Homeಮುಖಪುಟತಮಿಳುನಾಡಿನಲ್ಲಿ 'ಮರ್ಯಾದಾ ಹತ್ಯೆ' ಹೆಚ್ಚಳಕ್ಕೆ ಮದ್ರಾಸ್ ಹೈಕೋರ್ಟ್ ಕಳವಳ: ದಲಿತ ವಿದ್ಯಾರ್ಥಿ ಸಾವಿನ ತನಿಖೆ ಸಿಐಡಿಗೆ...

ತಮಿಳುನಾಡಿನಲ್ಲಿ ‘ಮರ್ಯಾದಾ ಹತ್ಯೆ’ ಹೆಚ್ಚಳಕ್ಕೆ ಮದ್ರಾಸ್ ಹೈಕೋರ್ಟ್ ಕಳವಳ: ದಲಿತ ವಿದ್ಯಾರ್ಥಿ ಸಾವಿನ ತನಿಖೆ ಸಿಐಡಿಗೆ ವರ್ಗಾವಣೆ

- Advertisement -
- Advertisement -

ತಮಿಳುನಾಡಿನಲ್ಲಿ ಹೆಚ್ಚುತ್ತಿರುವ ‘ಮರ್ಯಾದಾ ಹತ್ಯೆ’ಗಳ ಬಗ್ಗೆ ಸೋಮವಾರ (ಆ.4) ಮದ್ರಾಸ್ ಹೈಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಇಂತಹ ಘೋರ ಅಪರಾಧಗಳು ಏಕೆ ಕೊನೆಯಾಗುತ್ತಿಲ್ಲ ಎಂದು ಪ್ರಶ್ನಿಸಿದೆ.

ಈ ವರ್ಷದ ಮೇ ತಿಂಗಳಲ್ಲಿ ಕಡಲೂರು ಜಿಲ್ಲೆಯಲ್ಲಿ ನಡೆದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಯೊಬ್ಬರ ಮರ್ಯಾದಾ ಹತ್ಯೆಯ ಶಂಕಿತ ಪ್ರಕರಣವನ್ನು ಸ್ಥಳೀಯ ಪೊಲೀಸರಿಂದ ಅಪರಾಧ ಶಾಖೆ-ಸಿಐಡಿಗೆ ವರ್ಗಾಯಿಸುವಾಗ ನ್ಯಾಯಮೂರ್ತಿ ಪಿ ವೇಲ್ಮುರುಗನ್ ಮೇಲಿನ ಪ್ರಶ್ನೆ ಎತ್ತಿದ್ದಾರೆ.

“ರಾಜ್ಯದಲ್ಲಿ ಮರ್ಯಾದಾ ಹತ್ಯೆಯ ಹಲವಾರು ಪ್ರಕರಣಗಳು ವರದಿಯಾಗುತ್ತಿವೆ. ಆದರೆ, ದುರದೃಷ್ಟವಶಾತ್ ಅಂತಹ ಅಪರಾಧಗಳಿಗೆ ಕೊನೆಯಿಲ್ಲದಂತಾಗಿದೆ. ಮರ್ಯಾದಾ ಹತ್ಯೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ” ಎಂದು ನ್ಯಾ. ವೇಲ್ಮುರುಗನ್ ಹೇಳಿದ್ದು. ಇಂತಹ ಅಪರಾಧಗಳ ಹಿಂದಿನ ಸತ್ಯ ಮುನ್ನೆಲೆಗೆ ಬರುತ್ತಿಲ್ಲ ಎಂದಿದ್ದಾರೆ.

ಕಡಲೂರು ಜಿಲ್ಲೆಯ ಅರಸಕುಲಿ ಗ್ರಾಮದ ಬಿಕಾಂ ವಿದ್ಯಾರ್ಥಿ, ಮೃತ ಯುವಕ ಎಂ.ಜಯಸೂರ್ಯ ಅವರ ತಂದೆ ಎಂ.ಮುರುಗೇಶನ್ ಅವರು ತನಿಖೆಯನ್ನು ಸಿಐಡಿಗೆ ವರ್ಗಾಯಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು.

