Homeಮುಖಪುಟತಮಿಳುನಾಡು ಸರ್ಕಾರದ ವಿರೋಧದ ನಡುವೆಯೂ ಸ್ಟ್ಯಾನ್ ಸ್ವಾಮಿ ಪ್ರತಿಮೆ ಸ್ಥಾಪನೆಗೆ ಮದ್ರಾಸ್ ಹೈಕೋರ್ಟ್ ಅನುಮತಿ

ತಮಿಳುನಾಡು ಸರ್ಕಾರದ ವಿರೋಧದ ನಡುವೆಯೂ ಸ್ಟ್ಯಾನ್ ಸ್ವಾಮಿ ಪ್ರತಿಮೆ ಸ್ಥಾಪನೆಗೆ ಮದ್ರಾಸ್ ಹೈಕೋರ್ಟ್ ಅನುಮತಿ

- Advertisement -
- Advertisement -

ತಮಿಳುನಾಡು ಸರ್ಕಾರದ ವಿರೋಧದ ನಡುವೆಯೂ ಮದ್ರಾಸ್ ಹೈಕೋರ್ಟ್ ವ್ಯಕ್ತಿಯೊಬ್ಬರಿಗೆ ತನ್ನ ಖಾಸಗಿ ಭೂಮಿಯಲ್ಲಿ ಬುಡಕಟ್ಟು ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ ಪ್ರತಿಮೆ ನಿರ್ಮಾಣಕ್ಕೆ ಅವಕಾಶ ನೀಡಿದೆ.

“ಒಬ್ಬ ವ್ಯಕ್ತಿ ತನ್ನ ಖಾಸಗಿ ಭೂಮಿಯಲ್ಲಿ ಸ್ಮಾರಕ ಅಥವಾ ಪ್ರತಿಮೆ ಸ್ಥಾಪಿಸುವುದನ್ನು ಸರ್ಕಾರ ತಡೆಯಲು ಸಾಧ್ಯವಿಲ್ಲ” ಎಂದು ನವೆಂಬರ್ 24ರಂದು ಹೈಕೋರ್ಟ್ ಹೇಳಿದೆ.

ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ತನ್ನ ಖಾಸಗಿ ಜಮೀನಿನಲ್ಲಿ ಸ್ಟ್ಯಾನ್ ಸ್ವಾಮಿಯವರ ಚಿತ್ರವಿರುವ ಕಲ್ಲಿನ ಕಂಬದ ಸ್ಮಾರಕವನ್ನು ನಿರ್ಮಿಸಲು ಪರಿಸರ ಹೋರಾಟಗಾರ ಪಿಯೂಷ್ ಸೇಥಿಯಾ ಅವರಿಗೆ ನ್ಯಾಯಮೂರ್ತಿ ಎಂ.ದಂಡಪಾಣಿ ಅನುಮತಿ ನೀಡಿದ್ದಾರೆ.

ಸ್ಮಾರಕ ನಿರ್ಮಿಸದಂತೆ ಸೇಥಿಯಾ ಅವರಿಗೆ ನಿರ್ಬಂಧ ವಿಧಿಸಿ ನಲ್ಲಂಪಲ್ಲಿ ತಾಲೂಕು ತಹಶೀಲ್ದಾರ್ 16 ಜುಲೈ 2021ರಲ್ಲಿ ನೀಡಿದ್ದ ಆದೇಶವನ್ನು ನ್ಯಾಯಾಲಯ ರದ್ದುಗೊಳಿಸಿದೆ.

ತಹಶೀಲ್ದಾರ್ ಪ್ರತಿಮೆ ನಿರ್ಮಾಣಕ್ಕೆ ನಿರ್ಬಂಧ ವಿಧಿಸಿದ್ದ ಹಿನ್ನೆಲೆ ಜಿಲ್ಲಾಧಿಕಾರಿಗಳಿಗೆ ಸೇಥಿಯಾ ಪತ್ರ ಬರೆದಿದ್ದರು. ಅದನ್ನು ಜಿಲ್ಲಾಧಿಕಾರಿ ತಿರಸ್ಕೃಸಿದ್ದರು. ಈ ಹಿನ್ನೆಲೆ ಸೇಥಿಯಾ ಅವರು ವಕೀಲ ವಿ ಸುರೇಶ್ ಮೂಲಕ ಅರ್ಜಿ ಹೈಕೋರ್ಟ್‌ ಮೊರೆ ಹೋಗಿದ್ದರು.

