Homeಕರ್ನಾಟಕಮಡಿಕೇರಿ | ಭೂ ಗುತ್ತಿಗೆ ವಿರೋಧಿಸಿ; ಭೂಮಿ, ನಿವೇಶನಕ್ಕಾಗಿ ಬೃಹತ್ ರ‍್ಯಾಲಿ

ಮಡಿಕೇರಿ | ಭೂ ಗುತ್ತಿಗೆ ವಿರೋಧಿಸಿ; ಭೂಮಿ, ನಿವೇಶನಕ್ಕಾಗಿ ಬೃಹತ್ ರ‍್ಯಾಲಿ

- Advertisement -
- Advertisement -

ಭೂ ಗುತ್ತಿಗೆ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಶುಕ್ರವಾರ ಬೃಹತ್ ಪಾದಯಾತ್ರೆ ನಡೆದಿದ್ದು, ಬಡ ಜನರಿಗೆ ಭೂಮಿ ಹಾಗೂ ನಿವೇಶನ ಕಲ್ಪಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಧರಣಿ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ರ‍್ಯಾಲಿಗೆ ಕೊಡಗಿನ ಎಲ್ಲಾ ಪ್ರಗತಿಪರ ಸಂಘಟನೆಗಳು ಪಾಲ್ಗೊಳ್ಳುವುದರ ಮೂಲಕ ಬೆಂಬಲ ಸೂಚಿಸಿದವು ಎಂದು ಈದಿನ.ಕಾಂ ವರದಿ ಮಾಡಿದೆ. ಮಡಿಕೇರಿ

ಕೊಡಗಿನಲ್ಲಿ ಭೂ ಗುತ್ತಿಗೆ ಆದೇಶವಾಗಿದ್ದು, ಉಳ್ಳವರ ಪರವಾಗಿ ಒತ್ತುವರಿ ಮಾಡಿಕೊಂಡ ಭೂ ಮಾಲೀಕರು ಕೇವಲ ಸಾವಿರಾರು ರೂಪಾಯಿ ಪಾವತಿಸಿ ಸರ್ಕಾರದಿಂದ ಅಧಿಕೃತವಾಗಿ ಮೂವತ್ತು ವರ್ಷಗಳವರೆಗೆ ಭೂ ಗುತ್ತಿಗೆ ಪಡೆಯುವ ಪ್ರಕ್ರಿಯೆ ಆರಂಭಗೊಂಡು, ಇನ್ನೇನು ವಿತರಿಸುವ ಹಂತಕ್ಕೆ ತಲುಪಿದೆ. ಕೊಡಗಿನ ಬಡ ಜನರ ವಿರೋಧಿ ಭೂ ಗುತ್ತಿಗೆ ಆದೇಶ ಜಾರಿಗೆ ತಂದ ಸರ್ಕಾರ, ಅನುಷ್ಠಾನ ಮಾಡುತ್ತಿರುವ ಜಿಲ್ಲಾಡಳಿತ ವಿರುದ್ಧ ಕೊಡಗಿನಲ್ಲಿ ಹೋರಾಟಗಳು ಆರಂಭಗೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸರ್ಕಾರ ಉಳ್ಳವರಿಗೆ 25 ಎಕರೆ ಕೊಡುವುದಾದರೆ ನಿವೇಶನ, ಭೂಮಿ ಏನೂ ಇರದ ಬಡ ಜನರ ಪರಿಸ್ಥಿತಿ ಏನು? ಅಂತಹವರಿಗೆ ಭೂಮಿ ಕೊಡಿ ಭೂ ಮಾಲೀಕರು ಕೊಡುವ ಹಣಕ್ಕಿಂತ ದುಪ್ಪಟ್ಟು ಕೊಡುವುದಾಗಿ ಹೋರಾಟಗಾರರು ಆಗ್ರಹ ಮಾಡಿದ್ದಾರೆ.

ಜಿಲ್ಲೆಯ ಬಹುತೇಕ ಎಲ್ಲಾ ತಾಲೂಕುಗಳಿಂದ ಬಂದಿದ್ದ ಆದಿವಾಸಿ, ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯದ ಜನರು ನೀಲಿ, ಕೆಂಪು, ಹಸಿರು ಬಾವುಟ ಹಿಡಿದು ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ಹೊರ ಹಾಕುತ್ತಾ ಧಿಕ್ಕಾರ ಕೂಗುತ್ತ ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಮಾಯಿಸಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಜಿಲ್ಲೆಯ ದಸಂಸ, ಸಿಪಿಐಎಂ, ಸಿಪಿಐಎಂಎಲ್, ಸಿಪಿಐಎಂ(ರೆಡ್ ಸ್ಟಾರ್), ರೈತ ಸಂಘಟನೆ, ಬಹುಜನ ಕಾರ್ಮಿಕ ಸಂಘಟನೆ, ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯ ಹಲವು ಮುಖಂಡರು ಮಾತನಾಡಿದರು. ಮಡಿಕೇರಿ

ಪ್ರತಿಭಟನೆಯಲ್ಲಿ ಭೂ ಗುತ್ತಿಗೆ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಕಾಮ್ರೇಡ್ ನಿರ್ವಾಣಪ್ಪ, ಸಂಚಾಲಕರಾದ ಕೆ ಮೊಣ್ಣಪ್ಪ, ರಮೇಶ್ ಮಾಯಮುಡಿ, ರಮೇಶ್ (ಸಿಪಿಐಎಂ), ಅಡ್ವೋಕೇಟ್ ಸುನಿಲ್, ದಸಂಸ ಮಾರ್ಕ್ಸ್‌ವಾದಿ ಕುಟ್ಟಪ್ಪ, ದಸಂಸ ಸಂಚಾಲಕರಾದ ಗೋವಿಂದಪ್ಪ, ರಜನೀಕಾಂತ್, ಹೆಚ್ ಎಲ್ ದಿವಾಕರ್, ವೀರಭದ್ರಯ್ಯ, ಜಗದೀಶ್, ಭೀಮವಾದ ಸಂಘಟನೆಯ ಕೆ ಬಿ ರಾಜು, ಗ್ರಾಮ ಪಂಚಾಯ್ತಿ ಸದಸ್ಯರಾದ ಕುಸುಮಾವತಿ, ಲಕ್ಷ್ಮಿ, ಪತ್ರಕರ್ತರಾದ ಜಯಪ್ಪ ಹಾನಗಲ್, ಮೋಹನ್ ಮೈಸೂರು ಭಾಗಿಯಾಗಿದ್ದರು.

ಇದನ್ನೂಓದಿ:  ಹೇಮಾ ಸಮಿತಿ ವರದಿ ಸಂಬಂಧ 40 ಎಫ್‌ಐಆರ್ ದಾಖಲು : ಹೈಕೋರ್ಟ್‌ಗೆ ತಿಳಿಸಿದ ಕೇರಳ ಸರ್ಕಾರ

ಹೇಮಾ ಸಮಿತಿ ವರದಿ ಸಂಬಂಧ 40 ಎಫ್‌ಐಆರ್ ದಾಖಲು : ಹೈಕೋರ್ಟ್‌ಗೆ ತಿಳಿಸಿದ ಕೇರಳ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...