Homeಮುಖಪುಟತಮಿಳುನಾಡಿನಲ್ಲಿ 'ಮರ್ಯಾದಾ ಹತ್ಯೆ' ಹೆಚ್ಚಳಕ್ಕೆ ಮದ್ರಾಸ್ ಹೈಕೋರ್ಟ್ ಕಳವಳ: ದಲಿತ ವಿದ್ಯಾರ್ಥಿ ಸಾವಿನ ತನಿಖೆ ಸಿಐಡಿಗೆ...

ತಮಿಳುನಾಡಿನಲ್ಲಿ ‘ಮರ್ಯಾದಾ ಹತ್ಯೆ’ ಹೆಚ್ಚಳಕ್ಕೆ ಮದ್ರಾಸ್ ಹೈಕೋರ್ಟ್ ಕಳವಳ: ದಲಿತ ವಿದ್ಯಾರ್ಥಿ ಸಾವಿನ ತನಿಖೆ ಸಿಐಡಿಗೆ ವರ್ಗಾವಣೆ

- Advertisement -
- Advertisement -

ತಮಿಳುನಾಡಿನಲ್ಲಿ ಹೆಚ್ಚುತ್ತಿರುವ ‘ಮರ್ಯಾದಾ ಹತ್ಯೆ’ಗಳ ಬಗ್ಗೆ ಸೋಮವಾರ (ಆ.4) ಮದ್ರಾಸ್ ಹೈಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಇಂತಹ ಘೋರ ಅಪರಾಧಗಳು ಏಕೆ ಕೊನೆಯಾಗುತ್ತಿಲ್ಲ ಎಂದು ಪ್ರಶ್ನಿಸಿದೆ.

ಈ ವರ್ಷದ ಮೇ ತಿಂಗಳಲ್ಲಿ ಕಡಲೂರು ಜಿಲ್ಲೆಯಲ್ಲಿ ನಡೆದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಯೊಬ್ಬರ ಮರ್ಯಾದಾ ಹತ್ಯೆಯ ಶಂಕಿತ ಪ್ರಕರಣವನ್ನು ಸ್ಥಳೀಯ ಪೊಲೀಸರಿಂದ ಅಪರಾಧ ಶಾಖೆ-ಸಿಐಡಿಗೆ ವರ್ಗಾಯಿಸುವಾಗ ನ್ಯಾಯಮೂರ್ತಿ ಪಿ ವೇಲ್ಮುರುಗನ್ ಮೇಲಿನ ಪ್ರಶ್ನೆ ಎತ್ತಿದ್ದಾರೆ.

“ರಾಜ್ಯದಲ್ಲಿ ಮರ್ಯಾದಾ ಹತ್ಯೆಯ ಹಲವಾರು ಪ್ರಕರಣಗಳು ವರದಿಯಾಗುತ್ತಿವೆ. ಆದರೆ, ದುರದೃಷ್ಟವಶಾತ್ ಅಂತಹ ಅಪರಾಧಗಳಿಗೆ ಕೊನೆಯಿಲ್ಲದಂತಾಗಿದೆ. ಮರ್ಯಾದಾ ಹತ್ಯೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ” ಎಂದು ನ್ಯಾ. ವೇಲ್ಮುರುಗನ್ ಹೇಳಿದ್ದು. ಇಂತಹ ಅಪರಾಧಗಳ ಹಿಂದಿನ ಸತ್ಯ ಮುನ್ನೆಲೆಗೆ ಬರುತ್ತಿಲ್ಲ ಎಂದಿದ್ದಾರೆ.

ಕಡಲೂರು ಜಿಲ್ಲೆಯ ಅರಸಕುಲಿ ಗ್ರಾಮದ ಬಿಕಾಂ ವಿದ್ಯಾರ್ಥಿ, ಮೃತ ಯುವಕ ಎಂ.ಜಯಸೂರ್ಯ ಅವರ ತಂದೆ ಎಂ.ಮುರುಗೇಶನ್ ಅವರು ತನಿಖೆಯನ್ನು ಸಿಐಡಿಗೆ ವರ್ಗಾಯಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು.

