರ, ನವೀನ್, ನಾಗೇಶ್, ದಾಸಪ್ಪ ಎಂಬವರು ಕರೆದುಕೊಂಡು ಹೋಗಿರುವುದಾಗಿ ತಿಳಿದಿದೆ. ಪೊಲೀಸರಿಗೆ ದೂರು ನೀಡುವುದಕ್ಕಾಗಿ ಮಾರನೇ ದಿನ ಬೆಳಿಗ್ಗೆ 10 ಗಂಟೆ ಸಮಯಕ್ಕೆ ಶ್ರೀನಿವಾಸಪುರಕ್ಕೆ ಬಂದಾಗ, ಊರಿನಿಂದ ಪೋನ್ ಬಂದಿದೆ. ರಾಕೇಶ್ನ ಮೃತದೇಹ ಚಲ್ದಿಗಾನಹಳ್ಳಿ ಗ್ರಾಮದ ಗೋಪಾಲಕೃಷ್ಣ ಅವರ ಕೃಷಿ ಹೊಂಡದಲ್ಲಿ ಪತ್ತೆಯಾಗಿದೆ ಎಂದು ತಿಳಿದಿದೆ.ʼʼ

ʻʻಈ ನಾಲ್ವರು ಆರೋಪಿಗಳು ನನ್ನ ಮಗನನ್ನು ಇಡೀ ರಾತ್ರಿ ಕೂಡಿ ಹಾಕಿ ಚಿತ್ರೆ ಹಿಂಸೆ ನೀಡಿದ್ದಾರೆ. ಬಾಯಿ, ಮೂಗಲ್ಲಿ ರಕ್ತ ಬರುವಂತೆ ಹೊಡೆದು, ಕೈಕಾಲುಗಳ ಮೇಲೆ ದೊಣ್ಣೆಯಿಂದ ಥಳಿಸಿ ಸಾಯಿಸಿದ್ದಾರೆ. ಬಳಿಕ ಗ್ರಾಮದ ಕೃಷಿ ಹೊಂಡದಲ್ಲಿ ಬಿಸಾಡಿದ್ದಾರೆʼʼ ಎಂದು ದೂರಿನಲ್ಲಿ ವಿವರಿಸಿದ್ದಾರೆ.

ʼನಾನುಗೌರಿ.ಕಾಂʼ ಜೊತೆಯಲ್ಲಿ ಮಾತನಾಡಿದ ಮೃತನ ಚಿಕ್ಕಪ್ಪ ನಿರಂಜನ್, ʼʼರಾಕೇಶ್ ತನ್ನ ಕ್ಲಾಸ್ಮೇಟ್ ಸ್ನೇಹಿತೆಯೊಂದಿಗೆ ಪಾನೀಪೂರಿ ತಿನ್ನಲು ಹೋಗಿದ್ದನು. ಜೊತೆಯಲ್ಲಿ ಸ್ನೇಹಿತ ವೇದಾಂತ್ ಕೂಡ ಇದ್ದನು. ಯುವತಿ ಮತ್ತು ರಾಕೇಶ್ ಸ್ನೇಹಿತರಾಗಿದ್ದರು. ಆದರೆ ಯುವತಿಯ ಕಡೆಯವರು ರಾಕೇಶ್ನನ್ನು ಕರೆದೊಯ್ದು ಕೊಲೆ ಮಾಡಿದ್ದಾರೆ. ಕೊಲೆ ಮಾಡಿದವರು ಮತ್ತು ಕೊಲೆಯಾದ ಯುವಕನ ಕುಟುಂಬದ ನಡುವೆ ಯಾವುದೇ ಕಲಹವಿರಲಿಲ್ಲ. ಆರೋಪಿಗಳು ಹೊಲೆಯ ಸಮುದಾಯದವರಾಗಿದ್ದು, ಕೊಲೆಯಾದ ಯುವಕ ಮಾದಿಗ ಸಮುದಾಯದವನಾಗಿದ್ದಾನೆʼʼ ಎಂದು ಮಾಹಿತಿ ನೀಡಿದ್ದಾರೆ.

ʼನಾನುಗೌರಿ.ಕಾಂʼಗೆ ಪ್ರತಿಕ್ರಿಯಿಸಿದ ಶ್ರೀನಿವಾಸಪುರ ಪೊಲೀಸ್ ಠಾಣೆ ಪೊಲೀಸರು, ʼʼಇಬ್ಬರು ಆರೋಪಿಗಳನ್ನು (ಸೋಮಶೇಖರ್, ದಾಸಪ್ಪ) ಬಂಧಿಸಲಾಗಿದೆ. ಇನ್ನಿಬ್ಬರ ಬಂಧನಕ್ಕಾಗಿ ಹುಡುಕಾಟ ನಡೆಸಿದ್ದೇವೆ. ತನಿಖೆಯ ಬಳಿಕ ಹೆಚ್ಚಿನ ವಿವರಗಳು ಲಭ್ಯವಾಗಲಿವೆʼʼ ಎಂದು ತಿಳಿಸಿದರು.

FIR ಪ್ರತಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...