Homeಮುಖಪುಟತಮಿಳುನಾಡಿನಲ್ಲಿ 'ಮರ್ಯಾದಾ ಹತ್ಯೆ' ಹೆಚ್ಚಳಕ್ಕೆ ಮದ್ರಾಸ್ ಹೈಕೋರ್ಟ್ ಕಳವಳ: ದಲಿತ ವಿದ್ಯಾರ್ಥಿ ಸಾವಿನ ತನಿಖೆ ಸಿಐಡಿಗೆ...

ತಮಿಳುನಾಡಿನಲ್ಲಿ ‘ಮರ್ಯಾದಾ ಹತ್ಯೆ’ ಹೆಚ್ಚಳಕ್ಕೆ ಮದ್ರಾಸ್ ಹೈಕೋರ್ಟ್ ಕಳವಳ: ದಲಿತ ವಿದ್ಯಾರ್ಥಿ ಸಾವಿನ ತನಿಖೆ ಸಿಐಡಿಗೆ ವರ್ಗಾವಣೆ

- Advertisement -
- Advertisement -

ತಮಿಳುನಾಡಿನಲ್ಲಿ ಹೆಚ್ಚುತ್ತಿರುವ ‘ಮರ್ಯಾದಾ ಹತ್ಯೆ’ಗಳ ಬಗ್ಗೆ ಸೋಮವಾರ (ಆ.4) ಮದ್ರಾಸ್ ಹೈಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಇಂತಹ ಘೋರ ಅಪರಾಧಗಳು ಏಕೆ ಕೊನೆಯಾಗುತ್ತಿಲ್ಲ ಎಂದು ಪ್ರಶ್ನಿಸಿದೆ.

ಈ ವರ್ಷದ ಮೇ ತಿಂಗಳಲ್ಲಿ ಕಡಲೂರು ಜಿಲ್ಲೆಯಲ್ಲಿ ನಡೆದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಯೊಬ್ಬರ ಮರ್ಯಾದಾ ಹತ್ಯೆಯ ಶಂಕಿತ ಪ್ರಕರಣವನ್ನು ಸ್ಥಳೀಯ ಪೊಲೀಸರಿಂದ ಅಪರಾಧ ಶಾಖೆ-ಸಿಐಡಿಗೆ ವರ್ಗಾಯಿಸುವಾಗ ನ್ಯಾಯಮೂರ್ತಿ ಪಿ ವೇಲ್ಮುರುಗನ್ ಮೇಲಿನ ಪ್ರಶ್ನೆ ಎತ್ತಿದ್ದಾರೆ.

“ರಾಜ್ಯದಲ್ಲಿ ಮರ್ಯಾದಾ ಹತ್ಯೆಯ ಹಲವಾರು ಪ್ರಕರಣಗಳು ವರದಿಯಾಗುತ್ತಿವೆ. ಆದರೆ, ದುರದೃಷ್ಟವಶಾತ್ ಅಂತಹ ಅಪರಾಧಗಳಿಗೆ ಕೊನೆಯಿಲ್ಲದಂತಾಗಿದೆ. ಮರ್ಯಾದಾ ಹತ್ಯೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ” ಎಂದು ನ್ಯಾ. ವೇಲ್ಮುರುಗನ್ ಹೇಳಿದ್ದು. ಇಂತಹ ಅಪರಾಧಗಳ ಹಿಂದಿನ ಸತ್ಯ ಮುನ್ನೆಲೆಗೆ ಬರುತ್ತಿಲ್ಲ ಎಂದಿದ್ದಾರೆ.

ಕಡಲೂರು ಜಿಲ್ಲೆಯ ಅರಸಕುಲಿ ಗ್ರಾಮದ ಬಿಕಾಂ ವಿದ್ಯಾರ್ಥಿ, ಮೃತ ಯುವಕ ಎಂ.ಜಯಸೂರ್ಯ ಅವರ ತಂದೆ ಎಂ.ಮುರುಗೇಶನ್ ಅವರು ತನಿಖೆಯನ್ನು ಸಿಐಡಿಗೆ ವರ್ಗಾಯಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು.

