Homeಮುಖಪುಟತಮಿಳುನಾಡು ಸರ್ಕಾರದ ವಿರೋಧದ ನಡುವೆಯೂ ಸ್ಟ್ಯಾನ್ ಸ್ವಾಮಿ ಪ್ರತಿಮೆ ಸ್ಥಾಪನೆಗೆ ಮದ್ರಾಸ್ ಹೈಕೋರ್ಟ್ ಅನುಮತಿ

ತಮಿಳುನಾಡು ಸರ್ಕಾರದ ವಿರೋಧದ ನಡುವೆಯೂ ಸ್ಟ್ಯಾನ್ ಸ್ವಾಮಿ ಪ್ರತಿಮೆ ಸ್ಥಾಪನೆಗೆ ಮದ್ರಾಸ್ ಹೈಕೋರ್ಟ್ ಅನುಮತಿ

- Advertisement -
- Advertisement -

ತಮಿಳುನಾಡು ಸರ್ಕಾರದ ವಿರೋಧದ ನಡುವೆಯೂ ಮದ್ರಾಸ್ ಹೈಕೋರ್ಟ್ ವ್ಯಕ್ತಿಯೊಬ್ಬರಿಗೆ ತನ್ನ ಖಾಸಗಿ ಭೂಮಿಯಲ್ಲಿ ಬುಡಕಟ್ಟು ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ ಪ್ರತಿಮೆ ನಿರ್ಮಾಣಕ್ಕೆ ಅವಕಾಶ ನೀಡಿದೆ.

“ಒಬ್ಬ ವ್ಯಕ್ತಿ ತನ್ನ ಖಾಸಗಿ ಭೂಮಿಯಲ್ಲಿ ಸ್ಮಾರಕ ಅಥವಾ ಪ್ರತಿಮೆ ಸ್ಥಾಪಿಸುವುದನ್ನು ಸರ್ಕಾರ ತಡೆಯಲು ಸಾಧ್ಯವಿಲ್ಲ” ಎಂದು ನವೆಂಬರ್ 24ರಂದು ಹೈಕೋರ್ಟ್ ಹೇಳಿದೆ.

ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ತನ್ನ ಖಾಸಗಿ ಜಮೀನಿನಲ್ಲಿ ಸ್ಟ್ಯಾನ್ ಸ್ವಾಮಿಯವರ ಚಿತ್ರವಿರುವ ಕಲ್ಲಿನ ಕಂಬದ ಸ್ಮಾರಕವನ್ನು ನಿರ್ಮಿಸಲು ಪರಿಸರ ಹೋರಾಟಗಾರ ಪಿಯೂಷ್ ಸೇಥಿಯಾ ಅವರಿಗೆ ನ್ಯಾಯಮೂರ್ತಿ ಎಂ.ದಂಡಪಾಣಿ ಅನುಮತಿ ನೀಡಿದ್ದಾರೆ.

ಸ್ಮಾರಕ ನಿರ್ಮಿಸದಂತೆ ಸೇಥಿಯಾ ಅವರಿಗೆ ನಿರ್ಬಂಧ ವಿಧಿಸಿ ನಲ್ಲಂಪಲ್ಲಿ ತಾಲೂಕು ತಹಶೀಲ್ದಾರ್ 16 ಜುಲೈ 2021ರಲ್ಲಿ ನೀಡಿದ್ದ ಆದೇಶವನ್ನು ನ್ಯಾಯಾಲಯ ರದ್ದುಗೊಳಿಸಿದೆ.

ತಹಶೀಲ್ದಾರ್ ಪ್ರತಿಮೆ ನಿರ್ಮಾಣಕ್ಕೆ ನಿರ್ಬಂಧ ವಿಧಿಸಿದ್ದ ಹಿನ್ನೆಲೆ ಜಿಲ್ಲಾಧಿಕಾರಿಗಳಿಗೆ ಸೇಥಿಯಾ ಪತ್ರ ಬರೆದಿದ್ದರು. ಅದನ್ನು ಜಿಲ್ಲಾಧಿಕಾರಿ ತಿರಸ್ಕೃಸಿದ್ದರು. ಈ ಹಿನ್ನೆಲೆ ಸೇಥಿಯಾ ಅವರು ವಕೀಲ ವಿ ಸುರೇಶ್ ಮೂಲಕ ಅರ್ಜಿ ಹೈಕೋರ್ಟ್‌ ಮೊರೆ ಹೋಗಿದ್ದರು.

