Homeಮುಖಪುಟಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಮದ್ರಾಸ್ ಹೈಕೋರ್ಟ್ ನ್ಯಾ. ಸ್ವಾಮಿನಾಥನ್ ಸಂವಿಧಾನದ ವಿರುದ್ದ ಮಾತನಾಡಿದ್ದಾರೆ: ನಿವೃತ್ತ ನ್ಯಾ. ಕೆ....

ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಮದ್ರಾಸ್ ಹೈಕೋರ್ಟ್ ನ್ಯಾ. ಸ್ವಾಮಿನಾಥನ್ ಸಂವಿಧಾನದ ವಿರುದ್ದ ಮಾತನಾಡಿದ್ದಾರೆ: ನಿವೃತ್ತ ನ್ಯಾ. ಕೆ. ಚಂದ್ರು

- Advertisement -
- Advertisement -

ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರು ಜಾತ್ಯತೀತತೆ ಮತ್ತು ಕಾನೂನಿನ ನಿಯಮಕ್ಕೆ ವಿರುದ್ಧವಾದ ವಿಚಾರಗಳ ಪರವಾಗಿ ಬ್ಯಾಟಿಂಗ್ ಮಾಡುವ ಮೂಲಕ ಸಂವಿಧಾನಕ್ಕೆ ಮತ್ತು ತಮ್ಮ ಪ್ರಮಾಣವಚನಕ್ಕೆ ದ್ರೋಹ ಎಸಗಿದ್ದಾರೆ ಎಂದು ನಿವೃತ್ತ ನ್ಯಾಯಮೂರ್ತಿ ಕೆ. ಚಂದ್ರು ಅಕ್ಟೋಬರ್ 22ರಂದು ಚೆನ್ನೈನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಹಾಲಿ ನ್ಯಾಯಾಧೀಶರ ವಿರುದ್ಧ ಕಟು ಟೀಕೆ ಮಾಡಿದ ನ್ಯಾಯಮೂರ್ತಿ ಚಂದ್ರು, ನ್ಯಾಯಮೂರ್ತಿ ಸ್ವಾಮಿನಾಥನ್ ಅವರನ್ನು ಒಬ್ಬ ‘ವಿಚಿತ್ರ ವ್ಯಕ್ತಿ’ ಎಂದಿದ್ದು, ಅವರು ನ್ಯಾಯಾಧೀಶರಾಗಿ ಸಂವಿಧಾನವನ್ನು ಎತ್ತಿಹಿಡಿಯುವುದಾಗಿ ಪ್ರಮಾಣವಚನ ಸ್ವೀಕರಿಸಿದ್ದರೂ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕಾರ್ಯಕ್ರಮದಲ್ಲಿ ಸಂವಿಧಾನದ ವಿರುದ್ಧ ಮಾತನಾಡಿದ್ದಾರೆ ಎಂದು ತಿಳಿಸಿದ್ದಾರೆ.

“ಸಂವಿಧಾನ ಮತ್ತು ಸುಪ್ರೀಂ ಕೋರ್ಟ್‌ನ ರಕ್ಷಣೆ” ಎಂಬ ಶೀರ್ಷಿಕೆಯಡಿ ವಿಡುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ವಕೀಲರ ವಿಭಾಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನ್ಯಾಯಮೂರ್ತಿ ಚಂದ್ರು ಗಂಭೀರ ಆರೋಪಗಳನ್ನು ಮಾಡಿದ್ದಾರೆ.

“ಆ ಜಿ.ಆರ್. ಸ್ವಾಮಿನಾಥನ್ ಒಬ್ಬ ವಿಚಿತ್ರ ವ್ಯಕ್ತಿ. ನಾನು ಇದನ್ನು ಹೇಳಲು ಕಾರಣ ಸಂವಿಧಾನದ ಪ್ರಕಾರ ನಾವು ನ್ಯಾಯಾಧೀಶರಾದಾಗ ‘ನಾನು ಭಯ ಅಥವಾ ಪಕ್ಷಪಾತವಿಲ್ಲದೆ, ದ್ವೇಷವಿಲ್ಲದೆ ಸಂವಿಧಾನವನ್ನು ಎತ್ತಿಹಿಡಿಯುತ್ತೇನೆ’ ಎಂದು ನಾವು ದೃಢವಾಗಿ ಪ್ರಮಾಣ ವಚನ ಸ್ವೀಕರಿಸಬೇಕು. ಆದರೆ, ಸ್ವಾಮಿನಾಥನ್ ಅದನ್ನು ಉಲ್ಲಂಘಿಸಿದ್ದಾರೆ. ಅವರ ಹೇಳಿಕೆಗಳು ಪ್ರಮಾಣ ವಚನಕ್ಕೆ ವಿರುದ್ಧವಾಗಿದೆ” ಎಂದು ಚಂದ್ರು ಹೇಳಿದ್ದಾರೆ. 

