Homeಮುಖಪುಟಎಸ್‌ಸಿ/ಎಸ್‌ಟಿ ಶಾಲೆಗಳ ನವೀಕರಣಕ್ಕೆ ಹಣ ಮಂಜೂರು ಮಾಡದಂತೆ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್ 

ಎಸ್‌ಸಿ/ಎಸ್‌ಟಿ ಶಾಲೆಗಳ ನವೀಕರಣಕ್ಕೆ ಹಣ ಮಂಜೂರು ಮಾಡದಂತೆ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್ 

- Advertisement -
- Advertisement -

ಮಧುರೈ: ತಮಿಳುನಾಡಿನ ಸುಮಾರು 170 ಎಸ್‌ಸಿ/ಎಸ್‌ಟಿ ಶಾಲೆ ಮತ್ತು ಹಾಸ್ಟೆಲ್ ಕಟ್ಟಡಗಳ ದುರಸ್ತಿ ಮತ್ತು ನಿರ್ಮಾಣ ಕಾರ್ಯಗಳಿಗೆ ತಮಿಳುನಾಡು ಆದಿ ದ್ರಾವಿಡರ್ ವಸತಿ ಅಭಿವೃದ್ಧಿ ನಿಗಮ (ಟಿಎಎಚ್‌ಡಿಸಿಒ) 50 ಕೋಟಿ ರೂ.ಗಳನ್ನು ಖರ್ಚು ಮಾಡುವುದನ್ನು ತಡೆಯುವಂತೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ ಇತ್ತೀಚೆಗೆ ವಜಾಗೊಳಿಸಿದೆ. 

ಅರ್ಜಿದಾರರಾದ ಸಿ. ಸೆಲ್ವಕುಮಾರ್ ತಮ್ಮ ಅರ್ಜಿಯಲ್ಲಿ, ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ ಶಾಲಾ ಮತ್ತು ಹಾಸ್ಟೆಲ್ ಕಟ್ಟಡಗಳ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರದ ಯೋಜನೆ ಇದೆ. ಆದ್ದರಿಂದ, ರಾಜ್ಯ ಸರ್ಕಾರವು ಅದೇ ಉದ್ದೇಶಕ್ಕಾಗಿ 50 ಕೋಟಿ ರೂ.ಗಳನ್ನು ನಿಗದಿಪಡಿಸುವುದು ಅನಗತ್ಯವಾಗಿದ್ದು, ಇದು ನಿಧಿಯ ದುರುಪಯೋಗಕ್ಕೆ ಕಾರಣವಾಗುತ್ತದೆ ಎಂದು ಅರ್ಜಿಯಲ್ಲಿ ತಿಳಿಸಿದ್ದರು. ಇದನ್ನು ಗಮನಿಸಿದ ನ್ಯಾಮೂರ್ತಿಗಳಾದ ಜಿ. ಜಯಚಂದ್ರನ್ ಮತ್ತು ಕೆ.ಕೆ ರಾಮಕೃಷ್ಣನ್ ಅವರ ಪೀಠವು ಅರ್ಜಿದಾರರ ವಾದಗಳನ್ನು ತಿರಸ್ಕರಿಸಿತು. 

ಸರ್ಕಾರ ಗುರುತಿಸಿರುವ ಮೇಲಿನ 170 ಕಟ್ಟಡಗಳಿಗೆ ನವೀಕರಣ, ಶೌಚಾಲಯ ಸೌಲಭ್ಯಗಳು ಮತ್ತು ಕಾಂಪೌಂಡ್ ಗೋಡೆಗಳ ಅಗತ್ಯವಿದೆ ಎಂದು ಅವರು ಗಮನಿಸಿದ್ದು, ಇದಕ್ಕಾಗಿ ಸರ್ಕಾರ ಹಣವನ್ನು ಹಂಚಿಕೆ ಮಾಡಿದೆ. “ಅಂತಿಮವಾಗಿ, ಇದು ದೀನದಲಿತ ವಿದ್ಯಾರ್ಥಿಗಳಿಗೆ ಪ್ರಯೋಜನವನ್ನು ನೀಡಲಿದೆ ಮತ್ತು ಸಾರ್ವಜನಿಕ ನಿಧಿಯಿಂದ ಈಗಾಗಲೇ ನಿರ್ಮಿಸಲಾದ ಕಟ್ಟಡಗಳರಕ್ಷತೆಯನ್ನು ಬಲಪಡಿಸುತ್ತದೆ” ಎಂದು ತೀರ್ಪು ನೀಡಿದ್ದು, ಅರ್ಜಿಯನ್ನು ತಿರಸ್ಕರಿಸಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಿಕ್ಷೆ ಮುಗಿದ 3 ವರ್ಷಗಳ ನಂತರ ಪಾಕಿಸ್ತಾನ ಜೈಲಿನಲ್ಲಿ ಗುಜರಾತ್ ಮೀನುಗಾರ ಸಾವು

