Homeಮುಖಪುಟಇಶಾ ಫೌಂಡೇಶನ್‌ನ ಅಕ್ರಮಗಳ ವಿರುದ್ಧ ತನಿಖೆಗೆ ಆದೇಶಿಸಿದ ಮದ್ರಾಸ್ ಹೈಕೋರ್ಟ್

ಇಶಾ ಫೌಂಡೇಶನ್‌ನ ಅಕ್ರಮಗಳ ವಿರುದ್ಧ ತನಿಖೆಗೆ ಆದೇಶಿಸಿದ ಮದ್ರಾಸ್ ಹೈಕೋರ್ಟ್

- Advertisement -
- Advertisement -

ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್ ಕೊಯಮತ್ತೂರಿನಲ್ಲಿರುವ ತನ್ನ ಕ್ಯಾಂಪಸ್‌ನ 20.805 ಹೆಕ್ಟೇರ್ ಭೂಮಿಯಲ್ಲಿ ಅನಧಿಕೃತ ನಿರ್ಮಾಣಗಳನ್ನು ಮಾಡಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಅಕ್ರಮಗಳು ಕಂಡು ಬಂದರೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಟ್ಟಣ ಮತ್ತು ಗ್ರಾಮಾಂತರ ಯೋಜನಾ ಜಂಟಿ ನಿರ್ದೇಶಕರಿಂದ ತನಿಖೆ ನಡೆಸುವಂತೆ ಮದ್ರಾಸ್ ಹೈಕೋರ್ಟ್ ಆದೇಶಿಸಿದೆ.

ಕೊಯಮತ್ತೂರಿನ ಇಕ್ಕರೈ ಬೊಳುವಂಪಟ್ಟಿಯಲ್ಲಿರುವ ಇಶಾ ಫೌಂಡೇಶನ್‌ನ 150 ಎಕರೆ ಕ್ಯಾಂಪಸ್, 112 ಅಡಿ ಆದಿಯೋಗಿ ಪ್ರತಿಮೆ ಸೇರಿದಂತೆ ಅನೇಕ ನಿಯಮಗಳ ಸ್ಪಷ್ಟ ಉಲ್ಲಂಘನೆ ಮಾಡಿದೆ ಎಂದು ನ್ಯೂಸ್‌ಲಾಂಡ್ರಿ ವರದಿ ಮಾಡಿತ್ತು.

ಈ ಆದಿಯೋಗಿ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದಾರೆ. ಆಗಿನ ಉಪ ನಿರ್ದೇಶಕ ಆರ್ ಸೆಲ್ವರಾಜ್ ಅವರು, ”ತಮ್ಮ ಇಲಾಖೆಯ ಅನುಮೋದನೆಯಿಲ್ಲದೆ ಈ ಪ್ರತಿಮೆಯನ್ನು ನಿರ್ಮಿಸಲಾಗಿದೆ” ಎಂದು ಹೇಳಿದ್ದಾರೆ.

2021ರಲ್ಲಿ ವೆಲ್ಲಿಯಂಗಿರಿ ಹಿಲ್ ಟ್ರೈಬಲ್ ಪ್ರೊಟೆಕ್ಷನ್ ಸೊಸೈಟಿಯ ಅರ್ಜಿದಾರರಾದ ಪಿ ಮುತ್ತಮ್ಮಾಳ್ ಅವರನ್ನು , ನ್ಯೂಸ್‌ಲಾಂಡ್ರಿ ಭೇಟಿ ಮಾಡಿದಾಗ, ”2017ರಲ್ಲಿ ಅರ್ಜಿ ಸಲ್ಲಿಸಿದ್ದಕ್ಕಾಗಿ ಇಶಾ ಫೌಂಡೇಶನ್‌ನವರು ಕಿರುಕುಳ ನೀಡಿದ್ದರು” ಎಂದು ಹೇಳಿದ್ದರು.