ನ್ಯಾಯಮೂರ್ತಿ ಸ್ವಾಮಿನಾಥನ್ ಅವರು ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ ಮತ್ತು ಭಾರತದ ಸಂವಿಧಾನದ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. “ನಮ್ಮ ಸಂವಿಧಾನ 1935ರ ಭಾರತ ಸರ್ಕಾರಿ ಕಾಯ್ದೆಯಿಂದ ನಕಲು ಮಾಡಿ ಪುಸ್ತಕವಾಗಿದೆ” ಎಂದು ಹೇಳಿದ್ದಾರೆ ಎಂದು ಚಂದ್ರು ಆರೋಪಿಸಿದ್ದಾರೆ.

“ಹರಿಯಾಣದಲ್ಲಿ ನಡೆದ ಆರ್‌ಎಸ್‌ಎಸ್ ಸಭೆಯಲ್ಲಿ, ಭಾರತದ ಸಂವಿಧಾನವನ್ನು 1935ರ ಕಾನೂನಿನಿಂದ ನಕಲು ಮಾಡಲಾಗಿದೆ ಮತ್ತು ನಮ್ಮ ಸಂವಿಧಾನದಲ್ಲಿ ಯಾವುದೇ ಸ್ವಂತಿಕೆ ಇಲ್ಲ ಎಂದು ಸ್ವಾಮಿನಾಥನ್ ಹೇಳಿದ್ದಾರೆ. ಅಂತಹ ಜನರಿಗೆ ಪ್ರತಿಕ್ರಿಯಿಸಲು ಸಮಯ ವ್ಯರ್ಥ ಮಾಡುವುದಿಲ್ಲ ಎಂದು ಡಾ. ಅಂಬೇಡ್ಕರ್ ಅವರೇ ಹೇಳಿದ್ದಾರೆ. ಆದರೂ, ಹಾಲಿ ಹೈಕೋರ್ಟ್ ನ್ಯಾಯಾಧೀಶರು ಈ ರೀತಿ ಮಾತನಾಡುತ್ತಾರೆ. ಅವರ ವಿರುದ್ದ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ” ಎಂದು ಚಂದ್ರು ಬೇಸರ ವ್ಯಕ್ತಪಡಿಸಿದ್ದಾರೆ.

ಹಾಲಿ ನ್ಯಾಯಾಧೀಶರ ಇಂತಹ ಮಾತುಗಳು ಡಾ. ಬಿ.ಆರ್. ಅಂಬೇಡ್ಕರ್ ರೂಪಿಸಿದ ಸಂವಿಧಾನದ ಮೂಲ ಉದ್ದೇಶವನ್ನೇ ಕೆಡಿಸುತ್ತವೆ. ಸಂವಿಧಾನವು ಎಲ್ಲರಿಗೂ ಸಮಾನತೆಯನ್ನು ನೀಡಿ, ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸುವ ಗುರಿಯನ್ನು ಹೊಂದಿದೆ ಎಂದು ನ್ಯಾಯಮೂರ್ತಿ ಚಂದ್ದು ಹೇಳಿದ್ದಾರೆ.

“ಕಾನೂನಿನ ನಿಯಮವನ್ನು ಉಲ್ಲಂಘಿಸುವ ಮತ್ತು ಅಂಬೇಡ್ಕರ್ ಅವರ ಪರಂಪರೆಯನ್ನು ನಿರಾಕರಿಸುವವರನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ” ಎಂದು ಚಂದ್ರು ಗುಡುಗಿದ್ದಾರೆ

“ಸಮಾನತೆ ಮತ್ತು ಶ್ರೇಣಿಕೃತ ವ್ಯವಸ್ಥೆಯ ನಡುವಿನ ದೊಡ್ಡ ಸೈದ್ಧಾಂತಿಕ ಹೋರಾಟ”ಕ್ಕೆ ಸಿದ್ಧರಾಗುವಂತೆ ಅವರು ವಕೀಲರು ಮತ್ತು ನಾಗರಿಕರಿಗೆ ಕರೆ ನೀಡಿದ್ದಾರೆ.

