Homeಮುಖಪುಟಜಾತಿ ವ್ಯವಸ್ಥೆ ಆರಂಭದ ಕುರಿತ ಅವಲೋಕನ ತೀರ್ಪಿನ ಪ್ರತಿಯಿಂದ ತೆಗೆದು ಹಾಕಿದ ಮದ್ರಾಸ್ ಹೈಕೋರ್ಟ್

ಜಾತಿ ವ್ಯವಸ್ಥೆ ಆರಂಭದ ಕುರಿತ ಅವಲೋಕನ ತೀರ್ಪಿನ ಪ್ರತಿಯಿಂದ ತೆಗೆದು ಹಾಕಿದ ಮದ್ರಾಸ್ ಹೈಕೋರ್ಟ್

- Advertisement -
- Advertisement -

ಸನಾತನ ಧರ್ಮದ ಕುರಿತ ವಿವಾದಾತ್ಮಕ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಉದಯನಿಧಿ ಸ್ಟಾಲಿನ್, ಸಚಿವ ಸೇಕರ್ ಬಾಬು ಮತ್ತು ಸಂಸದ ಎ ರಾಜಾ ಅವರ ಮೇಲೆ ಕ್ರಮಕ್ಕೆ ಆಗ್ರಹಿಸಿ ಸಲ್ಲಿಸಿದ ಅರ್ಜಿಗಳ ತೀರ್ಪಿನ ವೇಳೆ  ಮದ್ರಾಸ್ ಹೈಕೋರ್ಟ್ ಇದೀಗ ಜಾತಿ ವ್ಯವಸ್ಥೆಯ ಮೂಲದ ಬಗ್ಗೆ ಮಾಡಿದ ಟೀಕೆಗಳನ್ನು ತೆಗೆದು ಹಾಕಿದೆ.

ಮಾರ್ಚ್ 6ರಂದು ನ್ಯಾಯಮೂರ್ತಿ ಅನಿತಾ ಸುಮಂತ್ ಅವರು ಪ್ರಕಟಿಸಿದ ತೀರ್ಪಿನಲ್ಲಿ, ಇಂದು ಸಮಾಜದಲ್ಲಿ ಜಾತಿಯ ಆಧಾರದ ಮೇಲೆ ಅಸಮಾನತೆಗಳಿವೆ ಮತ್ತು ಅವುಗಳನ್ನು ತೊಡೆದುಹಾಕಲು ಈ ನ್ಯಾಯಾಲಯವು ನಿಸ್ಸಂದಿಗ್ಧವಾಗಿ ಒಪ್ಪಿಕೊಳ್ಳುತ್ತದೆ. ಆದರೆ, ಇಂದು ನಮಗೆ ತಿಳಿದಿರುವಂತೆ ಜಾತಿ ವ್ಯವಸ್ಥೆಯ ಮೂಲವು ಒಂದು ಶತಮಾನಕ್ಕಿಂತ ಕಡಿಮೆ ಹಳೆಯದು ಎಂದು ತೀರ್ಪಿನಲ್ಲಿ ಹೇಳಲಾಗಿತ್ತು.

ಆದರೆ, ಪ್ರಸ್ತುತ ಮದ್ರಾಸ್ ಹೈಕೋರ್ಟ್ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ತೀರ್ಪಿನ ಪ್ರತಿಯಲ್ಲಿ ಮೇಲಿನ ಅವಲೋಕನಗಳನ್ನು ತೆಗೆದುಹಾಕಲಾಗಿದೆ. ಇಂದು ಸಮಾಜದಲ್ಲಿ ಜಾತಿಯ ಆಧಾರದ ಮೇಲೆ ಅಸಮಾನತೆಗಳಿವೆ ಮತ್ತು ಅವುಗಳನ್ನು ತೊಡೆದುಹಾಕಲು ಈ ನ್ಯಾಯಾಲಯವು ನಿಸ್ಸಂದಿಗ್ಧವಾಗಿ ಒಪ್ಪಿಕೊಳ್ಳುತ್ತದೆ. ಆದರೆ, ಇಂದು ನಾವು ತಿಳಿದಿರುವಂತೆ ಜಾತಿಗಳ ವರ್ಗೀಕರಣವು ತೀರಾ ಇತ್ತೀಚಿನ ಮತ್ತು ಆಧುನಿಕ ವಿದ್ಯಮಾನವಾಗಿದೆ ಎಂದು ತೀರ್ಪಿನ ಪ್ರತಿಯಲ್ಲಿ ಉಲ್ಲೇಖಿಸಲಾಗಿದೆ.

