Homeಮುಖಪುಟಇಶಾ ಫೌಂಡೇಶನ್‌ನ ಅಕ್ರಮಗಳ ವಿರುದ್ಧ ತನಿಖೆಗೆ ಆದೇಶಿಸಿದ ಮದ್ರಾಸ್ ಹೈಕೋರ್ಟ್

ಇಶಾ ಫೌಂಡೇಶನ್‌ನ ಅಕ್ರಮಗಳ ವಿರುದ್ಧ ತನಿಖೆಗೆ ಆದೇಶಿಸಿದ ಮದ್ರಾಸ್ ಹೈಕೋರ್ಟ್

- Advertisement -
- Advertisement -

ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್ ಕೊಯಮತ್ತೂರಿನಲ್ಲಿರುವ ತನ್ನ ಕ್ಯಾಂಪಸ್‌ನ 20.805 ಹೆಕ್ಟೇರ್ ಭೂಮಿಯಲ್ಲಿ ಅನಧಿಕೃತ ನಿರ್ಮಾಣಗಳನ್ನು ಮಾಡಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಅಕ್ರಮಗಳು ಕಂಡು ಬಂದರೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಟ್ಟಣ ಮತ್ತು ಗ್ರಾಮಾಂತರ ಯೋಜನಾ ಜಂಟಿ ನಿರ್ದೇಶಕರಿಂದ ತನಿಖೆ ನಡೆಸುವಂತೆ ಮದ್ರಾಸ್ ಹೈಕೋರ್ಟ್ ಆದೇಶಿಸಿದೆ.

ಕೊಯಮತ್ತೂರಿನ ಇಕ್ಕರೈ ಬೊಳುವಂಪಟ್ಟಿಯಲ್ಲಿರುವ ಇಶಾ ಫೌಂಡೇಶನ್‌ನ 150 ಎಕರೆ ಕ್ಯಾಂಪಸ್, 112 ಅಡಿ ಆದಿಯೋಗಿ ಪ್ರತಿಮೆ ಸೇರಿದಂತೆ ಅನೇಕ ನಿಯಮಗಳ ಸ್ಪಷ್ಟ ಉಲ್ಲಂಘನೆ ಮಾಡಿದೆ ಎಂದು ನ್ಯೂಸ್‌ಲಾಂಡ್ರಿ ವರದಿ ಮಾಡಿತ್ತು.

ಈ ಆದಿಯೋಗಿ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದಾರೆ. ಆಗಿನ ಉಪ ನಿರ್ದೇಶಕ ಆರ್ ಸೆಲ್ವರಾಜ್ ಅವರು, ”ತಮ್ಮ ಇಲಾಖೆಯ ಅನುಮೋದನೆಯಿಲ್ಲದೆ ಈ ಪ್ರತಿಮೆಯನ್ನು ನಿರ್ಮಿಸಲಾಗಿದೆ” ಎಂದು ಹೇಳಿದ್ದಾರೆ.

2021ರಲ್ಲಿ ವೆಲ್ಲಿಯಂಗಿರಿ ಹಿಲ್ ಟ್ರೈಬಲ್ ಪ್ರೊಟೆಕ್ಷನ್ ಸೊಸೈಟಿಯ ಅರ್ಜಿದಾರರಾದ ಪಿ ಮುತ್ತಮ್ಮಾಳ್ ಅವರನ್ನು , ನ್ಯೂಸ್‌ಲಾಂಡ್ರಿ ಭೇಟಿ ಮಾಡಿದಾಗ, ”2017ರಲ್ಲಿ ಅರ್ಜಿ ಸಲ್ಲಿಸಿದ್ದಕ್ಕಾಗಿ ಇಶಾ ಫೌಂಡೇಶನ್‌ನವರು ಕಿರುಕುಳ ನೀಡಿದ್ದರು” ಎಂದು ಹೇಳಿದ್ದರು.

