Homeಕರ್ನಾಟಕಮಡಿಕೇರಿ | ಭೂ ಗುತ್ತಿಗೆ ವಿರೋಧಿಸಿ; ಭೂಮಿ, ನಿವೇಶನಕ್ಕಾಗಿ ಬೃಹತ್ ರ‍್ಯಾಲಿ

ಮಡಿಕೇರಿ | ಭೂ ಗುತ್ತಿಗೆ ವಿರೋಧಿಸಿ; ಭೂಮಿ, ನಿವೇಶನಕ್ಕಾಗಿ ಬೃಹತ್ ರ‍್ಯಾಲಿ

- Advertisement -
- Advertisement -

ಭೂ ಗುತ್ತಿಗೆ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಶುಕ್ರವಾರ ಬೃಹತ್ ಪಾದಯಾತ್ರೆ ನಡೆದಿದ್ದು, ಬಡ ಜನರಿಗೆ ಭೂಮಿ ಹಾಗೂ ನಿವೇಶನ ಕಲ್ಪಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಧರಣಿ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ರ‍್ಯಾಲಿಗೆ ಕೊಡಗಿನ ಎಲ್ಲಾ ಪ್ರಗತಿಪರ ಸಂಘಟನೆಗಳು ಪಾಲ್ಗೊಳ್ಳುವುದರ ಮೂಲಕ ಬೆಂಬಲ ಸೂಚಿಸಿದವು ಎಂದು ಈದಿನ.ಕಾಂ ವರದಿ ಮಾಡಿದೆ. ಮಡಿಕೇರಿ

ಕೊಡಗಿನಲ್ಲಿ ಭೂ ಗುತ್ತಿಗೆ ಆದೇಶವಾಗಿದ್ದು, ಉಳ್ಳವರ ಪರವಾಗಿ ಒತ್ತುವರಿ ಮಾಡಿಕೊಂಡ ಭೂ ಮಾಲೀಕರು ಕೇವಲ ಸಾವಿರಾರು ರೂಪಾಯಿ ಪಾವತಿಸಿ ಸರ್ಕಾರದಿಂದ ಅಧಿಕೃತವಾಗಿ ಮೂವತ್ತು ವರ್ಷಗಳವರೆಗೆ ಭೂ ಗುತ್ತಿಗೆ ಪಡೆಯುವ ಪ್ರಕ್ರಿಯೆ ಆರಂಭಗೊಂಡು, ಇನ್ನೇನು ವಿತರಿಸುವ ಹಂತಕ್ಕೆ ತಲುಪಿದೆ. ಕೊಡಗಿನ ಬಡ ಜನರ ವಿರೋಧಿ ಭೂ ಗುತ್ತಿಗೆ ಆದೇಶ ಜಾರಿಗೆ ತಂದ ಸರ್ಕಾರ, ಅನುಷ್ಠಾನ ಮಾಡುತ್ತಿರುವ ಜಿಲ್ಲಾಡಳಿತ ವಿರುದ್ಧ ಕೊಡಗಿನಲ್ಲಿ ಹೋರಾಟಗಳು ಆರಂಭಗೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸರ್ಕಾರ ಉಳ್ಳವರಿಗೆ 25 ಎಕರೆ ಕೊಡುವುದಾದರೆ ನಿವೇಶನ, ಭೂಮಿ ಏನೂ ಇರದ ಬಡ ಜನರ ಪರಿಸ್ಥಿತಿ ಏನು? ಅಂತಹವರಿಗೆ ಭೂಮಿ ಕೊಡಿ ಭೂ ಮಾಲೀಕರು ಕೊಡುವ ಹಣಕ್ಕಿಂತ ದುಪ್ಪಟ್ಟು ಕೊಡುವುದಾಗಿ ಹೋರಾಟಗಾರರು ಆಗ್ರಹ ಮಾಡಿದ್ದಾರೆ.

ಜಿಲ್ಲೆಯ ಬಹುತೇಕ ಎಲ್ಲಾ ತಾಲೂಕುಗಳಿಂದ ಬಂದಿದ್ದ ಆದಿವಾಸಿ, ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯದ ಜನರು ನೀಲಿ, ಕೆಂಪು, ಹಸಿರು ಬಾವುಟ ಹಿಡಿದು ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ಹೊರ ಹಾಕುತ್ತಾ ಧಿಕ್ಕಾರ ಕೂಗುತ್ತ ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಮಾಯಿಸಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಜಿಲ್ಲೆಯ ದಸಂಸ, ಸಿಪಿಐಎಂ, ಸಿಪಿಐಎಂಎಲ್, ಸಿಪಿಐಎಂ(ರೆಡ್ ಸ್ಟಾರ್), ರೈತ ಸಂಘಟನೆ, ಬಹುಜನ ಕಾರ್ಮಿಕ ಸಂಘಟನೆ, ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯ ಹಲವು ಮುಖಂಡರು ಮಾತನಾಡಿದರು. ಮಡಿಕೇರಿ

ಪ್ರತಿಭಟನೆಯಲ್ಲಿ ಭೂ ಗುತ್ತಿಗೆ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಕಾಮ್ರೇಡ್ ನಿರ್ವಾಣಪ್ಪ, ಸಂಚಾಲಕರಾದ ಕೆ ಮೊಣ್ಣಪ್ಪ, ರಮೇಶ್ ಮಾಯಮುಡಿ, ರಮೇಶ್ (ಸಿಪಿಐಎಂ), ಅಡ್ವೋಕೇಟ್ ಸುನಿಲ್, ದಸಂಸ ಮಾರ್ಕ್ಸ್‌ವಾದಿ ಕುಟ್ಟಪ್ಪ, ದಸಂಸ ಸಂಚಾಲಕರಾದ ಗೋವಿಂದಪ್ಪ, ರಜನೀಕಾಂತ್, ಹೆಚ್ ಎಲ್ ದಿವಾಕರ್, ವೀರಭದ್ರಯ್ಯ, ಜಗದೀಶ್, ಭೀಮವಾದ ಸಂಘಟನೆಯ ಕೆ ಬಿ ರಾಜು, ಗ್ರಾಮ ಪಂಚಾಯ್ತಿ ಸದಸ್ಯರಾದ ಕುಸುಮಾವತಿ, ಲಕ್ಷ್ಮಿ, ಪತ್ರಕರ್ತರಾದ ಜಯಪ್ಪ ಹಾನಗಲ್, ಮೋಹನ್ ಮೈಸೂರು ಭಾಗಿಯಾಗಿದ್ದರು.

ಇದನ್ನೂಓದಿ:  ಹೇಮಾ ಸಮಿತಿ ವರದಿ ಸಂಬಂಧ 40 ಎಫ್‌ಐಆರ್ ದಾಖಲು : ಹೈಕೋರ್ಟ್‌ಗೆ ತಿಳಿಸಿದ ಕೇರಳ ಸರ್ಕಾರ

ಹೇಮಾ ಸಮಿತಿ ವರದಿ ಸಂಬಂಧ 40 ಎಫ್‌ಐಆರ್ ದಾಖಲು : ಹೈಕೋರ್ಟ್‌ಗೆ ತಿಳಿಸಿದ ಕೇರಳ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...