2022 ರಲ್ಲಿ ಅಜಾಗರೂಕತೆಯಿಂದ ಅಂತರರಾಷ್ಟ್ರೀಯ ಗಡಿ ರೇಖೆಯನ್ನು ದಾಟಿದ ನಂತರ ಪಾಕಿಸ್ತಾನ ಏಜೆನ್ಸಿಗಳಿಂದ ಬಂಧಿಸಲ್ಪಟ್ಟ ಗುಜರಾತ್‌ನ ಮೀನುಗಾರನೊಬ್ಬ ಜನವರಿ 16 ರಂದು ಕರಾಚಿ ಜೈಲಿನಲ್ಲಿ ಸಾವನ್ನಪ್ಪಿದ್ದಾನೆ. ಮೂರು ವರ್ಷಗಳ ಹಿಂದೆ ಆತನ ಶಿಕ್ಷೆಯನ್ನು...

ಸ್ಥಳದಲ್ಲೇ ದಂಡ ಪಾವತಿಸುವಂತೆ ಸಂಚಾರ ಪೊಲೀಸರು ಒತ್ತಾಯಿಸುವಂತಿಲ್ಲ: ತೆಲಂಗಾಣ ಹೈಕೋರ್ಟ್

ಸಂಚಾರ ನಿಯಮ ಉಲ್ಲಂಘಿಸುವವರ ಬ್ಯಾಂಕ್ ಖಾತೆಗಳಿಂದ ಸ್ವಯಂಚಾಲಿತವಾಗಿ ದಂಡ ಕಡಿತಗೊಳಿಸಬೇಕೆಂದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೂಚಿಸಿದ ಕೆಲವು ದಿನಗಳ ನಂತರ ಮಹತ್ವದ ತೀರ್ಪು ನೀಡಿರುವ ತೆಲಂಗಾಣ ಹೈಕೋರ್ಟ್, ಪೊಲೀಸರು ನಾಗರಿಕರನ್ನು ರಸ್ತೆಯಲ್ಲಿ ನಿಲ್ಲಿಸಿ...

ಕೇಂದ್ರ ಸರ್ಕಾರಿ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳನ್ನು ರಾಜ್ಯ ಸಂಸ್ಥೆ ತನಿಖೆ ಮಾಡಬಹುದು : ಸುಪ್ರೀಂ ಕೋರ್ಟ್

ಕೇಂದ್ರ ಸರ್ಕಾರಿ ನೌಕರರು ಮಾಡುವ ಭ್ರಷ್ಟಾಚಾರ ತಡೆ ಕಾಯ್ದೆಯಡಿಯ ಶಿಕ್ಷಾರ್ಹ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ರಾಜ್ಯ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಲು ಮತ್ತು ಆರೋಪಪಟ್ಟಿ ಸಲ್ಲಿಸಲು ಸಮರ್ಥರು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಗ್ಯಾಂಗ್‌ಸ್ಟರ್‌ಗಳ ವಿರುದ್ಧ ರಾಜ್ಯಾದ್ಯಂತ ಕಾರ್ಯಚರಣೆ ಆರಂಭಿಸಿದ ಪಂಜಾಬ್ ಸರ್ಕಾರ

ಮಾದಕ ವಸ್ತುಗಳ ವಿರುದ್ಧದ ತನ್ನ ಕಾರ್ಯಾಚರಣೆಯಿಂದ ಸ್ಫೂರ್ತಿ ಪಡೆದು, ಪಂಜಾಬ್ ಸರ್ಕಾರ ಮಂಗಳವಾರ ಗ್ಯಾಂಗ್‌ಸ್ಟರ್‌ಗಳ ವಿರುದ್ಧ ರಾಜ್ಯಾದ್ಯಂತ ಅಭಿಯಾನ ಆರಂಭಿಸಿದ್ದು, ಶಸ್ತ್ರಾಸ್ತ್ರ ಪೂರೈಕೆ ಸರಪಳಿಗಳು, ಲಾಜಿಸ್ಟಿಕ್ಸ್, ಅಡಗುತಾಣಗಳು ಮತ್ತು ಸಂವಹನ ಜಾಲಗಳು ಸೇರಿದಂತೆ...

‘ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ‘ನನ್ನ ಹೆಸರೇ’ ಆಸರೆ’: ಪ್ರಿಯಾಂಕ್ ಖರ್ಗೆ ಆಕ್ರೋಶ 

ಬೆಂಗಳೂರು: ಮುಳುಗುವವನಿಗೆ ಹುಲ್ಲು ಕಡ್ಡಿಯ ಆಸರೆ ಎನ್ನುವಂತೆ, ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ನನ್ನ ಹೆಸರೇ ಆಸರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ "ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು...