ವೆಲ್ಲಿಯಂಗಿರಿಯ ತಪ್ಪಲಿನಲ್ಲಿ ಇಶಾ ಫೌಂಡೇಶನ್ ನಡೆಸುತ್ತಿರುವ ನಿರ್ಮಾಣ ಕಾಮಗಾರಿಗೆ ಆಕ್ಷೇಪ ವ್ಯಕ್ತಪಡಿಸಿದ ನಂತರ ಇಕ್ಕರೈ ಬೊಳುವಂಪಟ್ಟಿಯ ಮುತ್ತತ್ತು ಅಯಾಲ್ ವಸಾಹತು ಪ್ರದೇಶದಲ್ಲಿರುವ ತಮ್ಮ ಮನೆಯನ್ನು ಪಿ ಮುತ್ತಮ್ಮಾಳ್ ಅವರು ತೊರೆದರು.

ಆಗಸ್ಟ್ 18ರಂದು ಮದ್ರಾಸ್ ಹೈಕೋರ್ಟ್ ಈ ನಿರ್ದೇಶನ ನೀಡಿದೆ.

ಇದೀಗ ಈ ಬಗ್ಗೆ ಮಾತನಾಡಿದ ಮುತ್ತಮ್ಮಲ್ ಾವರು, ”ಕ್ರಮ ಕೈಗೊಳ್ಳುವುದು ಸರ್ಕಾರದ ಕೆಲಸ. ಸರ್ಕಾರವು ಅಕ್ರಮ ಕಟ್ಟಡಗಳನ್ನು ತೆಗೆದುಹಾಕಬೇಕು ಮತ್ತು ಅರಣ್ಯ, ವನ್ಯಜೀವಿಗಳು ಮತ್ತು ಬುಡಕಟ್ಟು ಜನರಿಗೆ ಯಾವುದೇ ಹಾನಿಯಾಗದಂತೆ ನೋಡಿಕೊಳ್ಳಬೇಕು” ಎಂದು ಹೇಳಿದ್ದಾರೆ.

‘ಯಾವುದೇ ಎನ್‌ಒಸಿ ದಾಖಲೆ ಇಲ್ಲ’

ಪಟ್ಟಣ ಮತ್ತು ಗ್ರಾಮಾಂತರ ಯೋಜನೆಯ ಜಂಟಿ ನಿರ್ದೇಶಕ ತಿರು ಆರ್ ರಾಜಗುರು ಅವರು ಸಲ್ಲಿಸಿದ ಸ್ಥಿತಿ ವರದಿಯನ್ನು ಮದ್ರಾಸ್ ಹೈಕೋರ್ಟ್ ಗಮನಿಸಿದೆ. ಇಶಾ ಫೌಂಡೇಶನ್ ನಿರ್ಮಾಣಕ್ಕೆ ಅನುಮತಿ ಕೋರಿಲ್ಲ ಅಥವಾ ನಿರಾಕ್ಷೇಪಣಾ ಪ್ರಮಾಣಪತ್ರವನ್ನೂ ಪಡೆದಿಲ್ಲ ಎಂದು ವರದಿ ತಿಳಿಸಿದೆ.

ಆನಂತರ ಮುಖ್ಯ ನ್ಯಾಯಮೂರ್ತಿ ಎಸ್ ವಿ ಗಂಗಾಪುರವಾಲಾ ಮತ್ತು ನ್ಯಾಯಮೂರ್ತಿ ಪಿ ಡಿ ಆದಿಕೇಶವುಲು ಅವರ ಪೀಠ ತನಿಖೆಗೆ ಆದೇಶಿಸಿದೆ.

