Homeಮುಖಪುಟಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಮದ್ರಾಸ್ ಹೈಕೋರ್ಟ್ ನ್ಯಾ. ಸ್ವಾಮಿನಾಥನ್ ಸಂವಿಧಾನದ ವಿರುದ್ದ ಮಾತನಾಡಿದ್ದಾರೆ: ನಿವೃತ್ತ ನ್ಯಾ. ಕೆ....

ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಮದ್ರಾಸ್ ಹೈಕೋರ್ಟ್ ನ್ಯಾ. ಸ್ವಾಮಿನಾಥನ್ ಸಂವಿಧಾನದ ವಿರುದ್ದ ಮಾತನಾಡಿದ್ದಾರೆ: ನಿವೃತ್ತ ನ್ಯಾ. ಕೆ. ಚಂದ್ರು

- Advertisement -
- Advertisement -

ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರು ಜಾತ್ಯತೀತತೆ ಮತ್ತು ಕಾನೂನಿನ ನಿಯಮಕ್ಕೆ ವಿರುದ್ಧವಾದ ವಿಚಾರಗಳ ಪರವಾಗಿ ಬ್ಯಾಟಿಂಗ್ ಮಾಡುವ ಮೂಲಕ ಸಂವಿಧಾನಕ್ಕೆ ಮತ್ತು ತಮ್ಮ ಪ್ರಮಾಣವಚನಕ್ಕೆ ದ್ರೋಹ ಎಸಗಿದ್ದಾರೆ ಎಂದು ನಿವೃತ್ತ ನ್ಯಾಯಮೂರ್ತಿ ಕೆ. ಚಂದ್ರು ಅಕ್ಟೋಬರ್ 22ರಂದು ಚೆನ್ನೈನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಹಾಲಿ ನ್ಯಾಯಾಧೀಶರ ವಿರುದ್ಧ ಕಟು ಟೀಕೆ ಮಾಡಿದ ನ್ಯಾಯಮೂರ್ತಿ ಚಂದ್ರು, ನ್ಯಾಯಮೂರ್ತಿ ಸ್ವಾಮಿನಾಥನ್ ಅವರನ್ನು ಒಬ್ಬ ‘ವಿಚಿತ್ರ ವ್ಯಕ್ತಿ’ ಎಂದಿದ್ದು, ಅವರು ನ್ಯಾಯಾಧೀಶರಾಗಿ ಸಂವಿಧಾನವನ್ನು ಎತ್ತಿಹಿಡಿಯುವುದಾಗಿ ಪ್ರಮಾಣವಚನ ಸ್ವೀಕರಿಸಿದ್ದರೂ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕಾರ್ಯಕ್ರಮದಲ್ಲಿ ಸಂವಿಧಾನದ ವಿರುದ್ಧ ಮಾತನಾಡಿದ್ದಾರೆ ಎಂದು ತಿಳಿಸಿದ್ದಾರೆ.

“ಸಂವಿಧಾನ ಮತ್ತು ಸುಪ್ರೀಂ ಕೋರ್ಟ್‌ನ ರಕ್ಷಣೆ” ಎಂಬ ಶೀರ್ಷಿಕೆಯಡಿ ವಿಡುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ವಕೀಲರ ವಿಭಾಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನ್ಯಾಯಮೂರ್ತಿ ಚಂದ್ರು ಗಂಭೀರ ಆರೋಪಗಳನ್ನು ಮಾಡಿದ್ದಾರೆ.

“ಆ ಜಿ.ಆರ್. ಸ್ವಾಮಿನಾಥನ್ ಒಬ್ಬ ವಿಚಿತ್ರ ವ್ಯಕ್ತಿ. ನಾನು ಇದನ್ನು ಹೇಳಲು ಕಾರಣ ಸಂವಿಧಾನದ ಪ್ರಕಾರ ನಾವು ನ್ಯಾಯಾಧೀಶರಾದಾಗ ‘ನಾನು ಭಯ ಅಥವಾ ಪಕ್ಷಪಾತವಿಲ್ಲದೆ, ದ್ವೇಷವಿಲ್ಲದೆ ಸಂವಿಧಾನವನ್ನು ಎತ್ತಿಹಿಡಿಯುತ್ತೇನೆ’ ಎಂದು ನಾವು ದೃಢವಾಗಿ ಪ್ರಮಾಣ ವಚನ ಸ್ವೀಕರಿಸಬೇಕು. ಆದರೆ, ಸ್ವಾಮಿನಾಥನ್ ಅದನ್ನು ಉಲ್ಲಂಘಿಸಿದ್ದಾರೆ. ಅವರ ಹೇಳಿಕೆಗಳು ಪ್ರಮಾಣ ವಚನಕ್ಕೆ ವಿರುದ್ಧವಾಗಿದೆ” ಎಂದು ಚಂದ್ರು ಹೇಳಿದ್ದಾರೆ. 

