Homeಮುಖಪುಟಮತ ಎಣಿಕೆ ವಿಳಂಬವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಮತ ಎಣಿಕೆ ವಿಳಂಬವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

- Advertisement -
- Advertisement -

ತಮಿಳುನಾಡಿನಲ್ಲಿ ಚುನಾವಣಾ ಅಧಿಸೂಚನೆಯನ್ನು ರದ್ದುಪಡಿಸಲು ಕೋರಿದ್ದ ರಿಟ್ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ರದ್ದುಪಡಿಸಿದ್ದು, ಮತ ಎಣಿಕೆ ವಿಳಂಬವನ್ನು ಪ್ರಶ್ನಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ತಮಿಳುನಾಡಿನಲ್ಲಿ ಮೊದಲ ಹಂತದಲ್ಲಿ ಏಪ್ರಿಲ್ 19ರಂದು ಮತದಾನ ನಡೆಯಲಿದ್ದು, ಜೂನ್ 4ರಂದು ದೇಶದಾದ್ಯಂತ ಒಟ್ಟಾಗಿ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಈ ಬಗ್ಗೆ ಎಜಿಲನ್ ಎಂಬವರು ಮದ್ರಾಸ್‌ ಹೈಕೋರ್ಟ್‌ಗೆ ರಿಟ್‌ ಅರ್ಜಿಯನ್ನು ಸಲ್ಲಿಸಿದ್ದು, ಮತದಾನದ ದಿನಾಂಕ ಮತ್ತು ಮತ ಎಣಿಕೆಯ ದಿನಾಂಕದ ನಡುವೆ 45 ದಿನಗಳ ಸುದೀರ್ಘ ಅಂತರ ಇರುವ ಕಾರಣ ಮತ ಎಣಿಕೆಯನ್ನು ಮುಂಗಡವಾಗಿ ಮಾಡಬೇಕು ಎಂದು ಆಗ್ರಹಿಸಿದ್ದರು.

ಆದರೆ ಮುಖ್ಯ ನ್ಯಾಯಮೂರ್ತಿ ಸಂಜಯ್ ವಿ ಗಂಗಾಪುರವಾಲಾ ಮತ್ತು ನ್ಯಾಯಮೂರ್ತಿ ಡಿ ಭರತ ಚಕ್ರವರ್ತಿ ಅವರನ್ನೊಳಗೊಂಡ ಮದ್ರಾಸ್ ಹೈಕೋರ್ಟ್‌ನ ಪೀಠವು ಅರ್ಜಿಯನ್ನು ತಿರಸ್ಕರಿಸಿದೆ. ಎಜಿಲನ್ ಪರ ವಕೀಲ ಎ ರಜಿನಿ, 45 ದಿನಗಳ ಸುದೀರ್ಘ ಅಂತರ ‘ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ನಡೆಸಲು ಒದಗಿಸುವ ಪ್ರಜಾಪ್ರತಿನಿಧಿ ಕಾಯ್ದೆ-1951ರ ಆಶಯಕ್ಕೆ ವಿರುದ್ಧವಾಗಿದೆ ಎಂದು ಕೋರ್ಟ್‌ ಗಮನಕ್ಕೆ ತಂದಿದ್ದಾರೆ. ಮತ ಎಣಿಕೆಯನ್ನು ವಿಳಂಬ ಮಾಡುವುದು ಕಾನೂನುಬಾಹಿರ ಎಂದು ಹೇಳಿದ್ದಾರೆ.

ಇದಕ್ಕೆ ಮುಖ್ಯ ನ್ಯಾಯಮೂರ್ತಿಗಳು ನಿರ್ದಿಷ್ಟ ಅವಧಿಯೊಳಗೆ ಮತಗಳನ್ನು ಎಣಿಕೆ ಮಾಡಬೇಕು ಎಂಬ ಬಗ್ಗೆ ಯಾವುದೇ ನಿಬಂಧನೆಯು ಸದರಿ ಕಾಯ್ದೆಯಲ್ಲಿ ಇದೆಯೇ ಎಂದು ಕೇಳಿದರು. ಅರ್ಜಿದಾರರ ಪರ ವಕೀಲರು ಕಾಯ್ದೆಯಲ್ಲಿ ಅಂತಹ ಅವಕಾಶವಿಲ್ಲ ಎಂದು ಒಪ್ಪಿಕೊಂಡರು. ಈ ವೇಳೆ ನ್ಯಾಯಾಧೀಶರು, ಪ್ರಸ್ತುತ ಅರ್ಜಿಯು ಯಾವುದೇ ಸಾರ್ವಜನಿಕ ಕಾರಣವನ್ನು ಸಮರ್ಥಿಸುತ್ತದೆ ಎಂದು ನಾವು ಕಂಡುಕೊಂಡಿಲ್ಲ. ಇದು ಹೆಚ್ಚು ಪ್ರಚಾರದ ಹಿತಾಸಕ್ತಿ ಮೊಕದ್ದಮೆಯ ಸ್ವರೂಪದಲ್ಲಿದೆ. ಮತದಾನ ಮತ್ತು ಎಣಿಕೆಯ ದಿನಾಂಕವನ್ನು ಚುನಾವಣಾ ಆಯೋಗ ಮಾತ್ರ ನಿರ್ಧರಿಸಬೇಕು ಎಂದು ಹೇಳಿದ್ದಾರೆ.

ಚುನಾವಣಾ ಆಯೋಗದ ಚುನಾವಣಾ ಪ್ರಕ್ರಿಯೆಗಳಲ್ಲಿ ಮಧ್ಯಪ್ರವೇಶಿಸಲು ಸಂವಿಧಾನದಲ್ಲಿ ನಮಗೆ ಅವಕಾಶವನ್ನು ನೀಡಿಲ್ಲ. ಸಂವಿಧಾನದ 329ನೇ ವಿಧಿ (ಚುನಾವಣಾ ವಿಷಯಗಳಲ್ಲಿ ನ್ಯಾಯಾಲಯಗಳ ಮಧ್ಯಪ್ರವೇಶಕ್ಕೆ ತಡೆ) ಪ್ರಕಾರ ಚುನಾವಣಾ ಕಾರ್ಯಕ್ರಮದಲ್ಲಿ ಮಧ್ಯಪ್ರವೇಶಿಸಲು ಅನುಮತಿ ನೀಡುವುದಿಲ್ಲ ಎಂದು ಕೋರ್ಟ್‌ ಈ ವೇಳೆ ಹೇಳಿದೆ.

ಇದನ್ನು ಓದಿ: ಎಎಪಿ ಪ್ರತಿಭಟನೆ ವೇಳೆ ಪತ್ರಕರ್ತರ ಮೇಲೆ ಪೊಲೀಸರಿಂದ ಹಲ್ಲೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...