ಪ್ರಕರಣದ ದಾಖಲೆಗಳನ್ನು ತಕ್ಷಣವೇ ಸಿಬಿ-ಸಿಐಡಿಗೆ ಹಸ್ತಾಂತರಿಸುವಂತೆ ನ್ಯಾಯಾಧೀಶರು ಪ್ರತಿವಾದಿ ಪೊಲೀಸರಿಗೆ ನಿರ್ದೇಶನ ನೀಡಿದ್ದು, ಸತ್ಯವನ್ನು ಹೊರತರಲು ‘ನ್ಯಾಯಯುತ ತನಿಖೆ’ ನಡೆಸುವಂತೆ ಆದೇಶಿಸಿದ್ದಾರೆ.

ಅರ್ಜಿದಾರರ ಪರವಾಗಿ ಹಾಜರಾದ ವಕೀಲ ಎ ಅರಸುಗಣೇಶನ್, ಮೃತ ಜಯಸೂರ್ಯ ಪ್ರಬಲ ಸಮುದಾಯಕ್ಕೆ ಸೇರಿದ ಹುಡುಗಿಯನ್ನು ಪ್ರೀತಿಸುತ್ತಿದ್ದರು ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಮೇ 18,2025ರಂದು, ಕಾಲೇಜು ಸಹಪಾಠಿ ಪ್ರವೀಣ್ ಎಂಬಾತ ಜಯಸೂರ್ಯ ಅವರನ್ನು ಬಲವಂತವಾಗಿ ಬೈಕ್‌ನಲ್ಲಿ ಕರೆದೊಯ್ದಿದ್ದರು. ಆ ಬಳಿಕ ಜಯಸೂರ್ಯ ವಾಪಸ್ ಬಂದಿಲ್ಲ. ಅವರ ತಂದೆ ಹಲವಾರು ಬಾರಿ ಕರೆ ಮಾಡಿದ್ದರು. ಈ ವೇಳೆ ಒಮ್ಮೆ ಆತ ಪ್ರತಿಕ್ರಿಯಿಸಿದ್ದರು. ತಾನು ಪ್ರವೀಣ್, ಜೀವನ್ ಹಾಗೂ ಇನ್ನೊಬ್ಬ ವ್ಯಕ್ತಿಯೊಂದಿಗೆ ಇರುವುದಾಗಿ ಹೇಳಿದ್ದರು ಎಂದು ವಕೀಲ ಅರಸುಗಣೇಶನ್ ವಿವರಿಸಿದ್ದಾರೆ.

ಆದರೆ, ನಂತರ ಜಯಸೂರ್ಯ ಅವರ ತಂದೆಗೆ ಕುಲ್ಲಂಚವಾಡಿ ಪೊಲೀಸ್ ಠಾಣೆಯಿಂದ ಕರೆ ಬಂದಿತ್ತು. ಅದರಲ್ಲಿ ಜೀವನ್ ನೀಡಿದ ದೂರಿನ ಪ್ರಕಾರ ಅವರ ಮಗ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿಸಲಾಗಿತ್ತು ಎಂದು ವಕೀಲ ಹೇಳಿದ್ದಾರೆ.

ಹುಡುಗಿಯ ಸಮುದಾಯಕ್ಕೆ ಸೇರಿದ ಪ್ರಾಧ್ಯಾಪಕರೊಬ್ಬರು ಘಟನೆ ನಡೆದ ಸ್ಥಳದಲ್ಲಿ ನಿಗೂಢವಾಗಿ ಉಪಸ್ಥಿತರಿದ್ದರಿಂದ, ಕೃತ್ಯದಲ್ಲಿ ಅವರ ಶಂಕೆ ಇದೆ ಎಂದು ವಕೀಲ ವಾದಿಸಿದ್ದಾರೆ.

ಹುಡುಗಿಯ ಸೋದರ ಮಾವ ಜಯಸೂರ್ಯಗೆ ಬೆದರಿಕೆ ಹಾಕಿದ್ದಲ್ಲದೆ, ಆಕೆಯೊಂದಿಗಿನ ಸಂಬಂಧವನ್ನು ಮುಂದುವರಿಸದಂತೆ ಎಚ್ಚರಿಸಿದ್ದರು ಎಂದು ವಕೀಲ ತಿಳಿಸಿದ್ದಾರೆ. ಜಿಲ್ಲಾ ಪೊಲೀಸರ ನಿರ್ಲಕ್ಷ್ಯವನ್ನು ಆರೋಪಿಸಿ, ತನಿಖೆಯನ್ನು ಬೇರೆ ಸಂಸ್ಥೆಗೆ ವಹಿಸಲು ನ್ಯಾಯಾಲಯ ಆದೇಶಿಸಬೇಕೆಂದು ಅವರು ಕೋರಿದ್ದಾರೆ.

