Homeಮುಖಪುಟಆದಾಯ ಮೀರಿ ಆಸ್ತಿ ಗಳಿಕೆ: ತಮಿಳುನಾಡು ಸಚಿವ ಪೊನ್ಮುಡಿ ದೋಷಿ; ಮದ್ರಾಸ್ ಹೈಕೋರ್ಟ್‌

ಆದಾಯ ಮೀರಿ ಆಸ್ತಿ ಗಳಿಕೆ: ತಮಿಳುನಾಡು ಸಚಿವ ಪೊನ್ಮುಡಿ ದೋಷಿ; ಮದ್ರಾಸ್ ಹೈಕೋರ್ಟ್‌

- Advertisement -
- Advertisement -

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡಿನ ಉನ್ನತ ಶಿಕ್ಷಣ ಸಚಿವ ಕೆ. ಪೊನ್ಮುಡಿ ತಪ್ಪಿತಸ್ಥ ಎಂದು ಮದ್ರಾಸ್ ಹೈಕೋರ್ಟ್‌ ಮಂಗಳವಾರ ಘೋಷಿಸಿದೆ.

ನ್ಯಾಯಮೂರ್ತಿ ಜಿ. ಜಯಚಂದ್ರನ್ ಅವರು, ಹಿರಿಯ ಡಿಎಂಕೆ ನಾಯಕ ಪೊನ್ಮುಡಿ ಮತ್ತು ಅವರ ಪತ್ನಿ ಪಿ ವಿಶಾಲಾಕ್ಷಿ ಅವರನ್ನು ದೋಷಿಗಳು ಎಂದು ಘೋಷಿಸಿದ್ದಾರೆ. ಡಿಸೆಂಬರ್ 21 ರಂದು ಇಬ್ಬರಿಗೂ ಶಿಕ್ಷೆ ಪ್ರಮಾಣ ಪ್ರಕಟಿಸಲಾಗುತ್ತದೆ. ಅಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.

1996ರಿಂದ 2001ರ ವರೆಗಿನ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸರ್ಕಾರದಲ್ಲಿ ಪೊನ್ಮುಡಿ ಅವರು ರಾಜ್ಯ ಸಾರಿಗೆ ಸಚಿವರಾಗಿದ್ದ ಸಂದರ್ಭ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಎಐಎಡಿಎಂಕೆ 2002ರಲ್ಲಿ ಅಧಿಕಾರಕ್ಕೆ ಬಂದ ಬಳಿಕ ಜಾಗೃತ ಹಾಗೂ ಭ್ರಷ್ಟಾಚಾರ ವಿರೋಧಿ ನಿರ್ದೇಶನಾಲಯ (ಡಿವಿಎಸಿ)ಅವರ ವಿರುದ್ದ ಪ್ರಕರಣ ದಾಖಲಿಸಿತ್ತು.

2015ರಲ್ಲಿ ಪೊನ್ಮುಡಿ ವಿರುದ್ಧ ಆರೋಪ ರೂಪಿಸಲಾಗಿತ್ತು. ವಿಚಾರಣೆಯನ್ನು ವಿಲ್ಲುಪುರಂನಿಂದ ವೆಲ್ಲೂರಿಗೆ ಸ್ಥಳಾಂತರಿಸಲಾಗಿತ್ತು. ಕಳೆದ ಜೂನ್ 28ರಂದು ವೆಲ್ಲೂರಿನ ಪ್ರಧಾನ ಜಿಲ್ಲಾ ನ್ಯಾಯಧೀಶೆ ಎನ್ .ವಸಂತಲೀಲಾ ಅವರು ಪೊನ್ಮುಡಿ ಮತ್ತು ಅವರ ಪತ್ನಿಯನ್ನು ಪ್ರಕರಣದಿಂದ ಖುಲಾಸೆಗೊಳಿಸಿದ್ದರು.

