ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಬಗ್ಗೆ ವಿಡಂಬನಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಮುಂಬೈನಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಸ್ಟ್ಯಾಂಡ್-ಅಪ್ ಹಾಸ್ಯನಟ ಕುನಾಲ್ ಕಮ್ರಾ ಅವರಿಗೆ ಮದ್ರಾಸ್ ಹೈಕೋರ್ಟ್ ಶುಕ್ರವಾರ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ ಎಂದು ಲೈವ್ ಲಾ ವರದಿ ಮಾಡಿದೆ. ನ್ಯಾಯಮೂರ್ತಿ ಸುಂದರ್ ಮೋಹನ್ ಅವರು ಏಪ್ರಿಲ್ 7 ರವರೆಗೆ ಕುನಾಲ್ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದ್ದಾರೆ. ಹಾಸ್ಯನಟ ಕುನಾಲ್ ಕಾಮ್ರಾಗೆ
ಕುನಾಲ್ ಅವರು ನಿರೀಕ್ಷಣಾ ಜಾಮೀನಿಗಾಗಿ ಮಹಾರಾಷ್ಟ್ರದ ನ್ಯಾಯಾಲಯಗಳನ್ನು ಸಂಪರ್ಕಿಸಲು ಸಾಧ್ಯವಾಗುವುದಿಲ್ಲ ಎಂಬುವುದನ್ನು ಪ್ರಾಥಮಿಕ ಹಂತದಲ್ಲಿ ಕೋರ್ಟ್ ಒಪ್ಪಿಕೊಂಡಿದೆ ಎಂದು ನ್ಯಾಯಮೂರ್ತಿ ಹೇಳಿದ್ದಾರೆ. ಅವರ ವಿರುದ್ಧದ ಪ್ರಕರಣದ ತನಿಖೆ ನಡೆಸುತ್ತಿರುವ ಮುಂಬೈನ ಖಾರ್ ಪೊಲೀಸ್ ಠಾಣೆಗೆ ಖಾಸಗಿ ನೋಟಿಸ್ ಕಳುಹಿಸಲು ಅವರು ಕುನಾಲ್ ಅವರಿಗೆ ಅವಕಾಶ ನೀಡಿದ್ದಾರೆ.
ತಮಿಳುನಾಡಿನ ವಿಲ್ಲುಪುರಂ ಪಟ್ಟಣದ ಖಾಯಂ ನಿವಾಸಿಯಾಗಿರುವುದರಿಂದ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಆಲಿಸುವ ಅಧಿಕಾರ ಮದ್ರಾಸ್ ಹೈಕೋರ್ಟ್ಗೆ ಇದೆ ಎಂದು ಹಾಸ್ಯನಟ ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ. ಹಾಸ್ಯನಟ ಕುನಾಲ್ ಕಾಮ್ರಾಗೆ
ಮಾರ್ಚ್ 23 ರಂದು, ಕುನಾಲ್ ಅವರು ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದರು. ಅದರಲ್ಲಿ ಅವರು ಹಿಂದಿ ಚಲನಚಿತ್ರದ ಹಾಡಿನ ವಿಡಂಬನಾತ್ಮಕ ಆವೃತ್ತಿಯನ್ನು ಪ್ರದರ್ಶಿಸಿ ಶಿಂಧೆ ಅವರನ್ನು ಟೀಕಿಸಿದ್ದರು.
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ 2022 ರಲ್ಲಿ ನಡೆದ ದಂಗೆಯೆದ್ದಿದ್ದ ಶಿಂಧೆ ಸರ್ಕಾರ ಪತನಗೊಳ್ಳಲು ಕಾರಣರಾಗಿದ್ದರು. ಮಹಾರಾಷ್ಟ್ರದ ಈ ರಾಜಕೀಯ ಬಿಕ್ಕಟ್ಟಿನ ಬಗ್ಗೆ ಹೇಳಿದ್ದ ಕುನಾಲ್ ಅವರು ಶಿಂಧೆಯನ್ನು “ದೇಶದ್ರೋಹಿ” ಎಂದು ಉಲ್ಲೇಖಿಸಿದ್ದರು. ಆದಾಗ್ಯೂ, ಅವರು ಶಿಂಧೆ ಹೆಸರನ್ನು ನೇರವಾಗಿ ಉಲ್ಲೇಖಿಸಿರಲಿಲ್ಲ.
