Homeಮುಖಪುಟಇಶಾ ಫೌಂಡೇಶನ್‌ನ ಅಕ್ರಮಗಳ ವಿರುದ್ಧ ತನಿಖೆಗೆ ಆದೇಶಿಸಿದ ಮದ್ರಾಸ್ ಹೈಕೋರ್ಟ್

ಇಶಾ ಫೌಂಡೇಶನ್‌ನ ಅಕ್ರಮಗಳ ವಿರುದ್ಧ ತನಿಖೆಗೆ ಆದೇಶಿಸಿದ ಮದ್ರಾಸ್ ಹೈಕೋರ್ಟ್

- Advertisement -
- Advertisement -

ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್ ಕೊಯಮತ್ತೂರಿನಲ್ಲಿರುವ ತನ್ನ ಕ್ಯಾಂಪಸ್‌ನ 20.805 ಹೆಕ್ಟೇರ್ ಭೂಮಿಯಲ್ಲಿ ಅನಧಿಕೃತ ನಿರ್ಮಾಣಗಳನ್ನು ಮಾಡಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಅಕ್ರಮಗಳು ಕಂಡು ಬಂದರೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಟ್ಟಣ ಮತ್ತು ಗ್ರಾಮಾಂತರ ಯೋಜನಾ ಜಂಟಿ ನಿರ್ದೇಶಕರಿಂದ ತನಿಖೆ ನಡೆಸುವಂತೆ ಮದ್ರಾಸ್ ಹೈಕೋರ್ಟ್ ಆದೇಶಿಸಿದೆ.

ಕೊಯಮತ್ತೂರಿನ ಇಕ್ಕರೈ ಬೊಳುವಂಪಟ್ಟಿಯಲ್ಲಿರುವ ಇಶಾ ಫೌಂಡೇಶನ್‌ನ 150 ಎಕರೆ ಕ್ಯಾಂಪಸ್, 112 ಅಡಿ ಆದಿಯೋಗಿ ಪ್ರತಿಮೆ ಸೇರಿದಂತೆ ಅನೇಕ ನಿಯಮಗಳ ಸ್ಪಷ್ಟ ಉಲ್ಲಂಘನೆ ಮಾಡಿದೆ ಎಂದು ನ್ಯೂಸ್‌ಲಾಂಡ್ರಿ ವರದಿ ಮಾಡಿತ್ತು.

ಈ ಆದಿಯೋಗಿ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದಾರೆ. ಆಗಿನ ಉಪ ನಿರ್ದೇಶಕ ಆರ್ ಸೆಲ್ವರಾಜ್ ಅವರು, ”ತಮ್ಮ ಇಲಾಖೆಯ ಅನುಮೋದನೆಯಿಲ್ಲದೆ ಈ ಪ್ರತಿಮೆಯನ್ನು ನಿರ್ಮಿಸಲಾಗಿದೆ” ಎಂದು ಹೇಳಿದ್ದಾರೆ.

2021ರಲ್ಲಿ ವೆಲ್ಲಿಯಂಗಿರಿ ಹಿಲ್ ಟ್ರೈಬಲ್ ಪ್ರೊಟೆಕ್ಷನ್ ಸೊಸೈಟಿಯ ಅರ್ಜಿದಾರರಾದ ಪಿ ಮುತ್ತಮ್ಮಾಳ್ ಅವರನ್ನು , ನ್ಯೂಸ್‌ಲಾಂಡ್ರಿ ಭೇಟಿ ಮಾಡಿದಾಗ, ”2017ರಲ್ಲಿ ಅರ್ಜಿ ಸಲ್ಲಿಸಿದ್ದಕ್ಕಾಗಿ ಇಶಾ ಫೌಂಡೇಶನ್‌ನವರು ಕಿರುಕುಳ ನೀಡಿದ್ದರು” ಎಂದು ಹೇಳಿದ್ದರು.

