Homeಮುಖಪುಟಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಮದ್ರಾಸ್ ಹೈಕೋರ್ಟ್ ನ್ಯಾ. ಸ್ವಾಮಿನಾಥನ್ ಸಂವಿಧಾನದ ವಿರುದ್ದ ಮಾತನಾಡಿದ್ದಾರೆ: ನಿವೃತ್ತ ನ್ಯಾ. ಕೆ....

ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಮದ್ರಾಸ್ ಹೈಕೋರ್ಟ್ ನ್ಯಾ. ಸ್ವಾಮಿನಾಥನ್ ಸಂವಿಧಾನದ ವಿರುದ್ದ ಮಾತನಾಡಿದ್ದಾರೆ: ನಿವೃತ್ತ ನ್ಯಾ. ಕೆ. ಚಂದ್ರು

- Advertisement -
- Advertisement -

ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರು ಜಾತ್ಯತೀತತೆ ಮತ್ತು ಕಾನೂನಿನ ನಿಯಮಕ್ಕೆ ವಿರುದ್ಧವಾದ ವಿಚಾರಗಳ ಪರವಾಗಿ ಬ್ಯಾಟಿಂಗ್ ಮಾಡುವ ಮೂಲಕ ಸಂವಿಧಾನಕ್ಕೆ ಮತ್ತು ತಮ್ಮ ಪ್ರಮಾಣವಚನಕ್ಕೆ ದ್ರೋಹ ಎಸಗಿದ್ದಾರೆ ಎಂದು ನಿವೃತ್ತ ನ್ಯಾಯಮೂರ್ತಿ ಕೆ. ಚಂದ್ರು ಅಕ್ಟೋಬರ್ 22ರಂದು ಚೆನ್ನೈನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಹಾಲಿ ನ್ಯಾಯಾಧೀಶರ ವಿರುದ್ಧ ಕಟು ಟೀಕೆ ಮಾಡಿದ ನ್ಯಾಯಮೂರ್ತಿ ಚಂದ್ರು, ನ್ಯಾಯಮೂರ್ತಿ ಸ್ವಾಮಿನಾಥನ್ ಅವರನ್ನು ಒಬ್ಬ ‘ವಿಚಿತ್ರ ವ್ಯಕ್ತಿ’ ಎಂದಿದ್ದು, ಅವರು ನ್ಯಾಯಾಧೀಶರಾಗಿ ಸಂವಿಧಾನವನ್ನು ಎತ್ತಿಹಿಡಿಯುವುದಾಗಿ ಪ್ರಮಾಣವಚನ ಸ್ವೀಕರಿಸಿದ್ದರೂ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕಾರ್ಯಕ್ರಮದಲ್ಲಿ ಸಂವಿಧಾನದ ವಿರುದ್ಧ ಮಾತನಾಡಿದ್ದಾರೆ ಎಂದು ತಿಳಿಸಿದ್ದಾರೆ.

“ಸಂವಿಧಾನ ಮತ್ತು ಸುಪ್ರೀಂ ಕೋರ್ಟ್‌ನ ರಕ್ಷಣೆ” ಎಂಬ ಶೀರ್ಷಿಕೆಯಡಿ ವಿಡುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ವಕೀಲರ ವಿಭಾಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನ್ಯಾಯಮೂರ್ತಿ ಚಂದ್ರು ಗಂಭೀರ ಆರೋಪಗಳನ್ನು ಮಾಡಿದ್ದಾರೆ.

“ಆ ಜಿ.ಆರ್. ಸ್ವಾಮಿನಾಥನ್ ಒಬ್ಬ ವಿಚಿತ್ರ ವ್ಯಕ್ತಿ. ನಾನು ಇದನ್ನು ಹೇಳಲು ಕಾರಣ ಸಂವಿಧಾನದ ಪ್ರಕಾರ ನಾವು ನ್ಯಾಯಾಧೀಶರಾದಾಗ ‘ನಾನು ಭಯ ಅಥವಾ ಪಕ್ಷಪಾತವಿಲ್ಲದೆ, ದ್ವೇಷವಿಲ್ಲದೆ ಸಂವಿಧಾನವನ್ನು ಎತ್ತಿಹಿಡಿಯುತ್ತೇನೆ’ ಎಂದು ನಾವು ದೃಢವಾಗಿ ಪ್ರಮಾಣ ವಚನ ಸ್ವೀಕರಿಸಬೇಕು. ಆದರೆ, ಸ್ವಾಮಿನಾಥನ್ ಅದನ್ನು ಉಲ್ಲಂಘಿಸಿದ್ದಾರೆ. ಅವರ ಹೇಳಿಕೆಗಳು ಪ್ರಮಾಣ ವಚನಕ್ಕೆ ವಿರುದ್ಧವಾಗಿದೆ” ಎಂದು ಚಂದ್ರು ಹೇಳಿದ್ದಾರೆ. 

