Homeಮುಖಪುಟತಮಿಳುನಾಡಿನಲ್ಲಿ 'ಮರ್ಯಾದಾ ಹತ್ಯೆ' ಹೆಚ್ಚಳಕ್ಕೆ ಮದ್ರಾಸ್ ಹೈಕೋರ್ಟ್ ಕಳವಳ: ದಲಿತ ವಿದ್ಯಾರ್ಥಿ ಸಾವಿನ ತನಿಖೆ ಸಿಐಡಿಗೆ...

ತಮಿಳುನಾಡಿನಲ್ಲಿ ‘ಮರ್ಯಾದಾ ಹತ್ಯೆ’ ಹೆಚ್ಚಳಕ್ಕೆ ಮದ್ರಾಸ್ ಹೈಕೋರ್ಟ್ ಕಳವಳ: ದಲಿತ ವಿದ್ಯಾರ್ಥಿ ಸಾವಿನ ತನಿಖೆ ಸಿಐಡಿಗೆ ವರ್ಗಾವಣೆ

- Advertisement -
- Advertisement -

ತಮಿಳುನಾಡಿನಲ್ಲಿ ಹೆಚ್ಚುತ್ತಿರುವ ‘ಮರ್ಯಾದಾ ಹತ್ಯೆ’ಗಳ ಬಗ್ಗೆ ಸೋಮವಾರ (ಆ.4) ಮದ್ರಾಸ್ ಹೈಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಇಂತಹ ಘೋರ ಅಪರಾಧಗಳು ಏಕೆ ಕೊನೆಯಾಗುತ್ತಿಲ್ಲ ಎಂದು ಪ್ರಶ್ನಿಸಿದೆ.

ಈ ವರ್ಷದ ಮೇ ತಿಂಗಳಲ್ಲಿ ಕಡಲೂರು ಜಿಲ್ಲೆಯಲ್ಲಿ ನಡೆದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಯೊಬ್ಬರ ಮರ್ಯಾದಾ ಹತ್ಯೆಯ ಶಂಕಿತ ಪ್ರಕರಣವನ್ನು ಸ್ಥಳೀಯ ಪೊಲೀಸರಿಂದ ಅಪರಾಧ ಶಾಖೆ-ಸಿಐಡಿಗೆ ವರ್ಗಾಯಿಸುವಾಗ ನ್ಯಾಯಮೂರ್ತಿ ಪಿ ವೇಲ್ಮುರುಗನ್ ಮೇಲಿನ ಪ್ರಶ್ನೆ ಎತ್ತಿದ್ದಾರೆ.

“ರಾಜ್ಯದಲ್ಲಿ ಮರ್ಯಾದಾ ಹತ್ಯೆಯ ಹಲವಾರು ಪ್ರಕರಣಗಳು ವರದಿಯಾಗುತ್ತಿವೆ. ಆದರೆ, ದುರದೃಷ್ಟವಶಾತ್ ಅಂತಹ ಅಪರಾಧಗಳಿಗೆ ಕೊನೆಯಿಲ್ಲದಂತಾಗಿದೆ. ಮರ್ಯಾದಾ ಹತ್ಯೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ” ಎಂದು ನ್ಯಾ. ವೇಲ್ಮುರುಗನ್ ಹೇಳಿದ್ದು. ಇಂತಹ ಅಪರಾಧಗಳ ಹಿಂದಿನ ಸತ್ಯ ಮುನ್ನೆಲೆಗೆ ಬರುತ್ತಿಲ್ಲ ಎಂದಿದ್ದಾರೆ.

ಕಡಲೂರು ಜಿಲ್ಲೆಯ ಅರಸಕುಲಿ ಗ್ರಾಮದ ಬಿಕಾಂ ವಿದ್ಯಾರ್ಥಿ, ಮೃತ ಯುವಕ ಎಂ.ಜಯಸೂರ್ಯ ಅವರ ತಂದೆ ಎಂ.ಮುರುಗೇಶನ್ ಅವರು ತನಿಖೆಯನ್ನು ಸಿಐಡಿಗೆ ವರ್ಗಾಯಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು.

