Homeಕರ್ನಾಟಕಶ್ರೀನಿವಾಸಪುರದಲ್ಲಿ ಮಾದಿಗ ಸಮುದಾಯದ ವಿದ್ಯಾರ್ಥಿ ಕೊಲೆ: ಇಬ್ಬರ ಬಂಧನ

ಶ್ರೀನಿವಾಸಪುರದಲ್ಲಿ ಮಾದಿಗ ಸಮುದಾಯದ ವಿದ್ಯಾರ್ಥಿ ಕೊಲೆ: ಇಬ್ಬರ ಬಂಧನ

- Advertisement -
- Advertisement -

ಮಾದಿಗ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಯನ್ನು ಹೊಲೆಯ ಸಮುದಾಯಕ್ಕೆ ಸೇರಿದವರು ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದಿದೆ.

ಚಲ್ದಿಗಾನಹಳ್ಳಿ ಗ್ರಾಮದ ರಾಕೇಶ್ ಕೊಲೆಯಾದ ಯುವಕ. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲೆಯಾದ ವಿದ್ಯಾರ್ಥಿಯ ತಂದೆ ಚಿಕ್ಕನರಸಿಂಹಪ್ಪ ಅವರು ನೀಡಿದ ದೂರನ್ನು ಆಧರಿಸಿ ಶ್ರೀನಿವಾರಪುರದ ಜಗಜೀವನಪಾಳ್ಯದ ಸೋಮಶೇಖರ, ನವೀನ, ನಾಗೇಶ್, ದಾಸಪ್ಪ ಎಂಬವರ ವಿರುದ್ಧ ಐಪಿಸಿ ಸೆಕ್ಷನ್ 302, 201, 363, 342, 34 ಅಡಿಯಲ್ಲಿ ಎಫ್ಐಆರ್ ಆಗಿದೆ.

ರಾಕೇಶ್ ತಂದೆ ನೀಡಿರುವ ದೂರಿನಲ್ಲಿ ಏನಿದೆ?

“ನನ್ನ ಮಗನಾದ ರಾಕೇಶ್ ದಿನಾಂಕ 17-07-2023ರಂದು ಬೆಳಿಗ್ಗೆ 7.30 ಗಂಟೆ ಸಮಯದಲ್ಲಿ ಮನೆಯಿಂದ ಹೊರಟು ಕಾಲೇಜಿಗೆ ಹೋಗಿದ್ದನು. ರಾತ್ರಿಯಾದರೂ ಮನೆಗೆ ಬಾರಲಿಲ್ಲ. ಈ ಸಲುವಾಗಿ ಊರಿನಲ್ಲಿ, ಸಂಬಂಧಿಕರ ಮನೆಗಳಲ್ಲಿ ಹುಡುಕಾಡಿದೆವು. 17ನೇ ತಾರೀಖಿನಂದು ಬೆಳಿಗ್ಗೆ ತನ್ನ ಕ್ಲಾಸ್ ಮೇಟ್ ವೇದಾಂತ್ ಎನ್ನುವವನ ಜೊತೆಯಲ್ಲಿ ಶ್ರೀನಿವಾಸಪುರದ ಸಾಗರ್ ಚಾಟ್ಸ್ ನಲ್ಲಿ ನನ್ನ ಮಗ ಕುಳಿತ್ತಿದ್ದನು. ಆಗ ಶ್ರೀನಿವಾಸಪುರದ ಜಗಜೀವನಪಾಳ್ಯದ ನಿವಾಸಿಗಳಾದ ಸೋಮಶೇಖರ, ನವೀನ್, ನಾಗೇಶ್, ದಾಸಪ್ಪ ಎಂಬವರು ಕರೆದುಕೊಂಡು ಹೋಗಿರುವುದಾಗಿ ತಿಳಿದಿದೆ. ಪೊಲೀಸರಿಗೆ ದೂರು ನೀಡುವುದಕ್ಕಾಗಿ ಮಾರನೇ ದಿನ ಬೆಳಿಗ್ಗೆ 10 ಗಂಟೆ ಸಮಯಕ್ಕೆ ಶ್ರೀನಿವಾಸಪುರಕ್ಕೆ ಬಂದಾಗ, ಊರಿನಿಂದ ಪೋನ್ ಬಂದಿದೆ. ರಾಕೇಶ್ನ ಮೃತದೇಹ ಚಲ್ದಿಗಾನಹಳ್ಳಿ ಗ್ರಾಮದ ಗೋಪಾಲಕೃಷ್ಣ ಅವರ ಕೃಷಿ ಹೊಂಡದಲ್ಲಿ ಪತ್ತೆಯಾಗಿದೆ ಎಂದು ತಿಳಿದಿದೆ.ʼʼ