ನ್ಯಾಯಮೂರ್ತಿ ಚಂದ್ರು ಅವರು ಭಾಗವಹಿಸಿದ್ದ ಕಾರ್ಯಕ್ರಮ ಚೆನ್ನೈನ ವಲ್ಲುವರ್ ಕೊಟ್ಟಂನಲ್ಲಿ ನಡೆದಿದೆ. ಇದನ್ನು ‘ಸಮತುವ ವಾಝ್ಕಾರಿಣ್ಯರ್ ಸಂಗಮ್’ ಮತ್ತು ‘ವಿಸಿಕೆ ವಕೀಲರ ವಿಭಾಗ’ ಜಂಟಿಯಾಗಿ ಆಯೋಜಿಸಿತ್ತು. ಲೋಕಸಭಾ ಸಂಸದ ಥೋಲ್ ತಿರುಮಾವಲವನ್ ನೇತೃತ್ವದ ವಿಸಿಕೆ, ಆಡಳಿತಾರೂಢ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡ ದಲಿತ-ಹಕ್ಕುಗಳ ರಾಜಕೀಯ ಪಕ್ಷವಾಗಿದೆ.

ಮಾಜಿ ನ್ಯಾಯಾಧೀಶರಾದ ನ್ಯಾಯಮೂರ್ತಿ ಡಿ ಹರಿಪರಂತಮನ್ ಮತ್ತು ನ್ಯಾಯಮೂರ್ತಿ ಕೆ ಚಂದ್ರು ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿದ್ದರು. ವಿಸಿಕೆ ಜೊತೆ ಸಂಯೋಜಿತವಾಗಿರುವ ಎಳಿಲ್ ಕ್ಯಾರೋಲಿನ್, ಪಿ ತಮಿಳಿನಿಯನ್ ಮತ್ತು ಎಸ್‌ಎ ರಜನಿಕಾಂತ್ ಸೇರಿದಂತೆ ಇತರರು ಭಾಗವಹಿಸಿದ್ದರು.

ಕುತೂಹಲಕಾರಿಯಾಗಿ, ಕಾರ್ಯಕ್ರಮದ ಪ್ರಚಾರಕ್ಕಾಗಿ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿಆರ್ ಗವಾಯಿ ಅವರ ಫೋಟೋ ಮತ್ತು ವಿಸಿಕೆ ಲೋಗೋವನ್ನು ಒಳಗೊಂಡ ಪೋಸ್ಟರ್ ಅನ್ನು ಮದ್ರಾಸ್ ಹೈಕೋರ್ಟ್‌ನ ಹೊರಗೆ ಪ್ರದರ್ಶಿಸಲಾಗಿತ್ತು. ಆದರೆ, ಸಿಜೆಐ ಕಾರ್ಯಕ್ರಮದಲ್ಲಿ ಭಾಗವಹಿಸುವ ಯಾವುದೇ ಸೂಚನೆ ಇರಲಿಲ್ಲ. ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಲಾದ ವಿಡಿಯೋ ಸಿಜೆಐ ಗವಾಯಿ ಅವರು ಕಾರ್ಯಕ್ರಮಕ್ಕೆ ಹಾಜರಾಗಿಲ್ಲ ಎಂಬುವುದನ್ನು ದೃಢಪಡಿಸಿದೆ.

ನ್ಯಾಯಮೂರ್ತಿ ಚಂದ್ರು ಅವರ ತನ್ನ ಭಾಷಣದಲ್ಲಿ ಪರಿಶಿಷ್ಟ ಜಾತಿ ಸಮುದಾಯದವರಾದ ಸಿಜೆಐ ಬಿ.ಆರ್ ಗವಾಯಿ ಅವರ ಮೇಲಿನ ದಾಳಿ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ನ್ಯಾಯಾಂಗದ ಉನ್ನತ ಹಂತಗಳಲ್ಲಿಯೂ ಕೂಡ ದಲಿತರಿಗೆ ಗೌರವ ಇಲ್ಲ ಎನ್ನುವುದನ್ನು ಚಂದ್ರು ಖಂಡಿಸಿದ್ದಾರೆ.

ಜಾತಿ ವಿರೋಧಿ ಚಳವಳಿಯಲ್ಲಿ ಪಾದರಕ್ಷೆ ಅಥವಾ ಚಪ್ಪಲಿ ಸಾಂಸ್ಕೃತಿಕ ಮಹತ್ವವನ್ನು ಹೊಂದಿದ್ದು, ಅದನ್ನು ಕೇವಲ ಅವಮಾನವೆಂದು ನೋಡಬಾರದು ಎಂದು ಚಂದ್ರು ಪ್ರತಿಪಾದಿಸಿದ್ದಾರೆ.

