Homeಮುಖಪುಟಅತ್ಯಾಚಾರ ಪ್ರಕರಣ : ಎಐಎಡಿಎಂಕೆ ಮಾಜಿ ಸಚಿವ ಎಂ.ಮಣಿಕಂಠನ್‌ಗೆ ಷರತ್ತು ಬದ್ಧ ಜಾಮೀನು

ಅತ್ಯಾಚಾರ ಪ್ರಕರಣ : ಎಐಎಡಿಎಂಕೆ ಮಾಜಿ ಸಚಿವ ಎಂ.ಮಣಿಕಂಠನ್‌ಗೆ ಷರತ್ತು ಬದ್ಧ ಜಾಮೀನು

- Advertisement -
- Advertisement -

ತಮಿಳು ಮತ್ತು ಮಲಯಾಳಂ ಚಲನಚಿತ್ರಗಳಲ್ಲಿ ನಟಿಸಿದ ಇಂಡೋ-ಮಲೇ‍ಷಿಯಾ ಮೂಲದ ಮಹಿಳೆಯೊಬ್ಬರ  ಮೇಲೆ ಅತ್ಯಾಚಾರ ಮತ್ತು ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟಿದ್ದ ತಮಿಳುನಾಡಿದ ಎಐಎಡಿಎಂಕೆ ಮಾಜಿ ಸಚಿವ ಎಂ.ಮಣಿಕಂಠನ್ ಅವರಿಗೆ ಮದ್ರಾಸ್ ಹೈಕೋರ್ಟ್ ಬುಧವಾರ ಷರತ್ತು ಬದ್ಧ ಜಾಮೀನು ನೀಡಿದೆ.

ನ್ಯಾಯಮೂರ್ತಿ ಎಂ. ನಿರ್ಮಲ್ ಕುಮಾರ್ ಜಾಮೀನು ಮಂಜೂರು ಮಾಡಿದ್ದು, ಪಾಸ್‌ಪೋರ್ಟ್‌ ಮತ್ತು ತಲಾ  10,000 ಸಾವಿರ ರೂಪಾಯಿಗಳಂತೆ ಇಬ್ಬರು ಶ್ಯೂರಿಟಿ ಹಾಕಿದ ನಂತರ ಜಾಮೀನು ನೀಡಲಾಗಿದೆ. ಜೊತೆಗೆ  ಎರಡು ವಾರಗಳವರೆಗೆ ಪ್ರತಿದಿನ ತನಿಖಾ ಅಧಿಕಾರಿಯ ಮುಂದೆ ಹಾಜರಾಗಬೇಕು. ತನಿಖಾಧಿಕಾರಿ ಕರೆ ಮಾಡಿದಾಗಲೆಲ್ಲಾ ಬಂದು ಹೋಗಬೇಕು ಎಂದು ತಿಳಿಸಲಾಗಿದೆ.

ಮಾಜಿ ಸಚಿವ ಮಣಿಕಂಠನ್ ಮದುವೆಯಾಗಿದ್ದರು ಕೂಡ ಇಂಡೊ-ಮಲೇ‍ಷಿಯಾ ಮೂಲದ ಮಹಿಳೆಯ ಜೊತೆಗೆ ವಾಸಿಸುತ್ತಿದ್ದರು. “ಮಣಿಕಂಠನ್ ಕಳೆದ ನಾಲ್ಕು ವರ್ಷಗಳಿಂದ ತಮ್ಮ ಜೊತೆ ಲಿವ್‌ ಇನ್ ಸಂಬಂಧದಲ್ಲಿ ಇದ್ದಾರೆ. 3 ಸಾರಿ ಬಲವಂತದಿಂದ ಗರ್ಭಪಾತವನ್ನು ಮಾಡಿಸಿದ್ದಾರೆ. ತಮ್ಮ ಹೆಂಡತಿಗೆ ವಿಚ್ಛೇದನ ನೀಡಿ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ” ಎಂದು ಸಂತ್ರಸ್ತ ಮಹಿಳೆ ದೂರಿನಲ್ಲಿ ದಾಖಲಿಸಿದ್ದಾಳೆ.

