Homeಮುಖಪುಟಮದ್ರಾಸ್ ಹೈಕೋಟ್‌ | ಹಾಸ್ಯನಟ ಕುನಾಲ್ ಕಾಮ್ರಾಗೆ ಏಪ್ರಿಲ್ 7 ರವರೆಗೆ ನಿರೀಕ್ಷಣಾ ಜಾಮೀನು

ಮದ್ರಾಸ್ ಹೈಕೋಟ್‌ | ಹಾಸ್ಯನಟ ಕುನಾಲ್ ಕಾಮ್ರಾಗೆ ಏಪ್ರಿಲ್ 7 ರವರೆಗೆ ನಿರೀಕ್ಷಣಾ ಜಾಮೀನು

- Advertisement -
- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಬಗ್ಗೆ ವಿಡಂಬನಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಮುಂಬೈನಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಸ್ಟ್ಯಾಂಡ್-ಅಪ್ ಹಾಸ್ಯನಟ ಕುನಾಲ್ ಕಮ್ರಾ ಅವರಿಗೆ ಮದ್ರಾಸ್ ಹೈಕೋರ್ಟ್ ಶುಕ್ರವಾರ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ ಎಂದು ಲೈವ್ ಲಾ ವರದಿ ಮಾಡಿದೆ. ನ್ಯಾಯಮೂರ್ತಿ ಸುಂದರ್ ಮೋಹನ್ ಅವರು ಏಪ್ರಿಲ್ 7 ರವರೆಗೆ ಕುನಾಲ್‌ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದ್ದಾರೆ. ಹಾಸ್ಯನಟ ಕುನಾಲ್ ಕಾಮ್ರಾಗೆ

ಕುನಾಲ್ ಅವರು ನಿರೀಕ್ಷಣಾ ಜಾಮೀನಿಗಾಗಿ ಮಹಾರಾಷ್ಟ್ರದ ನ್ಯಾಯಾಲಯಗಳನ್ನು ಸಂಪರ್ಕಿಸಲು ಸಾಧ್ಯವಾಗುವುದಿಲ್ಲ ಎಂಬುವುದನ್ನು ಪ್ರಾಥಮಿಕ ಹಂತದಲ್ಲಿ ಕೋರ್ಟ್‌ ಒಪ್ಪಿಕೊಂಡಿದೆ ಎಂದು ನ್ಯಾಯಮೂರ್ತಿ ಹೇಳಿದ್ದಾರೆ. ಅವರ ವಿರುದ್ಧದ ಪ್ರಕರಣದ ತನಿಖೆ ನಡೆಸುತ್ತಿರುವ ಮುಂಬೈನ ಖಾರ್ ಪೊಲೀಸ್ ಠಾಣೆಗೆ ಖಾಸಗಿ ನೋಟಿಸ್ ಕಳುಹಿಸಲು ಅವರು ಕುನಾಲ್ ಅವರಿಗೆ ಅವಕಾಶ ನೀಡಿದ್ದಾರೆ.

ತಮಿಳುನಾಡಿನ ವಿಲ್ಲುಪುರಂ ಪಟ್ಟಣದ ಖಾಯಂ ನಿವಾಸಿಯಾಗಿರುವುದರಿಂದ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಆಲಿಸುವ ಅಧಿಕಾರ ಮದ್ರಾಸ್ ಹೈಕೋರ್ಟ್‌ಗೆ ಇದೆ ಎಂದು ಹಾಸ್ಯನಟ ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ. ಹಾಸ್ಯನಟ ಕುನಾಲ್ ಕಾಮ್ರಾಗೆ

ಮಾರ್ಚ್ 23 ರಂದು, ಕುನಾಲ್ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದರು. ಅದರಲ್ಲಿ ಅವರು ಹಿಂದಿ ಚಲನಚಿತ್ರದ ಹಾಡಿನ ವಿಡಂಬನಾತ್ಮಕ ಆವೃತ್ತಿಯನ್ನು ಪ್ರದರ್ಶಿಸಿ ಶಿಂಧೆ ಅವರನ್ನು ಟೀಕಿಸಿದ್ದರು.

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ 2022 ರಲ್ಲಿ ನಡೆದ ದಂಗೆಯೆದ್ದಿದ್ದ ಶಿಂಧೆ ಸರ್ಕಾರ ಪತನಗೊಳ್ಳಲು ಕಾರಣರಾಗಿದ್ದರು. ಮಹಾರಾಷ್ಟ್ರದ ಈ ರಾಜಕೀಯ ಬಿಕ್ಕಟ್ಟಿನ ಬಗ್ಗೆ ಹೇಳಿದ್ದ ಕುನಾಲ್ ಅವರು ಶಿಂಧೆಯನ್ನು “ದೇಶದ್ರೋಹಿ” ಎಂದು ಉಲ್ಲೇಖಿಸಿದ್ದರು. ಆದಾಗ್ಯೂ, ಅವರು ಶಿಂಧೆ ಹೆಸರನ್ನು ನೇರವಾಗಿ ಉಲ್ಲೇಖಿಸಿರಲಿಲ್ಲ.

