Homeಮುಖಪುಟಇಶಾ ಫೌಂಡೇಶನ್‌ನ ಅಕ್ರಮಗಳ ವಿರುದ್ಧ ತನಿಖೆಗೆ ಆದೇಶಿಸಿದ ಮದ್ರಾಸ್ ಹೈಕೋರ್ಟ್

ಇಶಾ ಫೌಂಡೇಶನ್‌ನ ಅಕ್ರಮಗಳ ವಿರುದ್ಧ ತನಿಖೆಗೆ ಆದೇಶಿಸಿದ ಮದ್ರಾಸ್ ಹೈಕೋರ್ಟ್

- Advertisement -
- Advertisement -

ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್ ಕೊಯಮತ್ತೂರಿನಲ್ಲಿರುವ ತನ್ನ ಕ್ಯಾಂಪಸ್‌ನ 20.805 ಹೆಕ್ಟೇರ್ ಭೂಮಿಯಲ್ಲಿ ಅನಧಿಕೃತ ನಿರ್ಮಾಣಗಳನ್ನು ಮಾಡಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಅಕ್ರಮಗಳು ಕಂಡು ಬಂದರೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಟ್ಟಣ ಮತ್ತು ಗ್ರಾಮಾಂತರ ಯೋಜನಾ ಜಂಟಿ ನಿರ್ದೇಶಕರಿಂದ ತನಿಖೆ ನಡೆಸುವಂತೆ ಮದ್ರಾಸ್ ಹೈಕೋರ್ಟ್ ಆದೇಶಿಸಿದೆ.

ಕೊಯಮತ್ತೂರಿನ ಇಕ್ಕರೈ ಬೊಳುವಂಪಟ್ಟಿಯಲ್ಲಿರುವ ಇಶಾ ಫೌಂಡೇಶನ್‌ನ 150 ಎಕರೆ ಕ್ಯಾಂಪಸ್, 112 ಅಡಿ ಆದಿಯೋಗಿ ಪ್ರತಿಮೆ ಸೇರಿದಂತೆ ಅನೇಕ ನಿಯಮಗಳ ಸ್ಪಷ್ಟ ಉಲ್ಲಂಘನೆ ಮಾಡಿದೆ ಎಂದು ನ್ಯೂಸ್‌ಲಾಂಡ್ರಿ ವರದಿ ಮಾಡಿತ್ತು.

ಈ ಆದಿಯೋಗಿ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದಾರೆ. ಆಗಿನ ಉಪ ನಿರ್ದೇಶಕ ಆರ್ ಸೆಲ್ವರಾಜ್ ಅವರು, ”ತಮ್ಮ ಇಲಾಖೆಯ ಅನುಮೋದನೆಯಿಲ್ಲದೆ ಈ ಪ್ರತಿಮೆಯನ್ನು ನಿರ್ಮಿಸಲಾಗಿದೆ” ಎಂದು ಹೇಳಿದ್ದಾರೆ.

2021ರಲ್ಲಿ ವೆಲ್ಲಿಯಂಗಿರಿ ಹಿಲ್ ಟ್ರೈಬಲ್ ಪ್ರೊಟೆಕ್ಷನ್ ಸೊಸೈಟಿಯ ಅರ್ಜಿದಾರರಾದ ಪಿ ಮುತ್ತಮ್ಮಾಳ್ ಅವರನ್ನು , ನ್ಯೂಸ್‌ಲಾಂಡ್ರಿ ಭೇಟಿ ಮಾಡಿದಾಗ, ”2017ರಲ್ಲಿ ಅರ್ಜಿ ಸಲ್ಲಿಸಿದ್ದಕ್ಕಾಗಿ ಇಶಾ ಫೌಂಡೇಶನ್‌ನವರು ಕಿರುಕುಳ ನೀಡಿದ್ದರು” ಎಂದು ಹೇಳಿದ್ದರು.