ಪ್ರಕರಣದ ದಾಖಲೆಗಳನ್ನು ತಕ್ಷಣವೇ ಸಿಬಿ-ಸಿಐಡಿಗೆ ಹಸ್ತಾಂತರಿಸುವಂತೆ ನ್ಯಾಯಾಧೀಶರು ಪ್ರತಿವಾದಿ ಪೊಲೀಸರಿಗೆ ನಿರ್ದೇಶನ ನೀಡಿದ್ದು, ಸತ್ಯವನ್ನು ಹೊರತರಲು ‘ನ್ಯಾಯಯುತ ತನಿಖೆ’ ನಡೆಸುವಂತೆ ಆದೇಶಿಸಿದ್ದಾರೆ.

ಅರ್ಜಿದಾರರ ಪರವಾಗಿ ಹಾಜರಾದ ವಕೀಲ ಎ ಅರಸುಗಣೇಶನ್, ಮೃತ ಜಯಸೂರ್ಯ ಪ್ರಬಲ ಸಮುದಾಯಕ್ಕೆ ಸೇರಿದ ಹುಡುಗಿಯನ್ನು ಪ್ರೀತಿಸುತ್ತಿದ್ದರು ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಮೇ 18,2025ರಂದು, ಕಾಲೇಜು ಸಹಪಾಠಿ ಪ್ರವೀಣ್ ಎಂಬಾತ ಜಯಸೂರ್ಯ ಅವರನ್ನು ಬಲವಂತವಾಗಿ ಬೈಕ್‌ನಲ್ಲಿ ಕರೆದೊಯ್ದಿದ್ದರು. ಆ ಬಳಿಕ ಜಯಸೂರ್ಯ ವಾಪಸ್ ಬಂದಿಲ್ಲ. ಅವರ ತಂದೆ ಹಲವಾರು ಬಾರಿ ಕರೆ ಮಾಡಿದ್ದರು. ಈ ವೇಳೆ ಒಮ್ಮೆ ಆತ ಪ್ರತಿಕ್ರಿಯಿಸಿದ್ದರು. ತಾನು ಪ್ರವೀಣ್, ಜೀವನ್ ಹಾಗೂ ಇನ್ನೊಬ್ಬ ವ್ಯಕ್ತಿಯೊಂದಿಗೆ ಇರುವುದಾಗಿ ಹೇಳಿದ್ದರು ಎಂದು ವಕೀಲ ಅರಸುಗಣೇಶನ್ ವಿವರಿಸಿದ್ದಾರೆ.

ಆದರೆ, ನಂತರ ಜಯಸೂರ್ಯ ಅವರ ತಂದೆಗೆ ಕುಲ್ಲಂಚವಾಡಿ ಪೊಲೀಸ್ ಠಾಣೆಯಿಂದ ಕರೆ ಬಂದಿತ್ತು. ಅದರಲ್ಲಿ ಜೀವನ್ ನೀಡಿದ ದೂರಿನ ಪ್ರಕಾರ ಅವರ ಮಗ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿಸಲಾಗಿತ್ತು ಎಂದು ವಕೀಲ ಹೇಳಿದ್ದಾರೆ.

ಹುಡುಗಿಯ ಸಮುದಾಯಕ್ಕೆ ಸೇರಿದ ಪ್ರಾಧ್ಯಾಪಕರೊಬ್ಬರು ಘಟನೆ ನಡೆದ ಸ್ಥಳದಲ್ಲಿ ನಿಗೂಢವಾಗಿ ಉಪಸ್ಥಿತರಿದ್ದರಿಂದ, ಕೃತ್ಯದಲ್ಲಿ ಅವರ ಶಂಕೆ ಇದೆ ಎಂದು ವಕೀಲ ವಾದಿಸಿದ್ದಾರೆ.

ಹುಡುಗಿಯ ಸೋದರ ಮಾವ ಜಯಸೂರ್ಯಗೆ ಬೆದರಿಕೆ ಹಾಕಿದ್ದಲ್ಲದೆ, ಆಕೆಯೊಂದಿಗಿನ ಸಂಬಂಧವನ್ನು ಮುಂದುವರಿಸದಂತೆ ಎಚ್ಚರಿಸಿದ್ದರು ಎಂದು ವಕೀಲ ತಿಳಿಸಿದ್ದಾರೆ. ಜಿಲ್ಲಾ ಪೊಲೀಸರ ನಿರ್ಲಕ್ಷ್ಯವನ್ನು ಆರೋಪಿಸಿ, ತನಿಖೆಯನ್ನು ಬೇರೆ ಸಂಸ್ಥೆಗೆ ವಹಿಸಲು ನ್ಯಾಯಾಲಯ ಆದೇಶಿಸಬೇಕೆಂದು ಅವರು ಕೋರಿದ್ದಾರೆ.