ನ್ಯಾಯಮೂರ್ತಿ ಸ್ವಾಮಿನಾಥನ್ ಅವರು ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ ಮತ್ತು ಭಾರತದ ಸಂವಿಧಾನದ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. “ನಮ್ಮ ಸಂವಿಧಾನ 1935ರ ಭಾರತ ಸರ್ಕಾರಿ ಕಾಯ್ದೆಯಿಂದ ನಕಲು ಮಾಡಿ ಪುಸ್ತಕವಾಗಿದೆ” ಎಂದು ಹೇಳಿದ್ದಾರೆ ಎಂದು ಚಂದ್ರು ಆರೋಪಿಸಿದ್ದಾರೆ.

“ಹರಿಯಾಣದಲ್ಲಿ ನಡೆದ ಆರ್‌ಎಸ್‌ಎಸ್ ಸಭೆಯಲ್ಲಿ, ಭಾರತದ ಸಂವಿಧಾನವನ್ನು 1935ರ ಕಾನೂನಿನಿಂದ ನಕಲು ಮಾಡಲಾಗಿದೆ ಮತ್ತು ನಮ್ಮ ಸಂವಿಧಾನದಲ್ಲಿ ಯಾವುದೇ ಸ್ವಂತಿಕೆ ಇಲ್ಲ ಎಂದು ಸ್ವಾಮಿನಾಥನ್ ಹೇಳಿದ್ದಾರೆ. ಅಂತಹ ಜನರಿಗೆ ಪ್ರತಿಕ್ರಿಯಿಸಲು ಸಮಯ ವ್ಯರ್ಥ ಮಾಡುವುದಿಲ್ಲ ಎಂದು ಡಾ. ಅಂಬೇಡ್ಕರ್ ಅವರೇ ಹೇಳಿದ್ದಾರೆ. ಆದರೂ, ಹಾಲಿ ಹೈಕೋರ್ಟ್ ನ್ಯಾಯಾಧೀಶರು ಈ ರೀತಿ ಮಾತನಾಡುತ್ತಾರೆ. ಅವರ ವಿರುದ್ದ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ” ಎಂದು ಚಂದ್ರು ಬೇಸರ ವ್ಯಕ್ತಪಡಿಸಿದ್ದಾರೆ.

ಹಾಲಿ ನ್ಯಾಯಾಧೀಶರ ಇಂತಹ ಮಾತುಗಳು ಡಾ. ಬಿ.ಆರ್. ಅಂಬೇಡ್ಕರ್ ರೂಪಿಸಿದ ಸಂವಿಧಾನದ ಮೂಲ ಉದ್ದೇಶವನ್ನೇ ಕೆಡಿಸುತ್ತವೆ. ಸಂವಿಧಾನವು ಎಲ್ಲರಿಗೂ ಸಮಾನತೆಯನ್ನು ನೀಡಿ, ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸುವ ಗುರಿಯನ್ನು ಹೊಂದಿದೆ ಎಂದು ನ್ಯಾಯಮೂರ್ತಿ ಚಂದ್ದು ಹೇಳಿದ್ದಾರೆ.

“ಕಾನೂನಿನ ನಿಯಮವನ್ನು ಉಲ್ಲಂಘಿಸುವ ಮತ್ತು ಅಂಬೇಡ್ಕರ್ ಅವರ ಪರಂಪರೆಯನ್ನು ನಿರಾಕರಿಸುವವರನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ” ಎಂದು ಚಂದ್ರು ಗುಡುಗಿದ್ದಾರೆ

“ಸಮಾನತೆ ಮತ್ತು ಶ್ರೇಣಿಕೃತ ವ್ಯವಸ್ಥೆಯ ನಡುವಿನ ದೊಡ್ಡ ಸೈದ್ಧಾಂತಿಕ ಹೋರಾಟ”ಕ್ಕೆ ಸಿದ್ಧರಾಗುವಂತೆ ಅವರು ವಕೀಲರು ಮತ್ತು ನಾಗರಿಕರಿಗೆ ಕರೆ ನೀಡಿದ್ದಾರೆ.