ಸನಾತನ ಧರ್ಮವು ಉನ್ನತಿ, ಉದಾತ್ತ ಮತ್ತು ಸದ್ಗುಣಶೀಲ ನೀತಿ ಸಂಹಿತೆಯನ್ನು ಸೂಚಿಸುತ್ತದೆ ಎಂದು ನ್ಯಾಯಾಲಯವು ಗಮನಿಸಿದೆ ಮತ್ತು ಹೀಗಾಗಿ ಸಚಿವರು, ಸಂಸದರು ಸನಾತನ ಧರ್ಮದ ಕುರಿತು ನೀಡಿದ  ತೀರ್ಪು ತಪ್ಪಾಗಿದೆ ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ.

ಹಿಂದೂ ಮುನ್ನಾನಿ ಸಂಘಟನೆಯ ಪದಾಧಿಕಾರಿಗಳಾದ ಟಿ ಮನೋಹರ್, ಕಿಶೋರ್ ಕುಮಾರ್ ಮತ್ತು ವಿಪಿ ಜಯಕುಮಾರ್ ಅವರು ಸಲ್ಲಿಸಿದ ಅರ್ಜಿಗಳ ವಿಚಾರಣೆ ವೇಳೆ ಅವಲೋಕನಗಳನ್ನು ಮಾಡಲಾಗಿದೆ. ನ್ಯಾಯಾಲಯವು, ಹೇಳಿಕೆಗಳನ್ನು ನಿರ್ದಿಷ್ಟ ಸಮುದಾಯದ ವಿರುದ್ಧ ದ್ವೇಷವನ್ನು ಹರಡುತ್ತದೆ ಎಂದು ಹೇಳಿದೆ.

ಜನತಾ ಪ್ರಾತಿನಿಧ್ಯ ಕಾಯ್ದೆಯಡಿ ಅನರ್ಹತೆಗಳ ಪಟ್ಟಿಯು ಲಕ್ಷ್ಮಣ ರೇಖೆ ಇದ್ದಂತೆ ಮತ್ತು ಅದನ್ನು ಅನುಸರಿಸಲು ನ್ಯಾಯಾಲಯ ಬದ್ಧವಾಗಿದೆ ಎಂದು ನ್ಯಾಯಾಲಯವು ಗಮನಿಸಿದೆ. ಹೀಗಾಗಿ, ಬಾಕಿ ಉಳಿದಿರುವ ಕ್ರಿಮಿನಲ್ ಮೊಕದ್ದಮೆಗಳಲ್ಲಿ ಸಚಿವರು, ಸಂಸದರಿಗೆ ಶಿಕ್ಷೆಯಾಗಿಲ್ಲ ಎಂದು ಗಮನಿಸಿದ ನ್ಯಾಯಾಲಯವು ಶಾಸಕತ್ವ ರದ್ಧತಿಗೆ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿತ್ತು. ಸನಾತನ ಧರ್ಮದ ಕುರಿತಾದ ಟೀಕೆಗಳಿಗಾಗಿ ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ಸುಪ್ರೀಂ ತರಾಟೆಗೆ ತೆಗೆದುಕೊಂಡ ಎರಡು ದಿನಗಳ ನಂತರ, ಇಂದು ಮದ್ರಾಸ್ ಹೈಕೋರ್ಟ್‌ ಸ್ಟಾಲಿನ್ ಮತ್ತು ಇತರ ಇಬ್ಬರು ಡಿಎಂಕೆ ನಾಯಕರನ್ನು ಶಾಸಕರಾಗಿ ಮುಂದುವರಿಸುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. ‘ಸ್ಟಾಲಿನ್ ಅವರ ಹೇಳಿಕೆಗಳು ತಪ್ಪು’ ಎಂದು ಗಮನಿಸಿದ್ದರೂ, ಅವರು ಇನ್ನೂ ಯಾವುದೇ ನ್ಯಾಯಾಲಯದಿಂದ ಶಿಕ್ಷೆಗೊಳಗಾಗಿಲ್ಲ’ ಎಂದು ಹೇಳಿತ್ತು.

