Homeಮುಖಪುಟಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಟ್ರಾನ್ಸ್‌ಜಂಡರ್‌ಗಳಿಗೆ ಮೀಸಲಾತಿ ಒದಗಿಸಿ: ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಟ್ರಾನ್ಸ್‌ಜಂಡರ್‌ಗಳಿಗೆ ಮೀಸಲಾತಿ ಒದಗಿಸಿ: ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ

- Advertisement -
- Advertisement -

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಟ್ರಾನ್ಸ್‌ಜಂಡರ್‌ಗಳಿಗೆ ಮೀಸಲಾತಿಯನ್ನು ನೀಡಲು ತಮಿಳುನಾಡು ಸರಕಾರಕ್ಕೆ ಮದ್ರಾಸ್ ಹೈಕೋರ್ಟ್‌ಗೆ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿ ಎಸ್.ಎಂ.ಸುಬ್ರಮಣ್ಯಂ  ಅವರ ಪೀಠ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಟ್ರಾನ್ಸ್ ಜಂಡರ್‌ಗಳಿಗೆ  ಮೀಸಲಾತಿ ಒದಗಿಸುವ ತುರ್ತು ಅಗತ್ಯವನ್ನು ಎತ್ತಿ ತೋರಿಸಿ ಮೀಸಲಾತಿಯನ್ನು ನೀಡುವಂತೆ ಸರಕಾರಕ್ಕೆ ಸೂಚಿಸಿದೆ.

ಮೀಸಲಾತಿ ಮೂಲಕ ಟ್ರಾನ್ಸ್‌ಜಂಡರ್  ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ತರುವುದು ಮಾತ್ರವಲ್ಲದೆ ಅವರ ಸಕ್ರಿಯ  ಸಹಭಾಗಿತ್ವದ ಮೂಲಕ ಪ್ರಜಾಪ್ರಭುತ್ವದ ತತ್ವಗಳನ್ನು ಎತ್ತಿಹಿಡಿಯುವ ಗುರಿಯನ್ನು ಹೊಂದಿದೆ ಎಂದು ಕೋರ್ಟ್ ಹೇಳಿದೆ.

ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ಟ್ರಾನ್ಸ್‌ಜಂಡರ್ ಸಮುದಾಯ ಎದುರಿಸುತ್ತಿರುವ ತಾರತಮ್ಯಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ  ನ್ಯಾಯಾಲಯ ಈ  ತೀರ್ಪು ನೀಡಿದೆ. ನ್ಯಾಯಮೂರ್ತಿ ಸುಬ್ರಮಣ್ಯಂ ಅವರು ತಾರತಮ್ಯದ  ಕಿತ್ತೊಗೆಯಲು ಮತ್ತು ಟ್ರಾನ್ಸ್‌ಜಂಡರ್‌ಗಳಿಗೆ ಸಮಾಜದ ಮಖ್ಯ ವಾಹಿನಿಗೆ ತರಲು ಮಹತ್ವದ ಸಮಯ ಇದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದಲ್ಲದೆ ಜಸ್ಟಿಸ್ಎಸ್ ಎಂ ಸುಬ್ರಮಣ್ಯಂ ಅವರು ತಮಿಳುನಾಡು ಪಂಚಾಯತ್ ಕಾಯಿದೆ, 1994 ರ ಮೂಲಕ ನೈನಾರ್ಕುಪ್ಪಂ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರನ್ನು ಪದಚ್ಯುತಗೊಳಿಸಲು ಕ್ರಮಕೈಗೊಳ್ಳುವಂತೆ ಕಡಲೂರು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಗ್ರಾಮದ ಬಸ್ ನಿಲ್ದಾಣದ ಪಕ್ಕದಲ್ಲಿಯೇ ತೃತೀಯಲಿಂಗಿಗಳಿಗೆ ನಿವೇಶನ ಮಂಜೂರು ಮಾಡುವುದರಿಂದ ಯುವಕರ ಭವಿಷ್ಯದ ಜೀವನಕ್ಕೆ ಧಕ್ಕೆಯಾಗುತ್ತದೆ ಎಂದು ಗ್ರಾ.ಪಂ.ಅಧ್ಯಕ್ಷ ಮೋಹನ್, ಟ್ರಾನ್ಸ್‌ಜಂಡರ್‌ಗಳಿಗೆ ಪಟ್ಟಾ ಮಂಜೂರು ಮಾಡದಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಜಿಲ್ಲಾಡಳಿತ ತನ್ನ ಮನವಿ ಸ್ವೀಕರಿಸಿಲ್ಲ ಮತ್ತು ಟ್ರಾನ್ಸ್‌ಜಂಡರ್‌ಗಳಿಗೆ ಭೂಮಿ  ಹಂಚಿಕೆ ರದ್ದುಗೊಳಿಸುತ್ತಿಲ್ಲ ಎಂದು ಆರೋಪಿಸಿ ಮೋಹನ್ ನ್ಯಾಯಾಲಯದ ಮೆಟ್ಟಿಲೇರಿದ್ದರು. ತೀರ್ಪಿನಲ್ಲಿ ಟ್ರಾನ್ಸ್‌ಜಂಡರ್‌ಗಳಿಗೆ  ಅವರ ಅರ್ಹತೆಯ ಆಧಾರದ ಮೇಲೆ ಉಚಿತ ಮನೆ ನಿವೇಶನ ಪಟ್ಟಾ ಮಂಜೂರು ಮಾಡುವಂತೆ ಮತ್ತು ಎಲ್ಲಾ ಧಾರ್ಮಿಕ ಸಂಸ್ಥೆಗಳಲ್ಲಿ ಗ್ರಾಮೋತ್ಸವ, ಸಮಾರಂಭಗಳಲ್ಲಿ ಭಾಗವಹಿಸಲು ಮತ್ತು ಪೂಜೆ ನಡೆಸಲು ಅವಕಾಶ ನೀಡುವಂತೆ ಜಿಲ್ಲಾಧಿಕಾರಿಗೆ ನ್ಯಾಯಾಧೀಶರು ಸೂಚಿಸಿದರು.

ಟ್ರಾನ್ಸ್‌ಜಂಡರ್‌ಗಳನ್ನು ಸಮಾಜದ ಮುಖ್ಯವಾಹಿನಿಗೆ ತರಲು ಪ್ರಾಥಮಿಕ ಕ್ರಮವಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೀಸಲಾತಿ ನೀಡಲು ಎಲ್ಲಾ ಸೂಕ್ತ ಕ್ರಮಗಳನ್ನು ಪ್ರಾರಂಭಿಸಲು ತಮಿಳುನಾಡು ಸರ್ಕಾರಕ್ಕೆ ನಿರ್ದೇಶಿಸಲಾಗಿದೆ ಎಂದು ನ್ಯಾಯಮೂರ್ತಿ ಸುಬ್ರಮಣಿಯನ್ ಹೇಳಿದ್ದಾರೆ.

ಇದನ್ನು ಓದಿ: ಭಾರತದ ಕುಸ್ತಿ ಫೆಡರೇಶನ್‌ ಸದಸ್ಯತ್ವವನ್ನು ಅಮಾನತುಗೊಳಿಸಿದ ವಿಶ್ವ ಕುಸ್ತಿ ಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...