Homeಮುಖಪುಟಜಾತಿ ವ್ಯವಸ್ಥೆ ಆರಂಭದ ಕುರಿತ ಅವಲೋಕನ ತೀರ್ಪಿನ ಪ್ರತಿಯಿಂದ ತೆಗೆದು ಹಾಕಿದ ಮದ್ರಾಸ್ ಹೈಕೋರ್ಟ್

ಜಾತಿ ವ್ಯವಸ್ಥೆ ಆರಂಭದ ಕುರಿತ ಅವಲೋಕನ ತೀರ್ಪಿನ ಪ್ರತಿಯಿಂದ ತೆಗೆದು ಹಾಕಿದ ಮದ್ರಾಸ್ ಹೈಕೋರ್ಟ್

- Advertisement -
- Advertisement -

ಸನಾತನ ಧರ್ಮದ ಕುರಿತ ವಿವಾದಾತ್ಮಕ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಉದಯನಿಧಿ ಸ್ಟಾಲಿನ್, ಸಚಿವ ಸೇಕರ್ ಬಾಬು ಮತ್ತು ಸಂಸದ ಎ ರಾಜಾ ಅವರ ಮೇಲೆ ಕ್ರಮಕ್ಕೆ ಆಗ್ರಹಿಸಿ ಸಲ್ಲಿಸಿದ ಅರ್ಜಿಗಳ ತೀರ್ಪಿನ ವೇಳೆ  ಮದ್ರಾಸ್ ಹೈಕೋರ್ಟ್ ಇದೀಗ ಜಾತಿ ವ್ಯವಸ್ಥೆಯ ಮೂಲದ ಬಗ್ಗೆ ಮಾಡಿದ ಟೀಕೆಗಳನ್ನು ತೆಗೆದು ಹಾಕಿದೆ.

ಮಾರ್ಚ್ 6ರಂದು ನ್ಯಾಯಮೂರ್ತಿ ಅನಿತಾ ಸುಮಂತ್ ಅವರು ಪ್ರಕಟಿಸಿದ ತೀರ್ಪಿನಲ್ಲಿ, ಇಂದು ಸಮಾಜದಲ್ಲಿ ಜಾತಿಯ ಆಧಾರದ ಮೇಲೆ ಅಸಮಾನತೆಗಳಿವೆ ಮತ್ತು ಅವುಗಳನ್ನು ತೊಡೆದುಹಾಕಲು ಈ ನ್ಯಾಯಾಲಯವು ನಿಸ್ಸಂದಿಗ್ಧವಾಗಿ ಒಪ್ಪಿಕೊಳ್ಳುತ್ತದೆ. ಆದರೆ, ಇಂದು ನಮಗೆ ತಿಳಿದಿರುವಂತೆ ಜಾತಿ ವ್ಯವಸ್ಥೆಯ ಮೂಲವು ಒಂದು ಶತಮಾನಕ್ಕಿಂತ ಕಡಿಮೆ ಹಳೆಯದು ಎಂದು ತೀರ್ಪಿನಲ್ಲಿ ಹೇಳಲಾಗಿತ್ತು.

ಆದರೆ, ಪ್ರಸ್ತುತ ಮದ್ರಾಸ್ ಹೈಕೋರ್ಟ್ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ತೀರ್ಪಿನ ಪ್ರತಿಯಲ್ಲಿ ಮೇಲಿನ ಅವಲೋಕನಗಳನ್ನು ತೆಗೆದುಹಾಕಲಾಗಿದೆ. ಇಂದು ಸಮಾಜದಲ್ಲಿ ಜಾತಿಯ ಆಧಾರದ ಮೇಲೆ ಅಸಮಾನತೆಗಳಿವೆ ಮತ್ತು ಅವುಗಳನ್ನು ತೊಡೆದುಹಾಕಲು ಈ ನ್ಯಾಯಾಲಯವು ನಿಸ್ಸಂದಿಗ್ಧವಾಗಿ ಒಪ್ಪಿಕೊಳ್ಳುತ್ತದೆ. ಆದರೆ, ಇಂದು ನಾವು ತಿಳಿದಿರುವಂತೆ ಜಾತಿಗಳ ವರ್ಗೀಕರಣವು ತೀರಾ ಇತ್ತೀಚಿನ ಮತ್ತು ಆಧುನಿಕ ವಿದ್ಯಮಾನವಾಗಿದೆ ಎಂದು ತೀರ್ಪಿನ ಪ್ರತಿಯಲ್ಲಿ ಉಲ್ಲೇಖಿಸಲಾಗಿದೆ.