ವೆಲ್ಲಿಯಂಗಿರಿಯ ತಪ್ಪಲಿನಲ್ಲಿ ಇಶಾ ಫೌಂಡೇಶನ್ ನಡೆಸುತ್ತಿರುವ ನಿರ್ಮಾಣ ಕಾಮಗಾರಿಗೆ ಆಕ್ಷೇಪ ವ್ಯಕ್ತಪಡಿಸಿದ ನಂತರ ಇಕ್ಕರೈ ಬೊಳುವಂಪಟ್ಟಿಯ ಮುತ್ತತ್ತು ಅಯಾಲ್ ವಸಾಹತು ಪ್ರದೇಶದಲ್ಲಿರುವ ತಮ್ಮ ಮನೆಯನ್ನು ಪಿ ಮುತ್ತಮ್ಮಾಳ್ ಅವರು ತೊರೆದರು.

ಆಗಸ್ಟ್ 18ರಂದು ಮದ್ರಾಸ್ ಹೈಕೋರ್ಟ್ ಈ ನಿರ್ದೇಶನ ನೀಡಿದೆ.

ಇದೀಗ ಈ ಬಗ್ಗೆ ಮಾತನಾಡಿದ ಮುತ್ತಮ್ಮಲ್ ಾವರು, ”ಕ್ರಮ ಕೈಗೊಳ್ಳುವುದು ಸರ್ಕಾರದ ಕೆಲಸ. ಸರ್ಕಾರವು ಅಕ್ರಮ ಕಟ್ಟಡಗಳನ್ನು ತೆಗೆದುಹಾಕಬೇಕು ಮತ್ತು ಅರಣ್ಯ, ವನ್ಯಜೀವಿಗಳು ಮತ್ತು ಬುಡಕಟ್ಟು ಜನರಿಗೆ ಯಾವುದೇ ಹಾನಿಯಾಗದಂತೆ ನೋಡಿಕೊಳ್ಳಬೇಕು” ಎಂದು ಹೇಳಿದ್ದಾರೆ.

‘ಯಾವುದೇ ಎನ್‌ಒಸಿ ದಾಖಲೆ ಇಲ್ಲ’

ಪಟ್ಟಣ ಮತ್ತು ಗ್ರಾಮಾಂತರ ಯೋಜನೆಯ ಜಂಟಿ ನಿರ್ದೇಶಕ ತಿರು ಆರ್ ರಾಜಗುರು ಅವರು ಸಲ್ಲಿಸಿದ ಸ್ಥಿತಿ ವರದಿಯನ್ನು ಮದ್ರಾಸ್ ಹೈಕೋರ್ಟ್ ಗಮನಿಸಿದೆ. ಇಶಾ ಫೌಂಡೇಶನ್ ನಿರ್ಮಾಣಕ್ಕೆ ಅನುಮತಿ ಕೋರಿಲ್ಲ ಅಥವಾ ನಿರಾಕ್ಷೇಪಣಾ ಪ್ರಮಾಣಪತ್ರವನ್ನೂ ಪಡೆದಿಲ್ಲ ಎಂದು ವರದಿ ತಿಳಿಸಿದೆ.

ಆನಂತರ ಮುಖ್ಯ ನ್ಯಾಯಮೂರ್ತಿ ಎಸ್ ವಿ ಗಂಗಾಪುರವಾಲಾ ಮತ್ತು ನ್ಯಾಯಮೂರ್ತಿ ಪಿ ಡಿ ಆದಿಕೇಶವುಲು ಅವರ ಪೀಠ ತನಿಖೆಗೆ ಆದೇಶಿಸಿದೆ.

