Homeಮುಖಪುಟತಮಿಳುನಾಡಿನಲ್ಲಿ 'ಮರ್ಯಾದಾ ಹತ್ಯೆ' ಹೆಚ್ಚಳಕ್ಕೆ ಮದ್ರಾಸ್ ಹೈಕೋರ್ಟ್ ಕಳವಳ: ದಲಿತ ವಿದ್ಯಾರ್ಥಿ ಸಾವಿನ ತನಿಖೆ ಸಿಐಡಿಗೆ...

ತಮಿಳುನಾಡಿನಲ್ಲಿ ‘ಮರ್ಯಾದಾ ಹತ್ಯೆ’ ಹೆಚ್ಚಳಕ್ಕೆ ಮದ್ರಾಸ್ ಹೈಕೋರ್ಟ್ ಕಳವಳ: ದಲಿತ ವಿದ್ಯಾರ್ಥಿ ಸಾವಿನ ತನಿಖೆ ಸಿಐಡಿಗೆ ವರ್ಗಾವಣೆ

- Advertisement -
- Advertisement -

ತಮಿಳುನಾಡಿನಲ್ಲಿ ಹೆಚ್ಚುತ್ತಿರುವ ‘ಮರ್ಯಾದಾ ಹತ್ಯೆ’ಗಳ ಬಗ್ಗೆ ಸೋಮವಾರ (ಆ.4) ಮದ್ರಾಸ್ ಹೈಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಇಂತಹ ಘೋರ ಅಪರಾಧಗಳು ಏಕೆ ಕೊನೆಯಾಗುತ್ತಿಲ್ಲ ಎಂದು ಪ್ರಶ್ನಿಸಿದೆ.

ಈ ವರ್ಷದ ಮೇ ತಿಂಗಳಲ್ಲಿ ಕಡಲೂರು ಜಿಲ್ಲೆಯಲ್ಲಿ ನಡೆದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಯೊಬ್ಬರ ಮರ್ಯಾದಾ ಹತ್ಯೆಯ ಶಂಕಿತ ಪ್ರಕರಣವನ್ನು ಸ್ಥಳೀಯ ಪೊಲೀಸರಿಂದ ಅಪರಾಧ ಶಾಖೆ-ಸಿಐಡಿಗೆ ವರ್ಗಾಯಿಸುವಾಗ ನ್ಯಾಯಮೂರ್ತಿ ಪಿ ವೇಲ್ಮುರುಗನ್ ಮೇಲಿನ ಪ್ರಶ್ನೆ ಎತ್ತಿದ್ದಾರೆ.

“ರಾಜ್ಯದಲ್ಲಿ ಮರ್ಯಾದಾ ಹತ್ಯೆಯ ಹಲವಾರು ಪ್ರಕರಣಗಳು ವರದಿಯಾಗುತ್ತಿವೆ. ಆದರೆ, ದುರದೃಷ್ಟವಶಾತ್ ಅಂತಹ ಅಪರಾಧಗಳಿಗೆ ಕೊನೆಯಿಲ್ಲದಂತಾಗಿದೆ. ಮರ್ಯಾದಾ ಹತ್ಯೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ” ಎಂದು ನ್ಯಾ. ವೇಲ್ಮುರುಗನ್ ಹೇಳಿದ್ದು. ಇಂತಹ ಅಪರಾಧಗಳ ಹಿಂದಿನ ಸತ್ಯ ಮುನ್ನೆಲೆಗೆ ಬರುತ್ತಿಲ್ಲ ಎಂದಿದ್ದಾರೆ.

ಕಡಲೂರು ಜಿಲ್ಲೆಯ ಅರಸಕುಲಿ ಗ್ರಾಮದ ಬಿಕಾಂ ವಿದ್ಯಾರ್ಥಿ, ಮೃತ ಯುವಕ ಎಂ.ಜಯಸೂರ್ಯ ಅವರ ತಂದೆ ಎಂ.ಮುರುಗೇಶನ್ ಅವರು ತನಿಖೆಯನ್ನು ಸಿಐಡಿಗೆ ವರ್ಗಾಯಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು.