ವೆಲ್ಲಿಯಂಗಿರಿಯ ತಪ್ಪಲಿನಲ್ಲಿ ಇಶಾ ಫೌಂಡೇಶನ್ ನಡೆಸುತ್ತಿರುವ ನಿರ್ಮಾಣ ಕಾಮಗಾರಿಗೆ ಆಕ್ಷೇಪ ವ್ಯಕ್ತಪಡಿಸಿದ ನಂತರ ಇಕ್ಕರೈ ಬೊಳುವಂಪಟ್ಟಿಯ ಮುತ್ತತ್ತು ಅಯಾಲ್ ವಸಾಹತು ಪ್ರದೇಶದಲ್ಲಿರುವ ತಮ್ಮ ಮನೆಯನ್ನು ಪಿ ಮುತ್ತಮ್ಮಾಳ್ ಅವರು ತೊರೆದರು.

ಆಗಸ್ಟ್ 18ರಂದು ಮದ್ರಾಸ್ ಹೈಕೋರ್ಟ್ ಈ ನಿರ್ದೇಶನ ನೀಡಿದೆ.

ಇದೀಗ ಈ ಬಗ್ಗೆ ಮಾತನಾಡಿದ ಮುತ್ತಮ್ಮಲ್ ಾವರು, ”ಕ್ರಮ ಕೈಗೊಳ್ಳುವುದು ಸರ್ಕಾರದ ಕೆಲಸ. ಸರ್ಕಾರವು ಅಕ್ರಮ ಕಟ್ಟಡಗಳನ್ನು ತೆಗೆದುಹಾಕಬೇಕು ಮತ್ತು ಅರಣ್ಯ, ವನ್ಯಜೀವಿಗಳು ಮತ್ತು ಬುಡಕಟ್ಟು ಜನರಿಗೆ ಯಾವುದೇ ಹಾನಿಯಾಗದಂತೆ ನೋಡಿಕೊಳ್ಳಬೇಕು” ಎಂದು ಹೇಳಿದ್ದಾರೆ.

‘ಯಾವುದೇ ಎನ್‌ಒಸಿ ದಾಖಲೆ ಇಲ್ಲ’

ಪಟ್ಟಣ ಮತ್ತು ಗ್ರಾಮಾಂತರ ಯೋಜನೆಯ ಜಂಟಿ ನಿರ್ದೇಶಕ ತಿರು ಆರ್ ರಾಜಗುರು ಅವರು ಸಲ್ಲಿಸಿದ ಸ್ಥಿತಿ ವರದಿಯನ್ನು ಮದ್ರಾಸ್ ಹೈಕೋರ್ಟ್ ಗಮನಿಸಿದೆ. ಇಶಾ ಫೌಂಡೇಶನ್ ನಿರ್ಮಾಣಕ್ಕೆ ಅನುಮತಿ ಕೋರಿಲ್ಲ ಅಥವಾ ನಿರಾಕ್ಷೇಪಣಾ ಪ್ರಮಾಣಪತ್ರವನ್ನೂ ಪಡೆದಿಲ್ಲ ಎಂದು ವರದಿ ತಿಳಿಸಿದೆ.

ಆನಂತರ ಮುಖ್ಯ ನ್ಯಾಯಮೂರ್ತಿ ಎಸ್ ವಿ ಗಂಗಾಪುರವಾಲಾ ಮತ್ತು ನ್ಯಾಯಮೂರ್ತಿ ಪಿ ಡಿ ಆದಿಕೇಶವುಲು ಅವರ ಪೀಠ ತನಿಖೆಗೆ ಆದೇಶಿಸಿದೆ.

