Homeಮುಖಪುಟಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಮದ್ರಾಸ್ ಹೈಕೋರ್ಟ್ ನ್ಯಾ. ಸ್ವಾಮಿನಾಥನ್ ಸಂವಿಧಾನದ ವಿರುದ್ದ ಮಾತನಾಡಿದ್ದಾರೆ: ನಿವೃತ್ತ ನ್ಯಾ. ಕೆ....

ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಮದ್ರಾಸ್ ಹೈಕೋರ್ಟ್ ನ್ಯಾ. ಸ್ವಾಮಿನಾಥನ್ ಸಂವಿಧಾನದ ವಿರುದ್ದ ಮಾತನಾಡಿದ್ದಾರೆ: ನಿವೃತ್ತ ನ್ಯಾ. ಕೆ. ಚಂದ್ರು

- Advertisement -
- Advertisement -

ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರು ಜಾತ್ಯತೀತತೆ ಮತ್ತು ಕಾನೂನಿನ ನಿಯಮಕ್ಕೆ ವಿರುದ್ಧವಾದ ವಿಚಾರಗಳ ಪರವಾಗಿ ಬ್ಯಾಟಿಂಗ್ ಮಾಡುವ ಮೂಲಕ ಸಂವಿಧಾನಕ್ಕೆ ಮತ್ತು ತಮ್ಮ ಪ್ರಮಾಣವಚನಕ್ಕೆ ದ್ರೋಹ ಎಸಗಿದ್ದಾರೆ ಎಂದು ನಿವೃತ್ತ ನ್ಯಾಯಮೂರ್ತಿ ಕೆ. ಚಂದ್ರು ಅಕ್ಟೋಬರ್ 22ರಂದು ಚೆನ್ನೈನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಹಾಲಿ ನ್ಯಾಯಾಧೀಶರ ವಿರುದ್ಧ ಕಟು ಟೀಕೆ ಮಾಡಿದ ನ್ಯಾಯಮೂರ್ತಿ ಚಂದ್ರು, ನ್ಯಾಯಮೂರ್ತಿ ಸ್ವಾಮಿನಾಥನ್ ಅವರನ್ನು ಒಬ್ಬ ‘ವಿಚಿತ್ರ ವ್ಯಕ್ತಿ’ ಎಂದಿದ್ದು, ಅವರು ನ್ಯಾಯಾಧೀಶರಾಗಿ ಸಂವಿಧಾನವನ್ನು ಎತ್ತಿಹಿಡಿಯುವುದಾಗಿ ಪ್ರಮಾಣವಚನ ಸ್ವೀಕರಿಸಿದ್ದರೂ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕಾರ್ಯಕ್ರಮದಲ್ಲಿ ಸಂವಿಧಾನದ ವಿರುದ್ಧ ಮಾತನಾಡಿದ್ದಾರೆ ಎಂದು ತಿಳಿಸಿದ್ದಾರೆ.

“ಸಂವಿಧಾನ ಮತ್ತು ಸುಪ್ರೀಂ ಕೋರ್ಟ್‌ನ ರಕ್ಷಣೆ” ಎಂಬ ಶೀರ್ಷಿಕೆಯಡಿ ವಿಡುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ವಕೀಲರ ವಿಭಾಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನ್ಯಾಯಮೂರ್ತಿ ಚಂದ್ರು ಗಂಭೀರ ಆರೋಪಗಳನ್ನು ಮಾಡಿದ್ದಾರೆ.

“ಆ ಜಿ.ಆರ್. ಸ್ವಾಮಿನಾಥನ್ ಒಬ್ಬ ವಿಚಿತ್ರ ವ್ಯಕ್ತಿ. ನಾನು ಇದನ್ನು ಹೇಳಲು ಕಾರಣ ಸಂವಿಧಾನದ ಪ್ರಕಾರ ನಾವು ನ್ಯಾಯಾಧೀಶರಾದಾಗ ‘ನಾನು ಭಯ ಅಥವಾ ಪಕ್ಷಪಾತವಿಲ್ಲದೆ, ದ್ವೇಷವಿಲ್ಲದೆ ಸಂವಿಧಾನವನ್ನು ಎತ್ತಿಹಿಡಿಯುತ್ತೇನೆ’ ಎಂದು ನಾವು ದೃಢವಾಗಿ ಪ್ರಮಾಣ ವಚನ ಸ್ವೀಕರಿಸಬೇಕು. ಆದರೆ, ಸ್ವಾಮಿನಾಥನ್ ಅದನ್ನು ಉಲ್ಲಂಘಿಸಿದ್ದಾರೆ. ಅವರ ಹೇಳಿಕೆಗಳು ಪ್ರಮಾಣ ವಚನಕ್ಕೆ ವಿರುದ್ಧವಾಗಿದೆ” ಎಂದು ಚಂದ್ರು ಹೇಳಿದ್ದಾರೆ. 

