Homeಮುಖಪುಟಕೊರೊನಾ ನಿರ್ಬಂಧದಿಂದಾಗಿ ತೊಂದರೆಯಾದವರ ನೆರವಿಗೆ ಒಂದು ತಿಂಗಳ ಸಂಬಳ ನೀಡಿದ ಮದ್ರಾಸ್‌ ಹೈಕೋರ್ಟ್‌ ನ್ಯಾಯಮೂರ್ತಿ

ಕೊರೊನಾ ನಿರ್ಬಂಧದಿಂದಾಗಿ ತೊಂದರೆಯಾದವರ ನೆರವಿಗೆ ಒಂದು ತಿಂಗಳ ಸಂಬಳ ನೀಡಿದ ಮದ್ರಾಸ್‌ ಹೈಕೋರ್ಟ್‌ ನ್ಯಾಯಮೂರ್ತಿ

"ಜನತಾ ಕರ್ಫ್ಯೂ" ಸಮಯದಲ್ಲಿ ಬಡ ಕಾರ್ಮಿಕರು ಮತ್ತು ಆಶ್ರಯವಿಲ್ಲದ ಜನರಿಗೆ ಆಹಾರ ಮತ್ತು ಆಶ್ರಯವನ್ನು ಒದಗಿಸುವಂತೆ ಸರ್ಕಾರವು ಖಚಿತಪಡಿಸಿಕೊಳ್ಳಬೇಕೆಂದು ಶುಕ್ರವಾರ ನ್ಯಾಯಪೀಠ ನಿರ್ದೇಶಿಸಿದೆ.

- Advertisement -
- Advertisement -

ಕೊರೊನಾ ವೈರಸ್ ಹೊಡೆತಕ್ಕೆ ಒಳಗಾದ ಅಸಂಘಟಿತ ವಲಯದ ಕಾರ್ಮಿಕರಿಗೆ ನೆರವಾಗಲು ಮದ್ರಾಸ್ ಹೈಕೋರ್ಟ್‌‌ನ ನ್ಯಾಯಮೂರ್ತಿ ಎಸ್.ಎಂ.ಸುಬ್ರಮಣ್ಯಂ ಅವರು ಒಂದು ತಿಂಗಳ ಸಂಬಳವನ್ನು ನೀಡುವುದಾಗಿ ಘೋಷಿಸಿದ್ದಾರೆ.

ಕೊರೊನಾ ಕಾರಣದಿಂದಾಗಿ ಏಕಾಏಕಿ ಉಂಟಾದ ಸ್ಥಗಿತದಿಂದಾಗಿ ತಮ್ಮ ಗಳಿಕೆಯನ್ನು ಕಳೆದುಕೊಂಡಿರಬಹುದಾದವರಿಗೆ ಅಸಂಘಟಿತ ವಲಯದ ಕಾರ್ಮಿಕರಿಗೆ ಸಹಾಯ ಮಾಡಲು ಮದ್ರಾಸ್ ಹೈಕೋರ್ಟ್‌ನ ನ್ಯಾಯಮೂರ್ತಿ ಎಸ್‌.ಎಂ.ಸುಬ್ರಮಣ್ಯಂ ಅವರು ತಮ್ಮ ಒಂದು ತಿಂಗಳ ಸಂಬಳವನ್ನು ನಿರ್ಧರಿಸಿದ್ದಾರೆ ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ.

“COVID-19 ಕಾರಣದಿಂದಾಗಿ ಗಳಿಕೆಯನ್ನು ಕಳೆದುಕೊಂಡಿರುವ ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ಮದ್ರಾಸ್ ಹೈಕೋರ್ಟ್‌ನ ನ್ಯಾಯಮೂರ್ತಿ ಎಸ್‌.ಎಂ.ಸುಬ್ರಮಣ್ಯಂ ಅವರು ತಮ್ಮ ಒಂದು ತಿಂಗಳ ವೇತನವಾದ ರೂ 2.25 ಲಕ್ಷ ರೂಗಳನ್ನು ನೀಡಲಿದ್ದಾರೆ. ಅವರು ಇಂದು ಚೆಕ್ ಅನ್ನು ತಮಿಳುನಾಡು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹಸ್ತಾಂತರಿಸುತ್ತಾರೆ ಎಂದು ಮೊಹಮ್ಮದ್ ಇಮ್ರಾನುಲ್ಲಾ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ಇತ್ತೀಚೆಗೆ, ನ್ಯಾಯಮೂರ್ತಿಗಳಾದ ಎನ್. ಕಿರುಬಕಾರನ್ ಮತ್ತು ಆರ್ ಹೇಮಲತಾ ಅವರ ನ್ಯಾಯಪೀಠವು ಮತ್ತಷ್ಟು ವೈರಸ್‌ ಹರಡುವಿಕೆಯಿಂದ ರಕ್ಷಿಸಲು ನಿರ್ಬಂಧಗಳನ್ನು ಜಾರಿಗೊಳಿಸುವುದರಿಂದ ಜನರಿಗೆ ಸಂಕಷ್ಟವಾಗುವ ಸಾಧ್ಯತೆಯಿದೆ ಎಂದು ಕಾಳಜಿ ವ್ಯಕ್ತಪಡಿಸಿದೆ.

ನಾಳೆ ನಡೆಯಲಿರುವ 14 ಗಂಟೆಗಳ “ಜನತಾ ಕರ್ಫ್ಯೂ” ಸಮಯದಲ್ಲಿ ಬಡ ಕಾರ್ಮಿಕರು ಮತ್ತು ಆಶ್ರಯವಿಲ್ಲದ ಜನರಿಗೆ ಆಹಾರ ಮತ್ತು ಆಶ್ರಯವನ್ನು ಒದಗಿಸುವಂತೆ ಸರ್ಕಾರವು ಖಚಿತಪಡಿಸಿಕೊಳ್ಳಬೇಕೆಂದು ಶುಕ್ರವಾರ ನ್ಯಾಯಪೀಠ ನಿರ್ದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...