ಸನಾತನ ಧರ್ಮವು ಉನ್ನತಿ, ಉದಾತ್ತ ಮತ್ತು ಸದ್ಗುಣಶೀಲ ನೀತಿ ಸಂಹಿತೆಯನ್ನು ಸೂಚಿಸುತ್ತದೆ ಎಂದು ನ್ಯಾಯಾಲಯವು ಗಮನಿಸಿದೆ ಮತ್ತು ಹೀಗಾಗಿ ಸಚಿವರು, ಸಂಸದರು ಸನಾತನ ಧರ್ಮದ ಕುರಿತು ನೀಡಿದ  ತೀರ್ಪು ತಪ್ಪಾಗಿದೆ ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ.

ಹಿಂದೂ ಮುನ್ನಾನಿ ಸಂಘಟನೆಯ ಪದಾಧಿಕಾರಿಗಳಾದ ಟಿ ಮನೋಹರ್, ಕಿಶೋರ್ ಕುಮಾರ್ ಮತ್ತು ವಿಪಿ ಜಯಕುಮಾರ್ ಅವರು ಸಲ್ಲಿಸಿದ ಅರ್ಜಿಗಳ ವಿಚಾರಣೆ ವೇಳೆ ಅವಲೋಕನಗಳನ್ನು ಮಾಡಲಾಗಿದೆ. ನ್ಯಾಯಾಲಯವು, ಹೇಳಿಕೆಗಳನ್ನು ನಿರ್ದಿಷ್ಟ ಸಮುದಾಯದ ವಿರುದ್ಧ ದ್ವೇಷವನ್ನು ಹರಡುತ್ತದೆ ಎಂದು ಹೇಳಿದೆ.

ಜನತಾ ಪ್ರಾತಿನಿಧ್ಯ ಕಾಯ್ದೆಯಡಿ ಅನರ್ಹತೆಗಳ ಪಟ್ಟಿಯು ಲಕ್ಷ್ಮಣ ರೇಖೆ ಇದ್ದಂತೆ ಮತ್ತು ಅದನ್ನು ಅನುಸರಿಸಲು ನ್ಯಾಯಾಲಯ ಬದ್ಧವಾಗಿದೆ ಎಂದು ನ್ಯಾಯಾಲಯವು ಗಮನಿಸಿದೆ. ಹೀಗಾಗಿ, ಬಾಕಿ ಉಳಿದಿರುವ ಕ್ರಿಮಿನಲ್ ಮೊಕದ್ದಮೆಗಳಲ್ಲಿ ಸಚಿವರು, ಸಂಸದರಿಗೆ ಶಿಕ್ಷೆಯಾಗಿಲ್ಲ ಎಂದು ಗಮನಿಸಿದ ನ್ಯಾಯಾಲಯವು ಶಾಸಕತ್ವ ರದ್ಧತಿಗೆ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿತ್ತು. ಸನಾತನ ಧರ್ಮದ ಕುರಿತಾದ ಟೀಕೆಗಳಿಗಾಗಿ ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ಸುಪ್ರೀಂ ತರಾಟೆಗೆ ತೆಗೆದುಕೊಂಡ ಎರಡು ದಿನಗಳ ನಂತರ, ಇಂದು ಮದ್ರಾಸ್ ಹೈಕೋರ್ಟ್‌ ಸ್ಟಾಲಿನ್ ಮತ್ತು ಇತರ ಇಬ್ಬರು ಡಿಎಂಕೆ ನಾಯಕರನ್ನು ಶಾಸಕರಾಗಿ ಮುಂದುವರಿಸುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. ‘ಸ್ಟಾಲಿನ್ ಅವರ ಹೇಳಿಕೆಗಳು ತಪ್ಪು’ ಎಂದು ಗಮನಿಸಿದ್ದರೂ, ಅವರು ಇನ್ನೂ ಯಾವುದೇ ನ್ಯಾಯಾಲಯದಿಂದ ಶಿಕ್ಷೆಗೊಳಗಾಗಿಲ್ಲ’ ಎಂದು ಹೇಳಿತ್ತು.