ನ್ಯಾಯಮೂರ್ತಿ ಸ್ವಾಮಿನಾಥನ್ ಅವರು ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ ಮತ್ತು ಭಾರತದ ಸಂವಿಧಾನದ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. “ನಮ್ಮ ಸಂವಿಧಾನ 1935ರ ಭಾರತ ಸರ್ಕಾರಿ ಕಾಯ್ದೆಯಿಂದ ನಕಲು ಮಾಡಿ ಪುಸ್ತಕವಾಗಿದೆ” ಎಂದು ಹೇಳಿದ್ದಾರೆ ಎಂದು ಚಂದ್ರು ಆರೋಪಿಸಿದ್ದಾರೆ.

“ಹರಿಯಾಣದಲ್ಲಿ ನಡೆದ ಆರ್‌ಎಸ್‌ಎಸ್ ಸಭೆಯಲ್ಲಿ, ಭಾರತದ ಸಂವಿಧಾನವನ್ನು 1935ರ ಕಾನೂನಿನಿಂದ ನಕಲು ಮಾಡಲಾಗಿದೆ ಮತ್ತು ನಮ್ಮ ಸಂವಿಧಾನದಲ್ಲಿ ಯಾವುದೇ ಸ್ವಂತಿಕೆ ಇಲ್ಲ ಎಂದು ಸ್ವಾಮಿನಾಥನ್ ಹೇಳಿದ್ದಾರೆ. ಅಂತಹ ಜನರಿಗೆ ಪ್ರತಿಕ್ರಿಯಿಸಲು ಸಮಯ ವ್ಯರ್ಥ ಮಾಡುವುದಿಲ್ಲ ಎಂದು ಡಾ. ಅಂಬೇಡ್ಕರ್ ಅವರೇ ಹೇಳಿದ್ದಾರೆ. ಆದರೂ, ಹಾಲಿ ಹೈಕೋರ್ಟ್ ನ್ಯಾಯಾಧೀಶರು ಈ ರೀತಿ ಮಾತನಾಡುತ್ತಾರೆ. ಅವರ ವಿರುದ್ದ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ” ಎಂದು ಚಂದ್ರು ಬೇಸರ ವ್ಯಕ್ತಪಡಿಸಿದ್ದಾರೆ.

ಹಾಲಿ ನ್ಯಾಯಾಧೀಶರ ಇಂತಹ ಮಾತುಗಳು ಡಾ. ಬಿ.ಆರ್. ಅಂಬೇಡ್ಕರ್ ರೂಪಿಸಿದ ಸಂವಿಧಾನದ ಮೂಲ ಉದ್ದೇಶವನ್ನೇ ಕೆಡಿಸುತ್ತವೆ. ಸಂವಿಧಾನವು ಎಲ್ಲರಿಗೂ ಸಮಾನತೆಯನ್ನು ನೀಡಿ, ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸುವ ಗುರಿಯನ್ನು ಹೊಂದಿದೆ ಎಂದು ನ್ಯಾಯಮೂರ್ತಿ ಚಂದ್ದು ಹೇಳಿದ್ದಾರೆ.

“ಕಾನೂನಿನ ನಿಯಮವನ್ನು ಉಲ್ಲಂಘಿಸುವ ಮತ್ತು ಅಂಬೇಡ್ಕರ್ ಅವರ ಪರಂಪರೆಯನ್ನು ನಿರಾಕರಿಸುವವರನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ” ಎಂದು ಚಂದ್ರು ಗುಡುಗಿದ್ದಾರೆ

“ಸಮಾನತೆ ಮತ್ತು ಶ್ರೇಣಿಕೃತ ವ್ಯವಸ್ಥೆಯ ನಡುವಿನ ದೊಡ್ಡ ಸೈದ್ಧಾಂತಿಕ ಹೋರಾಟ”ಕ್ಕೆ ಸಿದ್ಧರಾಗುವಂತೆ ಅವರು ವಕೀಲರು ಮತ್ತು ನಾಗರಿಕರಿಗೆ ಕರೆ ನೀಡಿದ್ದಾರೆ.

