Homeಮುಖಪುಟಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಮದ್ರಾಸ್ ಹೈಕೋರ್ಟ್ ನ್ಯಾ. ಸ್ವಾಮಿನಾಥನ್ ಸಂವಿಧಾನದ ವಿರುದ್ದ ಮಾತನಾಡಿದ್ದಾರೆ: ನಿವೃತ್ತ ನ್ಯಾ. ಕೆ....

ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಮದ್ರಾಸ್ ಹೈಕೋರ್ಟ್ ನ್ಯಾ. ಸ್ವಾಮಿನಾಥನ್ ಸಂವಿಧಾನದ ವಿರುದ್ದ ಮಾತನಾಡಿದ್ದಾರೆ: ನಿವೃತ್ತ ನ್ಯಾ. ಕೆ. ಚಂದ್ರು

- Advertisement -
- Advertisement -

ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರು ಜಾತ್ಯತೀತತೆ ಮತ್ತು ಕಾನೂನಿನ ನಿಯಮಕ್ಕೆ ವಿರುದ್ಧವಾದ ವಿಚಾರಗಳ ಪರವಾಗಿ ಬ್ಯಾಟಿಂಗ್ ಮಾಡುವ ಮೂಲಕ ಸಂವಿಧಾನಕ್ಕೆ ಮತ್ತು ತಮ್ಮ ಪ್ರಮಾಣವಚನಕ್ಕೆ ದ್ರೋಹ ಎಸಗಿದ್ದಾರೆ ಎಂದು ನಿವೃತ್ತ ನ್ಯಾಯಮೂರ್ತಿ ಕೆ. ಚಂದ್ರು ಅಕ್ಟೋಬರ್ 22ರಂದು ಚೆನ್ನೈನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಹಾಲಿ ನ್ಯಾಯಾಧೀಶರ ವಿರುದ್ಧ ಕಟು ಟೀಕೆ ಮಾಡಿದ ನ್ಯಾಯಮೂರ್ತಿ ಚಂದ್ರು, ನ್ಯಾಯಮೂರ್ತಿ ಸ್ವಾಮಿನಾಥನ್ ಅವರನ್ನು ಒಬ್ಬ ‘ವಿಚಿತ್ರ ವ್ಯಕ್ತಿ’ ಎಂದಿದ್ದು, ಅವರು ನ್ಯಾಯಾಧೀಶರಾಗಿ ಸಂವಿಧಾನವನ್ನು ಎತ್ತಿಹಿಡಿಯುವುದಾಗಿ ಪ್ರಮಾಣವಚನ ಸ್ವೀಕರಿಸಿದ್ದರೂ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕಾರ್ಯಕ್ರಮದಲ್ಲಿ ಸಂವಿಧಾನದ ವಿರುದ್ಧ ಮಾತನಾಡಿದ್ದಾರೆ ಎಂದು ತಿಳಿಸಿದ್ದಾರೆ.

“ಸಂವಿಧಾನ ಮತ್ತು ಸುಪ್ರೀಂ ಕೋರ್ಟ್‌ನ ರಕ್ಷಣೆ” ಎಂಬ ಶೀರ್ಷಿಕೆಯಡಿ ವಿಡುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ವಕೀಲರ ವಿಭಾಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನ್ಯಾಯಮೂರ್ತಿ ಚಂದ್ರು ಗಂಭೀರ ಆರೋಪಗಳನ್ನು ಮಾಡಿದ್ದಾರೆ.

“ಆ ಜಿ.ಆರ್. ಸ್ವಾಮಿನಾಥನ್ ಒಬ್ಬ ವಿಚಿತ್ರ ವ್ಯಕ್ತಿ. ನಾನು ಇದನ್ನು ಹೇಳಲು ಕಾರಣ ಸಂವಿಧಾನದ ಪ್ರಕಾರ ನಾವು ನ್ಯಾಯಾಧೀಶರಾದಾಗ ‘ನಾನು ಭಯ ಅಥವಾ ಪಕ್ಷಪಾತವಿಲ್ಲದೆ, ದ್ವೇಷವಿಲ್ಲದೆ ಸಂವಿಧಾನವನ್ನು ಎತ್ತಿಹಿಡಿಯುತ್ತೇನೆ’ ಎಂದು ನಾವು ದೃಢವಾಗಿ ಪ್ರಮಾಣ ವಚನ ಸ್ವೀಕರಿಸಬೇಕು. ಆದರೆ, ಸ್ವಾಮಿನಾಥನ್ ಅದನ್ನು ಉಲ್ಲಂಘಿಸಿದ್ದಾರೆ. ಅವರ ಹೇಳಿಕೆಗಳು ಪ್ರಮಾಣ ವಚನಕ್ಕೆ ವಿರುದ್ಧವಾಗಿದೆ” ಎಂದು ಚಂದ್ರು ಹೇಳಿದ್ದಾರೆ. 