ನ್ಯಾಯಮೂರ್ತಿ ಸ್ವಾಮಿನಾಥನ್ ಅವರು ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ ಮತ್ತು ಭಾರತದ ಸಂವಿಧಾನದ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. “ನಮ್ಮ ಸಂವಿಧಾನ 1935ರ ಭಾರತ ಸರ್ಕಾರಿ ಕಾಯ್ದೆಯಿಂದ ನಕಲು ಮಾಡಿ ಪುಸ್ತಕವಾಗಿದೆ” ಎಂದು ಹೇಳಿದ್ದಾರೆ ಎಂದು ಚಂದ್ರು ಆರೋಪಿಸಿದ್ದಾರೆ.

“ಹರಿಯಾಣದಲ್ಲಿ ನಡೆದ ಆರ್‌ಎಸ್‌ಎಸ್ ಸಭೆಯಲ್ಲಿ, ಭಾರತದ ಸಂವಿಧಾನವನ್ನು 1935ರ ಕಾನೂನಿನಿಂದ ನಕಲು ಮಾಡಲಾಗಿದೆ ಮತ್ತು ನಮ್ಮ ಸಂವಿಧಾನದಲ್ಲಿ ಯಾವುದೇ ಸ್ವಂತಿಕೆ ಇಲ್ಲ ಎಂದು ಸ್ವಾಮಿನಾಥನ್ ಹೇಳಿದ್ದಾರೆ. ಅಂತಹ ಜನರಿಗೆ ಪ್ರತಿಕ್ರಿಯಿಸಲು ಸಮಯ ವ್ಯರ್ಥ ಮಾಡುವುದಿಲ್ಲ ಎಂದು ಡಾ. ಅಂಬೇಡ್ಕರ್ ಅವರೇ ಹೇಳಿದ್ದಾರೆ. ಆದರೂ, ಹಾಲಿ ಹೈಕೋರ್ಟ್ ನ್ಯಾಯಾಧೀಶರು ಈ ರೀತಿ ಮಾತನಾಡುತ್ತಾರೆ. ಅವರ ವಿರುದ್ದ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ” ಎಂದು ಚಂದ್ರು ಬೇಸರ ವ್ಯಕ್ತಪಡಿಸಿದ್ದಾರೆ.

ಹಾಲಿ ನ್ಯಾಯಾಧೀಶರ ಇಂತಹ ಮಾತುಗಳು ಡಾ. ಬಿ.ಆರ್. ಅಂಬೇಡ್ಕರ್ ರೂಪಿಸಿದ ಸಂವಿಧಾನದ ಮೂಲ ಉದ್ದೇಶವನ್ನೇ ಕೆಡಿಸುತ್ತವೆ. ಸಂವಿಧಾನವು ಎಲ್ಲರಿಗೂ ಸಮಾನತೆಯನ್ನು ನೀಡಿ, ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸುವ ಗುರಿಯನ್ನು ಹೊಂದಿದೆ ಎಂದು ನ್ಯಾಯಮೂರ್ತಿ ಚಂದ್ದು ಹೇಳಿದ್ದಾರೆ.

“ಕಾನೂನಿನ ನಿಯಮವನ್ನು ಉಲ್ಲಂಘಿಸುವ ಮತ್ತು ಅಂಬೇಡ್ಕರ್ ಅವರ ಪರಂಪರೆಯನ್ನು ನಿರಾಕರಿಸುವವರನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ” ಎಂದು ಚಂದ್ರು ಗುಡುಗಿದ್ದಾರೆ

“ಸಮಾನತೆ ಮತ್ತು ಶ್ರೇಣಿಕೃತ ವ್ಯವಸ್ಥೆಯ ನಡುವಿನ ದೊಡ್ಡ ಸೈದ್ಧಾಂತಿಕ ಹೋರಾಟ”ಕ್ಕೆ ಸಿದ್ಧರಾಗುವಂತೆ ಅವರು ವಕೀಲರು ಮತ್ತು ನಾಗರಿಕರಿಗೆ ಕರೆ ನೀಡಿದ್ದಾರೆ.