ಪ್ರಕರಣದ ದಾಖಲೆಗಳನ್ನು ತಕ್ಷಣವೇ ಸಿಬಿ-ಸಿಐಡಿಗೆ ಹಸ್ತಾಂತರಿಸುವಂತೆ ನ್ಯಾಯಾಧೀಶರು ಪ್ರತಿವಾದಿ ಪೊಲೀಸರಿಗೆ ನಿರ್ದೇಶನ ನೀಡಿದ್ದು, ಸತ್ಯವನ್ನು ಹೊರತರಲು ‘ನ್ಯಾಯಯುತ ತನಿಖೆ’ ನಡೆಸುವಂತೆ ಆದೇಶಿಸಿದ್ದಾರೆ.

ಅರ್ಜಿದಾರರ ಪರವಾಗಿ ಹಾಜರಾದ ವಕೀಲ ಎ ಅರಸುಗಣೇಶನ್, ಮೃತ ಜಯಸೂರ್ಯ ಪ್ರಬಲ ಸಮುದಾಯಕ್ಕೆ ಸೇರಿದ ಹುಡುಗಿಯನ್ನು ಪ್ರೀತಿಸುತ್ತಿದ್ದರು ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಮೇ 18,2025ರಂದು, ಕಾಲೇಜು ಸಹಪಾಠಿ ಪ್ರವೀಣ್ ಎಂಬಾತ ಜಯಸೂರ್ಯ ಅವರನ್ನು ಬಲವಂತವಾಗಿ ಬೈಕ್‌ನಲ್ಲಿ ಕರೆದೊಯ್ದಿದ್ದರು. ಆ ಬಳಿಕ ಜಯಸೂರ್ಯ ವಾಪಸ್ ಬಂದಿಲ್ಲ. ಅವರ ತಂದೆ ಹಲವಾರು ಬಾರಿ ಕರೆ ಮಾಡಿದ್ದರು. ಈ ವೇಳೆ ಒಮ್ಮೆ ಆತ ಪ್ರತಿಕ್ರಿಯಿಸಿದ್ದರು. ತಾನು ಪ್ರವೀಣ್, ಜೀವನ್ ಹಾಗೂ ಇನ್ನೊಬ್ಬ ವ್ಯಕ್ತಿಯೊಂದಿಗೆ ಇರುವುದಾಗಿ ಹೇಳಿದ್ದರು ಎಂದು ವಕೀಲ ಅರಸುಗಣೇಶನ್ ವಿವರಿಸಿದ್ದಾರೆ.

ಆದರೆ, ನಂತರ ಜಯಸೂರ್ಯ ಅವರ ತಂದೆಗೆ ಕುಲ್ಲಂಚವಾಡಿ ಪೊಲೀಸ್ ಠಾಣೆಯಿಂದ ಕರೆ ಬಂದಿತ್ತು. ಅದರಲ್ಲಿ ಜೀವನ್ ನೀಡಿದ ದೂರಿನ ಪ್ರಕಾರ ಅವರ ಮಗ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿಸಲಾಗಿತ್ತು ಎಂದು ವಕೀಲ ಹೇಳಿದ್ದಾರೆ.

ಹುಡುಗಿಯ ಸಮುದಾಯಕ್ಕೆ ಸೇರಿದ ಪ್ರಾಧ್ಯಾಪಕರೊಬ್ಬರು ಘಟನೆ ನಡೆದ ಸ್ಥಳದಲ್ಲಿ ನಿಗೂಢವಾಗಿ ಉಪಸ್ಥಿತರಿದ್ದರಿಂದ, ಕೃತ್ಯದಲ್ಲಿ ಅವರ ಶಂಕೆ ಇದೆ ಎಂದು ವಕೀಲ ವಾದಿಸಿದ್ದಾರೆ.

ಹುಡುಗಿಯ ಸೋದರ ಮಾವ ಜಯಸೂರ್ಯಗೆ ಬೆದರಿಕೆ ಹಾಕಿದ್ದಲ್ಲದೆ, ಆಕೆಯೊಂದಿಗಿನ ಸಂಬಂಧವನ್ನು ಮುಂದುವರಿಸದಂತೆ ಎಚ್ಚರಿಸಿದ್ದರು ಎಂದು ವಕೀಲ ತಿಳಿಸಿದ್ದಾರೆ. ಜಿಲ್ಲಾ ಪೊಲೀಸರ ನಿರ್ಲಕ್ಷ್ಯವನ್ನು ಆರೋಪಿಸಿ, ತನಿಖೆಯನ್ನು ಬೇರೆ ಸಂಸ್ಥೆಗೆ ವಹಿಸಲು ನ್ಯಾಯಾಲಯ ಆದೇಶಿಸಬೇಕೆಂದು ಅವರು ಕೋರಿದ್ದಾರೆ.

