Homeಮುಖಪುಟನಟ ವಿಜಯ್‌ಗೆ 1 ಲಕ್ಷ ರೂ. ದಂಡ ಕಟ್ಟುವಂತೆ ಹೈಕೋರ್ಟ್‌ ಆದೇಶ, ಯಾಕೆ ಗೊತ್ತೆ?

ನಟ ವಿಜಯ್‌ಗೆ 1 ಲಕ್ಷ ರೂ. ದಂಡ ಕಟ್ಟುವಂತೆ ಹೈಕೋರ್ಟ್‌ ಆದೇಶ, ಯಾಕೆ ಗೊತ್ತೆ?

- Advertisement -
- Advertisement -

ತಮಿಳು ಸೂಪರ್‌ ಸ್ಟಾರ್‌ ವಿಜಯ್ ಅವರು ತನ್ನ 7.95 ಕೋಟಿ ರೂ. ಮೌಲ್ಯದ ‘ರೋಲ್ಸ್ ರಾಯ್ಸ್ ಘೋಸ್ಟ್’ ಕಾರಿನ ಮೇಲೆ ತೆರಿಗೆ ವಿನಾಯಿತಿ ಕೋರಿ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್‌ ನ್ಯಾಯಮೂರ್ತಿ‌ ಎಸ್.ಎಂ.ಸುಬ್ರಮಣ್ಯಂ ಅವರು ವಜಾಗೊಳಿಸಿದ್ದು, ತಮಿಳುನಾಡು ಮುಖ್ಯಮಂತ್ರಿಯ ಕೊರೊನಾ ಪರಿಹಾರ ನಿಧಿಗೆ 1 ಲಕ್ಷ ರೂಗಳನ್ನು ಜಮಾ ಮಾಡುವಂತೆ ಆದೇಶ ನೀಡಿದ್ದಾರೆ.

ಇಂಗ್ಲೇಂಡ್‌ನಿಂದ ಆಮದು ಮಾಡಿಕೊಂಡಿದ್ದ ಕಾರಿನ ಮೇಲೆ ತೆರಿಗೆ ವಿನಾಯಿತಿ ನೀಡಬೇಕೆಂದು ಕೋರಿ ಅವರು 2012 ರಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ಎಸ್.ಎಂ.ಸುಬ್ರಮಣ್ಯಂ ಅವರು, ತಮಿಳುನಾಡು ಮುಖ್ಯಮಂತ್ರಿಯ ಕೋವಿಡ್ -19 ಸಾರ್ವಜನಿಕ ಪರಿಹಾರ ನಿಧಿಗೆ, ಆದೇಶದ ಪ್ರತಿ ಸ್ವೀಕರಿಸಿದ ದಿನಾಂಕದಿಂದ ಎರಡು ವಾರಗಳಲ್ಲಿ ಒಂದು ಲಕ್ಷವನ್ನು ಜಮಾ ಮಾಡುವಂತೆ ಕೇಳಿಕೊಂಡಿದ್ದಾರೆ. ಜೊತೆಗೆ ಎರಡು ವಾರಗಳ ಅವಧಿಯಲ್ಲಿ ಪಾವತಿಸಬೇಕಾದ ತೆರಿಗೆಯನ್ನು ಕಟ್ಟುವಂತೆ ಕೇಳಿಕೊಂಡಿದ್ದಾರೆ.

ಇದನ್ನೂ ಓದಿ: ದಳಪತಿ ವಿಜಯ್‌ಗೆ 47ರ ಸಂಭ್ರಮ: ಅಭಿಮಾನಿಗಳು ಮತ್ತು ಚಿತ್ರತಾರೆಯರಿಂದ ಶುಭಾಶಯಗಳ ಸುರಿಮಳೆ

“ಚಲನಚಿತ್ರಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಸಾಮಾಜಿಕ ನ್ಯಾಯದ ಚಾಂಪಿಯನ್ ಆಗುವ ನಟ, ನಿಜ ಜೀವನದಲ್ಲಿ ತೆರಿಗೆ ಪಾವತಿಸಲು ವಿಫಲರಾಗಿದ್ದಾರೆ. ತಮಿಳು ಚಿತ್ರರಂಗವು ನಟರನ್ನು ನಿಜವಾದ ನಾಯಕರು ಎಂದು ನಂಬುವಂತೆ ಪ್ರೇರೇಪಿಸುತ್ತದೆ. ಅಲ್ಲದೆ ಈ ನಾಯಕರು ಆಡಳಿತಗಾರರಾಗಿದ್ದಾರೆ” ಎಂದು ಅವರು ಹೇಳಿದ್ದಾರೆ.

‘‘ತೆರಿಗೆ ಪಾವತಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ, ಇದು ದೇಣಿಗೆಯಲ್ಲ, ಕಡ್ಡಾಯವಾಗಿ ನೀಡಲೆಬೇಕಾಗಿದ್ದು” ಎಂದು ಹೇಳಿದ್ದಾರೆ.

ಚಿತ್ರರಂಗದ ಇತರ ಎಲ್ಲಾ ನಟರಂತೆ, ವಿಜಯ್ ಕೂಡಾ ಬಿಎಂಡಬ್ಲ್ಯು ಮಿನಿ ಕೂಪರ್, ಆಡಿ ಎ 8 ಮತ್ತು ರೋಲ್ಸ್ ರಾಯ್ಸ್ ಘೋಸ್ಟ್ ಅನ್ನು ಒಳಗೊಂಡಿರುವ ವಿಂಟೇಜ್ ಕಾರುಗಳ ಆಕರ್ಷಕ ಸಂಗ್ರಹವನ್ನು ಹೊಂದಿದ್ದಾರೆ.

ತಮಿಳು ಚಿತ್ರರಂಗದ ಪ್ರಸಿದ್ಧ ನಟರಾಗಿರುವ ವಿಜಯ್ ಇತ್ತೀಚೆಗಷ್ಟೇ ತಮ್ಮ 47 ನೇ ಹುಟ್ಟಿದ ದಿನವನ್ನು ಆಚರಿಸಿಕೊಂಡಿದ್ದರು. ವಿಜಯ್ ಹುಟ್ಟಿದ ದಿನದಂದು ಅವರ ಮುಂದಿನ ಚಲನಚಿತ್ರ ಬೀಸ್ಟ್‌ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿತ್ತು.

ಇದನ್ನೂ ಓದಿ: ಸಂಚಾರಿ ವಿಜಯ್‌ ನಿಧನಕ್ಕೆ ಕನ್ನಡದಲ್ಲಿ ಸಂತಾಪ ಸೂಚಿಸಿದ ಅಮೆರಿಕಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...