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರರಾಗಿರುವ 46 ವರ್ಷದ ಡಿಎಂಕೆ ನಾಯಕ, ಕಳೆದ ಸೆಪ್ಟೆಂಬರ್‌ನಲ್ಲಿ ಸನಾತನ ಧರ್ಮದ ಕುರಿತು ನೀಡಿದ ಹೇಳಿಕೆಯನ್ನು ಬಲಪಂಥೀಯರು ಮತ್ತು ಹಿಂದುತ್ವವಾದಿಗಳು ವಿವಾದ ಮಾಡಿದ್ದರು. ಸನಾತನವು ಮಲೇರಿಯಾ ಮತ್ತು ಡೆಂಗ್ಯೂ ಇದ್ದಂತೆ, ಅದನ್ನು ವಿರೋಧಿಸುವ ಬದಲು ನಿರ್ಮೂಲನೆ ಮಾಡಬೇಕು’ ಎಂದು ಅವರು ಹೇಳಿದ ಮಾತುಗಳು ಭಾರೀ ಗದ್ದಲಕ್ಕೆ ಕಾರಣವಾಗಿತ್ತು. ಉದಯನಿಧಿ ಸ್ಟಾಲಿನ್ ಅಲ್ಲದೆ, ಅರ್ಜಿದಾರರು ರಾಜ್ಯ ಸಚಿವ ಪಿಕೆ ಸೇಕರ್ ಬಾಬು ಮತ್ತು ಡಿಎಂಕೆ ಸಂಸದ ಎ ರಾಜಾ ಅವರನ್ನು ಅವರ ಸ್ಥಾನದಿಂದ ವಜಾಗೊಳಿಸುವಂತೆ ಕೋರಿದ್ದರು. ಉದಯನಿಧಿ ಹೇಳಿಕೆ ನೀಡಿದಾಗ ಬಾಬು ಉಪಸ್ಥಿತರಿದ್ದರು. ಅವರ ಹೇಳಿಕೆಯನ್ನು ಬೆಂಬಲಿಸಿದ್ದ ರಾಜಾ, ‘ಸ್ಟಾಲಿನ್ ಅವರು ಜಾತಿ ಆಧಾರಿತ ತಾರತಮ್ಯವನ್ನು ಗುರಿಯಾಗಿಸಿಕೊಂಡಿದ್ದಾರೆ ಮತ್ತು ಹಿಂದೂ ಧರ್ಮವನ್ನು ಅಲ್ಲ’ ಎಂದು ಹೇಳಿದ್ದಾರೆ. ಅವರು ಕಾನೂನು ಕ್ರಮ ಎದುರಿಸಲು ಸಿದ್ಧ; ಆದರೆ ಅವರು ತಮ್ಮ ಹೇಳಿಕೆಗೆ ಬದ್ಧರಾಗಿದ್ದಾರೆ ಎಂದಿದ್ದರು.

ಇದನ್ನು ಓದಿ: ನೀವು ನಮ್ಮ ಮೇಲೆ ಒದ್ದರೆ, ನಾವು ನಮಾಝ್‌ ನಿಲ್ಲಿಸುವುದಿಲ್ಲ: ಅಸಾದುದ್ದೀನ್ ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...