ಪೊಲೀಸರ ಪರವಾಗಿ ಹಾಜರಾದ ಸರ್ಕಾರಿ ವಕೀಲರು ತನಿಖೆ ಇನ್ನೂ ನಡೆಯುತ್ತಿದೆ ಮತ್ತು ಪ್ರಾಥಮಿಕ ತನಿಖೆಯಲ್ಲಿ ಇದು ಅತಿವೇಗದ ಚಾಲನೆಯಿಂದ ಸಂಭವಿಸಿದ ಅಪಘಾತ ಎಂದು ಕಂಡುಬಂದಿದೆ ಎಂದು ಹೇಳಿದ್ದಾರೆ.

ಘಟನೆ ನಡೆದ ದಿನ ರಾತ್ರಿ ಮೂವರು ಕಡಲೂರಿನಿಂದ ತಮ್ಮ ಗ್ರಾಮಕ್ಕೆ ಹಿಂತಿರುಗುತ್ತಿದ್ದಾಗ ಅವರ ಬೈಕ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಹೇಳಿದ್ದಾರೆ ಎಂದಿದ್ದಾರೆ.

ಸಾವಿನ ಕಾರಣವನ್ನು ಕಂಡುಹಿಡಿಯಲು ಪೊಲೀಸರು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಆದರೆ, ನ್ಯಾಯಾಧೀಶರು ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಜಯಸೂರ್ಯ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆಯೇ ಅಥವಾ ಯಾರಾದರೂ ಬಲವಂತವಾಗಿ ಕರೆದುಕೊಂಡು ಹೋಗಿ ಕೊಲೆ ಮಾಡಿದ್ದಾರೆಯೇ ಎಂಬುದನ್ನು ಮರಣೋತ್ತರ ಪರೀಕ್ಷೆಯಿಂದ ಬಹಿರಂಗಪಡಿಸಬಹುದೇ ಎಂದು ಕೇಳಿದ್ದಾರೆ.

“ಘಟನೆ ಸಂಭವಿಸಿದ್ದಕ್ಕೂ ಮರಣೋತ್ತರ ಪರೀಕ್ಷೆಗೂ ಯಾವುದೇ ಸಂಬಂಧವಿಲ್ಲ. ಸಮಗ್ರ ತನಿಖೆಯಿಂದ ಮಾತ್ರ ಸತ್ಯ ಹೊರಬರುತ್ತದೆ” ಎಂದು ನ್ಯಾಯಮೂರ್ತಿ ವೇಲ್ಮುರುಗನ್ ಹೇಳಿದ್ದಾರೆ.

ಜಿಲ್ಲಾ ಪೊಲೀಸರ ತನಿಖೆಯ ಬಗ್ಗೆ ನ್ಯಾಯಾಲಯವು ಅನುಮಾನ ವ್ಯಕ್ತಪಡಿಸಿದೆ ಎಂದು ಹೇಳಿದ ನ್ಯಾಯಾಧೀಶರು, ತನಿಖೆಯನ್ನು ವರ್ಗಾಯಿಸಲು ಇದು ಸೂಕ್ತವಾದ ಪ್ರಕರಣವಾಗಿದೆ ಎಂದಿದ್ದಾರೆ.

ಗಮನಾರ್ಹವಾಗಿ, ಹುಡುಗಿ ಪುದುಕ್ಕೂರಪೆಟ್ಟೈ ಮೂಲದವಳು. 2003ರಲ್ಲಿ ಎಂಬಿಸಿ ಸಮುದಾಯಕ್ಕೆ ಸೇರಿದ ಕಣ್ಣಗಿ ಮತ್ತು ಪರಿಶಿಷ್ಟ ಜಾತಿಗೆ ಸೇರಿದ ಮುರುಗೇಶನ್ ಅವರ ಭೀಕರ ಮರ್ಯಾದಾ ಹತ್ಯೆ ನಡೆದ ಹಳ್ಳಿ ಇದು ಎಂದು ಜಯಸೂರ್ಯ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

ಮಾಲೆಗಾಂವ್| ಜಾತಿ ಶ್ರೇಣಿ ಜಾರಿಗೊಳಿಸಿದವರು ಸನಾತನ ಧರ್ಮದ ಭಯೋತ್ಪಾದಕರು – ಎನ್‌ಸಿಪಿ-ಎಸ್‌ಸಿಪಿ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...