ವೆಲ್ಲಿಯಂಗಿರಿಯ ತಪ್ಪಲಿನಲ್ಲಿ ಇಶಾ ಫೌಂಡೇಶನ್ ನಡೆಸುತ್ತಿರುವ ನಿರ್ಮಾಣ ಕಾಮಗಾರಿಗೆ ಆಕ್ಷೇಪ ವ್ಯಕ್ತಪಡಿಸಿದ ನಂತರ ಇಕ್ಕರೈ ಬೊಳುವಂಪಟ್ಟಿಯ ಮುತ್ತತ್ತು ಅಯಾಲ್ ವಸಾಹತು ಪ್ರದೇಶದಲ್ಲಿರುವ ತಮ್ಮ ಮನೆಯನ್ನು ಪಿ ಮುತ್ತಮ್ಮಾಳ್ ಅವರು ತೊರೆದರು.

ಆಗಸ್ಟ್ 18ರಂದು ಮದ್ರಾಸ್ ಹೈಕೋರ್ಟ್ ಈ ನಿರ್ದೇಶನ ನೀಡಿದೆ.

ಇದೀಗ ಈ ಬಗ್ಗೆ ಮಾತನಾಡಿದ ಮುತ್ತಮ್ಮಲ್ ಾವರು, ”ಕ್ರಮ ಕೈಗೊಳ್ಳುವುದು ಸರ್ಕಾರದ ಕೆಲಸ. ಸರ್ಕಾರವು ಅಕ್ರಮ ಕಟ್ಟಡಗಳನ್ನು ತೆಗೆದುಹಾಕಬೇಕು ಮತ್ತು ಅರಣ್ಯ, ವನ್ಯಜೀವಿಗಳು ಮತ್ತು ಬುಡಕಟ್ಟು ಜನರಿಗೆ ಯಾವುದೇ ಹಾನಿಯಾಗದಂತೆ ನೋಡಿಕೊಳ್ಳಬೇಕು” ಎಂದು ಹೇಳಿದ್ದಾರೆ.

‘ಯಾವುದೇ ಎನ್‌ಒಸಿ ದಾಖಲೆ ಇಲ್ಲ’

ಪಟ್ಟಣ ಮತ್ತು ಗ್ರಾಮಾಂತರ ಯೋಜನೆಯ ಜಂಟಿ ನಿರ್ದೇಶಕ ತಿರು ಆರ್ ರಾಜಗುರು ಅವರು ಸಲ್ಲಿಸಿದ ಸ್ಥಿತಿ ವರದಿಯನ್ನು ಮದ್ರಾಸ್ ಹೈಕೋರ್ಟ್ ಗಮನಿಸಿದೆ. ಇಶಾ ಫೌಂಡೇಶನ್ ನಿರ್ಮಾಣಕ್ಕೆ ಅನುಮತಿ ಕೋರಿಲ್ಲ ಅಥವಾ ನಿರಾಕ್ಷೇಪಣಾ ಪ್ರಮಾಣಪತ್ರವನ್ನೂ ಪಡೆದಿಲ್ಲ ಎಂದು ವರದಿ ತಿಳಿಸಿದೆ.

ಆನಂತರ ಮುಖ್ಯ ನ್ಯಾಯಮೂರ್ತಿ ಎಸ್ ವಿ ಗಂಗಾಪುರವಾಲಾ ಮತ್ತು ನ್ಯಾಯಮೂರ್ತಿ ಪಿ ಡಿ ಆದಿಕೇಶವುಲು ಅವರ ಪೀಠ ತನಿಖೆಗೆ ಆದೇಶಿಸಿದೆ.

