Homeಕರ್ನಾಟಕಮಡಿಕೇರಿ | ಭೂ ಗುತ್ತಿಗೆ ವಿರೋಧಿಸಿ; ಭೂಮಿ, ನಿವೇಶನಕ್ಕಾಗಿ ಬೃಹತ್ ರ‍್ಯಾಲಿ

ಮಡಿಕೇರಿ | ಭೂ ಗುತ್ತಿಗೆ ವಿರೋಧಿಸಿ; ಭೂಮಿ, ನಿವೇಶನಕ್ಕಾಗಿ ಬೃಹತ್ ರ‍್ಯಾಲಿ

- Advertisement -
- Advertisement -

ಭೂ ಗುತ್ತಿಗೆ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಶುಕ್ರವಾರ ಬೃಹತ್ ಪಾದಯಾತ್ರೆ ನಡೆದಿದ್ದು, ಬಡ ಜನರಿಗೆ ಭೂಮಿ ಹಾಗೂ ನಿವೇಶನ ಕಲ್ಪಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಧರಣಿ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ರ‍್ಯಾಲಿಗೆ ಕೊಡಗಿನ ಎಲ್ಲಾ ಪ್ರಗತಿಪರ ಸಂಘಟನೆಗಳು ಪಾಲ್ಗೊಳ್ಳುವುದರ ಮೂಲಕ ಬೆಂಬಲ ಸೂಚಿಸಿದವು ಎಂದು ಈದಿನ.ಕಾಂ ವರದಿ ಮಾಡಿದೆ. ಮಡಿಕೇರಿ

ಕೊಡಗಿನಲ್ಲಿ ಭೂ ಗುತ್ತಿಗೆ ಆದೇಶವಾಗಿದ್ದು, ಉಳ್ಳವರ ಪರವಾಗಿ ಒತ್ತುವರಿ ಮಾಡಿಕೊಂಡ ಭೂ ಮಾಲೀಕರು ಕೇವಲ ಸಾವಿರಾರು ರೂಪಾಯಿ ಪಾವತಿಸಿ ಸರ್ಕಾರದಿಂದ ಅಧಿಕೃತವಾಗಿ ಮೂವತ್ತು ವರ್ಷಗಳವರೆಗೆ ಭೂ ಗುತ್ತಿಗೆ ಪಡೆಯುವ ಪ್ರಕ್ರಿಯೆ ಆರಂಭಗೊಂಡು, ಇನ್ನೇನು ವಿತರಿಸುವ ಹಂತಕ್ಕೆ ತಲುಪಿದೆ. ಕೊಡಗಿನ ಬಡ ಜನರ ವಿರೋಧಿ ಭೂ ಗುತ್ತಿಗೆ ಆದೇಶ ಜಾರಿಗೆ ತಂದ ಸರ್ಕಾರ, ಅನುಷ್ಠಾನ ಮಾಡುತ್ತಿರುವ ಜಿಲ್ಲಾಡಳಿತ ವಿರುದ್ಧ ಕೊಡಗಿನಲ್ಲಿ ಹೋರಾಟಗಳು ಆರಂಭಗೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸರ್ಕಾರ ಉಳ್ಳವರಿಗೆ 25 ಎಕರೆ ಕೊಡುವುದಾದರೆ ನಿವೇಶನ, ಭೂಮಿ ಏನೂ ಇರದ ಬಡ ಜನರ ಪರಿಸ್ಥಿತಿ ಏನು? ಅಂತಹವರಿಗೆ ಭೂಮಿ ಕೊಡಿ ಭೂ ಮಾಲೀಕರು ಕೊಡುವ ಹಣಕ್ಕಿಂತ ದುಪ್ಪಟ್ಟು ಕೊಡುವುದಾಗಿ ಹೋರಾಟಗಾರರು ಆಗ್ರಹ ಮಾಡಿದ್ದಾರೆ.

ಜಿಲ್ಲೆಯ ಬಹುತೇಕ ಎಲ್ಲಾ ತಾಲೂಕುಗಳಿಂದ ಬಂದಿದ್ದ ಆದಿವಾಸಿ, ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯದ ಜನರು ನೀಲಿ, ಕೆಂಪು, ಹಸಿರು ಬಾವುಟ ಹಿಡಿದು ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ಹೊರ ಹಾಕುತ್ತಾ ಧಿಕ್ಕಾರ ಕೂಗುತ್ತ ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಮಾಯಿಸಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಜಿಲ್ಲೆಯ ದಸಂಸ, ಸಿಪಿಐಎಂ, ಸಿಪಿಐಎಂಎಲ್, ಸಿಪಿಐಎಂ(ರೆಡ್ ಸ್ಟಾರ್), ರೈತ ಸಂಘಟನೆ, ಬಹುಜನ ಕಾರ್ಮಿಕ ಸಂಘಟನೆ, ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯ ಹಲವು ಮುಖಂಡರು ಮಾತನಾಡಿದರು. ಮಡಿಕೇರಿ

ಪ್ರತಿಭಟನೆಯಲ್ಲಿ ಭೂ ಗುತ್ತಿಗೆ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಕಾಮ್ರೇಡ್ ನಿರ್ವಾಣಪ್ಪ, ಸಂಚಾಲಕರಾದ ಕೆ ಮೊಣ್ಣಪ್ಪ, ರಮೇಶ್ ಮಾಯಮುಡಿ, ರಮೇಶ್ (ಸಿಪಿಐಎಂ), ಅಡ್ವೋಕೇಟ್ ಸುನಿಲ್, ದಸಂಸ ಮಾರ್ಕ್ಸ್‌ವಾದಿ ಕುಟ್ಟಪ್ಪ, ದಸಂಸ ಸಂಚಾಲಕರಾದ ಗೋವಿಂದಪ್ಪ, ರಜನೀಕಾಂತ್, ಹೆಚ್ ಎಲ್ ದಿವಾಕರ್, ವೀರಭದ್ರಯ್ಯ, ಜಗದೀಶ್, ಭೀಮವಾದ ಸಂಘಟನೆಯ ಕೆ ಬಿ ರಾಜು, ಗ್ರಾಮ ಪಂಚಾಯ್ತಿ ಸದಸ್ಯರಾದ ಕುಸುಮಾವತಿ, ಲಕ್ಷ್ಮಿ, ಪತ್ರಕರ್ತರಾದ ಜಯಪ್ಪ ಹಾನಗಲ್, ಮೋಹನ್ ಮೈಸೂರು ಭಾಗಿಯಾಗಿದ್ದರು.

ಇದನ್ನೂಓದಿ:  ಹೇಮಾ ಸಮಿತಿ ವರದಿ ಸಂಬಂಧ 40 ಎಫ್‌ಐಆರ್ ದಾಖಲು : ಹೈಕೋರ್ಟ್‌ಗೆ ತಿಳಿಸಿದ ಕೇರಳ ಸರ್ಕಾರ

ಹೇಮಾ ಸಮಿತಿ ವರದಿ ಸಂಬಂಧ 40 ಎಫ್‌ಐಆರ್ ದಾಖಲು : ಹೈಕೋರ್ಟ್‌ಗೆ ತಿಳಿಸಿದ ಕೇರಳ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...