ಇದನ್ನೂ ಓದಿ: ಸಿನಿಮಾಟೋಗ್ರಾಫ್ ಆಕ್ಟ್‌ಗೆ ಸ್ಟಾಲಿನ್ ವಿರೋಧ: ನಿರ್ಧಾರ ಹಿಂಪಡೆಯುವಂತೆ ಒಕ್ಕೂಟ ಸಚಿವರಿಗೆ ಪತ್ರ

“ತನಿಖೆಯೂ ಈಗಾಗಲೇ ಭಾಗಶಃ ಮುಗಿದಿದೆ. ಕಕ್ಷಿದಾರರು ನ್ಯಾಯಾಲಯದ ಎಲ್ಲಾ ಷರತ್ತುಗಳಿಗೆ ಬದ್ಧರಾಗಿರುತ್ತಾರೆ” ಎಂದು ಮಾಜಿ ಸಚಿವರ ಪರ ವಕೀಲರು ನ್ಯಾಯಾಲಯಕ್ಕೆ ಭರವಸೆ ನೀಡಿದ್ದಾರೆ. ಜೊತೆಗೆ ಅತ್ಯಾಚಾರ ಮತ್ತು ಒಮ್ಮತದ ಲೈಂಗಿಕತೆಯ ನಡುವೆ ಸ್ಪಷ್ಟ ವ್ಯತ್ಯಾಸವಿದೆ. ರಾಜಕೀಯ ಪ್ರೇರಿತವಾಗಿ ಈ ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಮದ್ರಾಸ್ ಹೈಕೋರ್ಟ್‌ನಲ್ಲಿ ತಮ್ಮ ಬಂಧನಕ್ಕೆ ತಡಕೋರಿ ಮಣಿಕಂಠನ್ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಮದ್ರಾಸ್ ಹೈಕೋರ್ಟ್ ಮಣಿಕಂಠನ್ ಜಾಮೀನು ಅರ್ಜಿಯನ್ನು ವಿಚಾರಣೆ ಮಾಡಿ ಜೂನ್ 9 ರ ವರೆಗೆ ಅವರನ್ನು ಬಂಧಿಸದಂತೆ ಆದೇಶ ನೀಡಿತ್ತು. ಜೂನ್ 9 ರ ನಂತರ ಮಣಿಕಂಠನ್ ತಮಿಳುನಾಡನ್ನು ತೊರೆದು ತಲೆಮರೆಸಿಕೊಂಡಿದ್ದರು. ನಂತರ ಜೂನ್ 20 ರಂದು ಬೆಂಗಳೂರಿನಲ್ಲಿ ಮಣಿಕಂಠನ್ ಅಡಗಿರುವ ನಿಖರ ಮಾಹಿತಿಯನ್ನು ಪಡೆದ ಪೊಲೀಸರು ಅವರನ್ನು ಬಂಧಿಸಿ ತಮಿಳುನಾಡಿಗೆ ಕರೆದೊಯ್ದಿದ್ದರು.

ಮಲೇಷಿಯಾ ಮೂಲದ ಮಹಿಳೆ ಆಡ್ಯಾರ್ ಆಲ್ ವಿಮೆನ್ ಪೊಲೀಸ್ ಠಾಣೆಯಲ್ಲಿ ಮಣಿಕಂಠನ್ ಅವರ ವಿರುದ್ಧ ಮೋಸ, ಅತ್ಯಾಚಾರ, ಗರ್ಭಪಾತದ ಆರೋಪದಲ್ಲಿ ದೂರು ದಾಖಲಿಸಿದ್ದರು.  ಆಡ್ಯಾರ್ ಪೊಲೀಸರು ಮಣಿಕಂಠನ್ ವಿರುದ್ಧ IPC ಸೆಕ್ಷನ್ 376 ( ಅತ್ಯಾಚಾರ) ,ಸೆಕ್ಷನ್ 313 (ಗರ್ಭಪಾತ), ಸೆಕ್ಷನ್ 323 ( ಸ್ವಯಂ ಪ್ರೇರಿತ ಹಲ್ಲೆ), ಸೆಕ್ಷನ್ 417(ಮೋಸ), ಸೆಕ್ಷನ್ 506(i)(ಅಪರಾಧಿಕ ಕೃತ್ಯಕ್ಕೆ ಕುಮ್ಮಕ್ಕು) IT ಕಾಯ್ದೆ ಸೇರಿ ಹಲವು ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದರು.

ಇದನ್ನೂ ಓದಿ: ಅತ್ಯಾಚಾರ ಪ್ರಕರಣ: ಬೆಂಗಳೂರಿನಲ್ಲಿ ತಮಿಳುನಾಡಿನ ಮಾಜಿ ಸಚಿವ ಎಂ.ಮಣಿಕಂಠನ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...