ವರದಿಯಲ್ಲಿ 15.53 ಎಕರೆ ನಂಜೈ ಭೂಮಿ ಅಥವಾ ಜೌಗು ಪ್ರದೇಶ ಮತ್ತು 5.275 ಹೆಕ್ಟೇರ್ ಪುಂಜೈ ಅಥವಾ ಒಣ ಭೂಮಿ ಸೇರಿದಂತೆ 20.805 ಹೆಕ್ಟೇರ್ ಭೂಮಿಯಲ್ಲಿ ನಿರ್ಮಾಣವನ್ನು ಉಲ್ಲೇಖಿಸಲಾಗಿದೆ. ಕಚೇರಿಯಲ್ಲಿ ಜಿಲ್ಲಾಧಿಕಾರಿ ಎನ್‌ಒಸಿ, ಮಾಲಿನ್ಯ ನಿಯಂತ್ರಣ ಮಂಡಳಿ ಎನ್‌ಒಸಿ, ಗುಡ್ಡಗಾಡು ಪ್ರದೇಶ ಸಂರಕ್ಷಣಾ ಪ್ರಾಧಿಕಾರ ಎನ್‌ಒಸಿ, ಅಗ್ನಿಶಾಮಕ ಇಲಾಖೆ ಎನ್‌ಒಸಿ ಇತ್ಯಾದಿಗಳ ಬಗ್ಗೆ ಯಾವುದೇ ದಾಖಲೆ ಕಂಡುಬಂದಿಲ್ಲ.

ಇಕ್ಕರೈ ಬೊಳುವಂಪಟ್ಟಿ ಪಂಚಾಯಿತಿಯೊಂದಿಗೆ ಪರಿಶೀಲಿಸಿದಾಗ, ಪಂಚಾಯಿತಿ ಅಧ್ಯಕ್ಷರಿಂದ ಯಾವುದೇ ಅನುಮತಿ ನೀಡಲಾಗಿಲ್ಲ ಎಂದು ಸಲ್ಲಿಸಲಾಗಿದೆ. ಧಾರ್ಮಿಕ ಕಟ್ಟಡಕ್ಕೆ ಜಿಲ್ಲಾಧಿಕಾರಿ ಎನ್‌ಒಸಿ ನೀಡಿಲ್ಲ ಎಂದು ಸಲ್ಲಿಸಲಾಗಿದೆ.

”ಜಿಲ್ಲೆಯ ಪಟ್ಟಣ ಮತ್ತು ಗ್ರಾಮ ಯೋಜನೆ ಜಂಟಿ ನಿರ್ದೇಶಕರು, ಅರ್ಜಿದಾರರು ಮತ್ತು ಇಶಾ ಫೌಂಡೇಶನ್ ಸಲ್ಲಿಸಬಹುದಾದ ದಾಖಲೆಗಳನ್ನು ಪರಿಗಣಿಸುತ್ತಾರೆ. ಜಾರಿಯಲ್ಲಿರುವ ಅನುಮತಿಯ ಬಗ್ಗೆ ಪರಿಶೀಲಿಸುತ್ತಾರೆ. ಅದು ಕ್ರಮಬದ್ಧವಾಗಿಲ್ಲದಿದ್ದರೆ, ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಬೇಕು. ಯೋಜನೆ ಮತ್ತು ನಿರಾಕ್ಷೇಪಣಾ ಪ್ರಮಾಣಪತ್ರಕ್ಕೆ ಅನುಗುಣವಾಗಿ ನಿರ್ಮಿಸಲಾಗದ ಕಟ್ಟಡಕ್ಕೆ ಸಂಬಂಧಿಸಿದಂತೆ ತ್ವರಿತವಾಗಿ ಕ್ರಮಕೈಗೊಳ್ಳಬೇಕು” ಎಂದು ನ್ಯಾಯಾಲಯವು ಆದೇಶಿಸಿದೆ.

ಇದನ್ನೂ ಓದಿ: ಇಶಾ ಫೌಂಡೇಶನ್‌ನ ಆದಿಯೋಗಿ ಪ್ರತಿಮೆ ಅನಾವರಣಕ್ಕೆ ಅನುಮತಿ ನೀಡಿದ ರಾಜ್ಯ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....