Homeಮುಖಪುಟಜಾತಿ ವ್ಯವಸ್ಥೆ ಆರಂಭದ ಕುರಿತ ಅವಲೋಕನ ತೀರ್ಪಿನ ಪ್ರತಿಯಿಂದ ತೆಗೆದು ಹಾಕಿದ ಮದ್ರಾಸ್ ಹೈಕೋರ್ಟ್

ಜಾತಿ ವ್ಯವಸ್ಥೆ ಆರಂಭದ ಕುರಿತ ಅವಲೋಕನ ತೀರ್ಪಿನ ಪ್ರತಿಯಿಂದ ತೆಗೆದು ಹಾಕಿದ ಮದ್ರಾಸ್ ಹೈಕೋರ್ಟ್

- Advertisement -
- Advertisement -

ಸನಾತನ ಧರ್ಮದ ಕುರಿತ ವಿವಾದಾತ್ಮಕ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಉದಯನಿಧಿ ಸ್ಟಾಲಿನ್, ಸಚಿವ ಸೇಕರ್ ಬಾಬು ಮತ್ತು ಸಂಸದ ಎ ರಾಜಾ ಅವರ ಮೇಲೆ ಕ್ರಮಕ್ಕೆ ಆಗ್ರಹಿಸಿ ಸಲ್ಲಿಸಿದ ಅರ್ಜಿಗಳ ತೀರ್ಪಿನ ವೇಳೆ  ಮದ್ರಾಸ್ ಹೈಕೋರ್ಟ್ ಇದೀಗ ಜಾತಿ ವ್ಯವಸ್ಥೆಯ ಮೂಲದ ಬಗ್ಗೆ ಮಾಡಿದ ಟೀಕೆಗಳನ್ನು ತೆಗೆದು ಹಾಕಿದೆ.

ಮಾರ್ಚ್ 6ರಂದು ನ್ಯಾಯಮೂರ್ತಿ ಅನಿತಾ ಸುಮಂತ್ ಅವರು ಪ್ರಕಟಿಸಿದ ತೀರ್ಪಿನಲ್ಲಿ, ಇಂದು ಸಮಾಜದಲ್ಲಿ ಜಾತಿಯ ಆಧಾರದ ಮೇಲೆ ಅಸಮಾನತೆಗಳಿವೆ ಮತ್ತು ಅವುಗಳನ್ನು ತೊಡೆದುಹಾಕಲು ಈ ನ್ಯಾಯಾಲಯವು ನಿಸ್ಸಂದಿಗ್ಧವಾಗಿ ಒಪ್ಪಿಕೊಳ್ಳುತ್ತದೆ. ಆದರೆ, ಇಂದು ನಮಗೆ ತಿಳಿದಿರುವಂತೆ ಜಾತಿ ವ್ಯವಸ್ಥೆಯ ಮೂಲವು ಒಂದು ಶತಮಾನಕ್ಕಿಂತ ಕಡಿಮೆ ಹಳೆಯದು ಎಂದು ತೀರ್ಪಿನಲ್ಲಿ ಹೇಳಲಾಗಿತ್ತು.

ಆದರೆ, ಪ್ರಸ್ತುತ ಮದ್ರಾಸ್ ಹೈಕೋರ್ಟ್ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ತೀರ್ಪಿನ ಪ್ರತಿಯಲ್ಲಿ ಮೇಲಿನ ಅವಲೋಕನಗಳನ್ನು ತೆಗೆದುಹಾಕಲಾಗಿದೆ. ಇಂದು ಸಮಾಜದಲ್ಲಿ ಜಾತಿಯ ಆಧಾರದ ಮೇಲೆ ಅಸಮಾನತೆಗಳಿವೆ ಮತ್ತು ಅವುಗಳನ್ನು ತೊಡೆದುಹಾಕಲು ಈ ನ್ಯಾಯಾಲಯವು ನಿಸ್ಸಂದಿಗ್ಧವಾಗಿ ಒಪ್ಪಿಕೊಳ್ಳುತ್ತದೆ. ಆದರೆ, ಇಂದು ನಾವು ತಿಳಿದಿರುವಂತೆ ಜಾತಿಗಳ ವರ್ಗೀಕರಣವು ತೀರಾ ಇತ್ತೀಚಿನ ಮತ್ತು ಆಧುನಿಕ ವಿದ್ಯಮಾನವಾಗಿದೆ ಎಂದು ತೀರ್ಪಿನ ಪ್ರತಿಯಲ್ಲಿ ಉಲ್ಲೇಖಿಸಲಾಗಿದೆ.