ನ್ಯಾಯಮೂರ್ತಿ ಸ್ವಾಮಿನಾಥನ್ ಅವರು ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ ಮತ್ತು ಭಾರತದ ಸಂವಿಧಾನದ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. “ನಮ್ಮ ಸಂವಿಧಾನ 1935ರ ಭಾರತ ಸರ್ಕಾರಿ ಕಾಯ್ದೆಯಿಂದ ನಕಲು ಮಾಡಿ ಪುಸ್ತಕವಾಗಿದೆ” ಎಂದು ಹೇಳಿದ್ದಾರೆ ಎಂದು ಚಂದ್ರು ಆರೋಪಿಸಿದ್ದಾರೆ.

“ಹರಿಯಾಣದಲ್ಲಿ ನಡೆದ ಆರ್‌ಎಸ್‌ಎಸ್ ಸಭೆಯಲ್ಲಿ, ಭಾರತದ ಸಂವಿಧಾನವನ್ನು 1935ರ ಕಾನೂನಿನಿಂದ ನಕಲು ಮಾಡಲಾಗಿದೆ ಮತ್ತು ನಮ್ಮ ಸಂವಿಧಾನದಲ್ಲಿ ಯಾವುದೇ ಸ್ವಂತಿಕೆ ಇಲ್ಲ ಎಂದು ಸ್ವಾಮಿನಾಥನ್ ಹೇಳಿದ್ದಾರೆ. ಅಂತಹ ಜನರಿಗೆ ಪ್ರತಿಕ್ರಿಯಿಸಲು ಸಮಯ ವ್ಯರ್ಥ ಮಾಡುವುದಿಲ್ಲ ಎಂದು ಡಾ. ಅಂಬೇಡ್ಕರ್ ಅವರೇ ಹೇಳಿದ್ದಾರೆ. ಆದರೂ, ಹಾಲಿ ಹೈಕೋರ್ಟ್ ನ್ಯಾಯಾಧೀಶರು ಈ ರೀತಿ ಮಾತನಾಡುತ್ತಾರೆ. ಅವರ ವಿರುದ್ದ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ” ಎಂದು ಚಂದ್ರು ಬೇಸರ ವ್ಯಕ್ತಪಡಿಸಿದ್ದಾರೆ.

ಹಾಲಿ ನ್ಯಾಯಾಧೀಶರ ಇಂತಹ ಮಾತುಗಳು ಡಾ. ಬಿ.ಆರ್. ಅಂಬೇಡ್ಕರ್ ರೂಪಿಸಿದ ಸಂವಿಧಾನದ ಮೂಲ ಉದ್ದೇಶವನ್ನೇ ಕೆಡಿಸುತ್ತವೆ. ಸಂವಿಧಾನವು ಎಲ್ಲರಿಗೂ ಸಮಾನತೆಯನ್ನು ನೀಡಿ, ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸುವ ಗುರಿಯನ್ನು ಹೊಂದಿದೆ ಎಂದು ನ್ಯಾಯಮೂರ್ತಿ ಚಂದ್ದು ಹೇಳಿದ್ದಾರೆ.

“ಕಾನೂನಿನ ನಿಯಮವನ್ನು ಉಲ್ಲಂಘಿಸುವ ಮತ್ತು ಅಂಬೇಡ್ಕರ್ ಅವರ ಪರಂಪರೆಯನ್ನು ನಿರಾಕರಿಸುವವರನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ” ಎಂದು ಚಂದ್ರು ಗುಡುಗಿದ್ದಾರೆ

“ಸಮಾನತೆ ಮತ್ತು ಶ್ರೇಣಿಕೃತ ವ್ಯವಸ್ಥೆಯ ನಡುವಿನ ದೊಡ್ಡ ಸೈದ್ಧಾಂತಿಕ ಹೋರಾಟ”ಕ್ಕೆ ಸಿದ್ಧರಾಗುವಂತೆ ಅವರು ವಕೀಲರು ಮತ್ತು ನಾಗರಿಕರಿಗೆ ಕರೆ ನೀಡಿದ್ದಾರೆ.

