Homeಕರ್ನಾಟಕಮಡಿಕೇರಿ | ಭೂ ಗುತ್ತಿಗೆ ವಿರೋಧಿಸಿ; ಭೂಮಿ, ನಿವೇಶನಕ್ಕಾಗಿ ಬೃಹತ್ ರ‍್ಯಾಲಿ

ಮಡಿಕೇರಿ | ಭೂ ಗುತ್ತಿಗೆ ವಿರೋಧಿಸಿ; ಭೂಮಿ, ನಿವೇಶನಕ್ಕಾಗಿ ಬೃಹತ್ ರ‍್ಯಾಲಿ

- Advertisement -
- Advertisement -

ಭೂ ಗುತ್ತಿಗೆ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಶುಕ್ರವಾರ ಬೃಹತ್ ಪಾದಯಾತ್ರೆ ನಡೆದಿದ್ದು, ಬಡ ಜನರಿಗೆ ಭೂಮಿ ಹಾಗೂ ನಿವೇಶನ ಕಲ್ಪಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಧರಣಿ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ರ‍್ಯಾಲಿಗೆ ಕೊಡಗಿನ ಎಲ್ಲಾ ಪ್ರಗತಿಪರ ಸಂಘಟನೆಗಳು ಪಾಲ್ಗೊಳ್ಳುವುದರ ಮೂಲಕ ಬೆಂಬಲ ಸೂಚಿಸಿದವು ಎಂದು ಈದಿನ.ಕಾಂ ವರದಿ ಮಾಡಿದೆ. ಮಡಿಕೇರಿ

ಕೊಡಗಿನಲ್ಲಿ ಭೂ ಗುತ್ತಿಗೆ ಆದೇಶವಾಗಿದ್ದು, ಉಳ್ಳವರ ಪರವಾಗಿ ಒತ್ತುವರಿ ಮಾಡಿಕೊಂಡ ಭೂ ಮಾಲೀಕರು ಕೇವಲ ಸಾವಿರಾರು ರೂಪಾಯಿ ಪಾವತಿಸಿ ಸರ್ಕಾರದಿಂದ ಅಧಿಕೃತವಾಗಿ ಮೂವತ್ತು ವರ್ಷಗಳವರೆಗೆ ಭೂ ಗುತ್ತಿಗೆ ಪಡೆಯುವ ಪ್ರಕ್ರಿಯೆ ಆರಂಭಗೊಂಡು, ಇನ್ನೇನು ವಿತರಿಸುವ ಹಂತಕ್ಕೆ ತಲುಪಿದೆ. ಕೊಡಗಿನ ಬಡ ಜನರ ವಿರೋಧಿ ಭೂ ಗುತ್ತಿಗೆ ಆದೇಶ ಜಾರಿಗೆ ತಂದ ಸರ್ಕಾರ, ಅನುಷ್ಠಾನ ಮಾಡುತ್ತಿರುವ ಜಿಲ್ಲಾಡಳಿತ ವಿರುದ್ಧ ಕೊಡಗಿನಲ್ಲಿ ಹೋರಾಟಗಳು ಆರಂಭಗೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸರ್ಕಾರ ಉಳ್ಳವರಿಗೆ 25 ಎಕರೆ ಕೊಡುವುದಾದರೆ ನಿವೇಶನ, ಭೂಮಿ ಏನೂ ಇರದ ಬಡ ಜನರ ಪರಿಸ್ಥಿತಿ ಏನು? ಅಂತಹವರಿಗೆ ಭೂಮಿ ಕೊಡಿ ಭೂ ಮಾಲೀಕರು ಕೊಡುವ ಹಣಕ್ಕಿಂತ ದುಪ್ಪಟ್ಟು ಕೊಡುವುದಾಗಿ ಹೋರಾಟಗಾರರು ಆಗ್ರಹ ಮಾಡಿದ್ದಾರೆ.

ಜಿಲ್ಲೆಯ ಬಹುತೇಕ ಎಲ್ಲಾ ತಾಲೂಕುಗಳಿಂದ ಬಂದಿದ್ದ ಆದಿವಾಸಿ, ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯದ ಜನರು ನೀಲಿ, ಕೆಂಪು, ಹಸಿರು ಬಾವುಟ ಹಿಡಿದು ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ಹೊರ ಹಾಕುತ್ತಾ ಧಿಕ್ಕಾರ ಕೂಗುತ್ತ ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಮಾಯಿಸಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಜಿಲ್ಲೆಯ ದಸಂಸ, ಸಿಪಿಐಎಂ, ಸಿಪಿಐಎಂಎಲ್, ಸಿಪಿಐಎಂ(ರೆಡ್ ಸ್ಟಾರ್), ರೈತ ಸಂಘಟನೆ, ಬಹುಜನ ಕಾರ್ಮಿಕ ಸಂಘಟನೆ, ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯ ಹಲವು ಮುಖಂಡರು ಮಾತನಾಡಿದರು. ಮಡಿಕೇರಿ

ಪ್ರತಿಭಟನೆಯಲ್ಲಿ ಭೂ ಗುತ್ತಿಗೆ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಕಾಮ್ರೇಡ್ ನಿರ್ವಾಣಪ್ಪ, ಸಂಚಾಲಕರಾದ ಕೆ ಮೊಣ್ಣಪ್ಪ, ರಮೇಶ್ ಮಾಯಮುಡಿ, ರಮೇಶ್ (ಸಿಪಿಐಎಂ), ಅಡ್ವೋಕೇಟ್ ಸುನಿಲ್, ದಸಂಸ ಮಾರ್ಕ್ಸ್‌ವಾದಿ ಕುಟ್ಟಪ್ಪ, ದಸಂಸ ಸಂಚಾಲಕರಾದ ಗೋವಿಂದಪ್ಪ, ರಜನೀಕಾಂತ್, ಹೆಚ್ ಎಲ್ ದಿವಾಕರ್, ವೀರಭದ್ರಯ್ಯ, ಜಗದೀಶ್, ಭೀಮವಾದ ಸಂಘಟನೆಯ ಕೆ ಬಿ ರಾಜು, ಗ್ರಾಮ ಪಂಚಾಯ್ತಿ ಸದಸ್ಯರಾದ ಕುಸುಮಾವತಿ, ಲಕ್ಷ್ಮಿ, ಪತ್ರಕರ್ತರಾದ ಜಯಪ್ಪ ಹಾನಗಲ್, ಮೋಹನ್ ಮೈಸೂರು ಭಾಗಿಯಾಗಿದ್ದರು.

ಇದನ್ನೂಓದಿ:  ಹೇಮಾ ಸಮಿತಿ ವರದಿ ಸಂಬಂಧ 40 ಎಫ್‌ಐಆರ್ ದಾಖಲು : ಹೈಕೋರ್ಟ್‌ಗೆ ತಿಳಿಸಿದ ಕೇರಳ ಸರ್ಕಾರ

ಹೇಮಾ ಸಮಿತಿ ವರದಿ ಸಂಬಂಧ 40 ಎಫ್‌ಐಆರ್ ದಾಖಲು : ಹೈಕೋರ್ಟ್‌ಗೆ ತಿಳಿಸಿದ ಕೇರಳ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...