Homeಕರ್ನಾಟಕಶ್ರೀನಿವಾಸಪುರದಲ್ಲಿ ಮಾದಿಗ ಸಮುದಾಯದ ವಿದ್ಯಾರ್ಥಿ ಕೊಲೆ: ಇಬ್ಬರ ಬಂಧನ

ಶ್ರೀನಿವಾಸಪುರದಲ್ಲಿ ಮಾದಿಗ ಸಮುದಾಯದ ವಿದ್ಯಾರ್ಥಿ ಕೊಲೆ: ಇಬ್ಬರ ಬಂಧನ

- Advertisement -
- Advertisement -

ಮಾದಿಗ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಯನ್ನು ಹೊಲೆಯ ಸಮುದಾಯಕ್ಕೆ ಸೇರಿದವರು ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದಿದೆ.

ಚಲ್ದಿಗಾನಹಳ್ಳಿ ಗ್ರಾಮದ ರಾಕೇಶ್ ಕೊಲೆಯಾದ ಯುವಕ. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲೆಯಾದ ವಿದ್ಯಾರ್ಥಿಯ ತಂದೆ ಚಿಕ್ಕನರಸಿಂಹಪ್ಪ ಅವರು ನೀಡಿದ ದೂರನ್ನು ಆಧರಿಸಿ ಶ್ರೀನಿವಾರಪುರದ ಜಗಜೀವನಪಾಳ್ಯದ ಸೋಮಶೇಖರ, ನವೀನ, ನಾಗೇಶ್, ದಾಸಪ್ಪ ಎಂಬವರ ವಿರುದ್ಧ ಐಪಿಸಿ ಸೆಕ್ಷನ್ 302, 201, 363, 342, 34 ಅಡಿಯಲ್ಲಿ ಎಫ್ಐಆರ್ ಆಗಿದೆ.

ರಾಕೇಶ್ ತಂದೆ ನೀಡಿರುವ ದೂರಿನಲ್ಲಿ ಏನಿದೆ?

“ನನ್ನ ಮಗನಾದ ರಾಕೇಶ್ ದಿನಾಂಕ 17-07-2023ರಂದು ಬೆಳಿಗ್ಗೆ 7.30 ಗಂಟೆ ಸಮಯದಲ್ಲಿ ಮನೆಯಿಂದ ಹೊರಟು ಕಾಲೇಜಿಗೆ ಹೋಗಿದ್ದನು. ರಾತ್ರಿಯಾದರೂ ಮನೆಗೆ ಬಾರಲಿಲ್ಲ. ಈ ಸಲುವಾಗಿ ಊರಿನಲ್ಲಿ, ಸಂಬಂಧಿಕರ ಮನೆಗಳಲ್ಲಿ ಹುಡುಕಾಡಿದೆವು. 17ನೇ ತಾರೀಖಿನಂದು ಬೆಳಿಗ್ಗೆ ತನ್ನ ಕ್ಲಾಸ್ ಮೇಟ್ ವೇದಾಂತ್ ಎನ್ನುವವನ ಜೊತೆಯಲ್ಲಿ ಶ್ರೀನಿವಾಸಪುರದ ಸಾಗರ್ ಚಾಟ್ಸ್ ನಲ್ಲಿ ನನ್ನ ಮಗ ಕುಳಿತ್ತಿದ್ದನು. ಆಗ ಶ್ರೀನಿವಾಸಪುರದ ಜಗಜೀವನಪಾಳ್ಯದ ನಿವಾಸಿಗಳಾದ ಸೋಮಶೇಖರ, ನವೀನ್, ನಾಗೇಶ್, ದಾಸಪ್ಪ ಎಂಬವರು ಕರೆದುಕೊಂಡು ಹೋಗಿರುವುದಾಗಿ ತಿಳಿದಿದೆ. ಪೊಲೀಸರಿಗೆ ದೂರು ನೀಡುವುದಕ್ಕಾಗಿ ಮಾರನೇ ದಿನ ಬೆಳಿಗ್ಗೆ 10 ಗಂಟೆ ಸಮಯಕ್ಕೆ ಶ್ರೀನಿವಾಸಪುರಕ್ಕೆ ಬಂದಾಗ, ಊರಿನಿಂದ ಪೋನ್ ಬಂದಿದೆ. ರಾಕೇಶ್ನ ಮೃತದೇಹ ಚಲ್ದಿಗಾನಹಳ್ಳಿ ಗ್ರಾಮದ ಗೋಪಾಲಕೃಷ್ಣ ಅವರ ಕೃಷಿ ಹೊಂಡದಲ್ಲಿ ಪತ್ತೆಯಾಗಿದೆ ಎಂದು ತಿಳಿದಿದೆ.ʼʼ