ಪ್ರಕರಣದ ದಾಖಲೆಗಳನ್ನು ತಕ್ಷಣವೇ ಸಿಬಿ-ಸಿಐಡಿಗೆ ಹಸ್ತಾಂತರಿಸುವಂತೆ ನ್ಯಾಯಾಧೀಶರು ಪ್ರತಿವಾದಿ ಪೊಲೀಸರಿಗೆ ನಿರ್ದೇಶನ ನೀಡಿದ್ದು, ಸತ್ಯವನ್ನು ಹೊರತರಲು ‘ನ್ಯಾಯಯುತ ತನಿಖೆ’ ನಡೆಸುವಂತೆ ಆದೇಶಿಸಿದ್ದಾರೆ.

ಅರ್ಜಿದಾರರ ಪರವಾಗಿ ಹಾಜರಾದ ವಕೀಲ ಎ ಅರಸುಗಣೇಶನ್, ಮೃತ ಜಯಸೂರ್ಯ ಪ್ರಬಲ ಸಮುದಾಯಕ್ಕೆ ಸೇರಿದ ಹುಡುಗಿಯನ್ನು ಪ್ರೀತಿಸುತ್ತಿದ್ದರು ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಮೇ 18,2025ರಂದು, ಕಾಲೇಜು ಸಹಪಾಠಿ ಪ್ರವೀಣ್ ಎಂಬಾತ ಜಯಸೂರ್ಯ ಅವರನ್ನು ಬಲವಂತವಾಗಿ ಬೈಕ್‌ನಲ್ಲಿ ಕರೆದೊಯ್ದಿದ್ದರು. ಆ ಬಳಿಕ ಜಯಸೂರ್ಯ ವಾಪಸ್ ಬಂದಿಲ್ಲ. ಅವರ ತಂದೆ ಹಲವಾರು ಬಾರಿ ಕರೆ ಮಾಡಿದ್ದರು. ಈ ವೇಳೆ ಒಮ್ಮೆ ಆತ ಪ್ರತಿಕ್ರಿಯಿಸಿದ್ದರು. ತಾನು ಪ್ರವೀಣ್, ಜೀವನ್ ಹಾಗೂ ಇನ್ನೊಬ್ಬ ವ್ಯಕ್ತಿಯೊಂದಿಗೆ ಇರುವುದಾಗಿ ಹೇಳಿದ್ದರು ಎಂದು ವಕೀಲ ಅರಸುಗಣೇಶನ್ ವಿವರಿಸಿದ್ದಾರೆ.

ಆದರೆ, ನಂತರ ಜಯಸೂರ್ಯ ಅವರ ತಂದೆಗೆ ಕುಲ್ಲಂಚವಾಡಿ ಪೊಲೀಸ್ ಠಾಣೆಯಿಂದ ಕರೆ ಬಂದಿತ್ತು. ಅದರಲ್ಲಿ ಜೀವನ್ ನೀಡಿದ ದೂರಿನ ಪ್ರಕಾರ ಅವರ ಮಗ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿಸಲಾಗಿತ್ತು ಎಂದು ವಕೀಲ ಹೇಳಿದ್ದಾರೆ.

ಹುಡುಗಿಯ ಸಮುದಾಯಕ್ಕೆ ಸೇರಿದ ಪ್ರಾಧ್ಯಾಪಕರೊಬ್ಬರು ಘಟನೆ ನಡೆದ ಸ್ಥಳದಲ್ಲಿ ನಿಗೂಢವಾಗಿ ಉಪಸ್ಥಿತರಿದ್ದರಿಂದ, ಕೃತ್ಯದಲ್ಲಿ ಅವರ ಶಂಕೆ ಇದೆ ಎಂದು ವಕೀಲ ವಾದಿಸಿದ್ದಾರೆ.

ಹುಡುಗಿಯ ಸೋದರ ಮಾವ ಜಯಸೂರ್ಯಗೆ ಬೆದರಿಕೆ ಹಾಕಿದ್ದಲ್ಲದೆ, ಆಕೆಯೊಂದಿಗಿನ ಸಂಬಂಧವನ್ನು ಮುಂದುವರಿಸದಂತೆ ಎಚ್ಚರಿಸಿದ್ದರು ಎಂದು ವಕೀಲ ತಿಳಿಸಿದ್ದಾರೆ. ಜಿಲ್ಲಾ ಪೊಲೀಸರ ನಿರ್ಲಕ್ಷ್ಯವನ್ನು ಆರೋಪಿಸಿ, ತನಿಖೆಯನ್ನು ಬೇರೆ ಸಂಸ್ಥೆಗೆ ವಹಿಸಲು ನ್ಯಾಯಾಲಯ ಆದೇಶಿಸಬೇಕೆಂದು ಅವರು ಕೋರಿದ್ದಾರೆ.