ನ್ಯಾಯಮೂರ್ತಿ ಚಂದ್ರು ಅವರು ಭಾಗವಹಿಸಿದ್ದ ಕಾರ್ಯಕ್ರಮ ಚೆನ್ನೈನ ವಲ್ಲುವರ್ ಕೊಟ್ಟಂನಲ್ಲಿ ನಡೆದಿದೆ. ಇದನ್ನು ‘ಸಮತುವ ವಾಝ್ಕಾರಿಣ್ಯರ್ ಸಂಗಮ್’ ಮತ್ತು ‘ವಿಸಿಕೆ ವಕೀಲರ ವಿಭಾಗ’ ಜಂಟಿಯಾಗಿ ಆಯೋಜಿಸಿತ್ತು. ಲೋಕಸಭಾ ಸಂಸದ ಥೋಲ್ ತಿರುಮಾವಲವನ್ ನೇತೃತ್ವದ ವಿಸಿಕೆ, ಆಡಳಿತಾರೂಢ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡ ದಲಿತ-ಹಕ್ಕುಗಳ ರಾಜಕೀಯ ಪಕ್ಷವಾಗಿದೆ.

ಮಾಜಿ ನ್ಯಾಯಾಧೀಶರಾದ ನ್ಯಾಯಮೂರ್ತಿ ಡಿ ಹರಿಪರಂತಮನ್ ಮತ್ತು ನ್ಯಾಯಮೂರ್ತಿ ಕೆ ಚಂದ್ರು ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿದ್ದರು. ವಿಸಿಕೆ ಜೊತೆ ಸಂಯೋಜಿತವಾಗಿರುವ ಎಳಿಲ್ ಕ್ಯಾರೋಲಿನ್, ಪಿ ತಮಿಳಿನಿಯನ್ ಮತ್ತು ಎಸ್‌ಎ ರಜನಿಕಾಂತ್ ಸೇರಿದಂತೆ ಇತರರು ಭಾಗವಹಿಸಿದ್ದರು.

ಕುತೂಹಲಕಾರಿಯಾಗಿ, ಕಾರ್ಯಕ್ರಮದ ಪ್ರಚಾರಕ್ಕಾಗಿ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿಆರ್ ಗವಾಯಿ ಅವರ ಫೋಟೋ ಮತ್ತು ವಿಸಿಕೆ ಲೋಗೋವನ್ನು ಒಳಗೊಂಡ ಪೋಸ್ಟರ್ ಅನ್ನು ಮದ್ರಾಸ್ ಹೈಕೋರ್ಟ್‌ನ ಹೊರಗೆ ಪ್ರದರ್ಶಿಸಲಾಗಿತ್ತು. ಆದರೆ, ಸಿಜೆಐ ಕಾರ್ಯಕ್ರಮದಲ್ಲಿ ಭಾಗವಹಿಸುವ ಯಾವುದೇ ಸೂಚನೆ ಇರಲಿಲ್ಲ. ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಲಾದ ವಿಡಿಯೋ ಸಿಜೆಐ ಗವಾಯಿ ಅವರು ಕಾರ್ಯಕ್ರಮಕ್ಕೆ ಹಾಜರಾಗಿಲ್ಲ ಎಂಬುವುದನ್ನು ದೃಢಪಡಿಸಿದೆ.

ನ್ಯಾಯಮೂರ್ತಿ ಚಂದ್ರು ಅವರ ತನ್ನ ಭಾಷಣದಲ್ಲಿ ಪರಿಶಿಷ್ಟ ಜಾತಿ ಸಮುದಾಯದವರಾದ ಸಿಜೆಐ ಬಿ.ಆರ್ ಗವಾಯಿ ಅವರ ಮೇಲಿನ ದಾಳಿ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ನ್ಯಾಯಾಂಗದ ಉನ್ನತ ಹಂತಗಳಲ್ಲಿಯೂ ಕೂಡ ದಲಿತರಿಗೆ ಗೌರವ ಇಲ್ಲ ಎನ್ನುವುದನ್ನು ಚಂದ್ರು ಖಂಡಿಸಿದ್ದಾರೆ.

ಜಾತಿ ವಿರೋಧಿ ಚಳವಳಿಯಲ್ಲಿ ಪಾದರಕ್ಷೆ ಅಥವಾ ಚಪ್ಪಲಿ ಸಾಂಸ್ಕೃತಿಕ ಮಹತ್ವವನ್ನು ಹೊಂದಿದ್ದು, ಅದನ್ನು ಕೇವಲ ಅವಮಾನವೆಂದು ನೋಡಬಾರದು ಎಂದು ಚಂದ್ರು ಪ್ರತಿಪಾದಿಸಿದ್ದಾರೆ.