ʻʻಈ ನಾಲ್ವರು ಆರೋಪಿಗಳು ನನ್ನ ಮಗನನ್ನು ಇಡೀ ರಾತ್ರಿ ಕೂಡಿ ಹಾಕಿ ಚಿತ್ರೆ ಹಿಂಸೆ ನೀಡಿದ್ದಾರೆ. ಬಾಯಿ, ಮೂಗಲ್ಲಿ ರಕ್ತ ಬರುವಂತೆ ಹೊಡೆದು, ಕೈಕಾಲುಗಳ ಮೇಲೆ ದೊಣ್ಣೆಯಿಂದ ಥಳಿಸಿ ಸಾಯಿಸಿದ್ದಾರೆ. ಬಳಿಕ ಗ್ರಾಮದ ಕೃಷಿ ಹೊಂಡದಲ್ಲಿ ಬಿಸಾಡಿದ್ದಾರೆʼʼ ಎಂದು ದೂರಿನಲ್ಲಿ ವಿವರಿಸಿದ್ದಾರೆ.

ʼನಾನುಗೌರಿ.ಕಾಂʼ ಜೊತೆಯಲ್ಲಿ ಮಾತನಾಡಿದ ಮೃತನ ಚಿಕ್ಕಪ್ಪ ನಿರಂಜನ್, ʼʼರಾಕೇಶ್ ತನ್ನ ಕ್ಲಾಸ್ಮೇಟ್ ಸ್ನೇಹಿತೆಯೊಂದಿಗೆ ಪಾನೀಪೂರಿ ತಿನ್ನಲು ಹೋಗಿದ್ದನು. ಜೊತೆಯಲ್ಲಿ ಸ್ನೇಹಿತ ವೇದಾಂತ್ ಕೂಡ ಇದ್ದನು. ಯುವತಿ ಮತ್ತು ರಾಕೇಶ್ ಸ್ನೇಹಿತರಾಗಿದ್ದರು. ಆದರೆ ಯುವತಿಯ ಕಡೆಯವರು ರಾಕೇಶ್ನನ್ನು ಕರೆದೊಯ್ದು ಕೊಲೆ ಮಾಡಿದ್ದಾರೆ. ಕೊಲೆ ಮಾಡಿದವರು ಮತ್ತು ಕೊಲೆಯಾದ ಯುವಕನ ಕುಟುಂಬದ ನಡುವೆ ಯಾವುದೇ ಕಲಹವಿರಲಿಲ್ಲ. ಆರೋಪಿಗಳು ಹೊಲೆಯ ಸಮುದಾಯದವರಾಗಿದ್ದು, ಕೊಲೆಯಾದ ಯುವಕ ಮಾದಿಗ ಸಮುದಾಯದವನಾಗಿದ್ದಾನೆʼʼ ಎಂದು ಮಾಹಿತಿ ನೀಡಿದ್ದಾರೆ.

ʼನಾನುಗೌರಿ.ಕಾಂʼಗೆ ಪ್ರತಿಕ್ರಿಯಿಸಿದ ಶ್ರೀನಿವಾಸಪುರ ಪೊಲೀಸ್ ಠಾಣೆ ಪೊಲೀಸರು, ʼʼಇಬ್ಬರು ಆರೋಪಿಗಳನ್ನು (ಸೋಮಶೇಖರ್, ದಾಸಪ್ಪ) ಬಂಧಿಸಲಾಗಿದೆ. ಇನ್ನಿಬ್ಬರ ಬಂಧನಕ್ಕಾಗಿ ಹುಡುಕಾಟ ನಡೆಸಿದ್ದೇವೆ. ತನಿಖೆಯ ಬಳಿಕ ಹೆಚ್ಚಿನ ವಿವರಗಳು ಲಭ್ಯವಾಗಲಿವೆʼʼ ಎಂದು ತಿಳಿಸಿದರು.

FIR ಪ್ರತಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...