ಪ್ರದರ್ಶನದ ತುಣುಕು ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ವೈರಲಾಗದ ನಂತರ, ಮಾರ್ಚ್ 23 ರ ರಾತ್ರಿ ಶಿಂಧೆ ನೇತೃತ್ವದ ಶಿವಸೇನೆಯ ಕಾರ್ಯಕರ್ತರು ಮುಂಬೈನ ಖಾರ್ ಪ್ರದೇಶದಲ್ಲಿರುವ ದಿ ಹ್ಯಾಬಿಟಾಟ್ ಸ್ಟುಡಿಯೋವನ್ನು ಧ್ವಂಸಗೊಳಿಸಿದ್ದರು. ಯಾಕೆಂದರೆ ಈ ಕಾರ್ಯಕ್ರಮ ಅಲ್ಲಿ ಅದು ರೆಕಾರ್ಡ್ ಆಗಿತ್ತು.
ಮರುದಿನ, ಮುಂಬೈ ಪೊಲೀಸರು ಮಾನನಷ್ಟ ಮತ್ತು ಸಾರ್ವಜನಿಕ ದುಷ್ಕೃತ್ಯಕ್ಕೆ ಸಂಬಂಧಿಸಿದ ಭಾರತೀಯ ನ್ಯಾಯ ಸಂಹಿತಾ ವಿಭಾಗಗಳ ಅಡಿಯಲ್ಲಿ ಕುನಾಲ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಮಾರ್ಚ್ 31 ರ ಮೊದಲು ವಿಚಾರಣೆಗೆ ಹಾಜರಾಗುವಂತೆ ಕೇಳಿಕೊಂಡು ಪೊಲೀಸರು ಅವರಿಗೆ ಎರಡು ಸಮನ್ಸ್ಗಳನ್ನು ಕಳುಹಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.
ಮುಂಬೈಗೆ ಪ್ರಯಾಣಿಸಲು ಕುನಾಲ್ ಏಳು ದಿನಗಳನ್ನು ಕೋರಿದ್ದರು, ಆದರೆ ನಗರ ಪೊಲೀಸರು ಅವರ ವಿನಂತಿಯನ್ನು ನಿರಾಕರಿಸಿದ್ದರು.
ಈ ನಡುವೆ, ಶಿಂಧೆ ಅವರ ಕಾರ್ಟೂನ್ ಹೊಂದಿರುವ ಪೋಸ್ಟರ್ಗಳ ವಿರುದ್ಧ ಪುಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಪೋಸ್ಟರ್ನಲ್ಲಿ ಕುನಾಲ್ ಅವರ ಪ್ರದರ್ಶನವನ್ನು ಉಲ್ಲೇಖಿಸಲಾಗಿತ್ತು ಎಂದು ದಿ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ. ಶಿಂಧೆ ಅವರ ವ್ಯಂಗ್ಯಚಿತ್ರದ ಜೊತೆಗೆ, “ಥಾಣೆ, ರಿಕ್ಷಾ, ಚಶ್ಮಾ, ದಧಿ, ಗುವಾಹಟಿ ಮತ್ತು ಗದ್ದರ್ [ದೇಶದ್ರೋಹಿ]” ಎಂಬ ಪದಗಳನ್ನು ಮಹಾರಾಷ್ಟ್ರದಲ್ಲಿ ನಿಷೇಧಿಸಲಾಗಿದೆಯೇ ಎಂದು ಪೋಸ್ಟರ್ಗಳು ಪ್ರಶ್ನಿಸಿದ್ದವು. ಪುಣೆಯ ಅಲ್ಕಾ ಟಾಕೀಸ್ ಬಳಿ ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಪಕ್ಷದಯ ಸದಸ್ಯರು ಈ ಪೋಸ್ಟರ್ಗಳನ್ನು ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ಪುಣೆ ಮುನ್ಸಿಪಲ್ ಕಾರ್ಪೊರೇಷನ್ನ ಅಧಿಕಾರಿ ರಾಜೇಂದ್ರ ಕೆವಾಟೆ ನೀಡಿದ ದೂರಿನ ಆಧಾರದ ಮೇಲೆ, ಪೊಲೀಸರು ಮಹಾರಾಷ್ಟ್ರ ಆಸ್ತಿ ವಿರೂಪಗೊಳಿಸುವಿಕೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಬೆಳಗಾವಿ| ಡಿಜಿಟಲ್ ಅರೆಸ್ಟ್ನಿಂದ ಲಕ್ಷಾಂತರ ರೂ. ವಂಚನೆ: ನೊಂದ ವೃದ್ಧ ದಂಪತಿ ಆತ್ಮಹತ್ಯೆ
ಬೆಳಗಾವಿ| ಡಿಜಿಟಲ್ ಅರೆಸ್ಟ್ನಿಂದ ಲಕ್ಷಾಂತರ ರೂ. ವಂಚನೆ: ನೊಂದ ವೃದ್ಧ ದಂಪತಿ ಆತ್ಮಹತ್ಯೆ