ಸನಾತನ ಧರ್ಮವು ಉನ್ನತಿ, ಉದಾತ್ತ ಮತ್ತು ಸದ್ಗುಣಶೀಲ ನೀತಿ ಸಂಹಿತೆಯನ್ನು ಸೂಚಿಸುತ್ತದೆ ಎಂದು ನ್ಯಾಯಾಲಯವು ಗಮನಿಸಿದೆ ಮತ್ತು ಹೀಗಾಗಿ ಸಚಿವರು, ಸಂಸದರು ಸನಾತನ ಧರ್ಮದ ಕುರಿತು ನೀಡಿದ  ತೀರ್ಪು ತಪ್ಪಾಗಿದೆ ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ.

ಹಿಂದೂ ಮುನ್ನಾನಿ ಸಂಘಟನೆಯ ಪದಾಧಿಕಾರಿಗಳಾದ ಟಿ ಮನೋಹರ್, ಕಿಶೋರ್ ಕುಮಾರ್ ಮತ್ತು ವಿಪಿ ಜಯಕುಮಾರ್ ಅವರು ಸಲ್ಲಿಸಿದ ಅರ್ಜಿಗಳ ವಿಚಾರಣೆ ವೇಳೆ ಅವಲೋಕನಗಳನ್ನು ಮಾಡಲಾಗಿದೆ. ನ್ಯಾಯಾಲಯವು, ಹೇಳಿಕೆಗಳನ್ನು ನಿರ್ದಿಷ್ಟ ಸಮುದಾಯದ ವಿರುದ್ಧ ದ್ವೇಷವನ್ನು ಹರಡುತ್ತದೆ ಎಂದು ಹೇಳಿದೆ.

ಜನತಾ ಪ್ರಾತಿನಿಧ್ಯ ಕಾಯ್ದೆಯಡಿ ಅನರ್ಹತೆಗಳ ಪಟ್ಟಿಯು ಲಕ್ಷ್ಮಣ ರೇಖೆ ಇದ್ದಂತೆ ಮತ್ತು ಅದನ್ನು ಅನುಸರಿಸಲು ನ್ಯಾಯಾಲಯ ಬದ್ಧವಾಗಿದೆ ಎಂದು ನ್ಯಾಯಾಲಯವು ಗಮನಿಸಿದೆ. ಹೀಗಾಗಿ, ಬಾಕಿ ಉಳಿದಿರುವ ಕ್ರಿಮಿನಲ್ ಮೊಕದ್ದಮೆಗಳಲ್ಲಿ ಸಚಿವರು, ಸಂಸದರಿಗೆ ಶಿಕ್ಷೆಯಾಗಿಲ್ಲ ಎಂದು ಗಮನಿಸಿದ ನ್ಯಾಯಾಲಯವು ಶಾಸಕತ್ವ ರದ್ಧತಿಗೆ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿತ್ತು. ಸನಾತನ ಧರ್ಮದ ಕುರಿತಾದ ಟೀಕೆಗಳಿಗಾಗಿ ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ಸುಪ್ರೀಂ ತರಾಟೆಗೆ ತೆಗೆದುಕೊಂಡ ಎರಡು ದಿನಗಳ ನಂತರ, ಇಂದು ಮದ್ರಾಸ್ ಹೈಕೋರ್ಟ್‌ ಸ್ಟಾಲಿನ್ ಮತ್ತು ಇತರ ಇಬ್ಬರು ಡಿಎಂಕೆ ನಾಯಕರನ್ನು ಶಾಸಕರಾಗಿ ಮುಂದುವರಿಸುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. ‘ಸ್ಟಾಲಿನ್ ಅವರ ಹೇಳಿಕೆಗಳು ತಪ್ಪು’ ಎಂದು ಗಮನಿಸಿದ್ದರೂ, ಅವರು ಇನ್ನೂ ಯಾವುದೇ ನ್ಯಾಯಾಲಯದಿಂದ ಶಿಕ್ಷೆಗೊಳಗಾಗಿಲ್ಲ’ ಎಂದು ಹೇಳಿತ್ತು.