ನ್ಯಾಯಮೂರ್ತಿ ಚಂದ್ರು ಅವರು ಭಾಗವಹಿಸಿದ್ದ ಕಾರ್ಯಕ್ರಮ ಚೆನ್ನೈನ ವಲ್ಲುವರ್ ಕೊಟ್ಟಂನಲ್ಲಿ ನಡೆದಿದೆ. ಇದನ್ನು ‘ಸಮತುವ ವಾಝ್ಕಾರಿಣ್ಯರ್ ಸಂಗಮ್’ ಮತ್ತು ‘ವಿಸಿಕೆ ವಕೀಲರ ವಿಭಾಗ’ ಜಂಟಿಯಾಗಿ ಆಯೋಜಿಸಿತ್ತು. ಲೋಕಸಭಾ ಸಂಸದ ಥೋಲ್ ತಿರುಮಾವಲವನ್ ನೇತೃತ್ವದ ವಿಸಿಕೆ, ಆಡಳಿತಾರೂಢ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡ ದಲಿತ-ಹಕ್ಕುಗಳ ರಾಜಕೀಯ ಪಕ್ಷವಾಗಿದೆ.

ಮಾಜಿ ನ್ಯಾಯಾಧೀಶರಾದ ನ್ಯಾಯಮೂರ್ತಿ ಡಿ ಹರಿಪರಂತಮನ್ ಮತ್ತು ನ್ಯಾಯಮೂರ್ತಿ ಕೆ ಚಂದ್ರು ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿದ್ದರು. ವಿಸಿಕೆ ಜೊತೆ ಸಂಯೋಜಿತವಾಗಿರುವ ಎಳಿಲ್ ಕ್ಯಾರೋಲಿನ್, ಪಿ ತಮಿಳಿನಿಯನ್ ಮತ್ತು ಎಸ್‌ಎ ರಜನಿಕಾಂತ್ ಸೇರಿದಂತೆ ಇತರರು ಭಾಗವಹಿಸಿದ್ದರು.

ಕುತೂಹಲಕಾರಿಯಾಗಿ, ಕಾರ್ಯಕ್ರಮದ ಪ್ರಚಾರಕ್ಕಾಗಿ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿಆರ್ ಗವಾಯಿ ಅವರ ಫೋಟೋ ಮತ್ತು ವಿಸಿಕೆ ಲೋಗೋವನ್ನು ಒಳಗೊಂಡ ಪೋಸ್ಟರ್ ಅನ್ನು ಮದ್ರಾಸ್ ಹೈಕೋರ್ಟ್‌ನ ಹೊರಗೆ ಪ್ರದರ್ಶಿಸಲಾಗಿತ್ತು. ಆದರೆ, ಸಿಜೆಐ ಕಾರ್ಯಕ್ರಮದಲ್ಲಿ ಭಾಗವಹಿಸುವ ಯಾವುದೇ ಸೂಚನೆ ಇರಲಿಲ್ಲ. ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಲಾದ ವಿಡಿಯೋ ಸಿಜೆಐ ಗವಾಯಿ ಅವರು ಕಾರ್ಯಕ್ರಮಕ್ಕೆ ಹಾಜರಾಗಿಲ್ಲ ಎಂಬುವುದನ್ನು ದೃಢಪಡಿಸಿದೆ.

ನ್ಯಾಯಮೂರ್ತಿ ಚಂದ್ರು ಅವರ ತನ್ನ ಭಾಷಣದಲ್ಲಿ ಪರಿಶಿಷ್ಟ ಜಾತಿ ಸಮುದಾಯದವರಾದ ಸಿಜೆಐ ಬಿ.ಆರ್ ಗವಾಯಿ ಅವರ ಮೇಲಿನ ದಾಳಿ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ನ್ಯಾಯಾಂಗದ ಉನ್ನತ ಹಂತಗಳಲ್ಲಿಯೂ ಕೂಡ ದಲಿತರಿಗೆ ಗೌರವ ಇಲ್ಲ ಎನ್ನುವುದನ್ನು ಚಂದ್ರು ಖಂಡಿಸಿದ್ದಾರೆ.

ಜಾತಿ ವಿರೋಧಿ ಚಳವಳಿಯಲ್ಲಿ ಪಾದರಕ್ಷೆ ಅಥವಾ ಚಪ್ಪಲಿ ಸಾಂಸ್ಕೃತಿಕ ಮಹತ್ವವನ್ನು ಹೊಂದಿದ್ದು, ಅದನ್ನು ಕೇವಲ ಅವಮಾನವೆಂದು ನೋಡಬಾರದು ಎಂದು ಚಂದ್ರು ಪ್ರತಿಪಾದಿಸಿದ್ದಾರೆ.

