ಸನಾತನ ಧರ್ಮದ ಕುರಿತ ವಿವಾದಾತ್ಮಕ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಉದಯನಿಧಿ ಸ್ಟಾಲಿನ್, ಸಚಿವ ಸೇಕರ್ ಬಾಬು ಮತ್ತು ಸಂಸದ ಎ ರಾಜಾ ಅವರ ಮೇಲೆ ಕ್ರಮಕ್ಕೆ ಆಗ್ರಹಿಸಿ ಸಲ್ಲಿಸಿದ ಅರ್ಜಿಗಳ ತೀರ್ಪಿನ ವೇಳೆ ಮದ್ರಾಸ್ ಹೈಕೋರ್ಟ್ ಇದೀಗ ಜಾತಿ ವ್ಯವಸ್ಥೆಯ ಮೂಲದ ಬಗ್ಗೆ ಮಾಡಿದ ಟೀಕೆಗಳನ್ನು ತೆಗೆದು ಹಾಕಿದೆ.
ಮಾರ್ಚ್ 6ರಂದು ನ್ಯಾಯಮೂರ್ತಿ ಅನಿತಾ ಸುಮಂತ್ ಅವರು ಪ್ರಕಟಿಸಿದ ತೀರ್ಪಿನಲ್ಲಿ, ಇಂದು ಸಮಾಜದಲ್ಲಿ ಜಾತಿಯ ಆಧಾರದ ಮೇಲೆ ಅಸಮಾನತೆಗಳಿವೆ ಮತ್ತು ಅವುಗಳನ್ನು ತೊಡೆದುಹಾಕಲು ಈ ನ್ಯಾಯಾಲಯವು ನಿಸ್ಸಂದಿಗ್ಧವಾಗಿ ಒಪ್ಪಿಕೊಳ್ಳುತ್ತದೆ. ಆದರೆ, ಇಂದು ನಮಗೆ ತಿಳಿದಿರುವಂತೆ ಜಾತಿ ವ್ಯವಸ್ಥೆಯ ಮೂಲವು ಒಂದು ಶತಮಾನಕ್ಕಿಂತ ಕಡಿಮೆ ಹಳೆಯದು ಎಂದು ತೀರ್ಪಿನಲ್ಲಿ ಹೇಳಲಾಗಿತ್ತು.
ಆದರೆ, ಪ್ರಸ್ತುತ ಮದ್ರಾಸ್ ಹೈಕೋರ್ಟ್ ವೆಬ್ಸೈಟ್ನಲ್ಲಿ ಲಭ್ಯವಿರುವ ತೀರ್ಪಿನ ಪ್ರತಿಯಲ್ಲಿ ಮೇಲಿನ ಅವಲೋಕನಗಳನ್ನು ತೆಗೆದುಹಾಕಲಾಗಿದೆ. ಇಂದು ಸಮಾಜದಲ್ಲಿ ಜಾತಿಯ ಆಧಾರದ ಮೇಲೆ ಅಸಮಾನತೆಗಳಿವೆ ಮತ್ತು ಅವುಗಳನ್ನು ತೊಡೆದುಹಾಕಲು ಈ ನ್ಯಾಯಾಲಯವು ನಿಸ್ಸಂದಿಗ್ಧವಾಗಿ ಒಪ್ಪಿಕೊಳ್ಳುತ್ತದೆ. ಆದರೆ, ಇಂದು ನಾವು ತಿಳಿದಿರುವಂತೆ ಜಾತಿಗಳ ವರ್ಗೀಕರಣವು ತೀರಾ ಇತ್ತೀಚಿನ ಮತ್ತು ಆಧುನಿಕ ವಿದ್ಯಮಾನವಾಗಿದೆ ಎಂದು ತೀರ್ಪಿನ ಪ್ರತಿಯಲ್ಲಿ ಉಲ್ಲೇಖಿಸಲಾಗಿದೆ.
ಸನಾತನ ಧರ್ಮವು ಉನ್ನತಿ, ಉದಾತ್ತ ಮತ್ತು ಸದ್ಗುಣಶೀಲ ನೀತಿ ಸಂಹಿತೆಯನ್ನು ಸೂಚಿಸುತ್ತದೆ ಎಂದು ನ್ಯಾಯಾಲಯವು ಗಮನಿಸಿದೆ ಮತ್ತು ಹೀಗಾಗಿ ಸಚಿವರು, ಸಂಸದರು ಸನಾತನ ಧರ್ಮದ ಕುರಿತು ನೀಡಿದ ತೀರ್ಪು ತಪ್ಪಾಗಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
ಹಿಂದೂ ಮುನ್ನಾನಿ ಸಂಘಟನೆಯ ಪದಾಧಿಕಾರಿಗಳಾದ ಟಿ ಮನೋಹರ್, ಕಿಶೋರ್ ಕುಮಾರ್ ಮತ್ತು ವಿಪಿ ಜಯಕುಮಾರ್ ಅವರು ಸಲ್ಲಿಸಿದ ಅರ್ಜಿಗಳ ವಿಚಾರಣೆ ವೇಳೆ ಅವಲೋಕನಗಳನ್ನು ಮಾಡಲಾಗಿದೆ. ನ್ಯಾಯಾಲಯವು, ಹೇಳಿಕೆಗಳನ್ನು ನಿರ್ದಿಷ್ಟ ಸಮುದಾಯದ ವಿರುದ್ಧ ದ್ವೇಷವನ್ನು ಹರಡುತ್ತದೆ ಎಂದು ಹೇಳಿದೆ.
