Homeಕರ್ನಾಟಕಶ್ರೀನಿವಾಸಪುರದಲ್ಲಿ ಮಾದಿಗ ಸಮುದಾಯದ ವಿದ್ಯಾರ್ಥಿ ಕೊಲೆ: ಇಬ್ಬರ ಬಂಧನ

ಶ್ರೀನಿವಾಸಪುರದಲ್ಲಿ ಮಾದಿಗ ಸಮುದಾಯದ ವಿದ್ಯಾರ್ಥಿ ಕೊಲೆ: ಇಬ್ಬರ ಬಂಧನ

- Advertisement -
- Advertisement -

ಮಾದಿಗ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಯನ್ನು ಹೊಲೆಯ ಸಮುದಾಯಕ್ಕೆ ಸೇರಿದವರು ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದಿದೆ.

ಚಲ್ದಿಗಾನಹಳ್ಳಿ ಗ್ರಾಮದ ರಾಕೇಶ್ ಕೊಲೆಯಾದ ಯುವಕ. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲೆಯಾದ ವಿದ್ಯಾರ್ಥಿಯ ತಂದೆ ಚಿಕ್ಕನರಸಿಂಹಪ್ಪ ಅವರು ನೀಡಿದ ದೂರನ್ನು ಆಧರಿಸಿ ಶ್ರೀನಿವಾರಪುರದ ಜಗಜೀವನಪಾಳ್ಯದ ಸೋಮಶೇಖರ, ನವೀನ, ನಾಗೇಶ್, ದಾಸಪ್ಪ ಎಂಬವರ ವಿರುದ್ಧ ಐಪಿಸಿ ಸೆಕ್ಷನ್ 302, 201, 363, 342, 34 ಅಡಿಯಲ್ಲಿ ಎಫ್ಐಆರ್ ಆಗಿದೆ.

ರಾಕೇಶ್ ತಂದೆ ನೀಡಿರುವ ದೂರಿನಲ್ಲಿ ಏನಿದೆ?

“ನನ್ನ ಮಗನಾದ ರಾಕೇಶ್ ದಿನಾಂಕ 17-07-2023ರಂದು ಬೆಳಿಗ್ಗೆ 7.30 ಗಂಟೆ ಸಮಯದಲ್ಲಿ ಮನೆಯಿಂದ ಹೊರಟು ಕಾಲೇಜಿಗೆ ಹೋಗಿದ್ದನು. ರಾತ್ರಿಯಾದರೂ ಮನೆಗೆ ಬಾರಲಿಲ್ಲ. ಈ ಸಲುವಾಗಿ ಊರಿನಲ್ಲಿ, ಸಂಬಂಧಿಕರ ಮನೆಗಳಲ್ಲಿ ಹುಡುಕಾಡಿದೆವು. 17ನೇ ತಾರೀಖಿನಂದು ಬೆಳಿಗ್ಗೆ ತನ್ನ ಕ್ಲಾಸ್ ಮೇಟ್ ವೇದಾಂತ್ ಎನ್ನುವವನ ಜೊತೆಯಲ್ಲಿ ಶ್ರೀನಿವಾಸಪುರದ ಸಾಗರ್ ಚಾಟ್ಸ್ ನಲ್ಲಿ ನನ್ನ ಮಗ ಕುಳಿತ್ತಿದ್ದನು. ಆಗ ಶ್ರೀನಿವಾಸಪುರದ ಜಗಜೀವನಪಾಳ್ಯದ ನಿವಾಸಿಗಳಾದ ಸೋಮಶೇಖರ, ನವೀನ್, ನಾಗೇಶ್, ದಾಸಪ್ಪ ಎಂಬವರು ಕರೆದುಕೊಂಡು ಹೋಗಿರುವುದಾಗಿ ತಿಳಿದಿದೆ. ಪೊಲೀಸರಿಗೆ ದೂರು ನೀಡುವುದಕ್ಕಾಗಿ ಮಾರನೇ ದಿನ ಬೆಳಿಗ್ಗೆ 10 ಗಂಟೆ ಸಮಯಕ್ಕೆ ಶ್ರೀನಿವಾಸಪುರಕ್ಕೆ ಬಂದಾಗ, ಊರಿನಿಂದ ಪೋನ್ ಬಂದಿದೆ. ರಾಕೇಶ್ನ ಮೃತದೇಹ ಚಲ್ದಿಗಾನಹಳ್ಳಿ ಗ್ರಾಮದ ಗೋಪಾಲಕೃಷ್ಣ ಅವರ ಕೃಷಿ ಹೊಂಡದಲ್ಲಿ ಪತ್ತೆಯಾಗಿದೆ ಎಂದು ತಿಳಿದಿದೆ.ʼʼ