ಪ್ರಕರಣದ ದಾಖಲೆಗಳನ್ನು ತಕ್ಷಣವೇ ಸಿಬಿ-ಸಿಐಡಿಗೆ ಹಸ್ತಾಂತರಿಸುವಂತೆ ನ್ಯಾಯಾಧೀಶರು ಪ್ರತಿವಾದಿ ಪೊಲೀಸರಿಗೆ ನಿರ್ದೇಶನ ನೀಡಿದ್ದು, ಸತ್ಯವನ್ನು ಹೊರತರಲು ‘ನ್ಯಾಯಯುತ ತನಿಖೆ’ ನಡೆಸುವಂತೆ ಆದೇಶಿಸಿದ್ದಾರೆ.

ಅರ್ಜಿದಾರರ ಪರವಾಗಿ ಹಾಜರಾದ ವಕೀಲ ಎ ಅರಸುಗಣೇಶನ್, ಮೃತ ಜಯಸೂರ್ಯ ಪ್ರಬಲ ಸಮುದಾಯಕ್ಕೆ ಸೇರಿದ ಹುಡುಗಿಯನ್ನು ಪ್ರೀತಿಸುತ್ತಿದ್ದರು ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಮೇ 18,2025ರಂದು, ಕಾಲೇಜು ಸಹಪಾಠಿ ಪ್ರವೀಣ್ ಎಂಬಾತ ಜಯಸೂರ್ಯ ಅವರನ್ನು ಬಲವಂತವಾಗಿ ಬೈಕ್‌ನಲ್ಲಿ ಕರೆದೊಯ್ದಿದ್ದರು. ಆ ಬಳಿಕ ಜಯಸೂರ್ಯ ವಾಪಸ್ ಬಂದಿಲ್ಲ. ಅವರ ತಂದೆ ಹಲವಾರು ಬಾರಿ ಕರೆ ಮಾಡಿದ್ದರು. ಈ ವೇಳೆ ಒಮ್ಮೆ ಆತ ಪ್ರತಿಕ್ರಿಯಿಸಿದ್ದರು. ತಾನು ಪ್ರವೀಣ್, ಜೀವನ್ ಹಾಗೂ ಇನ್ನೊಬ್ಬ ವ್ಯಕ್ತಿಯೊಂದಿಗೆ ಇರುವುದಾಗಿ ಹೇಳಿದ್ದರು ಎಂದು ವಕೀಲ ಅರಸುಗಣೇಶನ್ ವಿವರಿಸಿದ್ದಾರೆ.

ಆದರೆ, ನಂತರ ಜಯಸೂರ್ಯ ಅವರ ತಂದೆಗೆ ಕುಲ್ಲಂಚವಾಡಿ ಪೊಲೀಸ್ ಠಾಣೆಯಿಂದ ಕರೆ ಬಂದಿತ್ತು. ಅದರಲ್ಲಿ ಜೀವನ್ ನೀಡಿದ ದೂರಿನ ಪ್ರಕಾರ ಅವರ ಮಗ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿಸಲಾಗಿತ್ತು ಎಂದು ವಕೀಲ ಹೇಳಿದ್ದಾರೆ.

ಹುಡುಗಿಯ ಸಮುದಾಯಕ್ಕೆ ಸೇರಿದ ಪ್ರಾಧ್ಯಾಪಕರೊಬ್ಬರು ಘಟನೆ ನಡೆದ ಸ್ಥಳದಲ್ಲಿ ನಿಗೂಢವಾಗಿ ಉಪಸ್ಥಿತರಿದ್ದರಿಂದ, ಕೃತ್ಯದಲ್ಲಿ ಅವರ ಶಂಕೆ ಇದೆ ಎಂದು ವಕೀಲ ವಾದಿಸಿದ್ದಾರೆ.

ಹುಡುಗಿಯ ಸೋದರ ಮಾವ ಜಯಸೂರ್ಯಗೆ ಬೆದರಿಕೆ ಹಾಕಿದ್ದಲ್ಲದೆ, ಆಕೆಯೊಂದಿಗಿನ ಸಂಬಂಧವನ್ನು ಮುಂದುವರಿಸದಂತೆ ಎಚ್ಚರಿಸಿದ್ದರು ಎಂದು ವಕೀಲ ತಿಳಿಸಿದ್ದಾರೆ. ಜಿಲ್ಲಾ ಪೊಲೀಸರ ನಿರ್ಲಕ್ಷ್ಯವನ್ನು ಆರೋಪಿಸಿ, ತನಿಖೆಯನ್ನು ಬೇರೆ ಸಂಸ್ಥೆಗೆ ವಹಿಸಲು ನ್ಯಾಯಾಲಯ ಆದೇಶಿಸಬೇಕೆಂದು ಅವರು ಕೋರಿದ್ದಾರೆ.