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರರಾಗಿರುವ 46 ವರ್ಷದ ಡಿಎಂಕೆ ನಾಯಕ, ಕಳೆದ ಸೆಪ್ಟೆಂಬರ್‌ನಲ್ಲಿ ಸನಾತನ ಧರ್ಮದ ಕುರಿತು ನೀಡಿದ ಹೇಳಿಕೆಯನ್ನು ಬಲಪಂಥೀಯರು ಮತ್ತು ಹಿಂದುತ್ವವಾದಿಗಳು ವಿವಾದ ಮಾಡಿದ್ದರು. ಸನಾತನವು ಮಲೇರಿಯಾ ಮತ್ತು ಡೆಂಗ್ಯೂ ಇದ್ದಂತೆ, ಅದನ್ನು ವಿರೋಧಿಸುವ ಬದಲು ನಿರ್ಮೂಲನೆ ಮಾಡಬೇಕು’ ಎಂದು ಅವರು ಹೇಳಿದ ಮಾತುಗಳು ಭಾರೀ ಗದ್ದಲಕ್ಕೆ ಕಾರಣವಾಗಿತ್ತು. ಉದಯನಿಧಿ ಸ್ಟಾಲಿನ್ ಅಲ್ಲದೆ, ಅರ್ಜಿದಾರರು ರಾಜ್ಯ ಸಚಿವ ಪಿಕೆ ಸೇಕರ್ ಬಾಬು ಮತ್ತು ಡಿಎಂಕೆ ಸಂಸದ ಎ ರಾಜಾ ಅವರನ್ನು ಅವರ ಸ್ಥಾನದಿಂದ ವಜಾಗೊಳಿಸುವಂತೆ ಕೋರಿದ್ದರು. ಉದಯನಿಧಿ ಹೇಳಿಕೆ ನೀಡಿದಾಗ ಬಾಬು ಉಪಸ್ಥಿತರಿದ್ದರು. ಅವರ ಹೇಳಿಕೆಯನ್ನು ಬೆಂಬಲಿಸಿದ್ದ ರಾಜಾ, ‘ಸ್ಟಾಲಿನ್ ಅವರು ಜಾತಿ ಆಧಾರಿತ ತಾರತಮ್ಯವನ್ನು ಗುರಿಯಾಗಿಸಿಕೊಂಡಿದ್ದಾರೆ ಮತ್ತು ಹಿಂದೂ ಧರ್ಮವನ್ನು ಅಲ್ಲ’ ಎಂದು ಹೇಳಿದ್ದಾರೆ. ಅವರು ಕಾನೂನು ಕ್ರಮ ಎದುರಿಸಲು ಸಿದ್ಧ; ಆದರೆ ಅವರು ತಮ್ಮ ಹೇಳಿಕೆಗೆ ಬದ್ಧರಾಗಿದ್ದಾರೆ ಎಂದಿದ್ದರು.

ಇದನ್ನು ಓದಿ: ನೀವು ನಮ್ಮ ಮೇಲೆ ಒದ್ದರೆ, ನಾವು ನಮಾಝ್‌ ನಿಲ್ಲಿಸುವುದಿಲ್ಲ: ಅಸಾದುದ್ದೀನ್ ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...