Homeಕರ್ನಾಟಕಶ್ರೀನಿವಾಸಪುರದಲ್ಲಿ ಮಾದಿಗ ಸಮುದಾಯದ ವಿದ್ಯಾರ್ಥಿ ಕೊಲೆ: ಇಬ್ಬರ ಬಂಧನ

ಶ್ರೀನಿವಾಸಪುರದಲ್ಲಿ ಮಾದಿಗ ಸಮುದಾಯದ ವಿದ್ಯಾರ್ಥಿ ಕೊಲೆ: ಇಬ್ಬರ ಬಂಧನ

- Advertisement -
- Advertisement -

ಮಾದಿಗ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಯನ್ನು ಹೊಲೆಯ ಸಮುದಾಯಕ್ಕೆ ಸೇರಿದವರು ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದಿದೆ.

ಚಲ್ದಿಗಾನಹಳ್ಳಿ ಗ್ರಾಮದ ರಾಕೇಶ್ ಕೊಲೆಯಾದ ಯುವಕ. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲೆಯಾದ ವಿದ್ಯಾರ್ಥಿಯ ತಂದೆ ಚಿಕ್ಕನರಸಿಂಹಪ್ಪ ಅವರು ನೀಡಿದ ದೂರನ್ನು ಆಧರಿಸಿ ಶ್ರೀನಿವಾರಪುರದ ಜಗಜೀವನಪಾಳ್ಯದ ಸೋಮಶೇಖರ, ನವೀನ, ನಾಗೇಶ್, ದಾಸಪ್ಪ ಎಂಬವರ ವಿರುದ್ಧ ಐಪಿಸಿ ಸೆಕ್ಷನ್ 302, 201, 363, 342, 34 ಅಡಿಯಲ್ಲಿ ಎಫ್ಐಆರ್ ಆಗಿದೆ.

ರಾಕೇಶ್ ತಂದೆ ನೀಡಿರುವ ದೂರಿನಲ್ಲಿ ಏನಿದೆ?

“ನನ್ನ ಮಗನಾದ ರಾಕೇಶ್ ದಿನಾಂಕ 17-07-2023ರಂದು ಬೆಳಿಗ್ಗೆ 7.30 ಗಂಟೆ ಸಮಯದಲ್ಲಿ ಮನೆಯಿಂದ ಹೊರಟು ಕಾಲೇಜಿಗೆ ಹೋಗಿದ್ದನು. ರಾತ್ರಿಯಾದರೂ ಮನೆಗೆ ಬಾರಲಿಲ್ಲ. ಈ ಸಲುವಾಗಿ ಊರಿನಲ್ಲಿ, ಸಂಬಂಧಿಕರ ಮನೆಗಳಲ್ಲಿ ಹುಡುಕಾಡಿದೆವು. 17ನೇ ತಾರೀಖಿನಂದು ಬೆಳಿಗ್ಗೆ ತನ್ನ ಕ್ಲಾಸ್ ಮೇಟ್ ವೇದಾಂತ್ ಎನ್ನುವವನ ಜೊತೆಯಲ್ಲಿ ಶ್ರೀನಿವಾಸಪುರದ ಸಾಗರ್ ಚಾಟ್ಸ್ ನಲ್ಲಿ ನನ್ನ ಮಗ ಕುಳಿತ್ತಿದ್ದನು. ಆಗ ಶ್ರೀನಿವಾಸಪುರದ ಜಗಜೀವನಪಾಳ್ಯದ ನಿವಾಸಿಗಳಾದ ಸೋಮಶೇಖರ, ನವೀನ್, ನಾಗೇಶ್, ದಾಸಪ್ಪ ಎಂಬವರು ಕರೆದುಕೊಂಡು ಹೋಗಿರುವುದಾಗಿ ತಿಳಿದಿದೆ. ಪೊಲೀಸರಿಗೆ ದೂರು ನೀಡುವುದಕ್ಕಾಗಿ ಮಾರನೇ ದಿನ ಬೆಳಿಗ್ಗೆ 10 ಗಂಟೆ ಸಮಯಕ್ಕೆ ಶ್ರೀನಿವಾಸಪುರಕ್ಕೆ ಬಂದಾಗ, ಊರಿನಿಂದ ಪೋನ್ ಬಂದಿದೆ. ರಾಕೇಶ್ನ ಮೃತದೇಹ ಚಲ್ದಿಗಾನಹಳ್ಳಿ ಗ್ರಾಮದ ಗೋಪಾಲಕೃಷ್ಣ ಅವರ ಕೃಷಿ ಹೊಂಡದಲ್ಲಿ ಪತ್ತೆಯಾಗಿದೆ ಎಂದು ತಿಳಿದಿದೆ.ʼʼ