ಪೊಲೀಸರ ಪರವಾಗಿ ಹಾಜರಾದ ಸರ್ಕಾರಿ ವಕೀಲರು ತನಿಖೆ ಇನ್ನೂ ನಡೆಯುತ್ತಿದೆ ಮತ್ತು ಪ್ರಾಥಮಿಕ ತನಿಖೆಯಲ್ಲಿ ಇದು ಅತಿವೇಗದ ಚಾಲನೆಯಿಂದ ಸಂಭವಿಸಿದ ಅಪಘಾತ ಎಂದು ಕಂಡುಬಂದಿದೆ ಎಂದು ಹೇಳಿದ್ದಾರೆ.

ಘಟನೆ ನಡೆದ ದಿನ ರಾತ್ರಿ ಮೂವರು ಕಡಲೂರಿನಿಂದ ತಮ್ಮ ಗ್ರಾಮಕ್ಕೆ ಹಿಂತಿರುಗುತ್ತಿದ್ದಾಗ ಅವರ ಬೈಕ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಹೇಳಿದ್ದಾರೆ ಎಂದಿದ್ದಾರೆ.

ಸಾವಿನ ಕಾರಣವನ್ನು ಕಂಡುಹಿಡಿಯಲು ಪೊಲೀಸರು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಆದರೆ, ನ್ಯಾಯಾಧೀಶರು ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಜಯಸೂರ್ಯ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆಯೇ ಅಥವಾ ಯಾರಾದರೂ ಬಲವಂತವಾಗಿ ಕರೆದುಕೊಂಡು ಹೋಗಿ ಕೊಲೆ ಮಾಡಿದ್ದಾರೆಯೇ ಎಂಬುದನ್ನು ಮರಣೋತ್ತರ ಪರೀಕ್ಷೆಯಿಂದ ಬಹಿರಂಗಪಡಿಸಬಹುದೇ ಎಂದು ಕೇಳಿದ್ದಾರೆ.

“ಘಟನೆ ಸಂಭವಿಸಿದ್ದಕ್ಕೂ ಮರಣೋತ್ತರ ಪರೀಕ್ಷೆಗೂ ಯಾವುದೇ ಸಂಬಂಧವಿಲ್ಲ. ಸಮಗ್ರ ತನಿಖೆಯಿಂದ ಮಾತ್ರ ಸತ್ಯ ಹೊರಬರುತ್ತದೆ” ಎಂದು ನ್ಯಾಯಮೂರ್ತಿ ವೇಲ್ಮುರುಗನ್ ಹೇಳಿದ್ದಾರೆ.

ಜಿಲ್ಲಾ ಪೊಲೀಸರ ತನಿಖೆಯ ಬಗ್ಗೆ ನ್ಯಾಯಾಲಯವು ಅನುಮಾನ ವ್ಯಕ್ತಪಡಿಸಿದೆ ಎಂದು ಹೇಳಿದ ನ್ಯಾಯಾಧೀಶರು, ತನಿಖೆಯನ್ನು ವರ್ಗಾಯಿಸಲು ಇದು ಸೂಕ್ತವಾದ ಪ್ರಕರಣವಾಗಿದೆ ಎಂದಿದ್ದಾರೆ.

ಗಮನಾರ್ಹವಾಗಿ, ಹುಡುಗಿ ಪುದುಕ್ಕೂರಪೆಟ್ಟೈ ಮೂಲದವಳು. 2003ರಲ್ಲಿ ಎಂಬಿಸಿ ಸಮುದಾಯಕ್ಕೆ ಸೇರಿದ ಕಣ್ಣಗಿ ಮತ್ತು ಪರಿಶಿಷ್ಟ ಜಾತಿಗೆ ಸೇರಿದ ಮುರುಗೇಶನ್ ಅವರ ಭೀಕರ ಮರ್ಯಾದಾ ಹತ್ಯೆ ನಡೆದ ಹಳ್ಳಿ ಇದು ಎಂದು ಜಯಸೂರ್ಯ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

ಮಾಲೆಗಾಂವ್| ಜಾತಿ ಶ್ರೇಣಿ ಜಾರಿಗೊಳಿಸಿದವರು ಸನಾತನ ಧರ್ಮದ ಭಯೋತ್ಪಾದಕರು – ಎನ್‌ಸಿಪಿ-ಎಸ್‌ಸಿಪಿ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...