ನ್ಯಾಯಮೂರ್ತಿ ಚಂದ್ರು ಅವರು ಭಾಗವಹಿಸಿದ್ದ ಕಾರ್ಯಕ್ರಮ ಚೆನ್ನೈನ ವಲ್ಲುವರ್ ಕೊಟ್ಟಂನಲ್ಲಿ ನಡೆದಿದೆ. ಇದನ್ನು ‘ಸಮತುವ ವಾಝ್ಕಾರಿಣ್ಯರ್ ಸಂಗಮ್’ ಮತ್ತು ‘ವಿಸಿಕೆ ವಕೀಲರ ವಿಭಾಗ’ ಜಂಟಿಯಾಗಿ ಆಯೋಜಿಸಿತ್ತು. ಲೋಕಸಭಾ ಸಂಸದ ಥೋಲ್ ತಿರುಮಾವಲವನ್ ನೇತೃತ್ವದ ವಿಸಿಕೆ, ಆಡಳಿತಾರೂಢ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡ ದಲಿತ-ಹಕ್ಕುಗಳ ರಾಜಕೀಯ ಪಕ್ಷವಾಗಿದೆ.

ಮಾಜಿ ನ್ಯಾಯಾಧೀಶರಾದ ನ್ಯಾಯಮೂರ್ತಿ ಡಿ ಹರಿಪರಂತಮನ್ ಮತ್ತು ನ್ಯಾಯಮೂರ್ತಿ ಕೆ ಚಂದ್ರು ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿದ್ದರು. ವಿಸಿಕೆ ಜೊತೆ ಸಂಯೋಜಿತವಾಗಿರುವ ಎಳಿಲ್ ಕ್ಯಾರೋಲಿನ್, ಪಿ ತಮಿಳಿನಿಯನ್ ಮತ್ತು ಎಸ್‌ಎ ರಜನಿಕಾಂತ್ ಸೇರಿದಂತೆ ಇತರರು ಭಾಗವಹಿಸಿದ್ದರು.

ಕುತೂಹಲಕಾರಿಯಾಗಿ, ಕಾರ್ಯಕ್ರಮದ ಪ್ರಚಾರಕ್ಕಾಗಿ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿಆರ್ ಗವಾಯಿ ಅವರ ಫೋಟೋ ಮತ್ತು ವಿಸಿಕೆ ಲೋಗೋವನ್ನು ಒಳಗೊಂಡ ಪೋಸ್ಟರ್ ಅನ್ನು ಮದ್ರಾಸ್ ಹೈಕೋರ್ಟ್‌ನ ಹೊರಗೆ ಪ್ರದರ್ಶಿಸಲಾಗಿತ್ತು. ಆದರೆ, ಸಿಜೆಐ ಕಾರ್ಯಕ್ರಮದಲ್ಲಿ ಭಾಗವಹಿಸುವ ಯಾವುದೇ ಸೂಚನೆ ಇರಲಿಲ್ಲ. ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಲಾದ ವಿಡಿಯೋ ಸಿಜೆಐ ಗವಾಯಿ ಅವರು ಕಾರ್ಯಕ್ರಮಕ್ಕೆ ಹಾಜರಾಗಿಲ್ಲ ಎಂಬುವುದನ್ನು ದೃಢಪಡಿಸಿದೆ.

ನ್ಯಾಯಮೂರ್ತಿ ಚಂದ್ರು ಅವರ ತನ್ನ ಭಾಷಣದಲ್ಲಿ ಪರಿಶಿಷ್ಟ ಜಾತಿ ಸಮುದಾಯದವರಾದ ಸಿಜೆಐ ಬಿ.ಆರ್ ಗವಾಯಿ ಅವರ ಮೇಲಿನ ದಾಳಿ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ನ್ಯಾಯಾಂಗದ ಉನ್ನತ ಹಂತಗಳಲ್ಲಿಯೂ ಕೂಡ ದಲಿತರಿಗೆ ಗೌರವ ಇಲ್ಲ ಎನ್ನುವುದನ್ನು ಚಂದ್ರು ಖಂಡಿಸಿದ್ದಾರೆ.

ಜಾತಿ ವಿರೋಧಿ ಚಳವಳಿಯಲ್ಲಿ ಪಾದರಕ್ಷೆ ಅಥವಾ ಚಪ್ಪಲಿ ಸಾಂಸ್ಕೃತಿಕ ಮಹತ್ವವನ್ನು ಹೊಂದಿದ್ದು, ಅದನ್ನು ಕೇವಲ ಅವಮಾನವೆಂದು ನೋಡಬಾರದು ಎಂದು ಚಂದ್ರು ಪ್ರತಿಪಾದಿಸಿದ್ದಾರೆ.