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ರದ್ದುಗೊಳಿಸಲು ಸಾಂವಿಧಾನಿಕ ತಿದ್ದುಪಡಿಗೆ ಒತ್ತಾಯ : ತಮಿಳುನಾಡು ಸಿಎಂ ಸ್ಟಾಲಿನ್

ವಿಧಾನಸಭೆ ಅಧಿವೇಶನದಲ್ಲಿ ರಾಜ್ಯಪಾಲರು ವಾರ್ಷಿಕ ಭಾಷಣ ಮಾಡುವ ಸಂಪ್ರದಾಯವನ್ನು ರದ್ದುಗೊಳಿಸುವ ಸಾಂವಿಧಾನಿಕ ತಿದ್ದುಪಡಿಗೆ ಒತ್ತಾಯಿಸುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಘೋಷಿಸಿದ್ದಾರೆ. ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್‌.ಎನ್‌ ರವಿ ನಡುವೆ ಜಟಾಪಟಿ ನಡೆದು,...

ಅಸ್ಸಾಂ| ದನ ಕಳ್ಳತನದ ಶಂಕೆಯಿಂದ ಗುಂಪು ದಾಳಿ; ಓರ್ವ ಸಾವು-ನಾಲ್ವರ ಸ್ಥಿತಿ ಗಂಭೀರ

ದನ ಕಳ್ಳತನದ ಶಂಕೆಯ ಮೇಲೆ ಗುಂಪೊಂದು ದಾಳಿ ಮಾಡಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ, ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ (ಜ.19) ಅಸ್ಸಾಂನ ಕೊಕ್ರಜಾರ್‌ನಲ್ಲಿ ನಡೆದಿದೆ. ಬಲಿಪಶುಗಳು, ರಸ್ತೆ ನಿರ್ಮಾಣ ಯೋಜನೆಯೊಮದರಲ್ಲಿ...

ಕರ್ನಾಟಕ: ಐದು ವರ್ಷಗಳಲ್ಲಿ ಎಸ್‌ಸಿ/ಎಸ್‌ಟಿಗಳ ಮೇಲಿನ ಅಪರಾಧಗಳು ಶೇ. 37.7 ರಷ್ಟು ಏರಿಕೆ; ಬೆಂಗಳೂರಿನದೇ ಅಗ್ರಸ್ಥಾನ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (SC/ST) ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಕಠಿಣ ಕಾನೂನುಗಳಿದ್ದರೂ, ಈ ಸಮುದಾಯಗಳ ಮೇಲಿನ ಅಪರಾಧಗಳು ಕಳೆದ ಐದು ವರ್ಷಗಳಲ್ಲಿ ಶೇ. 37.74 ರಷ್ಟು ಹೆಚ್ಚಾಗಿದ್ದು,...

‘ನಿತಿನ್ ನಬಿನ್ ನನ್ನ ಬಾಸ್, ನಾನು ಕೆಲಸಗಾರ..’; ಬಿಜೆಪಿ ನೂತನ ಮುಖ್ಯಸ್ಥರನ್ನು ಸ್ವಾಗತಿಸಿದ ಪ್ರಧಾನಿ ಮೋದಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಅತ್ಯಂತ ಕಿರಿಯ ವಯಸ್ಸಿನ ನಿತಿನ್ ನಬಿನ್ ಅವರನ್ನು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದರು. ಪಕ್ಷದ ಪರಂಪರೆಯನ್ನು ಮುಂದುವರಿಸುವ 'ಸಹಸ್ರಮಾನದ' ವ್ಯಕ್ತಿ ಎಂದು ಕರೆದರು. "ಪಕ್ಷದ...

ವಿಧಾನಸಭೆ ಭಾಷಣದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸುವ ಸಾಲುಗಳು ಕೈಬಿಟ್ಟ ಕೇರಳ ರಾಜ್ಯಪಾಲ : ಸಿಎಂ ಪಿಣರಾಯಿ ವಿಜಯನ್ ಆರೋಪ

ತಮಿಳುನಾಡಿನ ಬಳಿಕ ಕೇರಳ ವಿಧಾನಸಭೆಯಲ್ಲೂ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಮಂಗಳವಾರ (ಜ.20) ಜಟಾಪಟಿ ನಡೆದಿದೆ. ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣದಲ್ಲಿನ ಕೇಂದ್ರ ಸರ್ಕಾರವನ್ನು ಟೀಕಿಸುವ ಕೆಲ ಸಾಲುಗಳನ್ನು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್...