Homeಮುಖಪುಟತಮಿಳುನಾಡು ಸರ್ಕಾರದ ವಿರೋಧದ ನಡುವೆಯೂ ಸ್ಟ್ಯಾನ್ ಸ್ವಾಮಿ ಪ್ರತಿಮೆ ಸ್ಥಾಪನೆಗೆ ಮದ್ರಾಸ್ ಹೈಕೋರ್ಟ್ ಅನುಮತಿ

ತಮಿಳುನಾಡು ಸರ್ಕಾರದ ವಿರೋಧದ ನಡುವೆಯೂ ಸ್ಟ್ಯಾನ್ ಸ್ವಾಮಿ ಪ್ರತಿಮೆ ಸ್ಥಾಪನೆಗೆ ಮದ್ರಾಸ್ ಹೈಕೋರ್ಟ್ ಅನುಮತಿ

- Advertisement -
- Advertisement -

ತಮಿಳುನಾಡು ಸರ್ಕಾರದ ವಿರೋಧದ ನಡುವೆಯೂ ಮದ್ರಾಸ್ ಹೈಕೋರ್ಟ್ ವ್ಯಕ್ತಿಯೊಬ್ಬರಿಗೆ ತನ್ನ ಖಾಸಗಿ ಭೂಮಿಯಲ್ಲಿ ಬುಡಕಟ್ಟು ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ ಪ್ರತಿಮೆ ನಿರ್ಮಾಣಕ್ಕೆ ಅವಕಾಶ ನೀಡಿದೆ.

“ಒಬ್ಬ ವ್ಯಕ್ತಿ ತನ್ನ ಖಾಸಗಿ ಭೂಮಿಯಲ್ಲಿ ಸ್ಮಾರಕ ಅಥವಾ ಪ್ರತಿಮೆ ಸ್ಥಾಪಿಸುವುದನ್ನು ಸರ್ಕಾರ ತಡೆಯಲು ಸಾಧ್ಯವಿಲ್ಲ” ಎಂದು ನವೆಂಬರ್ 24ರಂದು ಹೈಕೋರ್ಟ್ ಹೇಳಿದೆ.

ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ತನ್ನ ಖಾಸಗಿ ಜಮೀನಿನಲ್ಲಿ ಸ್ಟ್ಯಾನ್ ಸ್ವಾಮಿಯವರ ಚಿತ್ರವಿರುವ ಕಲ್ಲಿನ ಕಂಬದ ಸ್ಮಾರಕವನ್ನು ನಿರ್ಮಿಸಲು ಪರಿಸರ ಹೋರಾಟಗಾರ ಪಿಯೂಷ್ ಸೇಥಿಯಾ ಅವರಿಗೆ ನ್ಯಾಯಮೂರ್ತಿ ಎಂ.ದಂಡಪಾಣಿ ಅನುಮತಿ ನೀಡಿದ್ದಾರೆ.

ಸ್ಮಾರಕ ನಿರ್ಮಿಸದಂತೆ ಸೇಥಿಯಾ ಅವರಿಗೆ ನಿರ್ಬಂಧ ವಿಧಿಸಿ ನಲ್ಲಂಪಲ್ಲಿ ತಾಲೂಕು ತಹಶೀಲ್ದಾರ್ 16 ಜುಲೈ 2021ರಲ್ಲಿ ನೀಡಿದ್ದ ಆದೇಶವನ್ನು ನ್ಯಾಯಾಲಯ ರದ್ದುಗೊಳಿಸಿದೆ.

ತಹಶೀಲ್ದಾರ್ ಪ್ರತಿಮೆ ನಿರ್ಮಾಣಕ್ಕೆ ನಿರ್ಬಂಧ ವಿಧಿಸಿದ್ದ ಹಿನ್ನೆಲೆ ಜಿಲ್ಲಾಧಿಕಾರಿಗಳಿಗೆ ಸೇಥಿಯಾ ಪತ್ರ ಬರೆದಿದ್ದರು. ಅದನ್ನು ಜಿಲ್ಲಾಧಿಕಾರಿ ತಿರಸ್ಕೃಸಿದ್ದರು. ಈ ಹಿನ್ನೆಲೆ ಸೇಥಿಯಾ ಅವರು ವಕೀಲ ವಿ ಸುರೇಶ್ ಮೂಲಕ ಅರ್ಜಿ ಹೈಕೋರ್ಟ್‌ ಮೊರೆ ಹೋಗಿದ್ದರು.