“ಒಂದು ವೇಳೆ ಪಾದರಕ್ಷೆಯನ್ನು ಎಸೆದರೆ ಅದು ಅಗೌರವವಲ್ಲ. ಪಾದರಕ್ಷೆಗಳನ್ನು ಅಗೌರವಿಸುವವರು ಪ್ರಬಲ ಜಾತಿಯ ಜನರು. ನಾವು ಪಾದರಕ್ಷೆಗಳನ್ನು ಧರಿಸುತ್ತೇವೆ; ಅದರಿಂದ ನಾವು ಏನು ಬೇಕಾದರೂ ಮಾಡುತ್ತೇವೆ” ಎಂದು ಪೆರಿಯಾರ್ ಇ.ವಿ ರಾಮಸಾಮಿ ಮೇಲೆ ಚಪ್ಪಲಿ ಎಸೆದಾಗ ರಾಮಸ್ವಾಮಿ ನೀಡಿದ ಹೇಳಿಕೆಯನ್ನು ಚಂದ್ರು ಉಲ್ಲೇಖಿಸಿದ್ದಾರೆ.

ಚಪ್ಪಲಿ ಎಸೆದಾಗ ಅದನ್ನು ಎತ್ತಿಕೊಂಡು ಇನ್ನೊಂದು ಜೋಡಿ ಧರಿಸುವುದಾಗಿ ಪೆರಿಯಾರ್ ಹೇಳಿದರು ಎಂದು ನೆನಪಿಸಿದ “ಚಂದ್ರು, ಪಾದರಕ್ಷೆಗಳ ಸಂಕೇತವು ಅವಮಾನಕ್ಕಿಂತ ಸಮಾನತೆ ಮತ್ತು ಪ್ರತಿರೋಧವನ್ನು ಪ್ರತಿನಿಧಿಸುತ್ತದೆ” ಎಂದಿದ್ದಾರೆ. 

“ಭಾರತದ ಹಾಲಿ ಮುಖ್ಯ ನ್ಯಾಯಮೂರ್ತಿಯೊಬ್ಬರ ಮೇಲೆ ನ್ಯಾಯಾಲಯದೊಳಗಡೆಯೇ ಶೂ ಎಸೆದಾಗ, ಅದು ಮೌನವಾಗುವ ಬದಲು ರಾಷ್ಟ್ರೀಯ ಆಕ್ರೋಶಕ್ಕೆ ಕಾರಣವಾಗಬೇಕಿತ್ತು. ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠದ ಬಳಿ ಅವರ ಮೇಲೆಯೇ ಶೂ ಎಸೆಯುವಾಗ ನಾವು ಸುಮ್ಮನಿದ್ದರೆ, ಅದು ನ್ಯಾಯಾಂಗದ ಮೇಲೆ ನಮಗಿರುವ ಗೌರವದ ಕುರಿತು ಯಾವ ಸಂದೇಶ ನೀಡುತ್ತದೆ” ಎಂದು ಚಂದ್ರು ಪ್ರಶ್ನಿಸಿದ್ದಾರೆ.

ಈ ವರ್ಷದ ಆರಂಭದಲ್ಲಿ ಸಿಜೆಐ ಗವಾಯಿ ಅವರು ಮಹಾರಾಷ್ಟ್ರಕ್ಕೆ ಭೇಟಿ ನೀಡಿದಾಗ ಅಧಿಕೃತ ಶಿಷ್ಟಾಚಾರದ ವೈಫಲ್ಯವನ್ನು ಚಂದ್ರು ಟೀಕಿಸಿದ್ದಾರೆ. ಹಿರಿಯ ಅಧಿಕಾರಿಗಳು ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವೀಕರಿಸಿಲ್ಲ ಎಂದು ದೂರಿದ್ದಾರೆ.

“ಪರಿಶಿಷ್ಟ ಜಾತಿಯ ವ್ಯಕ್ತಿಯೊಬ್ಬರು ಭಾರತದ ಮುಖ್ಯ ನ್ಯಾಯಾಧೀಶರಾದರೂ, ಅವರನ್ನು ಅವರ ಹುದ್ದೆಗೆ ಸಲ್ಲುವ ಘನತೆಯಿಂದ ನಡೆಸಿಕೊಳ್ಳುತ್ತಿಲ್ಲ” ಎಂದಿದ್ದಾರೆ.

Courtesy: barandbench.com

ಮುಂದಿನ ಸಿಜೆಐ ನೇಮಕ ಪ್ರಕ್ರಿಯೆಗೆ ಚಾಲನೆ; ನ.3 ರಂದು ಬಿ.ಆರ್. ಗವಾಯಿ ನಿವೃತ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...