ಪೊಲೀಸರ ಪರವಾಗಿ ಹಾಜರಾದ ಸರ್ಕಾರಿ ವಕೀಲರು ತನಿಖೆ ಇನ್ನೂ ನಡೆಯುತ್ತಿದೆ ಮತ್ತು ಪ್ರಾಥಮಿಕ ತನಿಖೆಯಲ್ಲಿ ಇದು ಅತಿವೇಗದ ಚಾಲನೆಯಿಂದ ಸಂಭವಿಸಿದ ಅಪಘಾತ ಎಂದು ಕಂಡುಬಂದಿದೆ ಎಂದು ಹೇಳಿದ್ದಾರೆ.

ಘಟನೆ ನಡೆದ ದಿನ ರಾತ್ರಿ ಮೂವರು ಕಡಲೂರಿನಿಂದ ತಮ್ಮ ಗ್ರಾಮಕ್ಕೆ ಹಿಂತಿರುಗುತ್ತಿದ್ದಾಗ ಅವರ ಬೈಕ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಹೇಳಿದ್ದಾರೆ ಎಂದಿದ್ದಾರೆ.

ಸಾವಿನ ಕಾರಣವನ್ನು ಕಂಡುಹಿಡಿಯಲು ಪೊಲೀಸರು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಆದರೆ, ನ್ಯಾಯಾಧೀಶರು ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಜಯಸೂರ್ಯ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆಯೇ ಅಥವಾ ಯಾರಾದರೂ ಬಲವಂತವಾಗಿ ಕರೆದುಕೊಂಡು ಹೋಗಿ ಕೊಲೆ ಮಾಡಿದ್ದಾರೆಯೇ ಎಂಬುದನ್ನು ಮರಣೋತ್ತರ ಪರೀಕ್ಷೆಯಿಂದ ಬಹಿರಂಗಪಡಿಸಬಹುದೇ ಎಂದು ಕೇಳಿದ್ದಾರೆ.

“ಘಟನೆ ಸಂಭವಿಸಿದ್ದಕ್ಕೂ ಮರಣೋತ್ತರ ಪರೀಕ್ಷೆಗೂ ಯಾವುದೇ ಸಂಬಂಧವಿಲ್ಲ. ಸಮಗ್ರ ತನಿಖೆಯಿಂದ ಮಾತ್ರ ಸತ್ಯ ಹೊರಬರುತ್ತದೆ” ಎಂದು ನ್ಯಾಯಮೂರ್ತಿ ವೇಲ್ಮುರುಗನ್ ಹೇಳಿದ್ದಾರೆ.

ಜಿಲ್ಲಾ ಪೊಲೀಸರ ತನಿಖೆಯ ಬಗ್ಗೆ ನ್ಯಾಯಾಲಯವು ಅನುಮಾನ ವ್ಯಕ್ತಪಡಿಸಿದೆ ಎಂದು ಹೇಳಿದ ನ್ಯಾಯಾಧೀಶರು, ತನಿಖೆಯನ್ನು ವರ್ಗಾಯಿಸಲು ಇದು ಸೂಕ್ತವಾದ ಪ್ರಕರಣವಾಗಿದೆ ಎಂದಿದ್ದಾರೆ.

ಗಮನಾರ್ಹವಾಗಿ, ಹುಡುಗಿ ಪುದುಕ್ಕೂರಪೆಟ್ಟೈ ಮೂಲದವಳು. 2003ರಲ್ಲಿ ಎಂಬಿಸಿ ಸಮುದಾಯಕ್ಕೆ ಸೇರಿದ ಕಣ್ಣಗಿ ಮತ್ತು ಪರಿಶಿಷ್ಟ ಜಾತಿಗೆ ಸೇರಿದ ಮುರುಗೇಶನ್ ಅವರ ಭೀಕರ ಮರ್ಯಾದಾ ಹತ್ಯೆ ನಡೆದ ಹಳ್ಳಿ ಇದು ಎಂದು ಜಯಸೂರ್ಯ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

ಮಾಲೆಗಾಂವ್| ಜಾತಿ ಶ್ರೇಣಿ ಜಾರಿಗೊಳಿಸಿದವರು ಸನಾತನ ಧರ್ಮದ ಭಯೋತ್ಪಾದಕರು – ಎನ್‌ಸಿಪಿ-ಎಸ್‌ಸಿಪಿ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...