ʻʻಈ ನಾಲ್ವರು ಆರೋಪಿಗಳು ನನ್ನ ಮಗನನ್ನು ಇಡೀ ರಾತ್ರಿ ಕೂಡಿ ಹಾಕಿ ಚಿತ್ರೆ ಹಿಂಸೆ ನೀಡಿದ್ದಾರೆ. ಬಾಯಿ, ಮೂಗಲ್ಲಿ ರಕ್ತ ಬರುವಂತೆ ಹೊಡೆದು, ಕೈಕಾಲುಗಳ ಮೇಲೆ ದೊಣ್ಣೆಯಿಂದ ಥಳಿಸಿ ಸಾಯಿಸಿದ್ದಾರೆ. ಬಳಿಕ ಗ್ರಾಮದ ಕೃಷಿ ಹೊಂಡದಲ್ಲಿ ಬಿಸಾಡಿದ್ದಾರೆʼʼ ಎಂದು ದೂರಿನಲ್ಲಿ ವಿವರಿಸಿದ್ದಾರೆ.

ʼನಾನುಗೌರಿ.ಕಾಂʼ ಜೊತೆಯಲ್ಲಿ ಮಾತನಾಡಿದ ಮೃತನ ಚಿಕ್ಕಪ್ಪ ನಿರಂಜನ್, ʼʼರಾಕೇಶ್ ತನ್ನ ಕ್ಲಾಸ್ಮೇಟ್ ಸ್ನೇಹಿತೆಯೊಂದಿಗೆ ಪಾನೀಪೂರಿ ತಿನ್ನಲು ಹೋಗಿದ್ದನು. ಜೊತೆಯಲ್ಲಿ ಸ್ನೇಹಿತ ವೇದಾಂತ್ ಕೂಡ ಇದ್ದನು. ಯುವತಿ ಮತ್ತು ರಾಕೇಶ್ ಸ್ನೇಹಿತರಾಗಿದ್ದರು. ಆದರೆ ಯುವತಿಯ ಕಡೆಯವರು ರಾಕೇಶ್ನನ್ನು ಕರೆದೊಯ್ದು ಕೊಲೆ ಮಾಡಿದ್ದಾರೆ. ಕೊಲೆ ಮಾಡಿದವರು ಮತ್ತು ಕೊಲೆಯಾದ ಯುವಕನ ಕುಟುಂಬದ ನಡುವೆ ಯಾವುದೇ ಕಲಹವಿರಲಿಲ್ಲ. ಆರೋಪಿಗಳು ಹೊಲೆಯ ಸಮುದಾಯದವರಾಗಿದ್ದು, ಕೊಲೆಯಾದ ಯುವಕ ಮಾದಿಗ ಸಮುದಾಯದವನಾಗಿದ್ದಾನೆʼʼ ಎಂದು ಮಾಹಿತಿ ನೀಡಿದ್ದಾರೆ.

ʼನಾನುಗೌರಿ.ಕಾಂʼಗೆ ಪ್ರತಿಕ್ರಿಯಿಸಿದ ಶ್ರೀನಿವಾಸಪುರ ಪೊಲೀಸ್ ಠಾಣೆ ಪೊಲೀಸರು, ʼʼಇಬ್ಬರು ಆರೋಪಿಗಳನ್ನು (ಸೋಮಶೇಖರ್, ದಾಸಪ್ಪ) ಬಂಧಿಸಲಾಗಿದೆ. ಇನ್ನಿಬ್ಬರ ಬಂಧನಕ್ಕಾಗಿ ಹುಡುಕಾಟ ನಡೆಸಿದ್ದೇವೆ. ತನಿಖೆಯ ಬಳಿಕ ಹೆಚ್ಚಿನ ವಿವರಗಳು ಲಭ್ಯವಾಗಲಿವೆʼʼ ಎಂದು ತಿಳಿಸಿದರು.

FIR ಪ್ರತಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...