ʻʻಈ ನಾಲ್ವರು ಆರೋಪಿಗಳು ನನ್ನ ಮಗನನ್ನು ಇಡೀ ರಾತ್ರಿ ಕೂಡಿ ಹಾಕಿ ಚಿತ್ರೆ ಹಿಂಸೆ ನೀಡಿದ್ದಾರೆ. ಬಾಯಿ, ಮೂಗಲ್ಲಿ ರಕ್ತ ಬರುವಂತೆ ಹೊಡೆದು, ಕೈಕಾಲುಗಳ ಮೇಲೆ ದೊಣ್ಣೆಯಿಂದ ಥಳಿಸಿ ಸಾಯಿಸಿದ್ದಾರೆ. ಬಳಿಕ ಗ್ರಾಮದ ಕೃಷಿ ಹೊಂಡದಲ್ಲಿ ಬಿಸಾಡಿದ್ದಾರೆʼʼ ಎಂದು ದೂರಿನಲ್ಲಿ ವಿವರಿಸಿದ್ದಾರೆ.

ʼನಾನುಗೌರಿ.ಕಾಂʼ ಜೊತೆಯಲ್ಲಿ ಮಾತನಾಡಿದ ಮೃತನ ಚಿಕ್ಕಪ್ಪ ನಿರಂಜನ್, ʼʼರಾಕೇಶ್ ತನ್ನ ಕ್ಲಾಸ್ಮೇಟ್ ಸ್ನೇಹಿತೆಯೊಂದಿಗೆ ಪಾನೀಪೂರಿ ತಿನ್ನಲು ಹೋಗಿದ್ದನು. ಜೊತೆಯಲ್ಲಿ ಸ್ನೇಹಿತ ವೇದಾಂತ್ ಕೂಡ ಇದ್ದನು. ಯುವತಿ ಮತ್ತು ರಾಕೇಶ್ ಸ್ನೇಹಿತರಾಗಿದ್ದರು. ಆದರೆ ಯುವತಿಯ ಕಡೆಯವರು ರಾಕೇಶ್ನನ್ನು ಕರೆದೊಯ್ದು ಕೊಲೆ ಮಾಡಿದ್ದಾರೆ. ಕೊಲೆ ಮಾಡಿದವರು ಮತ್ತು ಕೊಲೆಯಾದ ಯುವಕನ ಕುಟುಂಬದ ನಡುವೆ ಯಾವುದೇ ಕಲಹವಿರಲಿಲ್ಲ. ಆರೋಪಿಗಳು ಹೊಲೆಯ ಸಮುದಾಯದವರಾಗಿದ್ದು, ಕೊಲೆಯಾದ ಯುವಕ ಮಾದಿಗ ಸಮುದಾಯದವನಾಗಿದ್ದಾನೆʼʼ ಎಂದು ಮಾಹಿತಿ ನೀಡಿದ್ದಾರೆ.

ʼನಾನುಗೌರಿ.ಕಾಂʼಗೆ ಪ್ರತಿಕ್ರಿಯಿಸಿದ ಶ್ರೀನಿವಾಸಪುರ ಪೊಲೀಸ್ ಠಾಣೆ ಪೊಲೀಸರು, ʼʼಇಬ್ಬರು ಆರೋಪಿಗಳನ್ನು (ಸೋಮಶೇಖರ್, ದಾಸಪ್ಪ) ಬಂಧಿಸಲಾಗಿದೆ. ಇನ್ನಿಬ್ಬರ ಬಂಧನಕ್ಕಾಗಿ ಹುಡುಕಾಟ ನಡೆಸಿದ್ದೇವೆ. ತನಿಖೆಯ ಬಳಿಕ ಹೆಚ್ಚಿನ ವಿವರಗಳು ಲಭ್ಯವಾಗಲಿವೆʼʼ ಎಂದು ತಿಳಿಸಿದರು.

FIR ಪ್ರತಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...