ವರದಿಯಲ್ಲಿ 15.53 ಎಕರೆ ನಂಜೈ ಭೂಮಿ ಅಥವಾ ಜೌಗು ಪ್ರದೇಶ ಮತ್ತು 5.275 ಹೆಕ್ಟೇರ್ ಪುಂಜೈ ಅಥವಾ ಒಣ ಭೂಮಿ ಸೇರಿದಂತೆ 20.805 ಹೆಕ್ಟೇರ್ ಭೂಮಿಯಲ್ಲಿ ನಿರ್ಮಾಣವನ್ನು ಉಲ್ಲೇಖಿಸಲಾಗಿದೆ. ಕಚೇರಿಯಲ್ಲಿ ಜಿಲ್ಲಾಧಿಕಾರಿ ಎನ್‌ಒಸಿ, ಮಾಲಿನ್ಯ ನಿಯಂತ್ರಣ ಮಂಡಳಿ ಎನ್‌ಒಸಿ, ಗುಡ್ಡಗಾಡು ಪ್ರದೇಶ ಸಂರಕ್ಷಣಾ ಪ್ರಾಧಿಕಾರ ಎನ್‌ಒಸಿ, ಅಗ್ನಿಶಾಮಕ ಇಲಾಖೆ ಎನ್‌ಒಸಿ ಇತ್ಯಾದಿಗಳ ಬಗ್ಗೆ ಯಾವುದೇ ದಾಖಲೆ ಕಂಡುಬಂದಿಲ್ಲ.

ಇಕ್ಕರೈ ಬೊಳುವಂಪಟ್ಟಿ ಪಂಚಾಯಿತಿಯೊಂದಿಗೆ ಪರಿಶೀಲಿಸಿದಾಗ, ಪಂಚಾಯಿತಿ ಅಧ್ಯಕ್ಷರಿಂದ ಯಾವುದೇ ಅನುಮತಿ ನೀಡಲಾಗಿಲ್ಲ ಎಂದು ಸಲ್ಲಿಸಲಾಗಿದೆ. ಧಾರ್ಮಿಕ ಕಟ್ಟಡಕ್ಕೆ ಜಿಲ್ಲಾಧಿಕಾರಿ ಎನ್‌ಒಸಿ ನೀಡಿಲ್ಲ ಎಂದು ಸಲ್ಲಿಸಲಾಗಿದೆ.

”ಜಿಲ್ಲೆಯ ಪಟ್ಟಣ ಮತ್ತು ಗ್ರಾಮ ಯೋಜನೆ ಜಂಟಿ ನಿರ್ದೇಶಕರು, ಅರ್ಜಿದಾರರು ಮತ್ತು ಇಶಾ ಫೌಂಡೇಶನ್ ಸಲ್ಲಿಸಬಹುದಾದ ದಾಖಲೆಗಳನ್ನು ಪರಿಗಣಿಸುತ್ತಾರೆ. ಜಾರಿಯಲ್ಲಿರುವ ಅನುಮತಿಯ ಬಗ್ಗೆ ಪರಿಶೀಲಿಸುತ್ತಾರೆ. ಅದು ಕ್ರಮಬದ್ಧವಾಗಿಲ್ಲದಿದ್ದರೆ, ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಬೇಕು. ಯೋಜನೆ ಮತ್ತು ನಿರಾಕ್ಷೇಪಣಾ ಪ್ರಮಾಣಪತ್ರಕ್ಕೆ ಅನುಗುಣವಾಗಿ ನಿರ್ಮಿಸಲಾಗದ ಕಟ್ಟಡಕ್ಕೆ ಸಂಬಂಧಿಸಿದಂತೆ ತ್ವರಿತವಾಗಿ ಕ್ರಮಕೈಗೊಳ್ಳಬೇಕು” ಎಂದು ನ್ಯಾಯಾಲಯವು ಆದೇಶಿಸಿದೆ.

ಇದನ್ನೂ ಓದಿ: ಇಶಾ ಫೌಂಡೇಶನ್‌ನ ಆದಿಯೋಗಿ ಪ್ರತಿಮೆ ಅನಾವರಣಕ್ಕೆ ಅನುಮತಿ ನೀಡಿದ ರಾಜ್ಯ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...