ಪೊಲೀಸರ ಪರವಾಗಿ ಹಾಜರಾದ ಸರ್ಕಾರಿ ವಕೀಲರು ತನಿಖೆ ಇನ್ನೂ ನಡೆಯುತ್ತಿದೆ ಮತ್ತು ಪ್ರಾಥಮಿಕ ತನಿಖೆಯಲ್ಲಿ ಇದು ಅತಿವೇಗದ ಚಾಲನೆಯಿಂದ ಸಂಭವಿಸಿದ ಅಪಘಾತ ಎಂದು ಕಂಡುಬಂದಿದೆ ಎಂದು ಹೇಳಿದ್ದಾರೆ.

ಘಟನೆ ನಡೆದ ದಿನ ರಾತ್ರಿ ಮೂವರು ಕಡಲೂರಿನಿಂದ ತಮ್ಮ ಗ್ರಾಮಕ್ಕೆ ಹಿಂತಿರುಗುತ್ತಿದ್ದಾಗ ಅವರ ಬೈಕ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಹೇಳಿದ್ದಾರೆ ಎಂದಿದ್ದಾರೆ.

ಸಾವಿನ ಕಾರಣವನ್ನು ಕಂಡುಹಿಡಿಯಲು ಪೊಲೀಸರು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಆದರೆ, ನ್ಯಾಯಾಧೀಶರು ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಜಯಸೂರ್ಯ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆಯೇ ಅಥವಾ ಯಾರಾದರೂ ಬಲವಂತವಾಗಿ ಕರೆದುಕೊಂಡು ಹೋಗಿ ಕೊಲೆ ಮಾಡಿದ್ದಾರೆಯೇ ಎಂಬುದನ್ನು ಮರಣೋತ್ತರ ಪರೀಕ್ಷೆಯಿಂದ ಬಹಿರಂಗಪಡಿಸಬಹುದೇ ಎಂದು ಕೇಳಿದ್ದಾರೆ.

“ಘಟನೆ ಸಂಭವಿಸಿದ್ದಕ್ಕೂ ಮರಣೋತ್ತರ ಪರೀಕ್ಷೆಗೂ ಯಾವುದೇ ಸಂಬಂಧವಿಲ್ಲ. ಸಮಗ್ರ ತನಿಖೆಯಿಂದ ಮಾತ್ರ ಸತ್ಯ ಹೊರಬರುತ್ತದೆ” ಎಂದು ನ್ಯಾಯಮೂರ್ತಿ ವೇಲ್ಮುರುಗನ್ ಹೇಳಿದ್ದಾರೆ.

ಜಿಲ್ಲಾ ಪೊಲೀಸರ ತನಿಖೆಯ ಬಗ್ಗೆ ನ್ಯಾಯಾಲಯವು ಅನುಮಾನ ವ್ಯಕ್ತಪಡಿಸಿದೆ ಎಂದು ಹೇಳಿದ ನ್ಯಾಯಾಧೀಶರು, ತನಿಖೆಯನ್ನು ವರ್ಗಾಯಿಸಲು ಇದು ಸೂಕ್ತವಾದ ಪ್ರಕರಣವಾಗಿದೆ ಎಂದಿದ್ದಾರೆ.

ಗಮನಾರ್ಹವಾಗಿ, ಹುಡುಗಿ ಪುದುಕ್ಕೂರಪೆಟ್ಟೈ ಮೂಲದವಳು. 2003ರಲ್ಲಿ ಎಂಬಿಸಿ ಸಮುದಾಯಕ್ಕೆ ಸೇರಿದ ಕಣ್ಣಗಿ ಮತ್ತು ಪರಿಶಿಷ್ಟ ಜಾತಿಗೆ ಸೇರಿದ ಮುರುಗೇಶನ್ ಅವರ ಭೀಕರ ಮರ್ಯಾದಾ ಹತ್ಯೆ ನಡೆದ ಹಳ್ಳಿ ಇದು ಎಂದು ಜಯಸೂರ್ಯ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

ಮಾಲೆಗಾಂವ್| ಜಾತಿ ಶ್ರೇಣಿ ಜಾರಿಗೊಳಿಸಿದವರು ಸನಾತನ ಧರ್ಮದ ಭಯೋತ್ಪಾದಕರು – ಎನ್‌ಸಿಪಿ-ಎಸ್‌ಸಿಪಿ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...