ʻʻಈ ನಾಲ್ವರು ಆರೋಪಿಗಳು ನನ್ನ ಮಗನನ್ನು ಇಡೀ ರಾತ್ರಿ ಕೂಡಿ ಹಾಕಿ ಚಿತ್ರೆ ಹಿಂಸೆ ನೀಡಿದ್ದಾರೆ. ಬಾಯಿ, ಮೂಗಲ್ಲಿ ರಕ್ತ ಬರುವಂತೆ ಹೊಡೆದು, ಕೈಕಾಲುಗಳ ಮೇಲೆ ದೊಣ್ಣೆಯಿಂದ ಥಳಿಸಿ ಸಾಯಿಸಿದ್ದಾರೆ. ಬಳಿಕ ಗ್ರಾಮದ ಕೃಷಿ ಹೊಂಡದಲ್ಲಿ ಬಿಸಾಡಿದ್ದಾರೆʼʼ ಎಂದು ದೂರಿನಲ್ಲಿ ವಿವರಿಸಿದ್ದಾರೆ.

ʼನಾನುಗೌರಿ.ಕಾಂʼ ಜೊತೆಯಲ್ಲಿ ಮಾತನಾಡಿದ ಮೃತನ ಚಿಕ್ಕಪ್ಪ ನಿರಂಜನ್, ʼʼರಾಕೇಶ್ ತನ್ನ ಕ್ಲಾಸ್ಮೇಟ್ ಸ್ನೇಹಿತೆಯೊಂದಿಗೆ ಪಾನೀಪೂರಿ ತಿನ್ನಲು ಹೋಗಿದ್ದನು. ಜೊತೆಯಲ್ಲಿ ಸ್ನೇಹಿತ ವೇದಾಂತ್ ಕೂಡ ಇದ್ದನು. ಯುವತಿ ಮತ್ತು ರಾಕೇಶ್ ಸ್ನೇಹಿತರಾಗಿದ್ದರು. ಆದರೆ ಯುವತಿಯ ಕಡೆಯವರು ರಾಕೇಶ್ನನ್ನು ಕರೆದೊಯ್ದು ಕೊಲೆ ಮಾಡಿದ್ದಾರೆ. ಕೊಲೆ ಮಾಡಿದವರು ಮತ್ತು ಕೊಲೆಯಾದ ಯುವಕನ ಕುಟುಂಬದ ನಡುವೆ ಯಾವುದೇ ಕಲಹವಿರಲಿಲ್ಲ. ಆರೋಪಿಗಳು ಹೊಲೆಯ ಸಮುದಾಯದವರಾಗಿದ್ದು, ಕೊಲೆಯಾದ ಯುವಕ ಮಾದಿಗ ಸಮುದಾಯದವನಾಗಿದ್ದಾನೆʼʼ ಎಂದು ಮಾಹಿತಿ ನೀಡಿದ್ದಾರೆ.

ʼನಾನುಗೌರಿ.ಕಾಂʼಗೆ ಪ್ರತಿಕ್ರಿಯಿಸಿದ ಶ್ರೀನಿವಾಸಪುರ ಪೊಲೀಸ್ ಠಾಣೆ ಪೊಲೀಸರು, ʼʼಇಬ್ಬರು ಆರೋಪಿಗಳನ್ನು (ಸೋಮಶೇಖರ್, ದಾಸಪ್ಪ) ಬಂಧಿಸಲಾಗಿದೆ. ಇನ್ನಿಬ್ಬರ ಬಂಧನಕ್ಕಾಗಿ ಹುಡುಕಾಟ ನಡೆಸಿದ್ದೇವೆ. ತನಿಖೆಯ ಬಳಿಕ ಹೆಚ್ಚಿನ ವಿವರಗಳು ಲಭ್ಯವಾಗಲಿವೆʼʼ ಎಂದು ತಿಳಿಸಿದರು.

FIR ಪ್ರತಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...