“ಬುಡಕಟ್ಟು ಸಮುದಾಯಗಳಿಗೆ ಸಂಬಂಧಿಸಿದಂತೆ ಸ್ಟ್ಯಾನ್‌ ಸ್ವಾಮಿ ಅವರ ಹೋರಾಟದಿಂದ ತಾನು ಸ್ಫೂರ್ತಿ ಪಡೆದಿದ್ದೇನೆ. ಅವರು ನನ್ನ ಆರಾಧ್ಯ ದೈವ ಮತ್ತು ಮಾರ್ಗದರ್ಶಕರಾಗಿದ್ದಾರೆ. ಆದ್ದರಿಂದ, ನನ್ನ ಖಾಸಗಿ ಜಮೀನಿನಲ್ಲಿ ಸ್ಮಾರಕ ನಿರ್ಮಿಸುವ ಮೂಲಕ ಸ್ವಾಮಿ ಅವರ ಪರಂಪರೆ ಮುಂದುವರೆಸಲು ಬಯಸುತ್ತೇನೆ” ಎಂದು ಸೇಥಿಯಾ ಮನವಿ ಮಾಡಿದ್ದರು.

ಹೈಕೋರ್ಟ್‌ನಲ್ಲಿ ಪ್ರತಿಮೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದ ರಾಜ್ಯ ಸರ್ಕಾರ ಮತ್ತು ಧರ್ಮಪುರಿ ಜಿಲ್ಲಾಧಿಕಾರಿ, “ನಕ್ಸಲರು ಮತ್ತು ಮಾವೋವಾದಿಗಳೊಂದಿಗೆ ನಂಟು ಹೊಂದಿದ್ದ ವ್ಯಕ್ತಿಯ ಕೆಲಸ ಸ್ಮರಿಸಲೆಂದು ಈ ಸ್ಮಾರಕ ನಿರ್ಮಿಸಲಾಗುತ್ತಿದೆ ಎಂದು ಆಕ್ಷೇಪಿಸಿದ್ದರು. ಸ್ಮಾರಕ ನಿರ್ಮಾಣದಿಂದ ಕಾನೂನು ಸುವ್ಯವಸ್ಥೆಗೆ ಅಡ್ಡಿ ಉಂಟಾಗುತ್ತದೆ ಎಂದು ಸರ್ಕಾರ ಆತಂಕ ವ್ಯಕ್ತಪಡಿಸಿತ್ತು.

ಎರಡೂ ಕಡೆಯ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಸ್ಮಾರಕ ನಿರ್ಮಿಸುವಾಗ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಉಂಟಾಗಬಾರದು ಎಂದು ಸೂಚಿಸಿ ಪ್ರತಿಮೆ ನಿರ್ಮಿಸಲು ಅವಕಾಶ ನೀಡಿದೆ.

ಸಾಮಾನ್ಯ ತತ್ವದ ಅನ್ವಯ ತಮ್ಮ ಖಾಸಗಿ ಜಮೀನಿನಲ್ಲಿ ಪ್ರತಿಮೆ ಸ್ಥಾಪಿಸುವ ಹಕ್ಕು ನಾಗರಿಕರಿಗೆ ಇದೆ. ಪ್ರತಿಮೆಯ ಸ್ಥಾಪನೆಯಿಂದ ಯಾವುದೇ ಎರಡು ಸಮುದಾಯಗಳ ನಡುವೆ ಸಂಘರ್ಷ ಉಂಟಾಗಬಾರದು ಅಥವಾ ನಿರ್ದಿಷ್ಟ ಸಮಾಜದ ಭಾವನೆಗಳಿಗೆ ಧಕ್ಕೆ ತರಬಾರದು ಎಂಬುವುದು ಒಂದೇ ನಿರ್ಬಂಧ. ಖಾಸಗಿ ಪಟ್ಟಾ ಭೂಮಿಯಲ್ಲಿ ಪ್ರತಿಮೆ ಸ್ಥಾಪನೆಗೆ ಅನುಮತಿ ನೀಡಿದರೆ ಯಾವುದೇ ಕಾನೂನು ಅಡ್ಡಿ ಇರದು ಎಂದು ನ್ಯಾಯಾಲಯ ಹೇಳಿದೆ. ಸೇಥಿಯಾ ಅವರೇ ಎಲ್ಲಾ ವೆಚ್ಚ ಭರಿಸಿ ಸ್ಮಾರಕ ನಿರ್ಮಿಸುತ್ತಿದ್ದಾರೆ ಎಂಬ ವಿಚಾರವನ್ನೂ ನ್ಯಾಯಾಲಯ ಗಮನಿಸಿದೆ.

ಭೀಮಾ ಕೋರೆಗಾಂವ್‌ ಎಲ್ಗಾರ್‌ ಪರಿಷದ್‌ ಪ್ರಕರಣದಲ್ಲಿ ವಿಚಾರಣಾಧೀನ ಆರೋಪಿಯಾಗಿದ್ದ ಸ್ಟ್ಯಾನ್‌ ಸ್ವಾಮಿ ಅವರು ವೈದ್ಯಕೀಯ ಜಾಮೀನಿನ ನಿರೀಕ್ಷೆಯಲ್ಲೇ ಜುಲೈ 5,2021 ರಂದು ನಿಧನರಾಗಿದ್ದರು.

ಇದನ್ನೂ ಓದಿ : ಅದಾನಿ ಯೋಜನೆಗಳ ತನಿಖೆಗೆ ಆದೇಶಿಸಿದ ಶ್ರೀಲಂಕಾ ಸರ್ಕಾರ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...