ಜನತಾ ಪ್ರಾತಿನಿಧ್ಯ ಕಾಯ್ದೆಯಡಿ ಅನರ್ಹತೆಗಳ ಪಟ್ಟಿಯು ಲಕ್ಷ್ಮಣ ರೇಖೆ ಇದ್ದಂತೆ ಮತ್ತು ಅದನ್ನು ಅನುಸರಿಸಲು ನ್ಯಾಯಾಲಯ ಬದ್ಧವಾಗಿದೆ ಎಂದು ನ್ಯಾಯಾಲಯವು ಗಮನಿಸಿದೆ. ಹೀಗಾಗಿ, ಬಾಕಿ ಉಳಿದಿರುವ ಕ್ರಿಮಿನಲ್ ಮೊಕದ್ದಮೆಗಳಲ್ಲಿ ಸಚಿವರು, ಸಂಸದರಿಗೆ ಶಿಕ್ಷೆಯಾಗಿಲ್ಲ ಎಂದು ಗಮನಿಸಿದ ನ್ಯಾಯಾಲಯವು ಶಾಸಕತ್ವ ರದ್ಧತಿಗೆ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿತ್ತು. ಸನಾತನ ಧರ್ಮದ ಕುರಿತಾದ ಟೀಕೆಗಳಿಗಾಗಿ ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ಸುಪ್ರೀಂ ತರಾಟೆಗೆ ತೆಗೆದುಕೊಂಡ ಎರಡು ದಿನಗಳ ನಂತರ, ಇಂದು ಮದ್ರಾಸ್ ಹೈಕೋರ್ಟ್ ಸ್ಟಾಲಿನ್ ಮತ್ತು ಇತರ ಇಬ್ಬರು ಡಿಎಂಕೆ ನಾಯಕರನ್ನು ಶಾಸಕರಾಗಿ ಮುಂದುವರಿಸುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. ‘ಸ್ಟಾಲಿನ್ ಅವರ ಹೇಳಿಕೆಗಳು ತಪ್ಪು’ ಎಂದು ಗಮನಿಸಿದ್ದರೂ, ಅವರು ಇನ್ನೂ ಯಾವುದೇ ನ್ಯಾಯಾಲಯದಿಂದ ಶಿಕ್ಷೆಗೊಳಗಾಗಿಲ್ಲ’ ಎಂದು ಹೇಳಿತ್ತು.
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರರಾಗಿರುವ 46 ವರ್ಷದ ಡಿಎಂಕೆ ನಾಯಕ, ಕಳೆದ ಸೆಪ್ಟೆಂಬರ್ನಲ್ಲಿ ಸನಾತನ ಧರ್ಮದ ಕುರಿತು ನೀಡಿದ ಹೇಳಿಕೆಯನ್ನು ಬಲಪಂಥೀಯರು ಮತ್ತು ಹಿಂದುತ್ವವಾದಿಗಳು ವಿವಾದ ಮಾಡಿದ್ದರು. ಸನಾತನವು ಮಲೇರಿಯಾ ಮತ್ತು ಡೆಂಗ್ಯೂ ಇದ್ದಂತೆ, ಅದನ್ನು ವಿರೋಧಿಸುವ ಬದಲು ನಿರ್ಮೂಲನೆ ಮಾಡಬೇಕು’ ಎಂದು ಅವರು ಹೇಳಿದ ಮಾತುಗಳು ಭಾರೀ ಗದ್ದಲಕ್ಕೆ ಕಾರಣವಾಗಿತ್ತು. ಉದಯನಿಧಿ ಸ್ಟಾಲಿನ್ ಅಲ್ಲದೆ, ಅರ್ಜಿದಾರರು ರಾಜ್ಯ ಸಚಿವ ಪಿಕೆ ಸೇಕರ್ ಬಾಬು ಮತ್ತು ಡಿಎಂಕೆ ಸಂಸದ ಎ ರಾಜಾ ಅವರನ್ನು ಅವರ ಸ್ಥಾನದಿಂದ ವಜಾಗೊಳಿಸುವಂತೆ ಕೋರಿದ್ದರು. ಉದಯನಿಧಿ ಹೇಳಿಕೆ ನೀಡಿದಾಗ ಬಾಬು ಉಪಸ್ಥಿತರಿದ್ದರು. ಅವರ ಹೇಳಿಕೆಯನ್ನು ಬೆಂಬಲಿಸಿದ್ದ ರಾಜಾ, ‘ಸ್ಟಾಲಿನ್ ಅವರು ಜಾತಿ ಆಧಾರಿತ ತಾರತಮ್ಯವನ್ನು ಗುರಿಯಾಗಿಸಿಕೊಂಡಿದ್ದಾರೆ ಮತ್ತು ಹಿಂದೂ ಧರ್ಮವನ್ನು ಅಲ್ಲ’ ಎಂದು ಹೇಳಿದ್ದಾರೆ. ಅವರು ಕಾನೂನು ಕ್ರಮ ಎದುರಿಸಲು ಸಿದ್ಧ; ಆದರೆ ಅವರು ತಮ್ಮ ಹೇಳಿಕೆಗೆ ಬದ್ಧರಾಗಿದ್ದಾರೆ ಎಂದಿದ್ದರು.
Madras High Court Removes Observation In Judgment That Origin Of Caste System Is Less Than A Century Old |@UpasanaSajeev https://t.co/eQ3OaUpM9v
— Live Law (@LiveLawIndia) March 9, 2024
ಇದನ್ನು ಓದಿ: ನೀವು ನಮ್ಮ ಮೇಲೆ ಒದ್ದರೆ, ನಾವು ನಮಾಝ್ ನಿಲ್ಲಿಸುವುದಿಲ್ಲ: ಅಸಾದುದ್ದೀನ್ ಓವೈಸಿ