ವರದಿಯಲ್ಲಿ 15.53 ಎಕರೆ ನಂಜೈ ಭೂಮಿ ಅಥವಾ ಜೌಗು ಪ್ರದೇಶ ಮತ್ತು 5.275 ಹೆಕ್ಟೇರ್ ಪುಂಜೈ ಅಥವಾ ಒಣ ಭೂಮಿ ಸೇರಿದಂತೆ 20.805 ಹೆಕ್ಟೇರ್ ಭೂಮಿಯಲ್ಲಿ ನಿರ್ಮಾಣವನ್ನು ಉಲ್ಲೇಖಿಸಲಾಗಿದೆ. ಕಚೇರಿಯಲ್ಲಿ ಜಿಲ್ಲಾಧಿಕಾರಿ ಎನ್‌ಒಸಿ, ಮಾಲಿನ್ಯ ನಿಯಂತ್ರಣ ಮಂಡಳಿ ಎನ್‌ಒಸಿ, ಗುಡ್ಡಗಾಡು ಪ್ರದೇಶ ಸಂರಕ್ಷಣಾ ಪ್ರಾಧಿಕಾರ ಎನ್‌ಒಸಿ, ಅಗ್ನಿಶಾಮಕ ಇಲಾಖೆ ಎನ್‌ಒಸಿ ಇತ್ಯಾದಿಗಳ ಬಗ್ಗೆ ಯಾವುದೇ ದಾಖಲೆ ಕಂಡುಬಂದಿಲ್ಲ.

ಇಕ್ಕರೈ ಬೊಳುವಂಪಟ್ಟಿ ಪಂಚಾಯಿತಿಯೊಂದಿಗೆ ಪರಿಶೀಲಿಸಿದಾಗ, ಪಂಚಾಯಿತಿ ಅಧ್ಯಕ್ಷರಿಂದ ಯಾವುದೇ ಅನುಮತಿ ನೀಡಲಾಗಿಲ್ಲ ಎಂದು ಸಲ್ಲಿಸಲಾಗಿದೆ. ಧಾರ್ಮಿಕ ಕಟ್ಟಡಕ್ಕೆ ಜಿಲ್ಲಾಧಿಕಾರಿ ಎನ್‌ಒಸಿ ನೀಡಿಲ್ಲ ಎಂದು ಸಲ್ಲಿಸಲಾಗಿದೆ.

”ಜಿಲ್ಲೆಯ ಪಟ್ಟಣ ಮತ್ತು ಗ್ರಾಮ ಯೋಜನೆ ಜಂಟಿ ನಿರ್ದೇಶಕರು, ಅರ್ಜಿದಾರರು ಮತ್ತು ಇಶಾ ಫೌಂಡೇಶನ್ ಸಲ್ಲಿಸಬಹುದಾದ ದಾಖಲೆಗಳನ್ನು ಪರಿಗಣಿಸುತ್ತಾರೆ. ಜಾರಿಯಲ್ಲಿರುವ ಅನುಮತಿಯ ಬಗ್ಗೆ ಪರಿಶೀಲಿಸುತ್ತಾರೆ. ಅದು ಕ್ರಮಬದ್ಧವಾಗಿಲ್ಲದಿದ್ದರೆ, ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಬೇಕು. ಯೋಜನೆ ಮತ್ತು ನಿರಾಕ್ಷೇಪಣಾ ಪ್ರಮಾಣಪತ್ರಕ್ಕೆ ಅನುಗುಣವಾಗಿ ನಿರ್ಮಿಸಲಾಗದ ಕಟ್ಟಡಕ್ಕೆ ಸಂಬಂಧಿಸಿದಂತೆ ತ್ವರಿತವಾಗಿ ಕ್ರಮಕೈಗೊಳ್ಳಬೇಕು” ಎಂದು ನ್ಯಾಯಾಲಯವು ಆದೇಶಿಸಿದೆ.

ಇದನ್ನೂ ಓದಿ: ಇಶಾ ಫೌಂಡೇಶನ್‌ನ ಆದಿಯೋಗಿ ಪ್ರತಿಮೆ ಅನಾವರಣಕ್ಕೆ ಅನುಮತಿ ನೀಡಿದ ರಾಜ್ಯ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...