ಆದರೆ, ಮದ್ರಾಸ್ ಹೈಕೋರ್ಟ್‌ ಪೊನ್ಮುಡಿ ದಂಪತಿ ಸೇರಿದಂತೆ ಇತರ ಆರು ಮಂದಿ ರಾಜಕಾರಣಿಗಳ ವಿರುದ್ಧದ ಪ್ರಕರಣಗಳನ್ನು ಸ್ವಯಂ ಪ್ರೇರಿತ ಮರು ಪರಿಶೀಲನೆಗೆ ತೆಗೆದುಕೊಂಡಿತ್ತು.ನ್ಯಾಯಮೂರ್ತಿ ಎನ್ ಆನಂದ್ ವೆಂಕಟೇಶ್ ಅವರು ಪೊನ್ಮುಡಿ ದಂಪತಿಯ ಪ್ರಕರಣದ ವಿಚಾರಣೆ ಆರಂಭಿಸಿದ್ದರು.

ವಿಚಾರಣಾ ನ್ಯಾಯಾಲಯದ ಇತ್ಯರ್ಥಪಡಿಸಿದ ಪ್ರಕರಣವನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿ ವೆಂಕಟೇಶ್ ವಿರುದ್ಧ ಪೊನ್ಮುಡಿ ಮತ್ತು ಅವರ ಪತ್ನಿ ಸಲ್ಲಿಸಿದ್ದ ಅರ್ಜಿಗಳನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. “ನಮ್ಮ ವ್ಯವಸ್ಥೆಯಲ್ಲಿ ನ್ಯಾಯಮೂರ್ತಿ ಆನಂದ್ ವೆಂಕಟೇಶ್ ಅವರಂತಹ ನ್ಯಾಯಾಧೀಶರನ್ನು ಹೊಂದಿದ್ದಕ್ಕಾಗಿ ದೇವರಿಗೆ ಧನ್ಯವಾದಗಳು” ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ನವೆಂಬರ್ 5 ರಂದು ಹೇಳಿತ್ತು.

ಬಳಿಕ ನ್ಯಾಯಾಲಯದ ರೋಸ್ಟರ್ ಬದಲಾವಣೆಯ ಕಾರಣ ನ್ಯಾಯಮೂರ್ತಿ ಜಿ.ಜಯಚಂದ್ರ ಅವರು ಈ ಪ್ರಕರಣಗಳ ವಿಚಾರಣೆಯನ್ನು ಮುಂದುವರೆಸಿದ್ದರು. ಡಿ.19ರಂದು ತೀರ್ಪು ಪ್ರಕಟಿಸಿದ್ದಾರೆ.

ಆರೋಪಿಗಳ ವಿರುದ್ಧದ ಸಾಕ್ಷ್ಯಗಳ ಕೊರತೆ ಮತ್ತು ಲಭ್ಯ ಸಾಕ್ಷ್ಯಗಳ ತಪ್ಪಾದ ವ್ಯಾಖ್ಯಾನ ಖುಲಾಸೆಗೊಳಿಸುವ ವಿಚಾರಣಾ ನ್ಯಾಯಾಲಯದ ತೀರ್ಪು ಸ್ಪಷ್ಟವಾಗಿ ತಪ್ಪು ಎಂದು ಸೂಚಿಸುತ್ತದೆ. ಹಾಗಾಗಿ, ವಿಚಾರಣಾ ನ್ಯಾಯಾಲಯದ ತೀರ್ಪು ರದ್ದುಗೊಳಿಸಲಾಗಿದೆ ಎಂದು ಹೈಕೋರ್ಟ್‌ ನ್ಯಾಯಮೂರ್ತಿ ಜಿ. ಜಯಚಂದ್ರನ್ ಹೇಳಿದ್ದಾರೆ.

ಸಚಿವ ಪೊನ್ಮುಡಿ ಅನರ್ಹತೆ ಎದುರಿಸುವ ಸಾಧ್ಯತೆ ಇದ್ದು, ಗುರುವಾರ ನ್ಯಾಯಾಲಯದ ಶಿಕ್ಷೆ ಪ್ರಕಟಿಸಿದ ನಂತರ ಅದು ಸ್ಪಷ್ಟವಾಗಲಿದೆ.

ಇದನ್ನೂ ಓದಿ: ಎಲ್ಗರ್ ಪರಿಷತ್ ಪ್ರಕರಣ: ಗೌತಮ್ ನವ್ಲಾಖಾಗೆ ಜಾಮೀನು ಮಂಜೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...