“ಬುಡಕಟ್ಟು ಸಮುದಾಯಗಳಿಗೆ ಸಂಬಂಧಿಸಿದಂತೆ ಸ್ಟ್ಯಾನ್‌ ಸ್ವಾಮಿ ಅವರ ಹೋರಾಟದಿಂದ ತಾನು ಸ್ಫೂರ್ತಿ ಪಡೆದಿದ್ದೇನೆ. ಅವರು ನನ್ನ ಆರಾಧ್ಯ ದೈವ ಮತ್ತು ಮಾರ್ಗದರ್ಶಕರಾಗಿದ್ದಾರೆ. ಆದ್ದರಿಂದ, ನನ್ನ ಖಾಸಗಿ ಜಮೀನಿನಲ್ಲಿ ಸ್ಮಾರಕ ನಿರ್ಮಿಸುವ ಮೂಲಕ ಸ್ವಾಮಿ ಅವರ ಪರಂಪರೆ ಮುಂದುವರೆಸಲು ಬಯಸುತ್ತೇನೆ” ಎಂದು ಸೇಥಿಯಾ ಮನವಿ ಮಾಡಿದ್ದರು.

ಹೈಕೋರ್ಟ್‌ನಲ್ಲಿ ಪ್ರತಿಮೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದ ರಾಜ್ಯ ಸರ್ಕಾರ ಮತ್ತು ಧರ್ಮಪುರಿ ಜಿಲ್ಲಾಧಿಕಾರಿ, “ನಕ್ಸಲರು ಮತ್ತು ಮಾವೋವಾದಿಗಳೊಂದಿಗೆ ನಂಟು ಹೊಂದಿದ್ದ ವ್ಯಕ್ತಿಯ ಕೆಲಸ ಸ್ಮರಿಸಲೆಂದು ಈ ಸ್ಮಾರಕ ನಿರ್ಮಿಸಲಾಗುತ್ತಿದೆ ಎಂದು ಆಕ್ಷೇಪಿಸಿದ್ದರು. ಸ್ಮಾರಕ ನಿರ್ಮಾಣದಿಂದ ಕಾನೂನು ಸುವ್ಯವಸ್ಥೆಗೆ ಅಡ್ಡಿ ಉಂಟಾಗುತ್ತದೆ ಎಂದು ಸರ್ಕಾರ ಆತಂಕ ವ್ಯಕ್ತಪಡಿಸಿತ್ತು.

ಎರಡೂ ಕಡೆಯ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಸ್ಮಾರಕ ನಿರ್ಮಿಸುವಾಗ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಉಂಟಾಗಬಾರದು ಎಂದು ಸೂಚಿಸಿ ಪ್ರತಿಮೆ ನಿರ್ಮಿಸಲು ಅವಕಾಶ ನೀಡಿದೆ.

ಸಾಮಾನ್ಯ ತತ್ವದ ಅನ್ವಯ ತಮ್ಮ ಖಾಸಗಿ ಜಮೀನಿನಲ್ಲಿ ಪ್ರತಿಮೆ ಸ್ಥಾಪಿಸುವ ಹಕ್ಕು ನಾಗರಿಕರಿಗೆ ಇದೆ. ಪ್ರತಿಮೆಯ ಸ್ಥಾಪನೆಯಿಂದ ಯಾವುದೇ ಎರಡು ಸಮುದಾಯಗಳ ನಡುವೆ ಸಂಘರ್ಷ ಉಂಟಾಗಬಾರದು ಅಥವಾ ನಿರ್ದಿಷ್ಟ ಸಮಾಜದ ಭಾವನೆಗಳಿಗೆ ಧಕ್ಕೆ ತರಬಾರದು ಎಂಬುವುದು ಒಂದೇ ನಿರ್ಬಂಧ. ಖಾಸಗಿ ಪಟ್ಟಾ ಭೂಮಿಯಲ್ಲಿ ಪ್ರತಿಮೆ ಸ್ಥಾಪನೆಗೆ ಅನುಮತಿ ನೀಡಿದರೆ ಯಾವುದೇ ಕಾನೂನು ಅಡ್ಡಿ ಇರದು ಎಂದು ನ್ಯಾಯಾಲಯ ಹೇಳಿದೆ. ಸೇಥಿಯಾ ಅವರೇ ಎಲ್ಲಾ ವೆಚ್ಚ ಭರಿಸಿ ಸ್ಮಾರಕ ನಿರ್ಮಿಸುತ್ತಿದ್ದಾರೆ ಎಂಬ ವಿಚಾರವನ್ನೂ ನ್ಯಾಯಾಲಯ ಗಮನಿಸಿದೆ.

ಭೀಮಾ ಕೋರೆಗಾಂವ್‌ ಎಲ್ಗಾರ್‌ ಪರಿಷದ್‌ ಪ್ರಕರಣದಲ್ಲಿ ವಿಚಾರಣಾಧೀನ ಆರೋಪಿಯಾಗಿದ್ದ ಸ್ಟ್ಯಾನ್‌ ಸ್ವಾಮಿ ಅವರು ವೈದ್ಯಕೀಯ ಜಾಮೀನಿನ ನಿರೀಕ್ಷೆಯಲ್ಲೇ ಜುಲೈ 5,2021 ರಂದು ನಿಧನರಾಗಿದ್ದರು.

ಇದನ್ನೂ ಓದಿ : ಅದಾನಿ ಯೋಜನೆಗಳ ತನಿಖೆಗೆ ಆದೇಶಿಸಿದ ಶ್ರೀಲಂಕಾ ಸರ್ಕಾರ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...