“ಒಂದು ವೇಳೆ ಪಾದರಕ್ಷೆಯನ್ನು ಎಸೆದರೆ ಅದು ಅಗೌರವವಲ್ಲ. ಪಾದರಕ್ಷೆಗಳನ್ನು ಅಗೌರವಿಸುವವರು ಪ್ರಬಲ ಜಾತಿಯ ಜನರು. ನಾವು ಪಾದರಕ್ಷೆಗಳನ್ನು ಧರಿಸುತ್ತೇವೆ; ಅದರಿಂದ ನಾವು ಏನು ಬೇಕಾದರೂ ಮಾಡುತ್ತೇವೆ” ಎಂದು ಪೆರಿಯಾರ್ ಇ.ವಿ ರಾಮಸಾಮಿ ಮೇಲೆ ಚಪ್ಪಲಿ ಎಸೆದಾಗ ರಾಮಸ್ವಾಮಿ ನೀಡಿದ ಹೇಳಿಕೆಯನ್ನು ಚಂದ್ರು ಉಲ್ಲೇಖಿಸಿದ್ದಾರೆ.

ಚಪ್ಪಲಿ ಎಸೆದಾಗ ಅದನ್ನು ಎತ್ತಿಕೊಂಡು ಇನ್ನೊಂದು ಜೋಡಿ ಧರಿಸುವುದಾಗಿ ಪೆರಿಯಾರ್ ಹೇಳಿದರು ಎಂದು ನೆನಪಿಸಿದ “ಚಂದ್ರು, ಪಾದರಕ್ಷೆಗಳ ಸಂಕೇತವು ಅವಮಾನಕ್ಕಿಂತ ಸಮಾನತೆ ಮತ್ತು ಪ್ರತಿರೋಧವನ್ನು ಪ್ರತಿನಿಧಿಸುತ್ತದೆ” ಎಂದಿದ್ದಾರೆ. 

“ಭಾರತದ ಹಾಲಿ ಮುಖ್ಯ ನ್ಯಾಯಮೂರ್ತಿಯೊಬ್ಬರ ಮೇಲೆ ನ್ಯಾಯಾಲಯದೊಳಗಡೆಯೇ ಶೂ ಎಸೆದಾಗ, ಅದು ಮೌನವಾಗುವ ಬದಲು ರಾಷ್ಟ್ರೀಯ ಆಕ್ರೋಶಕ್ಕೆ ಕಾರಣವಾಗಬೇಕಿತ್ತು. ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠದ ಬಳಿ ಅವರ ಮೇಲೆಯೇ ಶೂ ಎಸೆಯುವಾಗ ನಾವು ಸುಮ್ಮನಿದ್ದರೆ, ಅದು ನ್ಯಾಯಾಂಗದ ಮೇಲೆ ನಮಗಿರುವ ಗೌರವದ ಕುರಿತು ಯಾವ ಸಂದೇಶ ನೀಡುತ್ತದೆ” ಎಂದು ಚಂದ್ರು ಪ್ರಶ್ನಿಸಿದ್ದಾರೆ.

ಈ ವರ್ಷದ ಆರಂಭದಲ್ಲಿ ಸಿಜೆಐ ಗವಾಯಿ ಅವರು ಮಹಾರಾಷ್ಟ್ರಕ್ಕೆ ಭೇಟಿ ನೀಡಿದಾಗ ಅಧಿಕೃತ ಶಿಷ್ಟಾಚಾರದ ವೈಫಲ್ಯವನ್ನು ಚಂದ್ರು ಟೀಕಿಸಿದ್ದಾರೆ. ಹಿರಿಯ ಅಧಿಕಾರಿಗಳು ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವೀಕರಿಸಿಲ್ಲ ಎಂದು ದೂರಿದ್ದಾರೆ.

“ಪರಿಶಿಷ್ಟ ಜಾತಿಯ ವ್ಯಕ್ತಿಯೊಬ್ಬರು ಭಾರತದ ಮುಖ್ಯ ನ್ಯಾಯಾಧೀಶರಾದರೂ, ಅವರನ್ನು ಅವರ ಹುದ್ದೆಗೆ ಸಲ್ಲುವ ಘನತೆಯಿಂದ ನಡೆಸಿಕೊಳ್ಳುತ್ತಿಲ್ಲ” ಎಂದಿದ್ದಾರೆ.

Courtesy: barandbench.com

ಮುಂದಿನ ಸಿಜೆಐ ನೇಮಕ ಪ್ರಕ್ರಿಯೆಗೆ ಚಾಲನೆ; ನ.3 ರಂದು ಬಿ.ಆರ್. ಗವಾಯಿ ನಿವೃತ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...