ಪ್ರದರ್ಶನದ ತುಣುಕು ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ವೈರಲಾಗದ ನಂತರ, ಮಾರ್ಚ್ 23 ರ ರಾತ್ರಿ ಶಿಂಧೆ ನೇತೃತ್ವದ ಶಿವಸೇನೆಯ ಕಾರ್ಯಕರ್ತರು ಮುಂಬೈನ ಖಾರ್ ಪ್ರದೇಶದಲ್ಲಿರುವ ದಿ ಹ್ಯಾಬಿಟಾಟ್ ಸ್ಟುಡಿಯೋವನ್ನು ಧ್ವಂಸಗೊಳಿಸಿದ್ದರು. ಯಾಕೆಂದರೆ ಈ ಕಾರ್ಯಕ್ರಮ ಅಲ್ಲಿ ಅದು ರೆಕಾರ್ಡ್ ಆಗಿತ್ತು.

ಮರುದಿನ, ಮುಂಬೈ ಪೊಲೀಸರು ಮಾನನಷ್ಟ ಮತ್ತು ಸಾರ್ವಜನಿಕ ದುಷ್ಕೃತ್ಯಕ್ಕೆ ಸಂಬಂಧಿಸಿದ ಭಾರತೀಯ ನ್ಯಾಯ ಸಂಹಿತಾ ವಿಭಾಗಗಳ ಅಡಿಯಲ್ಲಿ ಕುನಾಲ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಮಾರ್ಚ್ 31 ರ ಮೊದಲು ವಿಚಾರಣೆಗೆ ಹಾಜರಾಗುವಂತೆ ಕೇಳಿಕೊಂಡು ಪೊಲೀಸರು ಅವರಿಗೆ ಎರಡು ಸಮನ್ಸ್‌ಗಳನ್ನು ಕಳುಹಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮುಂಬೈಗೆ ಪ್ರಯಾಣಿಸಲು ಕುನಾಲ್ ಏಳು ದಿನಗಳನ್ನು ಕೋರಿದ್ದರು, ಆದರೆ ನಗರ ಪೊಲೀಸರು ಅವರ ವಿನಂತಿಯನ್ನು ನಿರಾಕರಿಸಿದ್ದರು.

ಈ ನಡುವೆ, ಶಿಂಧೆ ಅವರ ಕಾರ್ಟೂನ್ ಹೊಂದಿರುವ ಪೋಸ್ಟರ್‌ಗಳ ವಿರುದ್ಧ ಪುಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಈ ಪೋಸ್ಟರ್‌ನಲ್ಲಿ ಕುನಾಲ್ ಅವರ ಪ್ರದರ್ಶನವನ್ನು ಉಲ್ಲೇಖಿಸಲಾಗಿತ್ತು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಶಿಂಧೆ ಅವರ ವ್ಯಂಗ್ಯಚಿತ್ರದ ಜೊತೆಗೆ, “ಥಾಣೆ, ರಿಕ್ಷಾ, ಚಶ್ಮಾ, ದಧಿ, ಗುವಾಹಟಿ ಮತ್ತು ಗದ್ದರ್ [ದೇಶದ್ರೋಹಿ]” ಎಂಬ ಪದಗಳನ್ನು ಮಹಾರಾಷ್ಟ್ರದಲ್ಲಿ ನಿಷೇಧಿಸಲಾಗಿದೆಯೇ ಎಂದು ಪೋಸ್ಟರ್‌ಗಳು ಪ್ರಶ್ನಿಸಿದ್ದವು. ಪುಣೆಯ ಅಲ್ಕಾ ಟಾಕೀಸ್ ಬಳಿ ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಪಕ್ಷದಯ ಸದಸ್ಯರು ಈ ಪೋಸ್ಟರ್‌ಗಳನ್ನು ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಪುಣೆ ಮುನ್ಸಿಪಲ್ ಕಾರ್ಪೊರೇಷನ್‌ನ ಅಧಿಕಾರಿ ರಾಜೇಂದ್ರ ಕೆವಾಟೆ ನೀಡಿದ ದೂರಿನ ಆಧಾರದ ಮೇಲೆ, ಪೊಲೀಸರು ಮಹಾರಾಷ್ಟ್ರ ಆಸ್ತಿ ವಿರೂಪಗೊಳಿಸುವಿಕೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬೆಳಗಾವಿ| ಡಿಜಿಟಲ್ ಅರೆಸ್ಟ್‌ನಿಂದ ಲಕ್ಷಾಂತರ ರೂ. ವಂಚನೆ: ನೊಂದ ವೃದ್ಧ ದಂಪತಿ ಆತ್ಮಹತ್ಯೆ

ಬೆಳಗಾವಿ| ಡಿಜಿಟಲ್ ಅರೆಸ್ಟ್‌ನಿಂದ ಲಕ್ಷಾಂತರ ರೂ. ವಂಚನೆ: ನೊಂದ ವೃದ್ಧ ದಂಪತಿ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...