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರರಾಗಿರುವ 46 ವರ್ಷದ ಡಿಎಂಕೆ ನಾಯಕ, ಕಳೆದ ಸೆಪ್ಟೆಂಬರ್‌ನಲ್ಲಿ ಸನಾತನ ಧರ್ಮದ ಕುರಿತು ನೀಡಿದ ಹೇಳಿಕೆಯನ್ನು ಬಲಪಂಥೀಯರು ಮತ್ತು ಹಿಂದುತ್ವವಾದಿಗಳು ವಿವಾದ ಮಾಡಿದ್ದರು. ಸನಾತನವು ಮಲೇರಿಯಾ ಮತ್ತು ಡೆಂಗ್ಯೂ ಇದ್ದಂತೆ, ಅದನ್ನು ವಿರೋಧಿಸುವ ಬದಲು ನಿರ್ಮೂಲನೆ ಮಾಡಬೇಕು’ ಎಂದು ಅವರು ಹೇಳಿದ ಮಾತುಗಳು ಭಾರೀ ಗದ್ದಲಕ್ಕೆ ಕಾರಣವಾಗಿತ್ತು. ಉದಯನಿಧಿ ಸ್ಟಾಲಿನ್ ಅಲ್ಲದೆ, ಅರ್ಜಿದಾರರು ರಾಜ್ಯ ಸಚಿವ ಪಿಕೆ ಸೇಕರ್ ಬಾಬು ಮತ್ತು ಡಿಎಂಕೆ ಸಂಸದ ಎ ರಾಜಾ ಅವರನ್ನು ಅವರ ಸ್ಥಾನದಿಂದ ವಜಾಗೊಳಿಸುವಂತೆ ಕೋರಿದ್ದರು. ಉದಯನಿಧಿ ಹೇಳಿಕೆ ನೀಡಿದಾಗ ಬಾಬು ಉಪಸ್ಥಿತರಿದ್ದರು. ಅವರ ಹೇಳಿಕೆಯನ್ನು ಬೆಂಬಲಿಸಿದ್ದ ರಾಜಾ, ‘ಸ್ಟಾಲಿನ್ ಅವರು ಜಾತಿ ಆಧಾರಿತ ತಾರತಮ್ಯವನ್ನು ಗುರಿಯಾಗಿಸಿಕೊಂಡಿದ್ದಾರೆ ಮತ್ತು ಹಿಂದೂ ಧರ್ಮವನ್ನು ಅಲ್ಲ’ ಎಂದು ಹೇಳಿದ್ದಾರೆ. ಅವರು ಕಾನೂನು ಕ್ರಮ ಎದುರಿಸಲು ಸಿದ್ಧ; ಆದರೆ ಅವರು ತಮ್ಮ ಹೇಳಿಕೆಗೆ ಬದ್ಧರಾಗಿದ್ದಾರೆ ಎಂದಿದ್ದರು.

ಇದನ್ನು ಓದಿ: ನೀವು ನಮ್ಮ ಮೇಲೆ ಒದ್ದರೆ, ನಾವು ನಮಾಝ್‌ ನಿಲ್ಲಿಸುವುದಿಲ್ಲ: ಅಸಾದುದ್ದೀನ್ ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...