ನ್ಯಾಯಮೂರ್ತಿ ಚಂದ್ರು ಅವರು ಭಾಗವಹಿಸಿದ್ದ ಕಾರ್ಯಕ್ರಮ ಚೆನ್ನೈನ ವಲ್ಲುವರ್ ಕೊಟ್ಟಂನಲ್ಲಿ ನಡೆದಿದೆ. ಇದನ್ನು ‘ಸಮತುವ ವಾಝ್ಕಾರಿಣ್ಯರ್ ಸಂಗಮ್’ ಮತ್ತು ‘ವಿಸಿಕೆ ವಕೀಲರ ವಿಭಾಗ’ ಜಂಟಿಯಾಗಿ ಆಯೋಜಿಸಿತ್ತು. ಲೋಕಸಭಾ ಸಂಸದ ಥೋಲ್ ತಿರುಮಾವಲವನ್ ನೇತೃತ್ವದ ವಿಸಿಕೆ, ಆಡಳಿತಾರೂಢ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡ ದಲಿತ-ಹಕ್ಕುಗಳ ರಾಜಕೀಯ ಪಕ್ಷವಾಗಿದೆ.

ಮಾಜಿ ನ್ಯಾಯಾಧೀಶರಾದ ನ್ಯಾಯಮೂರ್ತಿ ಡಿ ಹರಿಪರಂತಮನ್ ಮತ್ತು ನ್ಯಾಯಮೂರ್ತಿ ಕೆ ಚಂದ್ರು ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿದ್ದರು. ವಿಸಿಕೆ ಜೊತೆ ಸಂಯೋಜಿತವಾಗಿರುವ ಎಳಿಲ್ ಕ್ಯಾರೋಲಿನ್, ಪಿ ತಮಿಳಿನಿಯನ್ ಮತ್ತು ಎಸ್‌ಎ ರಜನಿಕಾಂತ್ ಸೇರಿದಂತೆ ಇತರರು ಭಾಗವಹಿಸಿದ್ದರು.

ಕುತೂಹಲಕಾರಿಯಾಗಿ, ಕಾರ್ಯಕ್ರಮದ ಪ್ರಚಾರಕ್ಕಾಗಿ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿಆರ್ ಗವಾಯಿ ಅವರ ಫೋಟೋ ಮತ್ತು ವಿಸಿಕೆ ಲೋಗೋವನ್ನು ಒಳಗೊಂಡ ಪೋಸ್ಟರ್ ಅನ್ನು ಮದ್ರಾಸ್ ಹೈಕೋರ್ಟ್‌ನ ಹೊರಗೆ ಪ್ರದರ್ಶಿಸಲಾಗಿತ್ತು. ಆದರೆ, ಸಿಜೆಐ ಕಾರ್ಯಕ್ರಮದಲ್ಲಿ ಭಾಗವಹಿಸುವ ಯಾವುದೇ ಸೂಚನೆ ಇರಲಿಲ್ಲ. ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಲಾದ ವಿಡಿಯೋ ಸಿಜೆಐ ಗವಾಯಿ ಅವರು ಕಾರ್ಯಕ್ರಮಕ್ಕೆ ಹಾಜರಾಗಿಲ್ಲ ಎಂಬುವುದನ್ನು ದೃಢಪಡಿಸಿದೆ.

ನ್ಯಾಯಮೂರ್ತಿ ಚಂದ್ರು ಅವರ ತನ್ನ ಭಾಷಣದಲ್ಲಿ ಪರಿಶಿಷ್ಟ ಜಾತಿ ಸಮುದಾಯದವರಾದ ಸಿಜೆಐ ಬಿ.ಆರ್ ಗವಾಯಿ ಅವರ ಮೇಲಿನ ದಾಳಿ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ನ್ಯಾಯಾಂಗದ ಉನ್ನತ ಹಂತಗಳಲ್ಲಿಯೂ ಕೂಡ ದಲಿತರಿಗೆ ಗೌರವ ಇಲ್ಲ ಎನ್ನುವುದನ್ನು ಚಂದ್ರು ಖಂಡಿಸಿದ್ದಾರೆ.

ಜಾತಿ ವಿರೋಧಿ ಚಳವಳಿಯಲ್ಲಿ ಪಾದರಕ್ಷೆ ಅಥವಾ ಚಪ್ಪಲಿ ಸಾಂಸ್ಕೃತಿಕ ಮಹತ್ವವನ್ನು ಹೊಂದಿದ್ದು, ಅದನ್ನು ಕೇವಲ ಅವಮಾನವೆಂದು ನೋಡಬಾರದು ಎಂದು ಚಂದ್ರು ಪ್ರತಿಪಾದಿಸಿದ್ದಾರೆ.