ವರದಿಯಲ್ಲಿ 15.53 ಎಕರೆ ನಂಜೈ ಭೂಮಿ ಅಥವಾ ಜೌಗು ಪ್ರದೇಶ ಮತ್ತು 5.275 ಹೆಕ್ಟೇರ್ ಪುಂಜೈ ಅಥವಾ ಒಣ ಭೂಮಿ ಸೇರಿದಂತೆ 20.805 ಹೆಕ್ಟೇರ್ ಭೂಮಿಯಲ್ಲಿ ನಿರ್ಮಾಣವನ್ನು ಉಲ್ಲೇಖಿಸಲಾಗಿದೆ. ಕಚೇರಿಯಲ್ಲಿ ಜಿಲ್ಲಾಧಿಕಾರಿ ಎನ್‌ಒಸಿ, ಮಾಲಿನ್ಯ ನಿಯಂತ್ರಣ ಮಂಡಳಿ ಎನ್‌ಒಸಿ, ಗುಡ್ಡಗಾಡು ಪ್ರದೇಶ ಸಂರಕ್ಷಣಾ ಪ್ರಾಧಿಕಾರ ಎನ್‌ಒಸಿ, ಅಗ್ನಿಶಾಮಕ ಇಲಾಖೆ ಎನ್‌ಒಸಿ ಇತ್ಯಾದಿಗಳ ಬಗ್ಗೆ ಯಾವುದೇ ದಾಖಲೆ ಕಂಡುಬಂದಿಲ್ಲ.

ಇಕ್ಕರೈ ಬೊಳುವಂಪಟ್ಟಿ ಪಂಚಾಯಿತಿಯೊಂದಿಗೆ ಪರಿಶೀಲಿಸಿದಾಗ, ಪಂಚಾಯಿತಿ ಅಧ್ಯಕ್ಷರಿಂದ ಯಾವುದೇ ಅನುಮತಿ ನೀಡಲಾಗಿಲ್ಲ ಎಂದು ಸಲ್ಲಿಸಲಾಗಿದೆ. ಧಾರ್ಮಿಕ ಕಟ್ಟಡಕ್ಕೆ ಜಿಲ್ಲಾಧಿಕಾರಿ ಎನ್‌ಒಸಿ ನೀಡಿಲ್ಲ ಎಂದು ಸಲ್ಲಿಸಲಾಗಿದೆ.

”ಜಿಲ್ಲೆಯ ಪಟ್ಟಣ ಮತ್ತು ಗ್ರಾಮ ಯೋಜನೆ ಜಂಟಿ ನಿರ್ದೇಶಕರು, ಅರ್ಜಿದಾರರು ಮತ್ತು ಇಶಾ ಫೌಂಡೇಶನ್ ಸಲ್ಲಿಸಬಹುದಾದ ದಾಖಲೆಗಳನ್ನು ಪರಿಗಣಿಸುತ್ತಾರೆ. ಜಾರಿಯಲ್ಲಿರುವ ಅನುಮತಿಯ ಬಗ್ಗೆ ಪರಿಶೀಲಿಸುತ್ತಾರೆ. ಅದು ಕ್ರಮಬದ್ಧವಾಗಿಲ್ಲದಿದ್ದರೆ, ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಬೇಕು. ಯೋಜನೆ ಮತ್ತು ನಿರಾಕ್ಷೇಪಣಾ ಪ್ರಮಾಣಪತ್ರಕ್ಕೆ ಅನುಗುಣವಾಗಿ ನಿರ್ಮಿಸಲಾಗದ ಕಟ್ಟಡಕ್ಕೆ ಸಂಬಂಧಿಸಿದಂತೆ ತ್ವರಿತವಾಗಿ ಕ್ರಮಕೈಗೊಳ್ಳಬೇಕು” ಎಂದು ನ್ಯಾಯಾಲಯವು ಆದೇಶಿಸಿದೆ.

ಇದನ್ನೂ ಓದಿ: ಇಶಾ ಫೌಂಡೇಶನ್‌ನ ಆದಿಯೋಗಿ ಪ್ರತಿಮೆ ಅನಾವರಣಕ್ಕೆ ಅನುಮತಿ ನೀಡಿದ ರಾಜ್ಯ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...