“ಬುಡಕಟ್ಟು ಸಮುದಾಯಗಳಿಗೆ ಸಂಬಂಧಿಸಿದಂತೆ ಸ್ಟ್ಯಾನ್‌ ಸ್ವಾಮಿ ಅವರ ಹೋರಾಟದಿಂದ ತಾನು ಸ್ಫೂರ್ತಿ ಪಡೆದಿದ್ದೇನೆ. ಅವರು ನನ್ನ ಆರಾಧ್ಯ ದೈವ ಮತ್ತು ಮಾರ್ಗದರ್ಶಕರಾಗಿದ್ದಾರೆ. ಆದ್ದರಿಂದ, ನನ್ನ ಖಾಸಗಿ ಜಮೀನಿನಲ್ಲಿ ಸ್ಮಾರಕ ನಿರ್ಮಿಸುವ ಮೂಲಕ ಸ್ವಾಮಿ ಅವರ ಪರಂಪರೆ ಮುಂದುವರೆಸಲು ಬಯಸುತ್ತೇನೆ” ಎಂದು ಸೇಥಿಯಾ ಮನವಿ ಮಾಡಿದ್ದರು.

ಹೈಕೋರ್ಟ್‌ನಲ್ಲಿ ಪ್ರತಿಮೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದ ರಾಜ್ಯ ಸರ್ಕಾರ ಮತ್ತು ಧರ್ಮಪುರಿ ಜಿಲ್ಲಾಧಿಕಾರಿ, “ನಕ್ಸಲರು ಮತ್ತು ಮಾವೋವಾದಿಗಳೊಂದಿಗೆ ನಂಟು ಹೊಂದಿದ್ದ ವ್ಯಕ್ತಿಯ ಕೆಲಸ ಸ್ಮರಿಸಲೆಂದು ಈ ಸ್ಮಾರಕ ನಿರ್ಮಿಸಲಾಗುತ್ತಿದೆ ಎಂದು ಆಕ್ಷೇಪಿಸಿದ್ದರು. ಸ್ಮಾರಕ ನಿರ್ಮಾಣದಿಂದ ಕಾನೂನು ಸುವ್ಯವಸ್ಥೆಗೆ ಅಡ್ಡಿ ಉಂಟಾಗುತ್ತದೆ ಎಂದು ಸರ್ಕಾರ ಆತಂಕ ವ್ಯಕ್ತಪಡಿಸಿತ್ತು.

ಎರಡೂ ಕಡೆಯ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಸ್ಮಾರಕ ನಿರ್ಮಿಸುವಾಗ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಉಂಟಾಗಬಾರದು ಎಂದು ಸೂಚಿಸಿ ಪ್ರತಿಮೆ ನಿರ್ಮಿಸಲು ಅವಕಾಶ ನೀಡಿದೆ.

ಸಾಮಾನ್ಯ ತತ್ವದ ಅನ್ವಯ ತಮ್ಮ ಖಾಸಗಿ ಜಮೀನಿನಲ್ಲಿ ಪ್ರತಿಮೆ ಸ್ಥಾಪಿಸುವ ಹಕ್ಕು ನಾಗರಿಕರಿಗೆ ಇದೆ. ಪ್ರತಿಮೆಯ ಸ್ಥಾಪನೆಯಿಂದ ಯಾವುದೇ ಎರಡು ಸಮುದಾಯಗಳ ನಡುವೆ ಸಂಘರ್ಷ ಉಂಟಾಗಬಾರದು ಅಥವಾ ನಿರ್ದಿಷ್ಟ ಸಮಾಜದ ಭಾವನೆಗಳಿಗೆ ಧಕ್ಕೆ ತರಬಾರದು ಎಂಬುವುದು ಒಂದೇ ನಿರ್ಬಂಧ. ಖಾಸಗಿ ಪಟ್ಟಾ ಭೂಮಿಯಲ್ಲಿ ಪ್ರತಿಮೆ ಸ್ಥಾಪನೆಗೆ ಅನುಮತಿ ನೀಡಿದರೆ ಯಾವುದೇ ಕಾನೂನು ಅಡ್ಡಿ ಇರದು ಎಂದು ನ್ಯಾಯಾಲಯ ಹೇಳಿದೆ. ಸೇಥಿಯಾ ಅವರೇ ಎಲ್ಲಾ ವೆಚ್ಚ ಭರಿಸಿ ಸ್ಮಾರಕ ನಿರ್ಮಿಸುತ್ತಿದ್ದಾರೆ ಎಂಬ ವಿಚಾರವನ್ನೂ ನ್ಯಾಯಾಲಯ ಗಮನಿಸಿದೆ.

ಭೀಮಾ ಕೋರೆಗಾಂವ್‌ ಎಲ್ಗಾರ್‌ ಪರಿಷದ್‌ ಪ್ರಕರಣದಲ್ಲಿ ವಿಚಾರಣಾಧೀನ ಆರೋಪಿಯಾಗಿದ್ದ ಸ್ಟ್ಯಾನ್‌ ಸ್ವಾಮಿ ಅವರು ವೈದ್ಯಕೀಯ ಜಾಮೀನಿನ ನಿರೀಕ್ಷೆಯಲ್ಲೇ ಜುಲೈ 5,2021 ರಂದು ನಿಧನರಾಗಿದ್ದರು.

ಇದನ್ನೂ ಓದಿ : ಅದಾನಿ ಯೋಜನೆಗಳ ತನಿಖೆಗೆ ಆದೇಶಿಸಿದ ಶ್ರೀಲಂಕಾ ಸರ್ಕಾರ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...