“ಒಂದು ವೇಳೆ ಪಾದರಕ್ಷೆಯನ್ನು ಎಸೆದರೆ ಅದು ಅಗೌರವವಲ್ಲ. ಪಾದರಕ್ಷೆಗಳನ್ನು ಅಗೌರವಿಸುವವರು ಪ್ರಬಲ ಜಾತಿಯ ಜನರು. ನಾವು ಪಾದರಕ್ಷೆಗಳನ್ನು ಧರಿಸುತ್ತೇವೆ; ಅದರಿಂದ ನಾವು ಏನು ಬೇಕಾದರೂ ಮಾಡುತ್ತೇವೆ” ಎಂದು ಪೆರಿಯಾರ್ ಇ.ವಿ ರಾಮಸಾಮಿ ಮೇಲೆ ಚಪ್ಪಲಿ ಎಸೆದಾಗ ರಾಮಸ್ವಾಮಿ ನೀಡಿದ ಹೇಳಿಕೆಯನ್ನು ಚಂದ್ರು ಉಲ್ಲೇಖಿಸಿದ್ದಾರೆ.

ಚಪ್ಪಲಿ ಎಸೆದಾಗ ಅದನ್ನು ಎತ್ತಿಕೊಂಡು ಇನ್ನೊಂದು ಜೋಡಿ ಧರಿಸುವುದಾಗಿ ಪೆರಿಯಾರ್ ಹೇಳಿದರು ಎಂದು ನೆನಪಿಸಿದ “ಚಂದ್ರು, ಪಾದರಕ್ಷೆಗಳ ಸಂಕೇತವು ಅವಮಾನಕ್ಕಿಂತ ಸಮಾನತೆ ಮತ್ತು ಪ್ರತಿರೋಧವನ್ನು ಪ್ರತಿನಿಧಿಸುತ್ತದೆ” ಎಂದಿದ್ದಾರೆ. 

“ಭಾರತದ ಹಾಲಿ ಮುಖ್ಯ ನ್ಯಾಯಮೂರ್ತಿಯೊಬ್ಬರ ಮೇಲೆ ನ್ಯಾಯಾಲಯದೊಳಗಡೆಯೇ ಶೂ ಎಸೆದಾಗ, ಅದು ಮೌನವಾಗುವ ಬದಲು ರಾಷ್ಟ್ರೀಯ ಆಕ್ರೋಶಕ್ಕೆ ಕಾರಣವಾಗಬೇಕಿತ್ತು. ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠದ ಬಳಿ ಅವರ ಮೇಲೆಯೇ ಶೂ ಎಸೆಯುವಾಗ ನಾವು ಸುಮ್ಮನಿದ್ದರೆ, ಅದು ನ್ಯಾಯಾಂಗದ ಮೇಲೆ ನಮಗಿರುವ ಗೌರವದ ಕುರಿತು ಯಾವ ಸಂದೇಶ ನೀಡುತ್ತದೆ” ಎಂದು ಚಂದ್ರು ಪ್ರಶ್ನಿಸಿದ್ದಾರೆ.

ಈ ವರ್ಷದ ಆರಂಭದಲ್ಲಿ ಸಿಜೆಐ ಗವಾಯಿ ಅವರು ಮಹಾರಾಷ್ಟ್ರಕ್ಕೆ ಭೇಟಿ ನೀಡಿದಾಗ ಅಧಿಕೃತ ಶಿಷ್ಟಾಚಾರದ ವೈಫಲ್ಯವನ್ನು ಚಂದ್ರು ಟೀಕಿಸಿದ್ದಾರೆ. ಹಿರಿಯ ಅಧಿಕಾರಿಗಳು ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವೀಕರಿಸಿಲ್ಲ ಎಂದು ದೂರಿದ್ದಾರೆ.

“ಪರಿಶಿಷ್ಟ ಜಾತಿಯ ವ್ಯಕ್ತಿಯೊಬ್ಬರು ಭಾರತದ ಮುಖ್ಯ ನ್ಯಾಯಾಧೀಶರಾದರೂ, ಅವರನ್ನು ಅವರ ಹುದ್ದೆಗೆ ಸಲ್ಲುವ ಘನತೆಯಿಂದ ನಡೆಸಿಕೊಳ್ಳುತ್ತಿಲ್ಲ” ಎಂದಿದ್ದಾರೆ.

Courtesy: barandbench.com

ಮುಂದಿನ ಸಿಜೆಐ ನೇಮಕ ಪ್ರಕ್ರಿಯೆಗೆ ಚಾಲನೆ; ನ.3 ರಂದು ಬಿ.ಆರ್. ಗವಾಯಿ ನಿವೃತ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...