“ಒಂದು ವೇಳೆ ಪಾದರಕ್ಷೆಯನ್ನು ಎಸೆದರೆ ಅದು ಅಗೌರವವಲ್ಲ. ಪಾದರಕ್ಷೆಗಳನ್ನು ಅಗೌರವಿಸುವವರು ಪ್ರಬಲ ಜಾತಿಯ ಜನರು. ನಾವು ಪಾದರಕ್ಷೆಗಳನ್ನು ಧರಿಸುತ್ತೇವೆ; ಅದರಿಂದ ನಾವು ಏನು ಬೇಕಾದರೂ ಮಾಡುತ್ತೇವೆ” ಎಂದು ಪೆರಿಯಾರ್ ಇ.ವಿ ರಾಮಸಾಮಿ ಮೇಲೆ ಚಪ್ಪಲಿ ಎಸೆದಾಗ ರಾಮಸ್ವಾಮಿ ನೀಡಿದ ಹೇಳಿಕೆಯನ್ನು ಚಂದ್ರು ಉಲ್ಲೇಖಿಸಿದ್ದಾರೆ.

ಚಪ್ಪಲಿ ಎಸೆದಾಗ ಅದನ್ನು ಎತ್ತಿಕೊಂಡು ಇನ್ನೊಂದು ಜೋಡಿ ಧರಿಸುವುದಾಗಿ ಪೆರಿಯಾರ್ ಹೇಳಿದರು ಎಂದು ನೆನಪಿಸಿದ “ಚಂದ್ರು, ಪಾದರಕ್ಷೆಗಳ ಸಂಕೇತವು ಅವಮಾನಕ್ಕಿಂತ ಸಮಾನತೆ ಮತ್ತು ಪ್ರತಿರೋಧವನ್ನು ಪ್ರತಿನಿಧಿಸುತ್ತದೆ” ಎಂದಿದ್ದಾರೆ. 

“ಭಾರತದ ಹಾಲಿ ಮುಖ್ಯ ನ್ಯಾಯಮೂರ್ತಿಯೊಬ್ಬರ ಮೇಲೆ ನ್ಯಾಯಾಲಯದೊಳಗಡೆಯೇ ಶೂ ಎಸೆದಾಗ, ಅದು ಮೌನವಾಗುವ ಬದಲು ರಾಷ್ಟ್ರೀಯ ಆಕ್ರೋಶಕ್ಕೆ ಕಾರಣವಾಗಬೇಕಿತ್ತು. ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠದ ಬಳಿ ಅವರ ಮೇಲೆಯೇ ಶೂ ಎಸೆಯುವಾಗ ನಾವು ಸುಮ್ಮನಿದ್ದರೆ, ಅದು ನ್ಯಾಯಾಂಗದ ಮೇಲೆ ನಮಗಿರುವ ಗೌರವದ ಕುರಿತು ಯಾವ ಸಂದೇಶ ನೀಡುತ್ತದೆ” ಎಂದು ಚಂದ್ರು ಪ್ರಶ್ನಿಸಿದ್ದಾರೆ.

ಈ ವರ್ಷದ ಆರಂಭದಲ್ಲಿ ಸಿಜೆಐ ಗವಾಯಿ ಅವರು ಮಹಾರಾಷ್ಟ್ರಕ್ಕೆ ಭೇಟಿ ನೀಡಿದಾಗ ಅಧಿಕೃತ ಶಿಷ್ಟಾಚಾರದ ವೈಫಲ್ಯವನ್ನು ಚಂದ್ರು ಟೀಕಿಸಿದ್ದಾರೆ. ಹಿರಿಯ ಅಧಿಕಾರಿಗಳು ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವೀಕರಿಸಿಲ್ಲ ಎಂದು ದೂರಿದ್ದಾರೆ.

“ಪರಿಶಿಷ್ಟ ಜಾತಿಯ ವ್ಯಕ್ತಿಯೊಬ್ಬರು ಭಾರತದ ಮುಖ್ಯ ನ್ಯಾಯಾಧೀಶರಾದರೂ, ಅವರನ್ನು ಅವರ ಹುದ್ದೆಗೆ ಸಲ್ಲುವ ಘನತೆಯಿಂದ ನಡೆಸಿಕೊಳ್ಳುತ್ತಿಲ್ಲ” ಎಂದಿದ್ದಾರೆ.

Courtesy: barandbench.com

ಮುಂದಿನ ಸಿಜೆಐ ನೇಮಕ ಪ್ರಕ್ರಿಯೆಗೆ ಚಾಲನೆ; ನ.3 ರಂದು ಬಿ.ಆರ್. ಗವಾಯಿ ನಿವೃತ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...