Homeಮುಖಪುಟಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಟ್ರಾನ್ಸ್‌ಜಂಡರ್‌ಗಳಿಗೆ ಮೀಸಲಾತಿ ಒದಗಿಸಿ: ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಟ್ರಾನ್ಸ್‌ಜಂಡರ್‌ಗಳಿಗೆ ಮೀಸಲಾತಿ ಒದಗಿಸಿ: ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ

- Advertisement -
- Advertisement -

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಟ್ರಾನ್ಸ್‌ಜಂಡರ್‌ಗಳಿಗೆ ಮೀಸಲಾತಿಯನ್ನು ನೀಡಲು ತಮಿಳುನಾಡು ಸರಕಾರಕ್ಕೆ ಮದ್ರಾಸ್ ಹೈಕೋರ್ಟ್‌ಗೆ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿ ಎಸ್.ಎಂ.ಸುಬ್ರಮಣ್ಯಂ  ಅವರ ಪೀಠ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಟ್ರಾನ್ಸ್ ಜಂಡರ್‌ಗಳಿಗೆ  ಮೀಸಲಾತಿ ಒದಗಿಸುವ ತುರ್ತು ಅಗತ್ಯವನ್ನು ಎತ್ತಿ ತೋರಿಸಿ ಮೀಸಲಾತಿಯನ್ನು ನೀಡುವಂತೆ ಸರಕಾರಕ್ಕೆ ಸೂಚಿಸಿದೆ.

ಮೀಸಲಾತಿ ಮೂಲಕ ಟ್ರಾನ್ಸ್‌ಜಂಡರ್  ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ತರುವುದು ಮಾತ್ರವಲ್ಲದೆ ಅವರ ಸಕ್ರಿಯ  ಸಹಭಾಗಿತ್ವದ ಮೂಲಕ ಪ್ರಜಾಪ್ರಭುತ್ವದ ತತ್ವಗಳನ್ನು ಎತ್ತಿಹಿಡಿಯುವ ಗುರಿಯನ್ನು ಹೊಂದಿದೆ ಎಂದು ಕೋರ್ಟ್ ಹೇಳಿದೆ.

ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ಟ್ರಾನ್ಸ್‌ಜಂಡರ್ ಸಮುದಾಯ ಎದುರಿಸುತ್ತಿರುವ ತಾರತಮ್ಯಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ  ನ್ಯಾಯಾಲಯ ಈ  ತೀರ್ಪು ನೀಡಿದೆ. ನ್ಯಾಯಮೂರ್ತಿ ಸುಬ್ರಮಣ್ಯಂ ಅವರು ತಾರತಮ್ಯದ  ಕಿತ್ತೊಗೆಯಲು ಮತ್ತು ಟ್ರಾನ್ಸ್‌ಜಂಡರ್‌ಗಳಿಗೆ ಸಮಾಜದ ಮಖ್ಯ ವಾಹಿನಿಗೆ ತರಲು ಮಹತ್ವದ ಸಮಯ ಇದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದಲ್ಲದೆ ಜಸ್ಟಿಸ್ಎಸ್ ಎಂ ಸುಬ್ರಮಣ್ಯಂ ಅವರು ತಮಿಳುನಾಡು ಪಂಚಾಯತ್ ಕಾಯಿದೆ, 1994 ರ ಮೂಲಕ ನೈನಾರ್ಕುಪ್ಪಂ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರನ್ನು ಪದಚ್ಯುತಗೊಳಿಸಲು ಕ್ರಮಕೈಗೊಳ್ಳುವಂತೆ ಕಡಲೂರು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಗ್ರಾಮದ ಬಸ್ ನಿಲ್ದಾಣದ ಪಕ್ಕದಲ್ಲಿಯೇ ತೃತೀಯಲಿಂಗಿಗಳಿಗೆ ನಿವೇಶನ ಮಂಜೂರು ಮಾಡುವುದರಿಂದ ಯುವಕರ ಭವಿಷ್ಯದ ಜೀವನಕ್ಕೆ ಧಕ್ಕೆಯಾಗುತ್ತದೆ ಎಂದು ಗ್ರಾ.ಪಂ.ಅಧ್ಯಕ್ಷ ಮೋಹನ್, ಟ್ರಾನ್ಸ್‌ಜಂಡರ್‌ಗಳಿಗೆ ಪಟ್ಟಾ ಮಂಜೂರು ಮಾಡದಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಜಿಲ್ಲಾಡಳಿತ ತನ್ನ ಮನವಿ ಸ್ವೀಕರಿಸಿಲ್ಲ ಮತ್ತು ಟ್ರಾನ್ಸ್‌ಜಂಡರ್‌ಗಳಿಗೆ ಭೂಮಿ  ಹಂಚಿಕೆ ರದ್ದುಗೊಳಿಸುತ್ತಿಲ್ಲ ಎಂದು ಆರೋಪಿಸಿ ಮೋಹನ್ ನ್ಯಾಯಾಲಯದ ಮೆಟ್ಟಿಲೇರಿದ್ದರು. ತೀರ್ಪಿನಲ್ಲಿ ಟ್ರಾನ್ಸ್‌ಜಂಡರ್‌ಗಳಿಗೆ  ಅವರ ಅರ್ಹತೆಯ ಆಧಾರದ ಮೇಲೆ ಉಚಿತ ಮನೆ ನಿವೇಶನ ಪಟ್ಟಾ ಮಂಜೂರು ಮಾಡುವಂತೆ ಮತ್ತು ಎಲ್ಲಾ ಧಾರ್ಮಿಕ ಸಂಸ್ಥೆಗಳಲ್ಲಿ ಗ್ರಾಮೋತ್ಸವ, ಸಮಾರಂಭಗಳಲ್ಲಿ ಭಾಗವಹಿಸಲು ಮತ್ತು ಪೂಜೆ ನಡೆಸಲು ಅವಕಾಶ ನೀಡುವಂತೆ ಜಿಲ್ಲಾಧಿಕಾರಿಗೆ ನ್ಯಾಯಾಧೀಶರು ಸೂಚಿಸಿದರು.

ಟ್ರಾನ್ಸ್‌ಜಂಡರ್‌ಗಳನ್ನು ಸಮಾಜದ ಮುಖ್ಯವಾಹಿನಿಗೆ ತರಲು ಪ್ರಾಥಮಿಕ ಕ್ರಮವಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೀಸಲಾತಿ ನೀಡಲು ಎಲ್ಲಾ ಸೂಕ್ತ ಕ್ರಮಗಳನ್ನು ಪ್ರಾರಂಭಿಸಲು ತಮಿಳುನಾಡು ಸರ್ಕಾರಕ್ಕೆ ನಿರ್ದೇಶಿಸಲಾಗಿದೆ ಎಂದು ನ್ಯಾಯಮೂರ್ತಿ ಸುಬ್ರಮಣಿಯನ್ ಹೇಳಿದ್ದಾರೆ.

ಇದನ್ನು ಓದಿ: ಭಾರತದ ಕುಸ್ತಿ ಫೆಡರೇಶನ್‌ ಸದಸ್ಯತ್ವವನ್ನು ಅಮಾನತುಗೊಳಿಸಿದ ವಿಶ್ವ ಕುಸ್ತಿ ಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...