“ಒಂದು ವೇಳೆ ಪಾದರಕ್ಷೆಯನ್ನು ಎಸೆದರೆ ಅದು ಅಗೌರವವಲ್ಲ. ಪಾದರಕ್ಷೆಗಳನ್ನು ಅಗೌರವಿಸುವವರು ಪ್ರಬಲ ಜಾತಿಯ ಜನರು. ನಾವು ಪಾದರಕ್ಷೆಗಳನ್ನು ಧರಿಸುತ್ತೇವೆ; ಅದರಿಂದ ನಾವು ಏನು ಬೇಕಾದರೂ ಮಾಡುತ್ತೇವೆ” ಎಂದು ಪೆರಿಯಾರ್ ಇ.ವಿ ರಾಮಸಾಮಿ ಮೇಲೆ ಚಪ್ಪಲಿ ಎಸೆದಾಗ ರಾಮಸ್ವಾಮಿ ನೀಡಿದ ಹೇಳಿಕೆಯನ್ನು ಚಂದ್ರು ಉಲ್ಲೇಖಿಸಿದ್ದಾರೆ.

ಚಪ್ಪಲಿ ಎಸೆದಾಗ ಅದನ್ನು ಎತ್ತಿಕೊಂಡು ಇನ್ನೊಂದು ಜೋಡಿ ಧರಿಸುವುದಾಗಿ ಪೆರಿಯಾರ್ ಹೇಳಿದರು ಎಂದು ನೆನಪಿಸಿದ “ಚಂದ್ರು, ಪಾದರಕ್ಷೆಗಳ ಸಂಕೇತವು ಅವಮಾನಕ್ಕಿಂತ ಸಮಾನತೆ ಮತ್ತು ಪ್ರತಿರೋಧವನ್ನು ಪ್ರತಿನಿಧಿಸುತ್ತದೆ” ಎಂದಿದ್ದಾರೆ. 

“ಭಾರತದ ಹಾಲಿ ಮುಖ್ಯ ನ್ಯಾಯಮೂರ್ತಿಯೊಬ್ಬರ ಮೇಲೆ ನ್ಯಾಯಾಲಯದೊಳಗಡೆಯೇ ಶೂ ಎಸೆದಾಗ, ಅದು ಮೌನವಾಗುವ ಬದಲು ರಾಷ್ಟ್ರೀಯ ಆಕ್ರೋಶಕ್ಕೆ ಕಾರಣವಾಗಬೇಕಿತ್ತು. ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠದ ಬಳಿ ಅವರ ಮೇಲೆಯೇ ಶೂ ಎಸೆಯುವಾಗ ನಾವು ಸುಮ್ಮನಿದ್ದರೆ, ಅದು ನ್ಯಾಯಾಂಗದ ಮೇಲೆ ನಮಗಿರುವ ಗೌರವದ ಕುರಿತು ಯಾವ ಸಂದೇಶ ನೀಡುತ್ತದೆ” ಎಂದು ಚಂದ್ರು ಪ್ರಶ್ನಿಸಿದ್ದಾರೆ.

ಈ ವರ್ಷದ ಆರಂಭದಲ್ಲಿ ಸಿಜೆಐ ಗವಾಯಿ ಅವರು ಮಹಾರಾಷ್ಟ್ರಕ್ಕೆ ಭೇಟಿ ನೀಡಿದಾಗ ಅಧಿಕೃತ ಶಿಷ್ಟಾಚಾರದ ವೈಫಲ್ಯವನ್ನು ಚಂದ್ರು ಟೀಕಿಸಿದ್ದಾರೆ. ಹಿರಿಯ ಅಧಿಕಾರಿಗಳು ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವೀಕರಿಸಿಲ್ಲ ಎಂದು ದೂರಿದ್ದಾರೆ.

“ಪರಿಶಿಷ್ಟ ಜಾತಿಯ ವ್ಯಕ್ತಿಯೊಬ್ಬರು ಭಾರತದ ಮುಖ್ಯ ನ್ಯಾಯಾಧೀಶರಾದರೂ, ಅವರನ್ನು ಅವರ ಹುದ್ದೆಗೆ ಸಲ್ಲುವ ಘನತೆಯಿಂದ ನಡೆಸಿಕೊಳ್ಳುತ್ತಿಲ್ಲ” ಎಂದಿದ್ದಾರೆ.

Courtesy: barandbench.com

ಮುಂದಿನ ಸಿಜೆಐ ನೇಮಕ ಪ್ರಕ್ರಿಯೆಗೆ ಚಾಲನೆ; ನ.3 ರಂದು ಬಿ.ಆರ್. ಗವಾಯಿ ನಿವೃತ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...