ಪೊಲೀಸರ ಪರವಾಗಿ ಹಾಜರಾದ ಸರ್ಕಾರಿ ವಕೀಲರು ತನಿಖೆ ಇನ್ನೂ ನಡೆಯುತ್ತಿದೆ ಮತ್ತು ಪ್ರಾಥಮಿಕ ತನಿಖೆಯಲ್ಲಿ ಇದು ಅತಿವೇಗದ ಚಾಲನೆಯಿಂದ ಸಂಭವಿಸಿದ ಅಪಘಾತ ಎಂದು ಕಂಡುಬಂದಿದೆ ಎಂದು ಹೇಳಿದ್ದಾರೆ.

ಘಟನೆ ನಡೆದ ದಿನ ರಾತ್ರಿ ಮೂವರು ಕಡಲೂರಿನಿಂದ ತಮ್ಮ ಗ್ರಾಮಕ್ಕೆ ಹಿಂತಿರುಗುತ್ತಿದ್ದಾಗ ಅವರ ಬೈಕ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಹೇಳಿದ್ದಾರೆ ಎಂದಿದ್ದಾರೆ.

ಸಾವಿನ ಕಾರಣವನ್ನು ಕಂಡುಹಿಡಿಯಲು ಪೊಲೀಸರು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಆದರೆ, ನ್ಯಾಯಾಧೀಶರು ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಜಯಸೂರ್ಯ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆಯೇ ಅಥವಾ ಯಾರಾದರೂ ಬಲವಂತವಾಗಿ ಕರೆದುಕೊಂಡು ಹೋಗಿ ಕೊಲೆ ಮಾಡಿದ್ದಾರೆಯೇ ಎಂಬುದನ್ನು ಮರಣೋತ್ತರ ಪರೀಕ್ಷೆಯಿಂದ ಬಹಿರಂಗಪಡಿಸಬಹುದೇ ಎಂದು ಕೇಳಿದ್ದಾರೆ.

“ಘಟನೆ ಸಂಭವಿಸಿದ್ದಕ್ಕೂ ಮರಣೋತ್ತರ ಪರೀಕ್ಷೆಗೂ ಯಾವುದೇ ಸಂಬಂಧವಿಲ್ಲ. ಸಮಗ್ರ ತನಿಖೆಯಿಂದ ಮಾತ್ರ ಸತ್ಯ ಹೊರಬರುತ್ತದೆ” ಎಂದು ನ್ಯಾಯಮೂರ್ತಿ ವೇಲ್ಮುರುಗನ್ ಹೇಳಿದ್ದಾರೆ.

ಜಿಲ್ಲಾ ಪೊಲೀಸರ ತನಿಖೆಯ ಬಗ್ಗೆ ನ್ಯಾಯಾಲಯವು ಅನುಮಾನ ವ್ಯಕ್ತಪಡಿಸಿದೆ ಎಂದು ಹೇಳಿದ ನ್ಯಾಯಾಧೀಶರು, ತನಿಖೆಯನ್ನು ವರ್ಗಾಯಿಸಲು ಇದು ಸೂಕ್ತವಾದ ಪ್ರಕರಣವಾಗಿದೆ ಎಂದಿದ್ದಾರೆ.

ಗಮನಾರ್ಹವಾಗಿ, ಹುಡುಗಿ ಪುದುಕ್ಕೂರಪೆಟ್ಟೈ ಮೂಲದವಳು. 2003ರಲ್ಲಿ ಎಂಬಿಸಿ ಸಮುದಾಯಕ್ಕೆ ಸೇರಿದ ಕಣ್ಣಗಿ ಮತ್ತು ಪರಿಶಿಷ್ಟ ಜಾತಿಗೆ ಸೇರಿದ ಮುರುಗೇಶನ್ ಅವರ ಭೀಕರ ಮರ್ಯಾದಾ ಹತ್ಯೆ ನಡೆದ ಹಳ್ಳಿ ಇದು ಎಂದು ಜಯಸೂರ್ಯ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

ಮಾಲೆಗಾಂವ್| ಜಾತಿ ಶ್ರೇಣಿ ಜಾರಿಗೊಳಿಸಿದವರು ಸನಾತನ ಧರ್ಮದ ಭಯೋತ್ಪಾದಕರು – ಎನ್‌ಸಿಪಿ-ಎಸ್‌ಸಿಪಿ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....